Homeಅಂತರಾಷ್ಟ್ರೀಯNATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

NATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

- Advertisement -
- Advertisement -

ಭುಗಿಲೆದ್ದಿರುವ ಯುದ್ಧದ ನಡುವೆ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌‌ ಝೆಲೆನ್ಸ್ಕಿ ಅವರು ಉಕ್ರೇನ್‌ಗೆ ನ್ಯಾಟೋ ಸದಸ್ಯತ್ವಕ್ಕಾಗಿ ಇನ್ನು ಮುಂದೆ ಒತ್ತಾಯಿಸುವುದಿಲ್ಲ ಎಂದು ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಷ್ಯಾ ಸರ್ಕಾರ ಉಕ್ರೇನ್‌ ವಿರುದ್ದ ಯುದ್ಧ ಘೋಷಣೆ ಮಾಡಲು ಪ್ರಮುಖ ಕಾರಣ ‘ನ್ಯಾಟೊ’ ಆಗಿದೆ ಎಂದು ಎಎಫ್‌ಪಿ ಮಂಗಳವಾರ ವರದಿ ಮಾಡಿದೆ.

“ನಾವು ಅದನ್ನು ಅರ್ಥಮಾಡಿಕೊಂಡಿದ್ದು, ಈ ಪ್ರಶ್ನೆಗೆ ಸಂಬಂಧಿಸಿದಂತೆ ಬಹಳ ಹಿಂದೆಯೇ ನಾನು ಸುಮ್ಮನಾಗಿದ್ದೇನೆ… ನ್ಯಾಟೊ ಉಕ್ರೇನ್ ಅನ್ನು ಸ್ವೀಕರಿಸಲು ಸಿದ್ಧವಾಗಿಲ್ಲ” ಎಂದು ABC ನ್ಯೂಸ್‌ನಲ್ಲಿ ಸೋಮವಾರ ರಾತ್ರಿ ಪ್ರಸಾರವಾದ ಸಂದರ್ಶನದಲ್ಲಿ ಝೆಲೆನ್ಸ್ಕಿ ಹೇಳಿದ್ದಾರೆ.

“ನ್ಯಾಟೋ ಮೈತ್ರಿಯು ವಿವಾದಿತ ಸಂಗತಿಗಳಿಂದ ದೂರ ಉಳಿದಿದ್ದು, ರಷ್ಯಾ ಜೊತೆಗಿನ ಸಂಘರ್ಷಕ್ಕೆ ಹೆದರುತ್ತಿದೆ” ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ರಷ್ಯಾವನ್ನು ಸಮಾಧಾನಪಡಿಸುವ ರೀತಿಯಲ್ಲಿ ಮಾತನಾಡಿರುವ ಝೆಲೆನ್ಸ್ಕಿ, “ಫೆಬ್ರವರಿ 24 ರಂದು ಆಕ್ರಮಣವನ್ನು ಪ್ರಾರಂಭಿಸುವ ಮೊದಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸ್ವತಂತ್ರವೆಂದು ಗುರುತಿಸಿದ ಎರಡು ಪ್ಯಾಂತ್ಯಗಳಾದ ಡೊನೆಟ್‌ಸ್ಕ್ ಮತ್ತು ಲುಗಾನ್‌ಸ್ಕ್ ಪ್ರದೇಶಗಳನ್ನು ಸ್ವಾಯತ್ತ ಪ್ರಾಂತ್ಯ ಎಂದು ಒಪ್ಪಿ ತಾನು ರಾಜಿ ಮಾಡಿಕೊಳ್ಳಲು ಮುಕ್ತವಾಗಿದ್ದೇನೆ” ಎಂದು ಹೇಳಿದ್ದಾರೆ.

NATO ಸದಸ್ಯತ್ವವನ್ನು ಉಲ್ಲೇಖಿಸಿದ ಝೆಲೆನ್ಸ್ಕಿ, “ಮೊಣಕಾಲುಗಳನ್ನು ಊರಿ ಬೇಡಿಕೊಳ್ಳುವ ದೇಶದ ಅಧ್ಯಕ್ಷನಾಗಲು ನಾನು ಬಯಸುವುದಿಲ್ಲ” ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯು, ಅಮೆರಿಕಾ ನೇತೃತ್ವದ NATO ಮಿತ್ರರಾಷ್ಟ್ರಗಳ ನಿಲುವಿನ ಬಗ್ಗೆ ನಿರಾಶೆಯನ್ನು ಪ್ರತಿಬಿಂಬಿಸುತ್ತದೆ.

