Homeಮುಖಪುಟಸ್ವಾತಂತ್ಯ್ರ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ಅಪರಾಧಿಯಂತೆ ಚಿತ್ರಸಿದ ZEE5 ವೆಬ್‌ಸಿರೀಸ್‌

ಸ್ವಾತಂತ್ಯ್ರ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ಅಪರಾಧಿಯಂತೆ ಚಿತ್ರಸಿದ ZEE5 ವೆಬ್‌ಸಿರೀಸ್‌

ಆಗಸ್ಟ್ 11, 1908 ರಂದು ಗಲ್ಲಿಗೇರಿಸಲ್ಪಟ್ಟ ಬೋಸ್, ಗಲ್ಲು ಶಿಕ್ಷೆಗೆ ಗುರಿಯಾದ ಅತ್ಯಂತ ಕಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿದ್ದರು.

- Advertisement -
- Advertisement -

ZEE5 ಒಟಿಟಿಯಲ್ಲಿ ಪ್ರಸಾರವಾಗುವ ಕುನಾಲ್ ಖೇಮು ಅಭಿನಯದ ವೆಬ್‌ಸಿರೀಸ್‌ ’ಅಭಯ್ 2’ ನ ದೃಶ್ಯವೊಂದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ’ಅಪರಾಧಿ’ ಎಂಬಂತೆ ಚಿತ್ರಿಸಿರುವುದು ವಿವಾದ ಎಬ್ಬಿಸಿದ್ದು, ಬಂಗಾಳಿ ಸಮುದಾಯದಲ್ಲಿ ಆಕ್ರೋಶ ಹುಟ್ಟುಹಾಕಿದೆ.

ನಟ ರುದ್ರಾನಿಲ್ ಘೋಷ್ ಮತ್ತು ಶಾಸಕ ಮದನ್ ಮಿತ್ರ ಸೇರಿದಂತೆ ಹಲವಾರು ಜನರು ಇದನ್ನು ಖಂಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಜಫರ್‌ ನಗರ ಪಿತೂರಿ ಪ್ರಕರಣದಲ್ಲಿನ ಪಾತ್ರಕ್ಕಾಗಿ 18 ವರ್ಷದ ಖುದಿರಾಮ್ ಬೋಸ್‌ ಅವರಿಗೆ ಬ್ರಿಟಿಷ್ ಸರ್ಕಾರ ಮರಣದಂಡನೆ ವಿಧಿಸಿತ್ತು. ಪ್ರಕರಣದಲ್ಲಿ ಅವರು ಮತ್ತು ಕ್ರಾಂತಿಕಾರಿ ಪ್ರಫುಲ್ಲಾ ಚಾಕಿ ಬ್ರಿಟಿಷ್ ನ್ಯಾಯಾಧೀಶರನ್ನು ಹತ್ಯೆ ಮಾಡಲು ಪ್ರಯತ್ನಿಸಿದ್ದರು, ಆದರೆ ಅದು ವಿಫಲವಾಗಿತ್ತು. ಆಗಸ್ಟ್ 11, 1908 ರಂದು ಗಲ್ಲಿಗೇರಿಸಲ್ಪಟ್ಟ ಬೋಸ್, ಗಲ್ಲು ಶಿಕ್ಷೆಗೆ ಗುರಿಯಾದ ಅತ್ಯಂತ ಕಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿದ್ದರು.

