Homeಮುಖಪುಟಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ :...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

- Advertisement -
- Advertisement -

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ) 1 ಲಕ್ಷ ರೂಪಾಯಿ ದಂಡ ವಿಧಿಸಿದೆ ಎಂದು ವರದಿಯಾಗಿದೆ.

ಜಮ್ಮು ಕಾಶ್ಮೀರದ ಹೆದ್ದಾರಿ ಮಧ್ಯದಲ್ಲಿ ವ್ಯಕ್ತಿಯೊಬ್ಬರು ನಮಾಝ್ ಮಾಡಲು ತನ್ನ ಟ್ರಕ್ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಝೀ ನ್ಯೂಸ್ ಸುದ್ದಿ ಪ್ರಸಾರ ಮಾಡಿತ್ತು. ಆದರೆ, ವಾಸ್ತವದಲ್ಲಿ ಆ ವ್ಯಕ್ತಿ ಇತರ ವಾಹನಗಳಂತೆ ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿಕೊಂಡಿದ್ದರು. ಈ ಘಟನೆ ನಡೆದು ಸುಮಾರು ಒಂದು ವರ್ಷದ ನಂತರ, ‘ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿರುವ ಪರಿಶೀಲಿಸದ ವಿಷಯವನ್ನು ಬಳಸಿದ್ದಕ್ಕಾಗಿ’ ಝೀ ನ್ಯೂಸ್‌ಗೆ ದಂಡ ವಿಧಿಸಲಾಗಿದೆ.

ಮಂಗಳವಾರ (ಫೆ. 17) ಹೊರಡಿಸಿದ ಆದೇಶದಲ್ಲಿ ಎನ್‌ಬಿಡಿಎಸ್‌ಎ, ಝೀ ನ್ಯೂಸ್ ಸಂಸ್ಥೆಯು ಸರಿಯಾದ ಜಾಗರೂಕತೆಯನ್ನು ವಹಿಸದೆ ‘ಸ್ಪಷ್ಟ ಲೋಪ’ ಎಸಗಿದೆ ಎಂದು ತಿಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿರುವ ವಿಷಯಗಳ ವರದಿಗಾರಿಕೆಗೆ ಸಂಬಂಧಿಸಿದಂತೆ ಆರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ವರದಿಗಳ “ಖಚಿತತೆಯನ್ನು ದೃಢೀಕರಿಸಲು ಸಾಧ್ಯವಿಲ್ಲ” ಎಂದು ಕೇವಲ ಡಿಸ್ಕ್ಲೈಮರ್ (Disclaimer) ನೀಡುವುದರಿಂದ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಾಧಿಕಾರವು ಸ್ಪಷ್ಟಪಡಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಕೆ ಸಿಕ್ರಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಹೊರಡಿಸಲಾದ ಎನ್‌ಬಿಡಿಎಸ್‌ಎ ಆದೇಶವು, ಮಾರ್ಚ್ 3, 2025 ರಂದು ಝೀ ನ್ಯೂಸ್ ಪ್ರಸಾರ ಮಾಡಿದ ಕಾರ್ಯಕ್ರಮದ ವಿರುದ್ಧ ದಾಖಲಾಗಿದ್ದ ಮೂರು ದೂರುಗಳಿಗೆ ಪ್ರತಿಕ್ರಿಯೆಯಾಗಿ ಬಂದಿದೆ. ಇಂದ್ರಜೀತ್ ಘೋರ್ಪಡೆ, ಉತ್ಕರ್ಷ್ ಮಿಶ್ರಾ ಮತ್ತು ಜಮಿಯತ್ ಉಲಮಾ-ಎ-ಹಿಂದ್ ಪರ ವಕೀಲ ಸೈಯದ್ ಕಾಬ್ ರಶೀದಿ ಈ ದೂರುಗಳನ್ನು ದಾಖಲಿಸಿದ್ದರು.