ಸೋವಿಯತ್ ಒಕ್ಕೂಟದಿಂದ ಯುರೋಪ್ ಅನ್ನು ರಕ್ಷಿಸಲು ಶೀತಲ ಸಮರದ ಪ್ರಾರಂಭದಲ್ಲಿ ರಚಿಸಲಾದ ಒಕ್ಕೂಟವಾಗಿದೆ NATO. ಈ ನ್ಯಾಟೊಗೆ ನೆರೆಯ ಉಕ್ರೇನ್ ಸೇರುವುದನ್ನು ತಾನು ಇಷ್ಟ ಪಡುವುದಿಲ್ಲ ಎಂದು ರಷ್ಯಾ ಹೇಳಿದೆ. ಇತ್ತೀಚಿನ ವರ್ಷಗಳಲ್ಲಿ ನ್ಯಾಟೊ ರಷ್ಯಾದ ಸುತ್ತಮುತ್ತಲಿನ ದೇಶಗಳಲ್ಲಿ ತನ್ನ ಪ್ರಭಾವನ್ನು ವಿಸ್ತರಿಸಿತ್ತು. ಇದು ರಷ್ಯಾವನ್ನು ಕೆರಳಿಸಿತ್ತು. ರಷ್ಯಾ ದೇಶವು NATO ವಿಸ್ತರಣೆಯನ್ನು ತನ್ನ ದೇಶಕ್ಕೆ ಬೆದರಿಕೆಯಾಗಿ ನೋಡುತ್ತದೆ. ಯಾಕೆಂದರೆ ನ್ಯಾಟೊ ತನ್ನ ಮಿತ್ರ ರಾಷ್ಟ್ರಗಳಲ್ಲಿ ಮಿಲಿಟರಿಗಳನ್ನು ನೆಲೆಯನ್ನು ವಿಸ್ತರಿಸುತ್ತಾ, ತನ್ನ ಬಾಗಿಲಿಗೆ ಬರುತ್ತದೆ ಎಂಬುವುದು ರಷ್ಯಾದ ವಾದವಾಗಿದೆ.

ಇದನ್ನೂ ಓದಿ: ಉಕ್ರೇನ್‌ನಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಉಕ್ರೇನ್‌ ಆಕ್ರಮಣಕ್ಕೆ ಆದೇಶ ನೀಡುವ ಮೂಲಕ ಜಗತ್ತನ್ನು ಬೆಚ್ಚಿಬೀಳಿಸುವ ಸ್ವಲ್ಪ ಸಮಯದ ಮೊದಲು, ರಷ್ಯಾ ಅಧ್ಯಕ್ಷ ಪುಟಿನ್ ಪೂರ್ವ ಉಕ್ರೇನ್‌ನ ಡೊನೆಟ್ಸ್ಕ್ ಮತ್ತು ಲುಗಾನ್ಸ್ಕ್ ಎಂಬ ಎರಡು ಪ್ರತ್ಯೇಕತಾವಾದಿ ಪ್ರಾಂತ್ಯಗಳನ್ನು ರಷ್ಯನ್‌ ಪರ “ಗಣರಾಜ್ಯಗಳು” ಎಂದು ಗುರುತಿಸಿಕೊಂಡಿದ್ದರು. ಈ ಎರಡು ಪ್ರಾಂತ್ಯಗಳು 2014 ರಿಂದ ಉಕ್ರೇನ್ ವಿರುದ್ದ ಸಂಘರ್ಷದಲ್ಲಿದೆ. ಉಕ್ರೇನ್ ಕೂಡ ತಮ್ಮನ್ನು ಸಾರ್ವಭೌಮ ಮತ್ತು ಸ್ವತಂತ್ರ ಎಂದು ಗುರುತಿಸಿಕೊಳ್ಳಲಿ ಎಂದು ಪುಟಿನ್‌ ಬಯಸುತ್ತಿದ್ದಾರೆ.

ರಷ್ಯಾದ ಈ ಬೇಡಿಕೆಯ ಬಗ್ಗೆ ಎಬಿಸಿ ಸಂದರ್ಶನದಲ್ಲಿ ಮಾತನಾಡಿದ ಝೆಲೆನ್ಸ್ಕಿ, ತಾನು ಮಾತುಕತೆಗೆ ಮುಕ್ತನಾಗಿದ್ದೇನೆ ಎಂದು ಹೇಳಿದ್ದಾರೆ. “ನಾನು ಭದ್ರತಾ ಖಾತರಿಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎರಡು ಪ್ರದೇಶಗಳು ಮುಂದೆ ಹೇಗಿರಬೇಕು ಎನ್ನುವ ಕುರಿತು ನಾವು ಚರ್ಚಿಸುತ್ತೇವೆ ಮತ್ತು ರಾಜಿ ಮಾಡಿಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

“ಉಕ್ರೇನ್‌ನ ಭಾಗವಾಗಲು ಬಯಸುವ, ಉಕ್ರೇನ್‌ನಲ್ಲಿ ಇರುವ ಆ ಪ್ರಾಂತ್ಯಗಳಲ್ಲಿನ ಜನರು ಹೇಗೆ ಬದುಕುತ್ತಾರೆ ಎಂಬುದು ನನಗೆ ಮುಖ್ಯವಾದುದು. ಆದ್ದರಿಂದ ಈ ಪ್ರಶ್ನೆಯನ್ನು ಸರಳವಾಗಿ ಒಪ್ಪಿಕೊಳ್ಳುವುದು ಹೆಚ್ಚು ಕಷ್ಟವಾಗಿದೆ. ಅಧ್ಯಕ್ಷ ಪುಟಿನ್ ಮಾತನಾಡಲು ಪ್ರಾರಂಭಿಸಲು ಏನು ಮಾಡಬೇಕು, ಮಾತುಕತೆ ಪ್ರಾರಂಭಿಸಿ” ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...