Homeಮುಖಪುಟತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

ತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

- Advertisement -
- Advertisement -

ಝೀ ಮೀಡಿಯಾವು “ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಟ್ವೀಟ್‌ ಮಾಡಿ ಸುಳ್ಳು ಸುದ್ದಿ” ಹರಡಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಿಜೆಪಿ ಪರವಿರುವ ಝಿ ನ್ಯೂಸ್‌ ಹರಡಿರುವುದು ಸುಳ್ಳು ಸುದ್ದಿ ಎಂದು ಗೊತ್ತಾಗಿ ಅದು ಸಿಕ್ಕಿಬಿದ್ದಿದೆ. ನಂತರ ಉತ್ತರ ಪ್ರದೇಶದ ಫಿರೋಜಾಬಾದ್ ಪೊಲೀಸರು ಎಚ್ಚರಿಕೆ ನೀಡಿದ ನಂತರ ಟ್ವೀಟ್ ಅನ್ನು ಅಳಿಸಲಾಗಿದೆ.

ಈಗ ಅಳಿಸಲಾಗಿರುವ ತನ್ನ ಟ್ವೀಟ್‌ನಲ್ಲಿ, ಉತ್ತರ ಪ್ರದೇಶ ಉತ್ತರಾಖಂಡ್ ಝೀ ನ್ಯೂಸ್‌ ಟ್ವಿಟ್ಟರ್‌ ಅಕೌಂಟ್‌ನಿಂದ “ಫಿರೋಜಾಬಾದ್‌ನಲ್ಲಿ ನಾಲ್ಕು ತಬ್ಲೀಘಿ ಜಮಾತ್‌ ಸದಸ್ಯರ ಕೊರನಾ ಪರೀಕ್ಷೆಯಲ್ಲಿ ಧನಾತ್ಮಕ ಬಂದಿದೆ. ಅದರ ವರದಿ ತೆಗೆದುಕೊಳ್ಳಲು ಬಂದಾಗ ಅವರು ಅಲ್ಲಿರುವ ವೈದ್ಯಕೀಯ ತಂಡದ ಮೇಲೆ ಕಲ್ಲು ತೂರಿದ್ದಾರೆ” ಎಂದು ಟ್ವೀಟ್‌ ಮಾಡಿದೆ.

ಝೀ ನ್ಯೂಸ್‌ನ ನಕಲಿ ಸುದ್ದಿಗೆ ಕೂಡಲೇ ಪ್ರತಿಕ್ರಿಯಿಸಿದ ಫಿರೋಜಾಬಾದ್ ಪೊಲೀಸರು, “ನೀವು ನಕಲಿ ಮತ್ತು ದಾರಿತಪ್ಪಿಸುವ ಸುದ್ದಿಗಳನ್ನು ಹರಡುತ್ತಿದ್ದೀರಿ. ಫಿರೋಜಾಬಾದ್‌ನಲ್ಲಿ ವೈದ್ಯಕೀಯ ತಂಡ ಅಥವಾ ಆಂಬುಲೆನ್ಸ್‌ ಮೇಲೆ ಯಾವುದೇ ಕಲ್ಲು ತೂರಾಟದ ಘಟನೆಗಳು ನಡೆದಿಲ್ಲ. ನೀವು ಪೋಸ್ಟ್ ಮಾಡಿದ ಈ ಟ್ವೀಟ್ ಅನ್ನು ನೀವು ತಕ್ಷಣ ಅಳಿಸಬೇಕು” ಎಂದು ತಾಕೀತು ಮಾಡಿದ್ದಾರೆ.