ಝೀ ನ್ಯೂಸ್ ತನ್ನ ಕಾರ್ಯಕ್ರಮದಲ್ಲಿ ಲಾರಿಯೊಂದರ ಮೇಲ್ಛಾವಣಿಯ ಮೇಲೆ ನಿಂತು ಚಾಲಕ ನಮಾಝ್ ಮಾಡುತ್ತಿರುವುದಾಗಿ ವಿಡಿಯೋ ಪ್ರಸಾರ ಮಾಡಿತ್ತು. ಈ ಮೂಲಕ ಆತ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟುಮಾಡಿದ್ದಾನೆ ಎಂದಿತ್ತು. ಆ ಸಮಯದಲ್ಲಿ ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದೆ ಆತ ‘ಸಂಪೂರ್ಣ ನಿರಾತಂಕವಾಗಿದ್ದ’ ಎಂದು ಆರೋಪಿಸಿತ್ತು.

“ನೀವು ಹೆದ್ದಾರಿಯ ಇನ್ನೊಂದು ಬದಿ ಸಂಪೂರ್ಣವಾಗಿ ಖಾಲಿ ಇರುವುದನ್ನು ನೋಡಬಹುದು, ಏಕೆಂದರೆ ಈ ಚಾಲಕನಂತೆ ಅಲ್ಲಿ ಯಾರೂ ನಮಾಝ್ ಮಾಡಿಲ್ಲ” ಎಂದು ಕಾರ್ಯಕ್ರಮದ ನಿರೂಪಕಿ ಹೇಳಿದ್ದರು. ಅಲ್ಲದೆ, ಪ್ರಾರ್ಥನೆ ಸಲ್ಲಿಸುವ ಸಮಯ ಬಂದಾಗ ಲಾರಿ ಚಾಲಕ ತನ್ನ ವಾಹನವನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸುವ ಬದಲು ರಸ್ತೆಯ ಮಧ್ಯದಲ್ಲೇ ನಿಲ್ಲಿಸಲು ನಿರ್ಧರಿಸಿದ್ದನು ಎಂದು ಆರೋಪಿಸಿದ್ದರು.

“ಝೀ ನ್ಯೂಸ್ ಈ ವೈರಲ್ ವಿಡಿಯೋವನ್ನು ದೃಢೀಕರಿಸುವುದಿಲ್ಲ, ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಇದನ್ನು ನೋಡಿದ ಪ್ರತಿಯೊಬ್ಬರೂ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಖಂಡಿತವಾಗಿಯೂ ಒತ್ತಾಯಿಸಿದ್ದಾರೆ” ಎಂದು ನಿರೂಪಕಿ ಮಾತು ಮುಂದುವರಿಸಿದರು.

ಕೆಲವು ದಿನಗಳ ನಂತರ, ಘಟನೆಯ ಸ್ಪಷ್ಟ ವಿಡಿಯೋವನ್ನು ಪರಿಶೀಲಿಸಿದ ಫ್ಯಾಕ್ಟ್‌ ಚೆಕ್ ಸುದ್ದಿ ಸಂಸ್ಥೆ ಆಲ್ಟ್‌ ನ್ಯೂಸ್, ಆ ಮುಸ್ಲಿಂ ಚಾಲಕನೇ ಸ್ವತಃ ವಾಹನಗಳ ಸಾಲಿನಲ್ಲಿ ಸಿಲುಕಿಕೊಂಡಿದ್ದರು ಎಂದು ಹೇಳಿತ್ತು. ಅಷ್ಟೇ ಅಲ್ಲದೆ, ಜಮ್ಮುವಿನ ರಾಂಬನ್ ಬಳಿ (ಟ್ರಾಫಿಕ್ ಜಾಮ್ ಉಂಟಾಗಿತ್ತು ಎನ್ನಲಾದ ಜಾಗ) ಏಕಮುಖ ಸಂಚಾರ ಮತ್ತು ಕಲ್ಲುಗಳು ಉರುಳುವ ಅಪಾಯದ ಬಗ್ಗೆ ಆ ಸಮಯದಲ್ಲಿ ಅಧಿಕೃತ ಎಚ್ಚರಿಕೆಗಳನ್ನು ನೀಡಲಾಗಿತ್ತು ಎಂಬ ಅಂಶವನ್ನೂ ಆಲ್ಟ್‌ ನ್ಯೂಸ್ ಪತ್ತೆಹಚ್ಚಿತ್ತು.

