Homeಮುಖಪುಟಸ್ವಾತಂತ್ಯ್ರ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ಅಪರಾಧಿಯಂತೆ ಚಿತ್ರಸಿದ ZEE5 ವೆಬ್‌ಸಿರೀಸ್‌

ಸ್ವಾತಂತ್ಯ್ರ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ಅಪರಾಧಿಯಂತೆ ಚಿತ್ರಸಿದ ZEE5 ವೆಬ್‌ಸಿರೀಸ್‌

ಆಗಸ್ಟ್ 11, 1908 ರಂದು ಗಲ್ಲಿಗೇರಿಸಲ್ಪಟ್ಟ ಬೋಸ್, ಗಲ್ಲು ಶಿಕ್ಷೆಗೆ ಗುರಿಯಾದ ಅತ್ಯಂತ ಕಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿದ್ದರು.

- Advertisement -
- Advertisement -

ZEE5 ಒಟಿಟಿಯಲ್ಲಿ ಪ್ರಸಾರವಾಗುವ ಕುನಾಲ್ ಖೇಮು ಅಭಿನಯದ ವೆಬ್‌ಸಿರೀಸ್‌ ’ಅಭಯ್ 2’ ನ ದೃಶ್ಯವೊಂದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ’ಅಪರಾಧಿ’ ಎಂಬಂತೆ ಚಿತ್ರಿಸಿರುವುದು ವಿವಾದ ಎಬ್ಬಿಸಿದ್ದು, ಬಂಗಾಳಿ ಸಮುದಾಯದಲ್ಲಿ ಆಕ್ರೋಶ ಹುಟ್ಟುಹಾಕಿದೆ.

ನಟ ರುದ್ರಾನಿಲ್ ಘೋಷ್ ಮತ್ತು ಶಾಸಕ ಮದನ್ ಮಿತ್ರ ಸೇರಿದಂತೆ ಹಲವಾರು ಜನರು ಇದನ್ನು ಖಂಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಜಫರ್‌ ನಗರ ಪಿತೂರಿ ಪ್ರಕರಣದಲ್ಲಿನ ಪಾತ್ರಕ್ಕಾಗಿ 18 ವರ್ಷದ ಖುದಿರಾಮ್ ಬೋಸ್‌ ಅವರಿಗೆ ಬ್ರಿಟಿಷ್ ಸರ್ಕಾರ ಮರಣದಂಡನೆ ವಿಧಿಸಿತ್ತು. ಪ್ರಕರಣದಲ್ಲಿ ಅವರು ಮತ್ತು ಕ್ರಾಂತಿಕಾರಿ ಪ್ರಫುಲ್ಲಾ ಚಾಕಿ ಬ್ರಿಟಿಷ್ ನ್ಯಾಯಾಧೀಶರನ್ನು ಹತ್ಯೆ ಮಾಡಲು ಪ್ರಯತ್ನಿಸಿದ್ದರು, ಆದರೆ ಅದು ವಿಫಲವಾಗಿತ್ತು. ಆಗಸ್ಟ್ 11, 1908 ರಂದು ಗಲ್ಲಿಗೇರಿಸಲ್ಪಟ್ಟ ಬೋಸ್, ಗಲ್ಲು ಶಿಕ್ಷೆಗೆ ಗುರಿಯಾದ ಅತ್ಯಂತ ಕಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿದ್ದರು.

