Homeಮುಖಪುಟಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ :...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

- Advertisement -
- Advertisement -

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ) 1 ಲಕ್ಷ ರೂಪಾಯಿ ದಂಡ ವಿಧಿಸಿದೆ ಎಂದು ವರದಿಯಾಗಿದೆ.

ಜಮ್ಮು ಕಾಶ್ಮೀರದ ಹೆದ್ದಾರಿ ಮಧ್ಯದಲ್ಲಿ ವ್ಯಕ್ತಿಯೊಬ್ಬರು ನಮಾಝ್ ಮಾಡಲು ತನ್ನ ಟ್ರಕ್ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಝೀ ನ್ಯೂಸ್ ಸುದ್ದಿ ಪ್ರಸಾರ ಮಾಡಿತ್ತು. ಆದರೆ, ವಾಸ್ತವದಲ್ಲಿ ಆ ವ್ಯಕ್ತಿ ಇತರ ವಾಹನಗಳಂತೆ ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿಕೊಂಡಿದ್ದರು. ಈ ಘಟನೆ ನಡೆದು ಸುಮಾರು ಒಂದು ವರ್ಷದ ನಂತರ, ‘ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿರುವ ಪರಿಶೀಲಿಸದ ವಿಷಯವನ್ನು ಬಳಸಿದ್ದಕ್ಕಾಗಿ’ ಝೀ ನ್ಯೂಸ್‌ಗೆ ದಂಡ ವಿಧಿಸಲಾಗಿದೆ.

ಮಂಗಳವಾರ (ಫೆ. 17) ಹೊರಡಿಸಿದ ಆದೇಶದಲ್ಲಿ ಎನ್‌ಬಿಡಿಎಸ್‌ಎ, ಝೀ ನ್ಯೂಸ್ ಸಂಸ್ಥೆಯು ಸರಿಯಾದ ಜಾಗರೂಕತೆಯನ್ನು ವಹಿಸದೆ ‘ಸ್ಪಷ್ಟ ಲೋಪ’ ಎಸಗಿದೆ ಎಂದು ತಿಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿರುವ ವಿಷಯಗಳ ವರದಿಗಾರಿಕೆಗೆ ಸಂಬಂಧಿಸಿದಂತೆ ಆರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ವರದಿಗಳ “ಖಚಿತತೆಯನ್ನು ದೃಢೀಕರಿಸಲು ಸಾಧ್ಯವಿಲ್ಲ” ಎಂದು ಕೇವಲ ಡಿಸ್ಕ್ಲೈಮರ್ (Disclaimer) ನೀಡುವುದರಿಂದ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಾಧಿಕಾರವು ಸ್ಪಷ್ಟಪಡಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಕೆ ಸಿಕ್ರಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಹೊರಡಿಸಲಾದ ಎನ್‌ಬಿಡಿಎಸ್‌ಎ ಆದೇಶವು, ಮಾರ್ಚ್ 3, 2025 ರಂದು ಝೀ ನ್ಯೂಸ್ ಪ್ರಸಾರ ಮಾಡಿದ ಕಾರ್ಯಕ್ರಮದ ವಿರುದ್ಧ ದಾಖಲಾಗಿದ್ದ ಮೂರು ದೂರುಗಳಿಗೆ ಪ್ರತಿಕ್ರಿಯೆಯಾಗಿ ಬಂದಿದೆ. ಇಂದ್ರಜೀತ್ ಘೋರ್ಪಡೆ, ಉತ್ಕರ್ಷ್ ಮಿಶ್ರಾ ಮತ್ತು ಜಮಿಯತ್ ಉಲಮಾ-ಎ-ಹಿಂದ್ ಪರ ವಕೀಲ ಸೈಯದ್ ಕಾಬ್ ರಶೀದಿ ಈ ದೂರುಗಳನ್ನು ದಾಖಲಿಸಿದ್ದರು.

