Homeಅಂತರಾಷ್ಟ್ರೀಯNATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

NATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

- Advertisement -
- Advertisement -

ಭುಗಿಲೆದ್ದಿರುವ ಯುದ್ಧದ ನಡುವೆ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌‌ ಝೆಲೆನ್ಸ್ಕಿ ಅವರು ಉಕ್ರೇನ್‌ಗೆ ನ್ಯಾಟೋ ಸದಸ್ಯತ್ವಕ್ಕಾಗಿ ಇನ್ನು ಮುಂದೆ ಒತ್ತಾಯಿಸುವುದಿಲ್ಲ ಎಂದು ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಷ್ಯಾ ಸರ್ಕಾರ ಉಕ್ರೇನ್‌ ವಿರುದ್ದ ಯುದ್ಧ ಘೋಷಣೆ ಮಾಡಲು ಪ್ರಮುಖ ಕಾರಣ ‘ನ್ಯಾಟೊ’ ಆಗಿದೆ ಎಂದು ಎಎಫ್‌ಪಿ ಮಂಗಳವಾರ ವರದಿ ಮಾಡಿದೆ.

“ನಾವು ಅದನ್ನು ಅರ್ಥಮಾಡಿಕೊಂಡಿದ್ದು, ಈ ಪ್ರಶ್ನೆಗೆ ಸಂಬಂಧಿಸಿದಂತೆ ಬಹಳ ಹಿಂದೆಯೇ ನಾನು ಸುಮ್ಮನಾಗಿದ್ದೇನೆ… ನ್ಯಾಟೊ ಉಕ್ರೇನ್ ಅನ್ನು ಸ್ವೀಕರಿಸಲು ಸಿದ್ಧವಾಗಿಲ್ಲ” ಎಂದು ABC ನ್ಯೂಸ್‌ನಲ್ಲಿ ಸೋಮವಾರ ರಾತ್ರಿ ಪ್ರಸಾರವಾದ ಸಂದರ್ಶನದಲ್ಲಿ ಝೆಲೆನ್ಸ್ಕಿ ಹೇಳಿದ್ದಾರೆ.

“ನ್ಯಾಟೋ ಮೈತ್ರಿಯು ವಿವಾದಿತ ಸಂಗತಿಗಳಿಂದ ದೂರ ಉಳಿದಿದ್ದು, ರಷ್ಯಾ ಜೊತೆಗಿನ ಸಂಘರ್ಷಕ್ಕೆ ಹೆದರುತ್ತಿದೆ” ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ರಷ್ಯಾವನ್ನು ಸಮಾಧಾನಪಡಿಸುವ ರೀತಿಯಲ್ಲಿ ಮಾತನಾಡಿರುವ ಝೆಲೆನ್ಸ್ಕಿ, “ಫೆಬ್ರವರಿ 24 ರಂದು ಆಕ್ರಮಣವನ್ನು ಪ್ರಾರಂಭಿಸುವ ಮೊದಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸ್ವತಂತ್ರವೆಂದು ಗುರುತಿಸಿದ ಎರಡು ಪ್ಯಾಂತ್ಯಗಳಾದ ಡೊನೆಟ್‌ಸ್ಕ್ ಮತ್ತು ಲುಗಾನ್‌ಸ್ಕ್ ಪ್ರದೇಶಗಳನ್ನು ಸ್ವಾಯತ್ತ ಪ್ರಾಂತ್ಯ ಎಂದು ಒಪ್ಪಿ ತಾನು ರಾಜಿ ಮಾಡಿಕೊಳ್ಳಲು ಮುಕ್ತವಾಗಿದ್ದೇನೆ” ಎಂದು ಹೇಳಿದ್ದಾರೆ.

NATO ಸದಸ್ಯತ್ವವನ್ನು ಉಲ್ಲೇಖಿಸಿದ ಝೆಲೆನ್ಸ್ಕಿ, “ಮೊಣಕಾಲುಗಳನ್ನು ಊರಿ ಬೇಡಿಕೊಳ್ಳುವ ದೇಶದ ಅಧ್ಯಕ್ಷನಾಗಲು ನಾನು ಬಯಸುವುದಿಲ್ಲ” ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯು, ಅಮೆರಿಕಾ ನೇತೃತ್ವದ NATO ಮಿತ್ರರಾಷ್ಟ್ರಗಳ ನಿಲುವಿನ ಬಗ್ಗೆ ನಿರಾಶೆಯನ್ನು ಪ್ರತಿಬಿಂಬಿಸುತ್ತದೆ.