ಸ್ವಾತಂತ್ರ್ಯ ದಿನಾಚರಣೆಯಂದು ಬಿಡುಗಡೆಯಾದ ”ಅಭಯ್ 2” ರ ಮೂರನೇ ಎಪಿಸೋಡ್‌ಗಳಲ್ಲಿ, ಖುದಿರಾಮ್ ಬೋಸ್‌ರ ಭಾವಚಿತ್ರವನ್ನು ಇತರ ಅಪರಾಧಿಗಳೊಂದಿಗೆ ಪೊಲೀಸ್ ಠಾಣೆಯಲ್ಲಿರುವ ಬೋರ್ಡ್‌ನಲ್ಲಿ ಅಂಟಿಸಿ ಇಡಲಾಗಿತ್ತು. ಇದನ್ನು ವಿರೋಧಿಸಿ ಜಾಲತಾಣಿಗರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರ ಇದನ್ನು “ಅತ್ಯಂತ ನಾಚಿಕೆಗೇಡು” ಎಂದು ಬಣ್ಣಿಸಿ “ಎಲ್ಲಾ ಕ್ಷೇತ್ರಗಳಲ್ಲಿ ಬಂಗಾಳಿಗಳ ಕೊಡುಗೆಯನ್ನು ದುರ್ಬಲಗೊಳಿಸಿದ್ದಾರೆ” ಎಂದು ಬಿಜೆಪಿಯನ್ನು ದೂಷಿಸಿದ್ದಾರೆ. “ಬಿಜೆಪಿ ಸರ್ಕಾರದಲ್ಲಿ ಇದು ಹೊಸ ರೂಡಿಯಾಗಿದೆ ಎಂದು ನಾನು ಊಹಿಸುತ್ತೇನೆ, ಎಲ್ಲಾ ಕ್ಷೇತ್ರಗಳಲ್ಲಿ ಬಂಗಾಳಿಗಳ ಕೊಡುಗೆಯನ್ನು ಹಾಳುಮಾಡಲು ಇತಿಹಾಸವನ್ನು ವಿರೂಪಗೊಳಿಸಿದೆ” ಎಂದು ಅವರು ಹೇಳಿದ್ದಾರೆ.

ওয়েব সিরিজের দৃশ্যে ক্রিমিনাল চার্টে শহীদ ক্ষুদিরাম বসুর ছবি??!! এ ভুল হয় কি করে? সংশোধন করুন #ZEE5 ???

Posted by Rudranil Ghosh on Sunday, August 16, 2020

ಬಂಗಾಳಿ ಚಿತ್ರೋದ್ಯಮದ ಪ್ರಮುಖ ನಟ ರುದ್ರಾನಿಲ್ ಘೋಷ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಂಡು, ಅದರಲ್ಲಿ ಅವರು ತಮ್ಮ ಟಿವಿಯಲ್ಲಿ ಓಡುತ್ತಿರುವ ದೃಶ್ಯವನ್ನು ತೋರಿಸಿದರು ಮತ್ತು “ಇದು ಅನಪೇಕ್ಷಿತ ತಪ್ಪು ಎಂದು ನಾನು ನಂಬುತ್ತೇನೆ. ಇದನ್ನು ಎಡಿಟ್ ಮಾಡಲು ನಾನು ZEE5 ಗೆ ವಿನಂತಿಸುತ್ತೇನೆ” ಎಂದಿದ್ದಾರೆ.

ಒಂದು ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ZEE5 ಅಧಿಕೃತ ಹ್ಯಾಂಡಲ್, ವೆಬ್‌ಸೀರಿಸ್ ತಯಾರಕರು ಯಾವುದೇ ಸಮುದಾಯದ ಭಾವನೆಯನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದೆ.

“ನಿರ್ಮಾಪಕರು, ವೆಬ್‌ಸೀರಿಸ್‌ ಮತ್ತು ವೇದಿಕೆ, ಯಾವುದೇ ಸಮುದಾಯದ ಭಾವನೆಗಳನ್ನು ನೋಯಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ. ಪ್ರತಿಕ್ರಿಯೆಗಳನ್ನು ಗಮನದಲ್ಲಿಟ್ಟುಕೊಂಡು ಅಭಯ್ 2 ರ ದೃಶ್ಯದಲ್ಲಿ ಬಳಸಿದ ಚಿತ್ರವನ್ನು ನಾವು ಮಸುಕಾಗಿಸಿದ್ದೇವೆ” ಎಂದು ಟ್ವೀಟ್ ಹೇಳಲಾಗಿದೆ.


ಓದಿ: `ನಾಳೆ ಬೆಳಿಗ್ಗೆ ಐತಿ ಮಹಾ ಮರಣ, ಶರಣಂತಾವ ನಮ್ಮ ಪಂಚ ಹರಣ’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...