Homeಮುಖಪುಟಸ್ವಾತಂತ್ಯ್ರ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ಅಪರಾಧಿಯಂತೆ ಚಿತ್ರಸಿದ ZEE5 ವೆಬ್‌ಸಿರೀಸ್‌

ಸ್ವಾತಂತ್ಯ್ರ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ಅಪರಾಧಿಯಂತೆ ಚಿತ್ರಸಿದ ZEE5 ವೆಬ್‌ಸಿರೀಸ್‌

ಆಗಸ್ಟ್ 11, 1908 ರಂದು ಗಲ್ಲಿಗೇರಿಸಲ್ಪಟ್ಟ ಬೋಸ್, ಗಲ್ಲು ಶಿಕ್ಷೆಗೆ ಗುರಿಯಾದ ಅತ್ಯಂತ ಕಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿದ್ದರು.

- Advertisement -
- Advertisement -

ZEE5 ಒಟಿಟಿಯಲ್ಲಿ ಪ್ರಸಾರವಾಗುವ ಕುನಾಲ್ ಖೇಮು ಅಭಿನಯದ ವೆಬ್‌ಸಿರೀಸ್‌ ’ಅಭಯ್ 2’ ನ ದೃಶ್ಯವೊಂದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ’ಅಪರಾಧಿ’ ಎಂಬಂತೆ ಚಿತ್ರಿಸಿರುವುದು ವಿವಾದ ಎಬ್ಬಿಸಿದ್ದು, ಬಂಗಾಳಿ ಸಮುದಾಯದಲ್ಲಿ ಆಕ್ರೋಶ ಹುಟ್ಟುಹಾಕಿದೆ.

ನಟ ರುದ್ರಾನಿಲ್ ಘೋಷ್ ಮತ್ತು ಶಾಸಕ ಮದನ್ ಮಿತ್ರ ಸೇರಿದಂತೆ ಹಲವಾರು ಜನರು ಇದನ್ನು ಖಂಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಜಫರ್‌ ನಗರ ಪಿತೂರಿ ಪ್ರಕರಣದಲ್ಲಿನ ಪಾತ್ರಕ್ಕಾಗಿ 18 ವರ್ಷದ ಖುದಿರಾಮ್ ಬೋಸ್‌ ಅವರಿಗೆ ಬ್ರಿಟಿಷ್ ಸರ್ಕಾರ ಮರಣದಂಡನೆ ವಿಧಿಸಿತ್ತು. ಪ್ರಕರಣದಲ್ಲಿ ಅವರು ಮತ್ತು ಕ್ರಾಂತಿಕಾರಿ ಪ್ರಫುಲ್ಲಾ ಚಾಕಿ ಬ್ರಿಟಿಷ್ ನ್ಯಾಯಾಧೀಶರನ್ನು ಹತ್ಯೆ ಮಾಡಲು ಪ್ರಯತ್ನಿಸಿದ್ದರು, ಆದರೆ ಅದು ವಿಫಲವಾಗಿತ್ತು. ಆಗಸ್ಟ್ 11, 1908 ರಂದು ಗಲ್ಲಿಗೇರಿಸಲ್ಪಟ್ಟ ಬೋಸ್, ಗಲ್ಲು ಶಿಕ್ಷೆಗೆ ಗುರಿಯಾದ ಅತ್ಯಂತ ಕಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿದ್ದರು.

