Homeಮುಖಪುಟತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

ತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

- Advertisement -
- Advertisement -

ಝೀ ಮೀಡಿಯಾವು “ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಟ್ವೀಟ್‌ ಮಾಡಿ ಸುಳ್ಳು ಸುದ್ದಿ” ಹರಡಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಿಜೆಪಿ ಪರವಿರುವ ಝಿ ನ್ಯೂಸ್‌ ಹರಡಿರುವುದು ಸುಳ್ಳು ಸುದ್ದಿ ಎಂದು ಗೊತ್ತಾಗಿ ಅದು ಸಿಕ್ಕಿಬಿದ್ದಿದೆ. ನಂತರ ಉತ್ತರ ಪ್ರದೇಶದ ಫಿರೋಜಾಬಾದ್ ಪೊಲೀಸರು ಎಚ್ಚರಿಕೆ ನೀಡಿದ ನಂತರ ಟ್ವೀಟ್ ಅನ್ನು ಅಳಿಸಲಾಗಿದೆ.

ಈಗ ಅಳಿಸಲಾಗಿರುವ ತನ್ನ ಟ್ವೀಟ್‌ನಲ್ಲಿ, ಉತ್ತರ ಪ್ರದೇಶ ಉತ್ತರಾಖಂಡ್ ಝೀ ನ್ಯೂಸ್‌ ಟ್ವಿಟ್ಟರ್‌ ಅಕೌಂಟ್‌ನಿಂದ “ಫಿರೋಜಾಬಾದ್‌ನಲ್ಲಿ ನಾಲ್ಕು ತಬ್ಲೀಘಿ ಜಮಾತ್‌ ಸದಸ್ಯರ ಕೊರನಾ ಪರೀಕ್ಷೆಯಲ್ಲಿ ಧನಾತ್ಮಕ ಬಂದಿದೆ. ಅದರ ವರದಿ ತೆಗೆದುಕೊಳ್ಳಲು ಬಂದಾಗ ಅವರು ಅಲ್ಲಿರುವ ವೈದ್ಯಕೀಯ ತಂಡದ ಮೇಲೆ ಕಲ್ಲು ತೂರಿದ್ದಾರೆ” ಎಂದು ಟ್ವೀಟ್‌ ಮಾಡಿದೆ.

ಝೀ ನ್ಯೂಸ್‌ನ ನಕಲಿ ಸುದ್ದಿಗೆ ಕೂಡಲೇ ಪ್ರತಿಕ್ರಿಯಿಸಿದ ಫಿರೋಜಾಬಾದ್ ಪೊಲೀಸರು, “ನೀವು ನಕಲಿ ಮತ್ತು ದಾರಿತಪ್ಪಿಸುವ ಸುದ್ದಿಗಳನ್ನು ಹರಡುತ್ತಿದ್ದೀರಿ. ಫಿರೋಜಾಬಾದ್‌ನಲ್ಲಿ ವೈದ್ಯಕೀಯ ತಂಡ ಅಥವಾ ಆಂಬುಲೆನ್ಸ್‌ ಮೇಲೆ ಯಾವುದೇ ಕಲ್ಲು ತೂರಾಟದ ಘಟನೆಗಳು ನಡೆದಿಲ್ಲ. ನೀವು ಪೋಸ್ಟ್ ಮಾಡಿದ ಈ ಟ್ವೀಟ್ ಅನ್ನು ನೀವು ತಕ್ಷಣ ಅಳಿಸಬೇಕು” ಎಂದು ತಾಕೀತು ಮಾಡಿದ್ದಾರೆ.

