Homeಮುಖಪುಟಫ್ಯಾಕ್ಟ್‌ಚೆಕ್: ಉದಯಪುರ ಹತ್ಯೆ ಆರೋಪಿಗಳನ್ನು ರಾಹುಲ್ ಗಾಂಧಿ ಕ್ಷಮಿಸಿದ್ದಾರೆ ಎಂದು ಸುಳ್ಳು ಹಬ್ಬಿಸಿದ ಝೀ ನ್ಯೂಸ್

ಫ್ಯಾಕ್ಟ್‌ಚೆಕ್: ಉದಯಪುರ ಹತ್ಯೆ ಆರೋಪಿಗಳನ್ನು ರಾಹುಲ್ ಗಾಂಧಿ ಕ್ಷಮಿಸಿದ್ದಾರೆ ಎಂದು ಸುಳ್ಳು ಹಬ್ಬಿಸಿದ ಝೀ ನ್ಯೂಸ್

- Advertisement -
- Advertisement -

ಪ್ರವಾದಿ ನಿಂದನೆ ಮಾಡಿದ ನೂಪರ್ ಶರ್ಮಾ ಬೆಂಬಲಿಸಿದ್ದಾಕ್ಕಿ ರಾಜಸ್ಥಾನದ ಉದಯಪುರದಲ್ಲಿ ಕನ್ನಯ್ಯ ಎಂಬ ವ್ಯಕ್ತಿಯೊಬ್ಬನನ್ನು ಇಬ್ಬರು ಮುಸ್ಲಿಂ ಮತಾಂಧರು ಹತ್ಯೆ ಮಾಡಿರುವ ಅಮಾನವೀಯ ಘಟನೆಯ ನಡುವೆಯೆ ಆ ಆರೋಪಿಗಳನ್ನು ರಾಹುಲ್ ಗಾಂಧಿ ಕ್ಷಮಿಸಿದ್ದಾರೆ ಎಂದು ಝೀ ನ್ಯೂಸ್ ವರದಿ ಮಾಡಿದೆ.

ಝೀ ನ್ಯೂಸ್ ನ ಡಿಎನ್‌ಎ ಎನ್ನುವ ಕಾರ್ಯಕ್ರಮದಲ್ಲಿ ನಿರೂಪಕ “ರಾಹುಲ್ ಗಾಂಧಿಯ ಪೂರ್ವಗ್ರಹವನ್ನು ಮತ್ತೊಮ್ಮೆ ನೋಡಿ. ಉದಯಪುರದ ಆರೋಪಿಗಳನ್ನು ಅವರು ಮಕ್ಕಳು ಎಂದು ಕರೆದಿದ್ದಾರೆ. ಅವರು ಮಕ್ಕಳೊ ಅಥವಾ ಆತಂಕವಾದಿಗಳೊ” ಎಂದು ಪ್ರಶ್ನಿಸಿದ್ದಾನೆ.

ಆದರೆ ವಾಸ್ತವದಲ್ಲಿ ರಾಹುಲ್ ಗಾಂಧಿ ಉದಯಪುರದ ಹಂತಕರನ್ನು ಎಲ್ಲಿಯೂ ಮಕ್ಕಳು ಎಂದು ಕರೆದಿಲ್ಲ ಮತ್ತು ಅವರನ್ನು ಕ್ಷಮಿಸಿಲ್ಲ. ಬದಲಿಗೆ “ಉದಯಪುರದಲ್ಲಿ ನಡೆದ ಭೀಕರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಈ ಕ್ರೌರ್ಯದಿಂದ ಭಯೋತ್ಪಾದನೆಯನ್ನು ಹರಡುವವರಿಗೆ ತಕ್ಷಣ ಶಿಕ್ಷೆಯಾಗಬೇಕು.ನಾವೆಲ್ಲರೂ ಒಟ್ಟಾಗಿ ದ್ವೇಷವನ್ನು ಸೋಲಿಸಬೇಕು. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ದಯವಿಟ್ಟು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳಿ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಆ ನಂತರ ಅವರು ಕೇರಳದ ತಮ್ಮ ಸಂಸತ್ ಕ್ಷೇತ್ರ ವಯನಾಡಿಗೆ ಭೇಟಿ ನೀಡಿದ್ದರು. ಆ ವೇಳೆ ಅವರ ಕಚೇರಿ ಮೇಲೆ ಎಸ್‌ಎಫ್‌ಐ ಕಾರ್ಯಕರ್ತರು ದಾಳಿ ಮಾಡಿದ ಕುರಿತು ಪತ್ರಕರ್ತರು ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ, “ಇದು ನನ್ನ ಕಚೇರಿ. ಆದರೆ ಅದಕ್ಕೂ ಮುನ್ನ ಇದು ವಯನಾಡಿನ ಜನರ ಕಚೇರಿ. ಇದು ವಯನಾಡಿನ ಜನರ ಧ್ವನಿ. ದುರಾದೃಷ್ಟವಶಾತ್ ಕೆಲವು ಜನರು ಹಿಂಸೆಗಿಳಿದಿದ್ದಾರೆ. ಆದರೆ ಯಾವುದೇ ಸಮಸ್ಯೆಗೆ ಪರಿಹಾರವಾಗುವುದಿಲ್ಲ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ಈ ರೀತಿ ಮಾಡಿದ ಮಕ್ಕಳು ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಆದರೆ ಅವರ ಬಗ್ಗೆ ನನಗೆ ಯಾವುದೇ ಕೋಪ ಅಥವಾ ದ್ವೇಷವಿಲ್ಲ. ಅವರನ್ನು ಕ್ಷಮಿಸಿದ್ದೇನೆ’ ಎಂದು ಹೇಳಿದ್ದಾರೆ.

ವಯನಾಡಿನ ಎಸ್‌ಎಫ್‌ಐ ಕಾರ್ಯಕರ್ತರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದ್ದನ್ನು ಝೀ ನ್ಯೂಸ್ ಉದಯಪುರದ ಹಂತಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ ಎಂದು ತಿರುಚಿ ಸುದ್ದಿ ಪ್ರಸಾರ ಮಾಡಿದೆ.

ಈ ಕುರಿತು ಕಾಂಗ್ರೆಸ್ ಜಾಲತಾಣದ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಟೆ ಆಕ್ರೋಶ ವ್ಯಕ್ತಪಡಿಸಿದ್ದು, ಎರಡೂ ವಿಡಿಯೋ ತುಣುಕುಗಳನ್ನು ಟ್ವೀಟ್ ಮಾಡಿದ್ದಾರೆ. ಸುಳ್ಳು ಸುದ್ದಿ ಪ್ರಕಟಿಸಿದ ಝಿ ನ್ಯೂಸ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಪತ್ರಕರ್ತ ಜುಬೇರ್ ಮೇಲೆ ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶದಂತಹ ಹೊಸ ಪ್ರಕರಣಗಳನ್ನು ಹೇರಿದ ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...