Homeಅಂತರಾಷ್ಟ್ರೀಯNATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

NATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

- Advertisement -
- Advertisement -

ಭುಗಿಲೆದ್ದಿರುವ ಯುದ್ಧದ ನಡುವೆ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌‌ ಝೆಲೆನ್ಸ್ಕಿ ಅವರು ಉಕ್ರೇನ್‌ಗೆ ನ್ಯಾಟೋ ಸದಸ್ಯತ್ವಕ್ಕಾಗಿ ಇನ್ನು ಮುಂದೆ ಒತ್ತಾಯಿಸುವುದಿಲ್ಲ ಎಂದು ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಷ್ಯಾ ಸರ್ಕಾರ ಉಕ್ರೇನ್‌ ವಿರುದ್ದ ಯುದ್ಧ ಘೋಷಣೆ ಮಾಡಲು ಪ್ರಮುಖ ಕಾರಣ ‘ನ್ಯಾಟೊ’ ಆಗಿದೆ ಎಂದು ಎಎಫ್‌ಪಿ ಮಂಗಳವಾರ ವರದಿ ಮಾಡಿದೆ.

“ನಾವು ಅದನ್ನು ಅರ್ಥಮಾಡಿಕೊಂಡಿದ್ದು, ಈ ಪ್ರಶ್ನೆಗೆ ಸಂಬಂಧಿಸಿದಂತೆ ಬಹಳ ಹಿಂದೆಯೇ ನಾನು ಸುಮ್ಮನಾಗಿದ್ದೇನೆ… ನ್ಯಾಟೊ ಉಕ್ರೇನ್ ಅನ್ನು ಸ್ವೀಕರಿಸಲು ಸಿದ್ಧವಾಗಿಲ್ಲ” ಎಂದು ABC ನ್ಯೂಸ್‌ನಲ್ಲಿ ಸೋಮವಾರ ರಾತ್ರಿ ಪ್ರಸಾರವಾದ ಸಂದರ್ಶನದಲ್ಲಿ ಝೆಲೆನ್ಸ್ಕಿ ಹೇಳಿದ್ದಾರೆ.

“ನ್ಯಾಟೋ ಮೈತ್ರಿಯು ವಿವಾದಿತ ಸಂಗತಿಗಳಿಂದ ದೂರ ಉಳಿದಿದ್ದು, ರಷ್ಯಾ ಜೊತೆಗಿನ ಸಂಘರ್ಷಕ್ಕೆ ಹೆದರುತ್ತಿದೆ” ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ರಷ್ಯಾವನ್ನು ಸಮಾಧಾನಪಡಿಸುವ ರೀತಿಯಲ್ಲಿ ಮಾತನಾಡಿರುವ ಝೆಲೆನ್ಸ್ಕಿ, “ಫೆಬ್ರವರಿ 24 ರಂದು ಆಕ್ರಮಣವನ್ನು ಪ್ರಾರಂಭಿಸುವ ಮೊದಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸ್ವತಂತ್ರವೆಂದು ಗುರುತಿಸಿದ ಎರಡು ಪ್ಯಾಂತ್ಯಗಳಾದ ಡೊನೆಟ್‌ಸ್ಕ್ ಮತ್ತು ಲುಗಾನ್‌ಸ್ಕ್ ಪ್ರದೇಶಗಳನ್ನು ಸ್ವಾಯತ್ತ ಪ್ರಾಂತ್ಯ ಎಂದು ಒಪ್ಪಿ ತಾನು ರಾಜಿ ಮಾಡಿಕೊಳ್ಳಲು ಮುಕ್ತವಾಗಿದ್ದೇನೆ” ಎಂದು ಹೇಳಿದ್ದಾರೆ.

NATO ಸದಸ್ಯತ್ವವನ್ನು ಉಲ್ಲೇಖಿಸಿದ ಝೆಲೆನ್ಸ್ಕಿ, “ಮೊಣಕಾಲುಗಳನ್ನು ಊರಿ ಬೇಡಿಕೊಳ್ಳುವ ದೇಶದ ಅಧ್ಯಕ್ಷನಾಗಲು ನಾನು ಬಯಸುವುದಿಲ್ಲ” ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯು, ಅಮೆರಿಕಾ ನೇತೃತ್ವದ NATO ಮಿತ್ರರಾಷ್ಟ್ರಗಳ ನಿಲುವಿನ ಬಗ್ಗೆ ನಿರಾಶೆಯನ್ನು ಪ್ರತಿಬಿಂಬಿಸುತ್ತದೆ.

