Homeಮುಖಪುಟಸ್ವಾತಂತ್ಯ್ರ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ಅಪರಾಧಿಯಂತೆ ಚಿತ್ರಸಿದ ZEE5 ವೆಬ್‌ಸಿರೀಸ್‌

ಸ್ವಾತಂತ್ಯ್ರ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ಅಪರಾಧಿಯಂತೆ ಚಿತ್ರಸಿದ ZEE5 ವೆಬ್‌ಸಿರೀಸ್‌

ಆಗಸ್ಟ್ 11, 1908 ರಂದು ಗಲ್ಲಿಗೇರಿಸಲ್ಪಟ್ಟ ಬೋಸ್, ಗಲ್ಲು ಶಿಕ್ಷೆಗೆ ಗುರಿಯಾದ ಅತ್ಯಂತ ಕಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿದ್ದರು.

- Advertisement -
- Advertisement -

ZEE5 ಒಟಿಟಿಯಲ್ಲಿ ಪ್ರಸಾರವಾಗುವ ಕುನಾಲ್ ಖೇಮು ಅಭಿನಯದ ವೆಬ್‌ಸಿರೀಸ್‌ ’ಅಭಯ್ 2’ ನ ದೃಶ್ಯವೊಂದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ’ಅಪರಾಧಿ’ ಎಂಬಂತೆ ಚಿತ್ರಿಸಿರುವುದು ವಿವಾದ ಎಬ್ಬಿಸಿದ್ದು, ಬಂಗಾಳಿ ಸಮುದಾಯದಲ್ಲಿ ಆಕ್ರೋಶ ಹುಟ್ಟುಹಾಕಿದೆ.

ನಟ ರುದ್ರಾನಿಲ್ ಘೋಷ್ ಮತ್ತು ಶಾಸಕ ಮದನ್ ಮಿತ್ರ ಸೇರಿದಂತೆ ಹಲವಾರು ಜನರು ಇದನ್ನು ಖಂಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಜಫರ್‌ ನಗರ ಪಿತೂರಿ ಪ್ರಕರಣದಲ್ಲಿನ ಪಾತ್ರಕ್ಕಾಗಿ 18 ವರ್ಷದ ಖುದಿರಾಮ್ ಬೋಸ್‌ ಅವರಿಗೆ ಬ್ರಿಟಿಷ್ ಸರ್ಕಾರ ಮರಣದಂಡನೆ ವಿಧಿಸಿತ್ತು. ಪ್ರಕರಣದಲ್ಲಿ ಅವರು ಮತ್ತು ಕ್ರಾಂತಿಕಾರಿ ಪ್ರಫುಲ್ಲಾ ಚಾಕಿ ಬ್ರಿಟಿಷ್ ನ್ಯಾಯಾಧೀಶರನ್ನು ಹತ್ಯೆ ಮಾಡಲು ಪ್ರಯತ್ನಿಸಿದ್ದರು, ಆದರೆ ಅದು ವಿಫಲವಾಗಿತ್ತು. ಆಗಸ್ಟ್ 11, 1908 ರಂದು ಗಲ್ಲಿಗೇರಿಸಲ್ಪಟ್ಟ ಬೋಸ್, ಗಲ್ಲು ಶಿಕ್ಷೆಗೆ ಗುರಿಯಾದ ಅತ್ಯಂತ ಕಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿದ್ದರು.

