Homeಮುಖಪುಟತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

ತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

- Advertisement -
- Advertisement -

ಝೀ ಮೀಡಿಯಾವು “ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಟ್ವೀಟ್‌ ಮಾಡಿ ಸುಳ್ಳು ಸುದ್ದಿ” ಹರಡಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಿಜೆಪಿ ಪರವಿರುವ ಝಿ ನ್ಯೂಸ್‌ ಹರಡಿರುವುದು ಸುಳ್ಳು ಸುದ್ದಿ ಎಂದು ಗೊತ್ತಾಗಿ ಅದು ಸಿಕ್ಕಿಬಿದ್ದಿದೆ. ನಂತರ ಉತ್ತರ ಪ್ರದೇಶದ ಫಿರೋಜಾಬಾದ್ ಪೊಲೀಸರು ಎಚ್ಚರಿಕೆ ನೀಡಿದ ನಂತರ ಟ್ವೀಟ್ ಅನ್ನು ಅಳಿಸಲಾಗಿದೆ.

ಈಗ ಅಳಿಸಲಾಗಿರುವ ತನ್ನ ಟ್ವೀಟ್‌ನಲ್ಲಿ, ಉತ್ತರ ಪ್ರದೇಶ ಉತ್ತರಾಖಂಡ್ ಝೀ ನ್ಯೂಸ್‌ ಟ್ವಿಟ್ಟರ್‌ ಅಕೌಂಟ್‌ನಿಂದ “ಫಿರೋಜಾಬಾದ್‌ನಲ್ಲಿ ನಾಲ್ಕು ತಬ್ಲೀಘಿ ಜಮಾತ್‌ ಸದಸ್ಯರ ಕೊರನಾ ಪರೀಕ್ಷೆಯಲ್ಲಿ ಧನಾತ್ಮಕ ಬಂದಿದೆ. ಅದರ ವರದಿ ತೆಗೆದುಕೊಳ್ಳಲು ಬಂದಾಗ ಅವರು ಅಲ್ಲಿರುವ ವೈದ್ಯಕೀಯ ತಂಡದ ಮೇಲೆ ಕಲ್ಲು ತೂರಿದ್ದಾರೆ” ಎಂದು ಟ್ವೀಟ್‌ ಮಾಡಿದೆ.

ಝೀ ನ್ಯೂಸ್‌ನ ನಕಲಿ ಸುದ್ದಿಗೆ ಕೂಡಲೇ ಪ್ರತಿಕ್ರಿಯಿಸಿದ ಫಿರೋಜಾಬಾದ್ ಪೊಲೀಸರು, “ನೀವು ನಕಲಿ ಮತ್ತು ದಾರಿತಪ್ಪಿಸುವ ಸುದ್ದಿಗಳನ್ನು ಹರಡುತ್ತಿದ್ದೀರಿ. ಫಿರೋಜಾಬಾದ್‌ನಲ್ಲಿ ವೈದ್ಯಕೀಯ ತಂಡ ಅಥವಾ ಆಂಬುಲೆನ್ಸ್‌ ಮೇಲೆ ಯಾವುದೇ ಕಲ್ಲು ತೂರಾಟದ ಘಟನೆಗಳು ನಡೆದಿಲ್ಲ. ನೀವು ಪೋಸ್ಟ್ ಮಾಡಿದ ಈ ಟ್ವೀಟ್ ಅನ್ನು ನೀವು ತಕ್ಷಣ ಅಳಿಸಬೇಕು” ಎಂದು ತಾಕೀತು ಮಾಡಿದ್ದಾರೆ.