ಝೀ ನ್ಯೂಸ್ ತನ್ನ ಕಾರ್ಯಕ್ರಮದಲ್ಲಿ ಲಾರಿಯೊಂದರ ಮೇಲ್ಛಾವಣಿಯ ಮೇಲೆ ನಿಂತು ಚಾಲಕ ನಮಾಝ್ ಮಾಡುತ್ತಿರುವುದಾಗಿ ವಿಡಿಯೋ ಪ್ರಸಾರ ಮಾಡಿತ್ತು. ಈ ಮೂಲಕ ಆತ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟುಮಾಡಿದ್ದಾನೆ ಎಂದಿತ್ತು. ಆ ಸಮಯದಲ್ಲಿ ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದೆ ಆತ ‘ಸಂಪೂರ್ಣ ನಿರಾತಂಕವಾಗಿದ್ದ’ ಎಂದು ಆರೋಪಿಸಿತ್ತು.

“ನೀವು ಹೆದ್ದಾರಿಯ ಇನ್ನೊಂದು ಬದಿ ಸಂಪೂರ್ಣವಾಗಿ ಖಾಲಿ ಇರುವುದನ್ನು ನೋಡಬಹುದು, ಏಕೆಂದರೆ ಈ ಚಾಲಕನಂತೆ ಅಲ್ಲಿ ಯಾರೂ ನಮಾಝ್ ಮಾಡಿಲ್ಲ” ಎಂದು ಕಾರ್ಯಕ್ರಮದ ನಿರೂಪಕಿ ಹೇಳಿದ್ದರು. ಅಲ್ಲದೆ, ಪ್ರಾರ್ಥನೆ ಸಲ್ಲಿಸುವ ಸಮಯ ಬಂದಾಗ ಲಾರಿ ಚಾಲಕ ತನ್ನ ವಾಹನವನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸುವ ಬದಲು ರಸ್ತೆಯ ಮಧ್ಯದಲ್ಲೇ ನಿಲ್ಲಿಸಲು ನಿರ್ಧರಿಸಿದ್ದನು ಎಂದು ಆರೋಪಿಸಿದ್ದರು.

“ಝೀ ನ್ಯೂಸ್ ಈ ವೈರಲ್ ವಿಡಿಯೋವನ್ನು ದೃಢೀಕರಿಸುವುದಿಲ್ಲ, ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಇದನ್ನು ನೋಡಿದ ಪ್ರತಿಯೊಬ್ಬರೂ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಖಂಡಿತವಾಗಿಯೂ ಒತ್ತಾಯಿಸಿದ್ದಾರೆ” ಎಂದು ನಿರೂಪಕಿ ಮಾತು ಮುಂದುವರಿಸಿದರು.

ಕೆಲವು ದಿನಗಳ ನಂತರ, ಘಟನೆಯ ಸ್ಪಷ್ಟ ವಿಡಿಯೋವನ್ನು ಪರಿಶೀಲಿಸಿದ ಫ್ಯಾಕ್ಟ್‌ ಚೆಕ್ ಸುದ್ದಿ ಸಂಸ್ಥೆ ಆಲ್ಟ್‌ ನ್ಯೂಸ್, ಆ ಮುಸ್ಲಿಂ ಚಾಲಕನೇ ಸ್ವತಃ ವಾಹನಗಳ ಸಾಲಿನಲ್ಲಿ ಸಿಲುಕಿಕೊಂಡಿದ್ದರು ಎಂದು ಹೇಳಿತ್ತು. ಅಷ್ಟೇ ಅಲ್ಲದೆ, ಜಮ್ಮುವಿನ ರಾಂಬನ್ ಬಳಿ (ಟ್ರಾಫಿಕ್ ಜಾಮ್ ಉಂಟಾಗಿತ್ತು ಎನ್ನಲಾದ ಜಾಗ) ಏಕಮುಖ ಸಂಚಾರ ಮತ್ತು ಕಲ್ಲುಗಳು ಉರುಳುವ ಅಪಾಯದ ಬಗ್ಗೆ ಆ ಸಮಯದಲ್ಲಿ ಅಧಿಕೃತ ಎಚ್ಚರಿಕೆಗಳನ್ನು ನೀಡಲಾಗಿತ್ತು ಎಂಬ ಅಂಶವನ್ನೂ ಆಲ್ಟ್‌ ನ್ಯೂಸ್ ಪತ್ತೆಹಚ್ಚಿತ್ತು.