ದೂರುದಾರರಾದ ಇಂದ್ರಜೀತ್ ಘೋರ್ಪಡೆ ಅವರು, “ಅಧಿಕೃತವಲ್ಲದ ವಿಡಿಯೋವನ್ನು ಪ್ರಸಾರ ಮಾಡುವ ಮೂಲಕ ಮತ್ತು ಮುಸ್ಲಿಂ ಲಾರಿ ಚಾಲಕನ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ ಝೀ ನ್ಯೂಸ್ ಸಂಸ್ಥೆಯು ಮಾಧ್ಯಮ ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದರು.

ದೂರುದಾರರ ಆರೋಪಗಳಿಗೆ ಲಿಖಿತವಾಗಿ ಮತ್ತು ನವೆಂಬರ್‌ನಲ್ಲಿ ಎನ್‌ಬಿಡಿಎಸ್‌ಎ ನಡೆಸಿದ ವಿಚಾರಣೆಯ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದ ಝೀ ನ್ಯೂಸ್, ಆ ವಿಡಿಯೋ ದೃಢೀಕರಿಸಲ್ಪಟ್ಟಿಲ್ಲ ಎಂಬ ವಿಷಯವನ್ನು ತಾನು ಸ್ಪಷ್ಟಪಡಿಸಿರುವುದಾಗಿ ಮತ್ತು ಅದನ್ನು ‘ವಾಸ್ತವ ಅಥವಾ ದೃಢೀಕೃತ ಮಾಹಿತಿ’ ಎಂದು ಪ್ರಸ್ತುತಪಡಿಸಿಲ್ಲ ಎಂದು ಸಮರ್ಥಿಸಿಕೊಂಡಿತ್ತು. ಅಲ್ಲದೆ, ತಾನು ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳ ಯಾವುದೇ ಅಂಶಗಳನ್ನು ಉಲ್ಲಂಘಿಸಿಲ್ಲ ಎಂದು ಅದು ಸಮರ್ಥಿಸಿಕೊಂಡಿತ್ತು.

ಆದಾಗ್ಯೂ, ನ್ಯಾಯಮೂರ್ತಿ ಸಿಕ್ರಿ ಅವರು ತಮ್ಮ ಆದೇಶದಲ್ಲಿ, “ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿರುವ ದೃಢೀಕರಿಸದ ವಿಷಯಗಳನ್ನು ಬಳಸಿಕೊಳ್ಳುವುದು ಪ್ರಸಾರ ಸಂಸ್ಥೆಯ ಕಡೆಯಿಂದ ಉಂಟಾದ ಸ್ಪಷ್ಟ ಲೋಪವಾಗಿದೆ ಮತ್ತು ಇದು ಗಂಭೀರ ಸ್ವರೂಪದ್ದಾಗಿದೆ” ಎಂಬುವುದಾಗಿ ಎನ್‌ಬಿಡಿಎಸ್‌ಎ ಅಭಿಪ್ರಾಯಪಟ್ಟಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಇದು ನೀತಿ ಸಂಹಿತೆಯಲ್ಲಿರುವ ‘ನಿಖರತೆಯ ತತ್ವ’ಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

“ಉಲ್ಲಂಘನೆಯ ಸ್ವರೂಪವನ್ನು ಗಮನಿಸಿ, ಎನ್‌ಬಿಡಿಎಸ್‌ಎ ಭಾರಿ ಮೊತ್ತದ ದಂಡವನ್ನು ವಿಧಿಸಬಹುದಿತ್ತು. ಆದರೆ, ಪ್ರಸಾರ ಸಂಸ್ಥೆಯೇ ಸ್ವತಃ ಆಕ್ಷೇಪಾರ್ಹ ವಿಡಿಯೋವನ್ನು ನಂತರ ಡಿಲೀಟ್ ಮಾಡಿರುವುದನ್ನು ಪರಿಗಣಿಸಿ, ಸಂಸ್ಥೆಗೆ 1,00,000 ರೂಪಾಯಿ ದಂಡ ವಿಧಿಸಲು ನಿರ್ಧರಿಸಲಾಗಿದೆ” ಎಂದು ಮಂಗಳವಾರದ ಆದೇಶದಲ್ಲಿ ತಿಳಿಸಲಾಗಿದೆ.