ಸ್ವಾತಂತ್ರ್ಯ ದಿನಾಚರಣೆಯಂದು ಬಿಡುಗಡೆಯಾದ ”ಅಭಯ್ 2” ರ ಮೂರನೇ ಎಪಿಸೋಡ್‌ಗಳಲ್ಲಿ, ಖುದಿರಾಮ್ ಬೋಸ್‌ರ ಭಾವಚಿತ್ರವನ್ನು ಇತರ ಅಪರಾಧಿಗಳೊಂದಿಗೆ ಪೊಲೀಸ್ ಠಾಣೆಯಲ್ಲಿರುವ ಬೋರ್ಡ್‌ನಲ್ಲಿ ಅಂಟಿಸಿ ಇಡಲಾಗಿತ್ತು. ಇದನ್ನು ವಿರೋಧಿಸಿ ಜಾಲತಾಣಿಗರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರ ಇದನ್ನು “ಅತ್ಯಂತ ನಾಚಿಕೆಗೇಡು” ಎಂದು ಬಣ್ಣಿಸಿ “ಎಲ್ಲಾ ಕ್ಷೇತ್ರಗಳಲ್ಲಿ ಬಂಗಾಳಿಗಳ ಕೊಡುಗೆಯನ್ನು ದುರ್ಬಲಗೊಳಿಸಿದ್ದಾರೆ” ಎಂದು ಬಿಜೆಪಿಯನ್ನು ದೂಷಿಸಿದ್ದಾರೆ. “ಬಿಜೆಪಿ ಸರ್ಕಾರದಲ್ಲಿ ಇದು ಹೊಸ ರೂಡಿಯಾಗಿದೆ ಎಂದು ನಾನು ಊಹಿಸುತ್ತೇನೆ, ಎಲ್ಲಾ ಕ್ಷೇತ್ರಗಳಲ್ಲಿ ಬಂಗಾಳಿಗಳ ಕೊಡುಗೆಯನ್ನು ಹಾಳುಮಾಡಲು ಇತಿಹಾಸವನ್ನು ವಿರೂಪಗೊಳಿಸಿದೆ” ಎಂದು ಅವರು ಹೇಳಿದ್ದಾರೆ.

ওয়েব সিরিজের দৃশ্যে ক্রিমিনাল চার্টে শহীদ ক্ষুদিরাম বসুর ছবি??!! এ ভুল হয় কি করে? সংশোধন করুন #ZEE5 ???

Posted by Rudranil Ghosh on Sunday, August 16, 2020

ಬಂಗಾಳಿ ಚಿತ್ರೋದ್ಯಮದ ಪ್ರಮುಖ ನಟ ರುದ್ರಾನಿಲ್ ಘೋಷ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಂಡು, ಅದರಲ್ಲಿ ಅವರು ತಮ್ಮ ಟಿವಿಯಲ್ಲಿ ಓಡುತ್ತಿರುವ ದೃಶ್ಯವನ್ನು ತೋರಿಸಿದರು ಮತ್ತು “ಇದು ಅನಪೇಕ್ಷಿತ ತಪ್ಪು ಎಂದು ನಾನು ನಂಬುತ್ತೇನೆ. ಇದನ್ನು ಎಡಿಟ್ ಮಾಡಲು ನಾನು ZEE5 ಗೆ ವಿನಂತಿಸುತ್ತೇನೆ” ಎಂದಿದ್ದಾರೆ.

ಒಂದು ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ZEE5 ಅಧಿಕೃತ ಹ್ಯಾಂಡಲ್, ವೆಬ್‌ಸೀರಿಸ್ ತಯಾರಕರು ಯಾವುದೇ ಸಮುದಾಯದ ಭಾವನೆಯನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದೆ.

“ನಿರ್ಮಾಪಕರು, ವೆಬ್‌ಸೀರಿಸ್‌ ಮತ್ತು ವೇದಿಕೆ, ಯಾವುದೇ ಸಮುದಾಯದ ಭಾವನೆಗಳನ್ನು ನೋಯಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ. ಪ್ರತಿಕ್ರಿಯೆಗಳನ್ನು ಗಮನದಲ್ಲಿಟ್ಟುಕೊಂಡು ಅಭಯ್ 2 ರ ದೃಶ್ಯದಲ್ಲಿ ಬಳಸಿದ ಚಿತ್ರವನ್ನು ನಾವು ಮಸುಕಾಗಿಸಿದ್ದೇವೆ” ಎಂದು ಟ್ವೀಟ್ ಹೇಳಲಾಗಿದೆ.


ಓದಿ: `ನಾಳೆ ಬೆಳಿಗ್ಗೆ ಐತಿ ಮಹಾ ಮರಣ, ಶರಣಂತಾವ ನಮ್ಮ ಪಂಚ ಹರಣ’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...