ಝೀ ನ್ಯೂಸ್ ನಿಜಕ್ಕೂ ಮುಸ್ಲಿಂ ಸಮುದಾಯವನ್ನು ಅವಮಾನಿಸಲು ಈ ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡಿದೆ. ಕೆಲವು ಟ್ವಿಟ್ಟರ್‌ ಬಳಕೆದಾರರು ಫಿರೋಜಾಬಾದ್ ಪೊಲೀಸರಿಂದ ಈ ದೃಢೀಕರಣವನ್ನು ಕೋರಿದಾಗ, ಆ ಟ್ವೀಟ್ ಅನ್ನು ಈಗ ಅಳಿಸಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ಝೀ ನ್ಯೂಸ್ ಅಂದಿನಿಂದ ತಬ್ಲೀಘಿ ಜಮಾಅತ್ ಬಗ್ಗೆ ನಕಲಿ ಸುದ್ದಿಗಳನ್ನು ಒಳಗೊಂಡಿರುವ ಟ್ವೀಟ್ ಅನ್ನು ಅಳಿಸಿದೆ. ಅದರ ಶೀರ್ಷಿಕೆಯಿಂದ ಕಲ್ಲು ತೂರಿದ್ದಾರೆ ಎಂಬುದನ್ನು ತೆಗೆದುಹಾಕುವ ಮೂಲಕ ಅದು ತನ್ನ ಸುದ್ದಿಯನ್ನು ಎಡಿಟ್‌ ಮಾಡಿದೆ. ಈಗ “ಫಿರೋಜಾಬಾದ್‌ನ ಫಾರ್ಸಿ ಮಸೀದಿಯಲ್ಲಿದ್ದ ತಬ್ಲಿಘಿ ಜಮಾಅತ್‌ನ ನಾಲ್ಕು ಜನರು ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್‌” ಆಗಿದ್ದಾರೆ. ಎಂದು ಬರೆದಿದೆ.

ಈ ಹಿಂದೆ, ಕೆಲವು ಮಾಧ್ಯಮಗಳು “ಕ್ಯಾರೆಂಟೈನ್ ನಲ್ಲಿರುವ ತಬ್ಲೀಘಿ ಜಮಾಅತ್ ಸದಸ್ಯರು ಮಾಂಸಹಾರಿ ಆಹಾರಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಮತ್ತು ಅವರ ಬೇಡಿಕೆಗಳನ್ನು ಈಡೇರಿಸದಿದ್ದಾಗ ಗಲಾಟೆ ಉಂಟುಮಾಡಿದ್ದಾರೆ” ಎಂದು ಆರೋಪಿಸಿದ್ದರು. ಆದರೆ ಈ ಹೇಳಿಕೆಯನ್ನು ಉತ್ತರ ಪ್ರದೇಶದ ಸಹರಾನ್ಪುರ್ ಪೊಲೀಸರು ನಕಲಿ ಸುದ್ದಿ ಎಂದು ಸ್ಪಷ್ಟಪಡಿಸಿ ವಿವರವಾದ ಹೇಳಿಕೆ ನೀಡಿದ್ದರು.

ದೆಹಲಿ ಪೊಲೀಸರು ತಬ್ಲಿಘಿ ಜಮಾಅತ್ ಸದಸ್ಯರನ್ನು ನಿಜಾಮುದ್ದೀನ್ ಮಾರ್ಕಾಜ್‌ನಿಂದ ಸ್ಥಳಾಂತರಿಸಿದಾಗಿನಿಂದಲೂ, ಹಲವಾರು ಮಾಧ್ಯಮಗಳು ಭಾರತದ ಮುಸ್ಲಿಂ ಸಮುದಾಯದ ವಿರುದ್ಧ ನಿರಂತರವಾಗಿ ದುರುದ್ದೇಶಪ್ರೇರಿತ ಅಭಿಯಾನವನ್ನು ನಡೆಸುತ್ತಿದ್ದಾರೆ. ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರು ಮತ್ತು ಪೊಲೀಸರ ಮೇಲೆ ಉಗುಳಿದ್ದಾರೆ ಎಂದು ಕೆಲವರು ಸುದ್ದಿ ಮಾಡಿದರೆ ಮತ್ತೆ ಕೆಲವರು ದಾದಿಯರೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು.

ಆದರೆ, ನಿಜಾಮುದ್ದೀನ್ ಮಾರ್ಕಾಜ್ ಅವರನ್ನು ಸ್ಥಳಾಂತರಿಸಿದ ತಂಡದ ಭಾಗವಾಗಿದ್ದ ವೈದ್ಯಕೀಯ ಅಧಿಕಾರಿ ಎಂದು ಹೇಳಿಕೊಂಡ ಮಹಿಳೆಯೊಬ್ಬರು ಅವರು ಯಾರೊಂದಿಗೆ ಕೆಟ್ಟದಾಗಿ ವರ್ತಿಸಿಲ್ಲ ಎಂದು ಬಹಿರಂಗಪಡಿಸಿದ್ದಾರೆ.

ಕೃಪೆ: ಜನತಾ ಕಾ ರಿಪೋರ್ಟರ್‌


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...