Homeಮುಖಪುಟಫ್ಯಾಕ್ಟ್‌ಚೆಕ್: ಉದಯಪುರ ಹತ್ಯೆ ಆರೋಪಿಗಳನ್ನು ರಾಹುಲ್ ಗಾಂಧಿ ಕ್ಷಮಿಸಿದ್ದಾರೆ ಎಂದು ಸುಳ್ಳು ಹಬ್ಬಿಸಿದ ಝೀ ನ್ಯೂಸ್

ಫ್ಯಾಕ್ಟ್‌ಚೆಕ್: ಉದಯಪುರ ಹತ್ಯೆ ಆರೋಪಿಗಳನ್ನು ರಾಹುಲ್ ಗಾಂಧಿ ಕ್ಷಮಿಸಿದ್ದಾರೆ ಎಂದು ಸುಳ್ಳು ಹಬ್ಬಿಸಿದ ಝೀ ನ್ಯೂಸ್

- Advertisement -
- Advertisement -

ಪ್ರವಾದಿ ನಿಂದನೆ ಮಾಡಿದ ನೂಪರ್ ಶರ್ಮಾ ಬೆಂಬಲಿಸಿದ್ದಾಕ್ಕಿ ರಾಜಸ್ಥಾನದ ಉದಯಪುರದಲ್ಲಿ ಕನ್ನಯ್ಯ ಎಂಬ ವ್ಯಕ್ತಿಯೊಬ್ಬನನ್ನು ಇಬ್ಬರು ಮುಸ್ಲಿಂ ಮತಾಂಧರು ಹತ್ಯೆ ಮಾಡಿರುವ ಅಮಾನವೀಯ ಘಟನೆಯ ನಡುವೆಯೆ ಆ ಆರೋಪಿಗಳನ್ನು ರಾಹುಲ್ ಗಾಂಧಿ ಕ್ಷಮಿಸಿದ್ದಾರೆ ಎಂದು ಝೀ ನ್ಯೂಸ್ ವರದಿ ಮಾಡಿದೆ.

ಝೀ ನ್ಯೂಸ್ ನ ಡಿಎನ್‌ಎ ಎನ್ನುವ ಕಾರ್ಯಕ್ರಮದಲ್ಲಿ ನಿರೂಪಕ “ರಾಹುಲ್ ಗಾಂಧಿಯ ಪೂರ್ವಗ್ರಹವನ್ನು ಮತ್ತೊಮ್ಮೆ ನೋಡಿ. ಉದಯಪುರದ ಆರೋಪಿಗಳನ್ನು ಅವರು ಮಕ್ಕಳು ಎಂದು ಕರೆದಿದ್ದಾರೆ. ಅವರು ಮಕ್ಕಳೊ ಅಥವಾ ಆತಂಕವಾದಿಗಳೊ” ಎಂದು ಪ್ರಶ್ನಿಸಿದ್ದಾನೆ.

ಆದರೆ ವಾಸ್ತವದಲ್ಲಿ ರಾಹುಲ್ ಗಾಂಧಿ ಉದಯಪುರದ ಹಂತಕರನ್ನು ಎಲ್ಲಿಯೂ ಮಕ್ಕಳು ಎಂದು ಕರೆದಿಲ್ಲ ಮತ್ತು ಅವರನ್ನು ಕ್ಷಮಿಸಿಲ್ಲ. ಬದಲಿಗೆ “ಉದಯಪುರದಲ್ಲಿ ನಡೆದ ಭೀಕರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಈ ಕ್ರೌರ್ಯದಿಂದ ಭಯೋತ್ಪಾದನೆಯನ್ನು ಹರಡುವವರಿಗೆ ತಕ್ಷಣ ಶಿಕ್ಷೆಯಾಗಬೇಕು.ನಾವೆಲ್ಲರೂ ಒಟ್ಟಾಗಿ ದ್ವೇಷವನ್ನು ಸೋಲಿಸಬೇಕು. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ದಯವಿಟ್ಟು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳಿ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಆ ನಂತರ ಅವರು ಕೇರಳದ ತಮ್ಮ ಸಂಸತ್ ಕ್ಷೇತ್ರ ವಯನಾಡಿಗೆ ಭೇಟಿ ನೀಡಿದ್ದರು. ಆ ವೇಳೆ ಅವರ ಕಚೇರಿ ಮೇಲೆ ಎಸ್‌ಎಫ್‌ಐ ಕಾರ್ಯಕರ್ತರು ದಾಳಿ ಮಾಡಿದ ಕುರಿತು ಪತ್ರಕರ್ತರು ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ, “ಇದು ನನ್ನ ಕಚೇರಿ. ಆದರೆ ಅದಕ್ಕೂ ಮುನ್ನ ಇದು ವಯನಾಡಿನ ಜನರ ಕಚೇರಿ. ಇದು ವಯನಾಡಿನ ಜನರ ಧ್ವನಿ. ದುರಾದೃಷ್ಟವಶಾತ್ ಕೆಲವು ಜನರು ಹಿಂಸೆಗಿಳಿದಿದ್ದಾರೆ. ಆದರೆ ಯಾವುದೇ ಸಮಸ್ಯೆಗೆ ಪರಿಹಾರವಾಗುವುದಿಲ್ಲ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ಈ ರೀತಿ ಮಾಡಿದ ಮಕ್ಕಳು ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಆದರೆ ಅವರ ಬಗ್ಗೆ ನನಗೆ ಯಾವುದೇ ಕೋಪ ಅಥವಾ ದ್ವೇಷವಿಲ್ಲ. ಅವರನ್ನು ಕ್ಷಮಿಸಿದ್ದೇನೆ’ ಎಂದು ಹೇಳಿದ್ದಾರೆ.

ವಯನಾಡಿನ ಎಸ್‌ಎಫ್‌ಐ ಕಾರ್ಯಕರ್ತರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದ್ದನ್ನು ಝೀ ನ್ಯೂಸ್ ಉದಯಪುರದ ಹಂತಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ ಎಂದು ತಿರುಚಿ ಸುದ್ದಿ ಪ್ರಸಾರ ಮಾಡಿದೆ.

ಈ ಕುರಿತು ಕಾಂಗ್ರೆಸ್ ಜಾಲತಾಣದ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಟೆ ಆಕ್ರೋಶ ವ್ಯಕ್ತಪಡಿಸಿದ್ದು, ಎರಡೂ ವಿಡಿಯೋ ತುಣುಕುಗಳನ್ನು ಟ್ವೀಟ್ ಮಾಡಿದ್ದಾರೆ. ಸುಳ್ಳು ಸುದ್ದಿ ಪ್ರಕಟಿಸಿದ ಝಿ ನ್ಯೂಸ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಪತ್ರಕರ್ತ ಜುಬೇರ್ ಮೇಲೆ ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶದಂತಹ ಹೊಸ ಪ್ರಕರಣಗಳನ್ನು ಹೇರಿದ ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...