ಸ್ವಾತಂತ್ರ್ಯ ದಿನಾಚರಣೆಯಂದು ಬಿಡುಗಡೆಯಾದ ”ಅಭಯ್ 2” ರ ಮೂರನೇ ಎಪಿಸೋಡ್‌ಗಳಲ್ಲಿ, ಖುದಿರಾಮ್ ಬೋಸ್‌ರ ಭಾವಚಿತ್ರವನ್ನು ಇತರ ಅಪರಾಧಿಗಳೊಂದಿಗೆ ಪೊಲೀಸ್ ಠಾಣೆಯಲ್ಲಿರುವ ಬೋರ್ಡ್‌ನಲ್ಲಿ ಅಂಟಿಸಿ ಇಡಲಾಗಿತ್ತು. ಇದನ್ನು ವಿರೋಧಿಸಿ ಜಾಲತಾಣಿಗರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರ ಇದನ್ನು “ಅತ್ಯಂತ ನಾಚಿಕೆಗೇಡು” ಎಂದು ಬಣ್ಣಿಸಿ “ಎಲ್ಲಾ ಕ್ಷೇತ್ರಗಳಲ್ಲಿ ಬಂಗಾಳಿಗಳ ಕೊಡುಗೆಯನ್ನು ದುರ್ಬಲಗೊಳಿಸಿದ್ದಾರೆ” ಎಂದು ಬಿಜೆಪಿಯನ್ನು ದೂಷಿಸಿದ್ದಾರೆ. “ಬಿಜೆಪಿ ಸರ್ಕಾರದಲ್ಲಿ ಇದು ಹೊಸ ರೂಡಿಯಾಗಿದೆ ಎಂದು ನಾನು ಊಹಿಸುತ್ತೇನೆ, ಎಲ್ಲಾ ಕ್ಷೇತ್ರಗಳಲ್ಲಿ ಬಂಗಾಳಿಗಳ ಕೊಡುಗೆಯನ್ನು ಹಾಳುಮಾಡಲು ಇತಿಹಾಸವನ್ನು ವಿರೂಪಗೊಳಿಸಿದೆ” ಎಂದು ಅವರು ಹೇಳಿದ್ದಾರೆ.

ওয়েব সিরিজের দৃশ্যে ক্রিমিনাল চার্টে শহীদ ক্ষুদিরাম বসুর ছবি??!! এ ভুল হয় কি করে? সংশোধন করুন #ZEE5 ???

Posted by Rudranil Ghosh on Sunday, August 16, 2020

ಬಂಗಾಳಿ ಚಿತ್ರೋದ್ಯಮದ ಪ್ರಮುಖ ನಟ ರುದ್ರಾನಿಲ್ ಘೋಷ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಂಡು, ಅದರಲ್ಲಿ ಅವರು ತಮ್ಮ ಟಿವಿಯಲ್ಲಿ ಓಡುತ್ತಿರುವ ದೃಶ್ಯವನ್ನು ತೋರಿಸಿದರು ಮತ್ತು “ಇದು ಅನಪೇಕ್ಷಿತ ತಪ್ಪು ಎಂದು ನಾನು ನಂಬುತ್ತೇನೆ. ಇದನ್ನು ಎಡಿಟ್ ಮಾಡಲು ನಾನು ZEE5 ಗೆ ವಿನಂತಿಸುತ್ತೇನೆ” ಎಂದಿದ್ದಾರೆ.

ಒಂದು ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ZEE5 ಅಧಿಕೃತ ಹ್ಯಾಂಡಲ್, ವೆಬ್‌ಸೀರಿಸ್ ತಯಾರಕರು ಯಾವುದೇ ಸಮುದಾಯದ ಭಾವನೆಯನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದೆ.

“ನಿರ್ಮಾಪಕರು, ವೆಬ್‌ಸೀರಿಸ್‌ ಮತ್ತು ವೇದಿಕೆ, ಯಾವುದೇ ಸಮುದಾಯದ ಭಾವನೆಗಳನ್ನು ನೋಯಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ. ಪ್ರತಿಕ್ರಿಯೆಗಳನ್ನು ಗಮನದಲ್ಲಿಟ್ಟುಕೊಂಡು ಅಭಯ್ 2 ರ ದೃಶ್ಯದಲ್ಲಿ ಬಳಸಿದ ಚಿತ್ರವನ್ನು ನಾವು ಮಸುಕಾಗಿಸಿದ್ದೇವೆ” ಎಂದು ಟ್ವೀಟ್ ಹೇಳಲಾಗಿದೆ.


ಓದಿ: `ನಾಳೆ ಬೆಳಿಗ್ಗೆ ಐತಿ ಮಹಾ ಮರಣ, ಶರಣಂತಾವ ನಮ್ಮ ಪಂಚ ಹರಣ’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...