ಪ್ರಸಾರ ಸಂಸ್ಥೆಗಳು ಮತ್ತು ಡಿಜಿಟಲ್ ಸುದ್ದಿ ಪ್ರಕಾಶಕರು ತಮ್ಮ ವರದಿಗಾರಿಕೆಗಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುತ್ತಿದ್ದಾರೆ, ಆದರೆ ಇದು ತಪ್ಪು ಮಾಹಿತಿ ಮತ್ತು ಎಐ ಸೃಷ್ಟಿತ ಕೃತಕ ವಿಷಯಗಳ ಹರಡುವಿಕೆಗೆ ಕಾರಣವಾಗುವ ಅಪಾಯವಿದೆ ಎಂದು ನ್ಯಾಯಮೂರ್ತಿ ಸಿಕ್ರಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ, ಪ್ರಾಧಿಕಾರದ ಸದಸ್ಯರು ಪಾಲಿಸಬೇಕಾದ ಆರು ಮಾರ್ಗಸೂಚಿಗಳನ್ನು ಅವರು ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಿಂದ ಪಡೆದ ಮಾಹಿತಿ, ಚಿತ್ರಗಳು ಮತ್ತು ವಿಡಿಯೋಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಮೊದಲು ಅವುಗಳನ್ನು ಕಡ್ಡಾಯವಾಗಿ ದೃಢೀಕರಿಸಿಕೊಳ್ಳಬೇಕು ಎಂದು ಅವರು ಈ ಮೂಲಕ ಸೂಚಿಸಿದ್ದಾರೆ.

“ಚಿತ್ರ ಅಥವಾ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಮತ್ತು ಅದರ ಅಧಿಕೃತತೆಯನ್ನು ದೃಢೀಕರಿಸಲು ಸಾಧ್ಯವಿಲ್ಲ ಎಂದು ಕೇವಲ ಹಕ್ಕು ನಿರಾಕರಣೆ (Disclaimer) ನೀಡುವುದರಿಂದ, ಸದಸ್ಯರು ನೀತಿ ಸಂಹಿತೆಯ ಅಡಿಯಲ್ಲಿರುವ ತಮ್ಮ ಜವಾಬ್ದಾರಿಗಳಿಂದ ಮುಕ್ತರಾಗಲು ಸಾಧ್ಯವಿಲ್ಲ” ಎಂದು ಮಾರ್ಗಸೂಚಿಗಳಲ್ಲಿ ಒಂದು ಹೇಳುತ್ತದೆ.

1.ಸಾಮಾಜಿಕ ಮಾಧ್ಯಮದಿಂದ ಸಂಗ್ರಹಿಸಲಾದ ಎಲ್ಲಾ ಮಾಹಿತಿ, ಚಿತ್ರಗಳು ಮತ್ತು/ಅಥವಾ ವಿಡಿಯೋಗಳನ್ನು ಪ್ರಸಾರ/ಪ್ರಕಟಣೆ ಮಾಡುವ ಮೊದಲು ನಿಖರವೆಂದು ಪರಿಶೀಲಿಸಬೇಕು.

    2. ಸಾಧ್ಯವಾದಲ್ಲೆಲ್ಲಾ, ಅಂತಹ ಎಲ್ಲಾ ಮಾಹಿತಿ, ಚಿತ್ರಗಳು ಮತ್ತು/ಅಥವಾ ವಿಡಿಯೋಗಳನ್ನು ಆನ್-ಗ್ರೌಂಡ್ ವರದಿ ಮಾಡುವಿಕೆ ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳು, ಪೊಲೀಸ್ ಮತ್ತು ಸರ್ಕಾರಿ ಅಧಿಕೃತ ಖಾತೆಗಳಂತಹ ಇತರ ವಿಶ್ವಾಸಾರ್ಹ ಮೂಲಗಳಿಂದ ದೃಢೀಕರಿಸಬೇಕು.