ಸೋವಿಯತ್ ಒಕ್ಕೂಟದಿಂದ ಯುರೋಪ್ ಅನ್ನು ರಕ್ಷಿಸಲು ಶೀತಲ ಸಮರದ ಪ್ರಾರಂಭದಲ್ಲಿ ರಚಿಸಲಾದ ಒಕ್ಕೂಟವಾಗಿದೆ NATO. ಈ ನ್ಯಾಟೊಗೆ ನೆರೆಯ ಉಕ್ರೇನ್ ಸೇರುವುದನ್ನು ತಾನು ಇಷ್ಟ ಪಡುವುದಿಲ್ಲ ಎಂದು ರಷ್ಯಾ ಹೇಳಿದೆ. ಇತ್ತೀಚಿನ ವರ್ಷಗಳಲ್ಲಿ ನ್ಯಾಟೊ ರಷ್ಯಾದ ಸುತ್ತಮುತ್ತಲಿನ ದೇಶಗಳಲ್ಲಿ ತನ್ನ ಪ್ರಭಾವನ್ನು ವಿಸ್ತರಿಸಿತ್ತು. ಇದು ರಷ್ಯಾವನ್ನು ಕೆರಳಿಸಿತ್ತು. ರಷ್ಯಾ ದೇಶವು NATO ವಿಸ್ತರಣೆಯನ್ನು ತನ್ನ ದೇಶಕ್ಕೆ ಬೆದರಿಕೆಯಾಗಿ ನೋಡುತ್ತದೆ. ಯಾಕೆಂದರೆ ನ್ಯಾಟೊ ತನ್ನ ಮಿತ್ರ ರಾಷ್ಟ್ರಗಳಲ್ಲಿ ಮಿಲಿಟರಿಗಳನ್ನು ನೆಲೆಯನ್ನು ವಿಸ್ತರಿಸುತ್ತಾ, ತನ್ನ ಬಾಗಿಲಿಗೆ ಬರುತ್ತದೆ ಎಂಬುವುದು ರಷ್ಯಾದ ವಾದವಾಗಿದೆ.

ಇದನ್ನೂ ಓದಿ: ಉಕ್ರೇನ್‌ನಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಉಕ್ರೇನ್‌ ಆಕ್ರಮಣಕ್ಕೆ ಆದೇಶ ನೀಡುವ ಮೂಲಕ ಜಗತ್ತನ್ನು ಬೆಚ್ಚಿಬೀಳಿಸುವ ಸ್ವಲ್ಪ ಸಮಯದ ಮೊದಲು, ರಷ್ಯಾ ಅಧ್ಯಕ್ಷ ಪುಟಿನ್ ಪೂರ್ವ ಉಕ್ರೇನ್‌ನ ಡೊನೆಟ್ಸ್ಕ್ ಮತ್ತು ಲುಗಾನ್ಸ್ಕ್ ಎಂಬ ಎರಡು ಪ್ರತ್ಯೇಕತಾವಾದಿ ಪ್ರಾಂತ್ಯಗಳನ್ನು ರಷ್ಯನ್‌ ಪರ “ಗಣರಾಜ್ಯಗಳು” ಎಂದು ಗುರುತಿಸಿಕೊಂಡಿದ್ದರು. ಈ ಎರಡು ಪ್ರಾಂತ್ಯಗಳು 2014 ರಿಂದ ಉಕ್ರೇನ್ ವಿರುದ್ದ ಸಂಘರ್ಷದಲ್ಲಿದೆ. ಉಕ್ರೇನ್ ಕೂಡ ತಮ್ಮನ್ನು ಸಾರ್ವಭೌಮ ಮತ್ತು ಸ್ವತಂತ್ರ ಎಂದು ಗುರುತಿಸಿಕೊಳ್ಳಲಿ ಎಂದು ಪುಟಿನ್‌ ಬಯಸುತ್ತಿದ್ದಾರೆ.

ರಷ್ಯಾದ ಈ ಬೇಡಿಕೆಯ ಬಗ್ಗೆ ಎಬಿಸಿ ಸಂದರ್ಶನದಲ್ಲಿ ಮಾತನಾಡಿದ ಝೆಲೆನ್ಸ್ಕಿ, ತಾನು ಮಾತುಕತೆಗೆ ಮುಕ್ತನಾಗಿದ್ದೇನೆ ಎಂದು ಹೇಳಿದ್ದಾರೆ. “ನಾನು ಭದ್ರತಾ ಖಾತರಿಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎರಡು ಪ್ರದೇಶಗಳು ಮುಂದೆ ಹೇಗಿರಬೇಕು ಎನ್ನುವ ಕುರಿತು ನಾವು ಚರ್ಚಿಸುತ್ತೇವೆ ಮತ್ತು ರಾಜಿ ಮಾಡಿಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

“ಉಕ್ರೇನ್‌ನ ಭಾಗವಾಗಲು ಬಯಸುವ, ಉಕ್ರೇನ್‌ನಲ್ಲಿ ಇರುವ ಆ ಪ್ರಾಂತ್ಯಗಳಲ್ಲಿನ ಜನರು ಹೇಗೆ ಬದುಕುತ್ತಾರೆ ಎಂಬುದು ನನಗೆ ಮುಖ್ಯವಾದುದು. ಆದ್ದರಿಂದ ಈ ಪ್ರಶ್ನೆಯನ್ನು ಸರಳವಾಗಿ ಒಪ್ಪಿಕೊಳ್ಳುವುದು ಹೆಚ್ಚು ಕಷ್ಟವಾಗಿದೆ. ಅಧ್ಯಕ್ಷ ಪುಟಿನ್ ಮಾತನಾಡಲು ಪ್ರಾರಂಭಿಸಲು ಏನು ಮಾಡಬೇಕು, ಮಾತುಕತೆ ಪ್ರಾರಂಭಿಸಿ” ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...