ಝೀ ನ್ಯೂಸ್ ನಿಜಕ್ಕೂ ಮುಸ್ಲಿಂ ಸಮುದಾಯವನ್ನು ಅವಮಾನಿಸಲು ಈ ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡಿದೆ. ಕೆಲವು ಟ್ವಿಟ್ಟರ್‌ ಬಳಕೆದಾರರು ಫಿರೋಜಾಬಾದ್ ಪೊಲೀಸರಿಂದ ಈ ದೃಢೀಕರಣವನ್ನು ಕೋರಿದಾಗ, ಆ ಟ್ವೀಟ್ ಅನ್ನು ಈಗ ಅಳಿಸಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ಝೀ ನ್ಯೂಸ್ ಅಂದಿನಿಂದ ತಬ್ಲೀಘಿ ಜಮಾಅತ್ ಬಗ್ಗೆ ನಕಲಿ ಸುದ್ದಿಗಳನ್ನು ಒಳಗೊಂಡಿರುವ ಟ್ವೀಟ್ ಅನ್ನು ಅಳಿಸಿದೆ. ಅದರ ಶೀರ್ಷಿಕೆಯಿಂದ ಕಲ್ಲು ತೂರಿದ್ದಾರೆ ಎಂಬುದನ್ನು ತೆಗೆದುಹಾಕುವ ಮೂಲಕ ಅದು ತನ್ನ ಸುದ್ದಿಯನ್ನು ಎಡಿಟ್‌ ಮಾಡಿದೆ. ಈಗ “ಫಿರೋಜಾಬಾದ್‌ನ ಫಾರ್ಸಿ ಮಸೀದಿಯಲ್ಲಿದ್ದ ತಬ್ಲಿಘಿ ಜಮಾಅತ್‌ನ ನಾಲ್ಕು ಜನರು ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್‌” ಆಗಿದ್ದಾರೆ. ಎಂದು ಬರೆದಿದೆ.

ಈ ಹಿಂದೆ, ಕೆಲವು ಮಾಧ್ಯಮಗಳು “ಕ್ಯಾರೆಂಟೈನ್ ನಲ್ಲಿರುವ ತಬ್ಲೀಘಿ ಜಮಾಅತ್ ಸದಸ್ಯರು ಮಾಂಸಹಾರಿ ಆಹಾರಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಮತ್ತು ಅವರ ಬೇಡಿಕೆಗಳನ್ನು ಈಡೇರಿಸದಿದ್ದಾಗ ಗಲಾಟೆ ಉಂಟುಮಾಡಿದ್ದಾರೆ” ಎಂದು ಆರೋಪಿಸಿದ್ದರು. ಆದರೆ ಈ ಹೇಳಿಕೆಯನ್ನು ಉತ್ತರ ಪ್ರದೇಶದ ಸಹರಾನ್ಪುರ್ ಪೊಲೀಸರು ನಕಲಿ ಸುದ್ದಿ ಎಂದು ಸ್ಪಷ್ಟಪಡಿಸಿ ವಿವರವಾದ ಹೇಳಿಕೆ ನೀಡಿದ್ದರು.

ದೆಹಲಿ ಪೊಲೀಸರು ತಬ್ಲಿಘಿ ಜಮಾಅತ್ ಸದಸ್ಯರನ್ನು ನಿಜಾಮುದ್ದೀನ್ ಮಾರ್ಕಾಜ್‌ನಿಂದ ಸ್ಥಳಾಂತರಿಸಿದಾಗಿನಿಂದಲೂ, ಹಲವಾರು ಮಾಧ್ಯಮಗಳು ಭಾರತದ ಮುಸ್ಲಿಂ ಸಮುದಾಯದ ವಿರುದ್ಧ ನಿರಂತರವಾಗಿ ದುರುದ್ದೇಶಪ್ರೇರಿತ ಅಭಿಯಾನವನ್ನು ನಡೆಸುತ್ತಿದ್ದಾರೆ. ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರು ಮತ್ತು ಪೊಲೀಸರ ಮೇಲೆ ಉಗುಳಿದ್ದಾರೆ ಎಂದು ಕೆಲವರು ಸುದ್ದಿ ಮಾಡಿದರೆ ಮತ್ತೆ ಕೆಲವರು ದಾದಿಯರೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು.

ಆದರೆ, ನಿಜಾಮುದ್ದೀನ್ ಮಾರ್ಕಾಜ್ ಅವರನ್ನು ಸ್ಥಳಾಂತರಿಸಿದ ತಂಡದ ಭಾಗವಾಗಿದ್ದ ವೈದ್ಯಕೀಯ ಅಧಿಕಾರಿ ಎಂದು ಹೇಳಿಕೊಂಡ ಮಹಿಳೆಯೊಬ್ಬರು ಅವರು ಯಾರೊಂದಿಗೆ ಕೆಟ್ಟದಾಗಿ ವರ್ತಿಸಿಲ್ಲ ಎಂದು ಬಹಿರಂಗಪಡಿಸಿದ್ದಾರೆ.

ಕೃಪೆ: ಜನತಾ ಕಾ ರಿಪೋರ್ಟರ್‌


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...