ದೂರುದಾರರಾದ ಇಂದ್ರಜೀತ್ ಘೋರ್ಪಡೆ ಅವರು, “ಅಧಿಕೃತವಲ್ಲದ ವಿಡಿಯೋವನ್ನು ಪ್ರಸಾರ ಮಾಡುವ ಮೂಲಕ ಮತ್ತು ಮುಸ್ಲಿಂ ಲಾರಿ ಚಾಲಕನ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ ಝೀ ನ್ಯೂಸ್ ಸಂಸ್ಥೆಯು ಮಾಧ್ಯಮ ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದರು.

ದೂರುದಾರರ ಆರೋಪಗಳಿಗೆ ಲಿಖಿತವಾಗಿ ಮತ್ತು ನವೆಂಬರ್‌ನಲ್ಲಿ ಎನ್‌ಬಿಡಿಎಸ್‌ಎ ನಡೆಸಿದ ವಿಚಾರಣೆಯ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದ ಝೀ ನ್ಯೂಸ್, ಆ ವಿಡಿಯೋ ದೃಢೀಕರಿಸಲ್ಪಟ್ಟಿಲ್ಲ ಎಂಬ ವಿಷಯವನ್ನು ತಾನು ಸ್ಪಷ್ಟಪಡಿಸಿರುವುದಾಗಿ ಮತ್ತು ಅದನ್ನು ‘ವಾಸ್ತವ ಅಥವಾ ದೃಢೀಕೃತ ಮಾಹಿತಿ’ ಎಂದು ಪ್ರಸ್ತುತಪಡಿಸಿಲ್ಲ ಎಂದು ಸಮರ್ಥಿಸಿಕೊಂಡಿತ್ತು. ಅಲ್ಲದೆ, ತಾನು ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳ ಯಾವುದೇ ಅಂಶಗಳನ್ನು ಉಲ್ಲಂಘಿಸಿಲ್ಲ ಎಂದು ಅದು ಸಮರ್ಥಿಸಿಕೊಂಡಿತ್ತು.

ಆದಾಗ್ಯೂ, ನ್ಯಾಯಮೂರ್ತಿ ಸಿಕ್ರಿ ಅವರು ತಮ್ಮ ಆದೇಶದಲ್ಲಿ, “ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿರುವ ದೃಢೀಕರಿಸದ ವಿಷಯಗಳನ್ನು ಬಳಸಿಕೊಳ್ಳುವುದು ಪ್ರಸಾರ ಸಂಸ್ಥೆಯ ಕಡೆಯಿಂದ ಉಂಟಾದ ಸ್ಪಷ್ಟ ಲೋಪವಾಗಿದೆ ಮತ್ತು ಇದು ಗಂಭೀರ ಸ್ವರೂಪದ್ದಾಗಿದೆ” ಎಂಬುವುದಾಗಿ ಎನ್‌ಬಿಡಿಎಸ್‌ಎ ಅಭಿಪ್ರಾಯಪಟ್ಟಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಇದು ನೀತಿ ಸಂಹಿತೆಯಲ್ಲಿರುವ ‘ನಿಖರತೆಯ ತತ್ವ’ಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

“ಉಲ್ಲಂಘನೆಯ ಸ್ವರೂಪವನ್ನು ಗಮನಿಸಿ, ಎನ್‌ಬಿಡಿಎಸ್‌ಎ ಭಾರಿ ಮೊತ್ತದ ದಂಡವನ್ನು ವಿಧಿಸಬಹುದಿತ್ತು. ಆದರೆ, ಪ್ರಸಾರ ಸಂಸ್ಥೆಯೇ ಸ್ವತಃ ಆಕ್ಷೇಪಾರ್ಹ ವಿಡಿಯೋವನ್ನು ನಂತರ ಡಿಲೀಟ್ ಮಾಡಿರುವುದನ್ನು ಪರಿಗಣಿಸಿ, ಸಂಸ್ಥೆಗೆ 1,00,000 ರೂಪಾಯಿ ದಂಡ ವಿಧಿಸಲು ನಿರ್ಧರಿಸಲಾಗಿದೆ” ಎಂದು ಮಂಗಳವಾರದ ಆದೇಶದಲ್ಲಿ ತಿಳಿಸಲಾಗಿದೆ.

