Homeಮುಖಪುಟಬಂಗಾಳದ ಉದ್ಯೋಗ ಖಾತ್ರಿಗೆ ಕೇಂದ್ರದಿಂದ ಶೂನ್ಯ ನಿಧಿ; ಪುರಾವೆ ಹಂಚಿಕೊಂಡ ಡೆರೆಕ್ ಒ'ಬ್ರೇನ್

ಬಂಗಾಳದ ಉದ್ಯೋಗ ಖಾತ್ರಿಗೆ ಕೇಂದ್ರದಿಂದ ಶೂನ್ಯ ನಿಧಿ; ಪುರಾವೆ ಹಂಚಿಕೊಂಡ ಡೆರೆಕ್ ಒ’ಬ್ರೇನ್

- Advertisement -
- Advertisement -

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ಕುರಿತ ಪ್ರಶ್ನೆಗೆ ಸರ್ಕಾರವು ರಾಜ್ಯಸಭೆಯಲ್ಲಿ ನೀಡಿದ ಉತ್ತರವನ್ನು ಉಲ್ಲೇಖಿಸಿ, “ಬಿಜೆಪಿ ನೇತೃತ್ವದ ಕೇಂದ್ರವು ಪಶ್ಚಿಮ ಬಂಗಾಳಕ್ಕೆ 100 ದಿನಗಳ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗಾಗಿ ‘ಶೂನ್ಯ ಅನುದಾನ’ ನೀಡಲಾಗಿದೆ ಎಂಬುದನ್ನು ಅಂತಿಮವಾಗಿ ಒಪ್ಪಿಕೊಂಡಿದೆ” ಎಂದು ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಹೇಳಿದ್ದಾರೆ.

2021ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಕೇಂದ್ರವು ಪಶ್ಚಿಮ ಬಂಗಾಳಕ್ಕೆ ಏನು ಪಾವತಿಸಿದೆ ಎಂಬುದನ್ನು ಸಾಬೀತುಪಡಿಸಲು ಟಿಎಂಸಿ ಮತ್ತು ಅದರ ಲೋಕಸಭಾ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಈ ಯೋಜನೆಯ ಬಗ್ಗೆ ಶ್ವೇತಪತ್ರವನ್ನು ಒತ್ತಾಯಿಸುತ್ತಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಓ’ಬ್ರೇನ್ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಅಂತಿಮವಾಗಿ ಎಂಎನ್‌ಆರ್‌ಇಜಿಎ ನಿಧಿಗಾಗಿ ಬಂಗಾಳಕ್ಕೆ ಶೂನ್ಯ ಅನುದಾನ ನೀಡಲಾಗಿದೆ ಎಂದು ಮೋದಿ ಸರ್ಕಾರವು ಸಂಸತ್ತಿನೊಳಗೆ ಒಪ್ಪಿಕೊಂಡಿದೆ” ಎಂದು ಓ’ಬ್ರೇನ್ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ, 2023-24ರಲ್ಲಿ 100 ದಿನಗಳ ವೇತನ ಉದ್ಯೋಗವನ್ನು ಪೂರ್ಣಗೊಳಿಸಿದ ಕುಟುಂಬಗಳ ಸಂಖ್ಯೆ “ಶೂನ್ಯ” ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಕಮಲೇಶ್ ಪಾಸ್ವಾನ್ ಸಂಸತ್ತಿನ ಮೇಲ್ಮನೆಯಲ್ಲಿ ನೀಡಿದ ಲಿಖಿತ ಉತ್ತರ ನೀಡಿದ್ದಾರೆ.

2022-23ರಲ್ಲಿ ರಾಜ್ಯದಲ್ಲಿ 1,618 ಕುಟುಂಬಗಳಿಗೆ ಯೋಜನೆಯಡಿ 100 ದಿನಗಳ ಕೆಲಸ ದೊರೆತಿದ್ದರೆ, 2021-22ರಲ್ಲಿ 4,71,136 ಎಂದು ಉತ್ತರದಲ್ಲಿ ತಿಳಿಸಲಾಗಿದೆ. 2020-21ರ ಮೊದಲ ಕೋವಿಡ್ ವರ್ಷದಲ್ಲಿ ಈ ಸಂಖ್ಯೆ 6,78,633 ಮತ್ತು 2019-20ರಲ್ಲಿ 3,65,683 ಆಗಿತ್ತು ಎಂದು ಉತ್ತರ ಹೇಳಿದೆ.

ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಅನುಸರಿಸದ ಕಾರಣ ಮನರೇಗಾ ಅಡಿಯಲ್ಲಿ ಪಶ್ಚಿಮ ಬಂಗಾಳಕ್ಕೆ ಹಣವನ್ನು ಬಿಡುಗಡೆ ಮಾಡುವುದನ್ನು ಮಾರ್ಚ್ 9, 2022 ರಂದು ನಿಲ್ಲಿಸಲಾಗಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಈ ಹಿಂದೆ ಹೇಳಿದ್ದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆ, 2005 ರ ಸೆಕ್ಷನ್ 27 ರ ಅಡಿಯಲ್ಲಿ ನಿಬಂಧನೆಗಳ ಪ್ರಕಾರ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಒಟ್ಟಾರೆಯಾಗಿ, 2023-24ರಲ್ಲಿ ಸುಮಾರು 44,99,343 ಕುಟುಂಬಗಳು ಮನರೇಗಾ ಅಡಿಯಲ್ಲಿ 100 ದಿನಗಳ ಉದ್ಯೋಗವನ್ನು ಪಡೆದಿವೆ.

ಯೋಜನೆಯಡಿಯಲ್ಲಿ ರಚಿಸಲಾದ ಉದ್ಯೋಗದ ಒಟ್ಟು ವ್ಯಕ್ತಿ-ದಿನಗಳ ಕುರಿತು ಮತ್ತೊಂದು ಲಿಖಿತ ಉತ್ತರದಲ್ಲಿ ಪಾಸ್ವಾನ್, 2023-24ರಲ್ಲಿ ಈ ಯೋಜನೆಯಡಿ ಪಶ್ಚಿಮ ಬಂಗಾಳದಲ್ಲಿ 1.65 ಲಕ್ಷ ವ್ಯಕ್ತಿ-ದಿನಗಳ ಉದ್ಯೋಗವನ್ನು ನೀಡಲಾಗಿದೆ ಎಂದು ಹೇಳಿದರು.

2022-23 ರಲ್ಲಿ, 3.78 ಕೋಟಿ ವ್ಯಕ್ತಿ-ದಿನಗಳ ಉದ್ಯೋಗವನ್ನು ಸೃಷ್ಟಿಸಲಾಯಿತು. ಆದರೆಮ 2021-22 ರಲ್ಲಿ ಈ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಸುಮಾರು 36.42 ಕೋಟಿ ವ್ಯಕ್ತಿ-ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗಿದೆ. ಒಟ್ಟಾರೆಯಾಗಿ, 2023-24 ರಲ್ಲಿ, ದೇಶದಾದ್ಯಂತ ಯೋಜನೆಯಡಿಯಲ್ಲಿ 312.37 ಕೋಟಿ ವ್ಯಕ್ತಿ-ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗಿದೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ; ಗವರ್ನರ್‌ಗಳು ಬೇಡದ ಪಾತ್ರ ನಿರ್ವಹಿಸುತ್ತಾ ಸಕ್ರಿಯ ಪಾತ್ರ ವಹಿಸಬೇಕಾದಾಗ ನಿಷ್ಕ್ರಿಯರಾಗಿದ್ದಾರೆ: ಜಸ್ಟೀಸ್ ಬಿವಿ ನಾಗರತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...