ಸೋವಿಯತ್ ಒಕ್ಕೂಟದಿಂದ ಯುರೋಪ್ ಅನ್ನು ರಕ್ಷಿಸಲು ಶೀತಲ ಸಮರದ ಪ್ರಾರಂಭದಲ್ಲಿ ರಚಿಸಲಾದ ಒಕ್ಕೂಟವಾಗಿದೆ NATO. ಈ ನ್ಯಾಟೊಗೆ ನೆರೆಯ ಉಕ್ರೇನ್ ಸೇರುವುದನ್ನು ತಾನು ಇಷ್ಟ ಪಡುವುದಿಲ್ಲ ಎಂದು ರಷ್ಯಾ ಹೇಳಿದೆ. ಇತ್ತೀಚಿನ ವರ್ಷಗಳಲ್ಲಿ ನ್ಯಾಟೊ ರಷ್ಯಾದ ಸುತ್ತಮುತ್ತಲಿನ ದೇಶಗಳಲ್ಲಿ ತನ್ನ ಪ್ರಭಾವನ್ನು ವಿಸ್ತರಿಸಿತ್ತು. ಇದು ರಷ್ಯಾವನ್ನು ಕೆರಳಿಸಿತ್ತು. ರಷ್ಯಾ ದೇಶವು NATO ವಿಸ್ತರಣೆಯನ್ನು ತನ್ನ ದೇಶಕ್ಕೆ ಬೆದರಿಕೆಯಾಗಿ ನೋಡುತ್ತದೆ. ಯಾಕೆಂದರೆ ನ್ಯಾಟೊ ತನ್ನ ಮಿತ್ರ ರಾಷ್ಟ್ರಗಳಲ್ಲಿ ಮಿಲಿಟರಿಗಳನ್ನು ನೆಲೆಯನ್ನು ವಿಸ್ತರಿಸುತ್ತಾ, ತನ್ನ ಬಾಗಿಲಿಗೆ ಬರುತ್ತದೆ ಎಂಬುವುದು ರಷ್ಯಾದ ವಾದವಾಗಿದೆ.

ಇದನ್ನೂ ಓದಿ: ಉಕ್ರೇನ್‌ನಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಉಕ್ರೇನ್‌ ಆಕ್ರಮಣಕ್ಕೆ ಆದೇಶ ನೀಡುವ ಮೂಲಕ ಜಗತ್ತನ್ನು ಬೆಚ್ಚಿಬೀಳಿಸುವ ಸ್ವಲ್ಪ ಸಮಯದ ಮೊದಲು, ರಷ್ಯಾ ಅಧ್ಯಕ್ಷ ಪುಟಿನ್ ಪೂರ್ವ ಉಕ್ರೇನ್‌ನ ಡೊನೆಟ್ಸ್ಕ್ ಮತ್ತು ಲುಗಾನ್ಸ್ಕ್ ಎಂಬ ಎರಡು ಪ್ರತ್ಯೇಕತಾವಾದಿ ಪ್ರಾಂತ್ಯಗಳನ್ನು ರಷ್ಯನ್‌ ಪರ “ಗಣರಾಜ್ಯಗಳು” ಎಂದು ಗುರುತಿಸಿಕೊಂಡಿದ್ದರು. ಈ ಎರಡು ಪ್ರಾಂತ್ಯಗಳು 2014 ರಿಂದ ಉಕ್ರೇನ್ ವಿರುದ್ದ ಸಂಘರ್ಷದಲ್ಲಿದೆ. ಉಕ್ರೇನ್ ಕೂಡ ತಮ್ಮನ್ನು ಸಾರ್ವಭೌಮ ಮತ್ತು ಸ್ವತಂತ್ರ ಎಂದು ಗುರುತಿಸಿಕೊಳ್ಳಲಿ ಎಂದು ಪುಟಿನ್‌ ಬಯಸುತ್ತಿದ್ದಾರೆ.

ರಷ್ಯಾದ ಈ ಬೇಡಿಕೆಯ ಬಗ್ಗೆ ಎಬಿಸಿ ಸಂದರ್ಶನದಲ್ಲಿ ಮಾತನಾಡಿದ ಝೆಲೆನ್ಸ್ಕಿ, ತಾನು ಮಾತುಕತೆಗೆ ಮುಕ್ತನಾಗಿದ್ದೇನೆ ಎಂದು ಹೇಳಿದ್ದಾರೆ. “ನಾನು ಭದ್ರತಾ ಖಾತರಿಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎರಡು ಪ್ರದೇಶಗಳು ಮುಂದೆ ಹೇಗಿರಬೇಕು ಎನ್ನುವ ಕುರಿತು ನಾವು ಚರ್ಚಿಸುತ್ತೇವೆ ಮತ್ತು ರಾಜಿ ಮಾಡಿಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

“ಉಕ್ರೇನ್‌ನ ಭಾಗವಾಗಲು ಬಯಸುವ, ಉಕ್ರೇನ್‌ನಲ್ಲಿ ಇರುವ ಆ ಪ್ರಾಂತ್ಯಗಳಲ್ಲಿನ ಜನರು ಹೇಗೆ ಬದುಕುತ್ತಾರೆ ಎಂಬುದು ನನಗೆ ಮುಖ್ಯವಾದುದು. ಆದ್ದರಿಂದ ಈ ಪ್ರಶ್ನೆಯನ್ನು ಸರಳವಾಗಿ ಒಪ್ಪಿಕೊಳ್ಳುವುದು ಹೆಚ್ಚು ಕಷ್ಟವಾಗಿದೆ. ಅಧ್ಯಕ್ಷ ಪುಟಿನ್ ಮಾತನಾಡಲು ಪ್ರಾರಂಭಿಸಲು ಏನು ಮಾಡಬೇಕು, ಮಾತುಕತೆ ಪ್ರಾರಂಭಿಸಿ” ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...