ಸ್ವಾತಂತ್ರ್ಯ ದಿನಾಚರಣೆಯಂದು ಬಿಡುಗಡೆಯಾದ ”ಅಭಯ್ 2” ರ ಮೂರನೇ ಎಪಿಸೋಡ್‌ಗಳಲ್ಲಿ, ಖುದಿರಾಮ್ ಬೋಸ್‌ರ ಭಾವಚಿತ್ರವನ್ನು ಇತರ ಅಪರಾಧಿಗಳೊಂದಿಗೆ ಪೊಲೀಸ್ ಠಾಣೆಯಲ್ಲಿರುವ ಬೋರ್ಡ್‌ನಲ್ಲಿ ಅಂಟಿಸಿ ಇಡಲಾಗಿತ್ತು. ಇದನ್ನು ವಿರೋಧಿಸಿ ಜಾಲತಾಣಿಗರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರ ಇದನ್ನು “ಅತ್ಯಂತ ನಾಚಿಕೆಗೇಡು” ಎಂದು ಬಣ್ಣಿಸಿ “ಎಲ್ಲಾ ಕ್ಷೇತ್ರಗಳಲ್ಲಿ ಬಂಗಾಳಿಗಳ ಕೊಡುಗೆಯನ್ನು ದುರ್ಬಲಗೊಳಿಸಿದ್ದಾರೆ” ಎಂದು ಬಿಜೆಪಿಯನ್ನು ದೂಷಿಸಿದ್ದಾರೆ. “ಬಿಜೆಪಿ ಸರ್ಕಾರದಲ್ಲಿ ಇದು ಹೊಸ ರೂಡಿಯಾಗಿದೆ ಎಂದು ನಾನು ಊಹಿಸುತ್ತೇನೆ, ಎಲ್ಲಾ ಕ್ಷೇತ್ರಗಳಲ್ಲಿ ಬಂಗಾಳಿಗಳ ಕೊಡುಗೆಯನ್ನು ಹಾಳುಮಾಡಲು ಇತಿಹಾಸವನ್ನು ವಿರೂಪಗೊಳಿಸಿದೆ” ಎಂದು ಅವರು ಹೇಳಿದ್ದಾರೆ.

ওয়েব সিরিজের দৃশ্যে ক্রিমিনাল চার্টে শহীদ ক্ষুদিরাম বসুর ছবি??!! এ ভুল হয় কি করে? সংশোধন করুন #ZEE5 ???

Posted by Rudranil Ghosh on Sunday, August 16, 2020

ಬಂಗಾಳಿ ಚಿತ್ರೋದ್ಯಮದ ಪ್ರಮುಖ ನಟ ರುದ್ರಾನಿಲ್ ಘೋಷ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಂಡು, ಅದರಲ್ಲಿ ಅವರು ತಮ್ಮ ಟಿವಿಯಲ್ಲಿ ಓಡುತ್ತಿರುವ ದೃಶ್ಯವನ್ನು ತೋರಿಸಿದರು ಮತ್ತು “ಇದು ಅನಪೇಕ್ಷಿತ ತಪ್ಪು ಎಂದು ನಾನು ನಂಬುತ್ತೇನೆ. ಇದನ್ನು ಎಡಿಟ್ ಮಾಡಲು ನಾನು ZEE5 ಗೆ ವಿನಂತಿಸುತ್ತೇನೆ” ಎಂದಿದ್ದಾರೆ.

ಒಂದು ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ZEE5 ಅಧಿಕೃತ ಹ್ಯಾಂಡಲ್, ವೆಬ್‌ಸೀರಿಸ್ ತಯಾರಕರು ಯಾವುದೇ ಸಮುದಾಯದ ಭಾವನೆಯನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದೆ.

“ನಿರ್ಮಾಪಕರು, ವೆಬ್‌ಸೀರಿಸ್‌ ಮತ್ತು ವೇದಿಕೆ, ಯಾವುದೇ ಸಮುದಾಯದ ಭಾವನೆಗಳನ್ನು ನೋಯಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ. ಪ್ರತಿಕ್ರಿಯೆಗಳನ್ನು ಗಮನದಲ್ಲಿಟ್ಟುಕೊಂಡು ಅಭಯ್ 2 ರ ದೃಶ್ಯದಲ್ಲಿ ಬಳಸಿದ ಚಿತ್ರವನ್ನು ನಾವು ಮಸುಕಾಗಿಸಿದ್ದೇವೆ” ಎಂದು ಟ್ವೀಟ್ ಹೇಳಲಾಗಿದೆ.


ಓದಿ: `ನಾಳೆ ಬೆಳಿಗ್ಗೆ ಐತಿ ಮಹಾ ಮರಣ, ಶರಣಂತಾವ ನಮ್ಮ ಪಂಚ ಹರಣ’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...