ಝೀ ನ್ಯೂಸ್ ನಿಜಕ್ಕೂ ಮುಸ್ಲಿಂ ಸಮುದಾಯವನ್ನು ಅವಮಾನಿಸಲು ಈ ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡಿದೆ. ಕೆಲವು ಟ್ವಿಟ್ಟರ್‌ ಬಳಕೆದಾರರು ಫಿರೋಜಾಬಾದ್ ಪೊಲೀಸರಿಂದ ಈ ದೃಢೀಕರಣವನ್ನು ಕೋರಿದಾಗ, ಆ ಟ್ವೀಟ್ ಅನ್ನು ಈಗ ಅಳಿಸಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ಝೀ ನ್ಯೂಸ್ ಅಂದಿನಿಂದ ತಬ್ಲೀಘಿ ಜಮಾಅತ್ ಬಗ್ಗೆ ನಕಲಿ ಸುದ್ದಿಗಳನ್ನು ಒಳಗೊಂಡಿರುವ ಟ್ವೀಟ್ ಅನ್ನು ಅಳಿಸಿದೆ. ಅದರ ಶೀರ್ಷಿಕೆಯಿಂದ ಕಲ್ಲು ತೂರಿದ್ದಾರೆ ಎಂಬುದನ್ನು ತೆಗೆದುಹಾಕುವ ಮೂಲಕ ಅದು ತನ್ನ ಸುದ್ದಿಯನ್ನು ಎಡಿಟ್‌ ಮಾಡಿದೆ. ಈಗ “ಫಿರೋಜಾಬಾದ್‌ನ ಫಾರ್ಸಿ ಮಸೀದಿಯಲ್ಲಿದ್ದ ತಬ್ಲಿಘಿ ಜಮಾಅತ್‌ನ ನಾಲ್ಕು ಜನರು ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್‌” ಆಗಿದ್ದಾರೆ. ಎಂದು ಬರೆದಿದೆ.

ಈ ಹಿಂದೆ, ಕೆಲವು ಮಾಧ್ಯಮಗಳು “ಕ್ಯಾರೆಂಟೈನ್ ನಲ್ಲಿರುವ ತಬ್ಲೀಘಿ ಜಮಾಅತ್ ಸದಸ್ಯರು ಮಾಂಸಹಾರಿ ಆಹಾರಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಮತ್ತು ಅವರ ಬೇಡಿಕೆಗಳನ್ನು ಈಡೇರಿಸದಿದ್ದಾಗ ಗಲಾಟೆ ಉಂಟುಮಾಡಿದ್ದಾರೆ” ಎಂದು ಆರೋಪಿಸಿದ್ದರು. ಆದರೆ ಈ ಹೇಳಿಕೆಯನ್ನು ಉತ್ತರ ಪ್ರದೇಶದ ಸಹರಾನ್ಪುರ್ ಪೊಲೀಸರು ನಕಲಿ ಸುದ್ದಿ ಎಂದು ಸ್ಪಷ್ಟಪಡಿಸಿ ವಿವರವಾದ ಹೇಳಿಕೆ ನೀಡಿದ್ದರು.

ದೆಹಲಿ ಪೊಲೀಸರು ತಬ್ಲಿಘಿ ಜಮಾಅತ್ ಸದಸ್ಯರನ್ನು ನಿಜಾಮುದ್ದೀನ್ ಮಾರ್ಕಾಜ್‌ನಿಂದ ಸ್ಥಳಾಂತರಿಸಿದಾಗಿನಿಂದಲೂ, ಹಲವಾರು ಮಾಧ್ಯಮಗಳು ಭಾರತದ ಮುಸ್ಲಿಂ ಸಮುದಾಯದ ವಿರುದ್ಧ ನಿರಂತರವಾಗಿ ದುರುದ್ದೇಶಪ್ರೇರಿತ ಅಭಿಯಾನವನ್ನು ನಡೆಸುತ್ತಿದ್ದಾರೆ. ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರು ಮತ್ತು ಪೊಲೀಸರ ಮೇಲೆ ಉಗುಳಿದ್ದಾರೆ ಎಂದು ಕೆಲವರು ಸುದ್ದಿ ಮಾಡಿದರೆ ಮತ್ತೆ ಕೆಲವರು ದಾದಿಯರೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು.

ಆದರೆ, ನಿಜಾಮುದ್ದೀನ್ ಮಾರ್ಕಾಜ್ ಅವರನ್ನು ಸ್ಥಳಾಂತರಿಸಿದ ತಂಡದ ಭಾಗವಾಗಿದ್ದ ವೈದ್ಯಕೀಯ ಅಧಿಕಾರಿ ಎಂದು ಹೇಳಿಕೊಂಡ ಮಹಿಳೆಯೊಬ್ಬರು ಅವರು ಯಾರೊಂದಿಗೆ ಕೆಟ್ಟದಾಗಿ ವರ್ತಿಸಿಲ್ಲ ಎಂದು ಬಹಿರಂಗಪಡಿಸಿದ್ದಾರೆ.

ಕೃಪೆ: ಜನತಾ ಕಾ ರಿಪೋರ್ಟರ್‌


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...