ಪ್ರಸಾರ ಸಂಸ್ಥೆಗಳು ಮತ್ತು ಡಿಜಿಟಲ್ ಸುದ್ದಿ ಪ್ರಕಾಶಕರು ತಮ್ಮ ವರದಿಗಾರಿಕೆಗಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುತ್ತಿದ್ದಾರೆ, ಆದರೆ ಇದು ತಪ್ಪು ಮಾಹಿತಿ ಮತ್ತು ಎಐ ಸೃಷ್ಟಿತ ಕೃತಕ ವಿಷಯಗಳ ಹರಡುವಿಕೆಗೆ ಕಾರಣವಾಗುವ ಅಪಾಯವಿದೆ ಎಂದು ನ್ಯಾಯಮೂರ್ತಿ ಸಿಕ್ರಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ, ಪ್ರಾಧಿಕಾರದ ಸದಸ್ಯರು ಪಾಲಿಸಬೇಕಾದ ಆರು ಮಾರ್ಗಸೂಚಿಗಳನ್ನು ಅವರು ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಿಂದ ಪಡೆದ ಮಾಹಿತಿ, ಚಿತ್ರಗಳು ಮತ್ತು ವಿಡಿಯೋಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಮೊದಲು ಅವುಗಳನ್ನು ಕಡ್ಡಾಯವಾಗಿ ದೃಢೀಕರಿಸಿಕೊಳ್ಳಬೇಕು ಎಂದು ಅವರು ಈ ಮೂಲಕ ಸೂಚಿಸಿದ್ದಾರೆ.

“ಚಿತ್ರ ಅಥವಾ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಮತ್ತು ಅದರ ಅಧಿಕೃತತೆಯನ್ನು ದೃಢೀಕರಿಸಲು ಸಾಧ್ಯವಿಲ್ಲ ಎಂದು ಕೇವಲ ಹಕ್ಕು ನಿರಾಕರಣೆ (Disclaimer) ನೀಡುವುದರಿಂದ, ಸದಸ್ಯರು ನೀತಿ ಸಂಹಿತೆಯ ಅಡಿಯಲ್ಲಿರುವ ತಮ್ಮ ಜವಾಬ್ದಾರಿಗಳಿಂದ ಮುಕ್ತರಾಗಲು ಸಾಧ್ಯವಿಲ್ಲ” ಎಂದು ಮಾರ್ಗಸೂಚಿಗಳಲ್ಲಿ ಒಂದು ಹೇಳುತ್ತದೆ.

1.ಸಾಮಾಜಿಕ ಮಾಧ್ಯಮದಿಂದ ಸಂಗ್ರಹಿಸಲಾದ ಎಲ್ಲಾ ಮಾಹಿತಿ, ಚಿತ್ರಗಳು ಮತ್ತು/ಅಥವಾ ವಿಡಿಯೋಗಳನ್ನು ಪ್ರಸಾರ/ಪ್ರಕಟಣೆ ಮಾಡುವ ಮೊದಲು ನಿಖರವೆಂದು ಪರಿಶೀಲಿಸಬೇಕು.

    2. ಸಾಧ್ಯವಾದಲ್ಲೆಲ್ಲಾ, ಅಂತಹ ಎಲ್ಲಾ ಮಾಹಿತಿ, ಚಿತ್ರಗಳು ಮತ್ತು/ಅಥವಾ ವಿಡಿಯೋಗಳನ್ನು ಆನ್-ಗ್ರೌಂಡ್ ವರದಿ ಮಾಡುವಿಕೆ ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳು, ಪೊಲೀಸ್ ಮತ್ತು ಸರ್ಕಾರಿ ಅಧಿಕೃತ ಖಾತೆಗಳಂತಹ ಇತರ ವಿಶ್ವಾಸಾರ್ಹ ಮೂಲಗಳಿಂದ ದೃಢೀಕರಿಸಬೇಕು.