    3. ಸಾಧ್ಯವಾದಷ್ಟು ಮಟ್ಟಿಗೆ, ಚಿತ್ರಗಳು ಮತ್ತು/ಅಥವಾ ವಿಡಿಯೋಗಳು ವಿರೂಪಗೊಂಡಿವೆಯೇ, ತಿರುಚಲಾಗಿದೆಯೇ ಅಥವಾ ಅವುಗಳನ್ನು ಕೃತಕ ಬುದ್ಧಿಮತ್ತೆ (ಎಐ) ಬಳಸಿ ಸೃಷ್ಟಿಸಲಾಗಿದೆಯೇ ಎಂಬ ಬಗ್ಗೆ ಅವುಗಳ ಅಧಿಕೃತತೆಯನ್ನು ಫ್ಯಾಕ್ಟ್-ಚೆಕ್ ಮಾಡಬೇಕು.

    4. ಮಾಹಿತಿ, ಚಿತ್ರಗಳು ಅಥವಾ ವಿಡಿಯೋಗಳು ಅಸಲಿಯಾಗಿದ್ದರೂ ಸಹ, ಅವುಗಳನ್ನು ಸಂದರ್ಭಕ್ಕೆ ಹೊರತಾಗಿ ಪ್ರಸ್ತುತಪಡಿಸಬಾರದು; ಏಕೆಂದರೆ ಇದು ತಪ್ಪು ಮಾಹಿತಿಯನ್ನು ಹರಡಲು ದಾರಿಯಾಗಬಹುದು.

    5. ಮಿಲಿಟರಿ ಕಾರ್ಯಾಚರಣೆಗಳು, ಸಶಸ್ತ್ರ ಸಂಘರ್ಷಗಳು, ಆಂತರಿಕ ಅಸ್ಥಿರತೆ, ಕೋಮು ಹಿಂಸಾಚಾರ, ಸಾರ್ವಜನಿಕ ಅಶಾಂತಿ, ಅಪರಾಧ ಅಥವಾ ಇಂತಹುದೇ ಇತರ ಸೂಕ್ಷ್ಮ ಸಂದರ್ಭಗಳಿಗೆ ಸಂಬಂಧಿಸಿದ ಯಾವುದೇ ಸುದ್ದಿಯನ್ನು ವರದಿ ಮಾಡುವಾಗ, ಸಾಮಾಜಿಕ ಜಾಲತಾಣಗಳಲ್ಲಿನ ವಿಷಯಗಳನ್ನು ಬಳಸುವ ಮುನ್ನ ಅವುಗಳನ್ನು ಕಡ್ಡಾಯವಾಗಿ ಸಾರ್ವಜನಿಕ ಹಿತಾಸಕ್ತಿ ಮತ್ತು ನಿಖರತೆಯ ಆಧಾರದ ಮೇಲೆ ಪರೀಕ್ಷಿಸಬೇಕು.

    6. ದೃಶ್ಯ ಅಥವಾ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ ಮತ್ತು ಅದರ ಅಧಿಕೃತತೆಯನ್ನು ದೃಢೀಕರಿಸಲು ಸಾಧ್ಯವಿಲ್ಲ ಎಂದು ಕೇವಲ ಹಕ್ಕು ನಿರಾಕರಣೆ (Disclaimer) ನೀಡುವುದರಿಂದ, ಸದಸ್ಯರು ನೀತಿ ಸಂಹಿತೆಯ ಅಡಿಯಲ್ಲಿರುವ ತಮ್ಮ ಜವಾಬ್ದಾರಿಗಳಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

    ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

    ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

    ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

    ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

    ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

    9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

    ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

    ‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

    ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

    ‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

    ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

    ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

    ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

    ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

    ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

    SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

    ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

    ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

    ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...