    3. ಸಾಧ್ಯವಾದಷ್ಟು ಮಟ್ಟಿಗೆ, ಚಿತ್ರಗಳು ಮತ್ತು/ಅಥವಾ ವಿಡಿಯೋಗಳು ವಿರೂಪಗೊಂಡಿವೆಯೇ, ತಿರುಚಲಾಗಿದೆಯೇ ಅಥವಾ ಅವುಗಳನ್ನು ಕೃತಕ ಬುದ್ಧಿಮತ್ತೆ (ಎಐ) ಬಳಸಿ ಸೃಷ್ಟಿಸಲಾಗಿದೆಯೇ ಎಂಬ ಬಗ್ಗೆ ಅವುಗಳ ಅಧಿಕೃತತೆಯನ್ನು ಫ್ಯಾಕ್ಟ್-ಚೆಕ್ ಮಾಡಬೇಕು.

    4. ಮಾಹಿತಿ, ಚಿತ್ರಗಳು ಅಥವಾ ವಿಡಿಯೋಗಳು ಅಸಲಿಯಾಗಿದ್ದರೂ ಸಹ, ಅವುಗಳನ್ನು ಸಂದರ್ಭಕ್ಕೆ ಹೊರತಾಗಿ ಪ್ರಸ್ತುತಪಡಿಸಬಾರದು; ಏಕೆಂದರೆ ಇದು ತಪ್ಪು ಮಾಹಿತಿಯನ್ನು ಹರಡಲು ದಾರಿಯಾಗಬಹುದು.

    5. ಮಿಲಿಟರಿ ಕಾರ್ಯಾಚರಣೆಗಳು, ಸಶಸ್ತ್ರ ಸಂಘರ್ಷಗಳು, ಆಂತರಿಕ ಅಸ್ಥಿರತೆ, ಕೋಮು ಹಿಂಸಾಚಾರ, ಸಾರ್ವಜನಿಕ ಅಶಾಂತಿ, ಅಪರಾಧ ಅಥವಾ ಇಂತಹುದೇ ಇತರ ಸೂಕ್ಷ್ಮ ಸಂದರ್ಭಗಳಿಗೆ ಸಂಬಂಧಿಸಿದ ಯಾವುದೇ ಸುದ್ದಿಯನ್ನು ವರದಿ ಮಾಡುವಾಗ, ಸಾಮಾಜಿಕ ಜಾಲತಾಣಗಳಲ್ಲಿನ ವಿಷಯಗಳನ್ನು ಬಳಸುವ ಮುನ್ನ ಅವುಗಳನ್ನು ಕಡ್ಡಾಯವಾಗಿ ಸಾರ್ವಜನಿಕ ಹಿತಾಸಕ್ತಿ ಮತ್ತು ನಿಖರತೆಯ ಆಧಾರದ ಮೇಲೆ ಪರೀಕ್ಷಿಸಬೇಕು.

    6. ದೃಶ್ಯ ಅಥವಾ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ ಮತ್ತು ಅದರ ಅಧಿಕೃತತೆಯನ್ನು ದೃಢೀಕರಿಸಲು ಸಾಧ್ಯವಿಲ್ಲ ಎಂದು ಕೇವಲ ಹಕ್ಕು ನಿರಾಕರಣೆ (Disclaimer) ನೀಡುವುದರಿಂದ, ಸದಸ್ಯರು ನೀತಿ ಸಂಹಿತೆಯ ಅಡಿಯಲ್ಲಿರುವ ತಮ್ಮ ಜವಾಬ್ದಾರಿಗಳಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

    NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

    ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

    ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

    ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

    ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

    ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

    ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

    ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

    ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

    ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

    ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

    ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

    ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

    ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

    ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

    ‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

    ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

    ‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

    ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...