Homeಮುಖಪುಟಬಂಗಾಳದ ಉದ್ಯೋಗ ಖಾತ್ರಿಗೆ ಕೇಂದ್ರದಿಂದ ಶೂನ್ಯ ನಿಧಿ; ಪುರಾವೆ ಹಂಚಿಕೊಂಡ ಡೆರೆಕ್ ಒ'ಬ್ರೇನ್

ಬಂಗಾಳದ ಉದ್ಯೋಗ ಖಾತ್ರಿಗೆ ಕೇಂದ್ರದಿಂದ ಶೂನ್ಯ ನಿಧಿ; ಪುರಾವೆ ಹಂಚಿಕೊಂಡ ಡೆರೆಕ್ ಒ’ಬ್ರೇನ್

- Advertisement -
- Advertisement -

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ಕುರಿತ ಪ್ರಶ್ನೆಗೆ ಸರ್ಕಾರವು ರಾಜ್ಯಸಭೆಯಲ್ಲಿ ನೀಡಿದ ಉತ್ತರವನ್ನು ಉಲ್ಲೇಖಿಸಿ, “ಬಿಜೆಪಿ ನೇತೃತ್ವದ ಕೇಂದ್ರವು ಪಶ್ಚಿಮ ಬಂಗಾಳಕ್ಕೆ 100 ದಿನಗಳ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗಾಗಿ ‘ಶೂನ್ಯ ಅನುದಾನ’ ನೀಡಲಾಗಿದೆ ಎಂಬುದನ್ನು ಅಂತಿಮವಾಗಿ ಒಪ್ಪಿಕೊಂಡಿದೆ” ಎಂದು ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಹೇಳಿದ್ದಾರೆ.

2021ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಕೇಂದ್ರವು ಪಶ್ಚಿಮ ಬಂಗಾಳಕ್ಕೆ ಏನು ಪಾವತಿಸಿದೆ ಎಂಬುದನ್ನು ಸಾಬೀತುಪಡಿಸಲು ಟಿಎಂಸಿ ಮತ್ತು ಅದರ ಲೋಕಸಭಾ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಈ ಯೋಜನೆಯ ಬಗ್ಗೆ ಶ್ವೇತಪತ್ರವನ್ನು ಒತ್ತಾಯಿಸುತ್ತಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಓ’ಬ್ರೇನ್ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಅಂತಿಮವಾಗಿ ಎಂಎನ್‌ಆರ್‌ಇಜಿಎ ನಿಧಿಗಾಗಿ ಬಂಗಾಳಕ್ಕೆ ಶೂನ್ಯ ಅನುದಾನ ನೀಡಲಾಗಿದೆ ಎಂದು ಮೋದಿ ಸರ್ಕಾರವು ಸಂಸತ್ತಿನೊಳಗೆ ಒಪ್ಪಿಕೊಂಡಿದೆ” ಎಂದು ಓ’ಬ್ರೇನ್ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ, 2023-24ರಲ್ಲಿ 100 ದಿನಗಳ ವೇತನ ಉದ್ಯೋಗವನ್ನು ಪೂರ್ಣಗೊಳಿಸಿದ ಕುಟುಂಬಗಳ ಸಂಖ್ಯೆ “ಶೂನ್ಯ” ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಕಮಲೇಶ್ ಪಾಸ್ವಾನ್ ಸಂಸತ್ತಿನ ಮೇಲ್ಮನೆಯಲ್ಲಿ ನೀಡಿದ ಲಿಖಿತ ಉತ್ತರ ನೀಡಿದ್ದಾರೆ.

2022-23ರಲ್ಲಿ ರಾಜ್ಯದಲ್ಲಿ 1,618 ಕುಟುಂಬಗಳಿಗೆ ಯೋಜನೆಯಡಿ 100 ದಿನಗಳ ಕೆಲಸ ದೊರೆತಿದ್ದರೆ, 2021-22ರಲ್ಲಿ 4,71,136 ಎಂದು ಉತ್ತರದಲ್ಲಿ ತಿಳಿಸಲಾಗಿದೆ. 2020-21ರ ಮೊದಲ ಕೋವಿಡ್ ವರ್ಷದಲ್ಲಿ ಈ ಸಂಖ್ಯೆ 6,78,633 ಮತ್ತು 2019-20ರಲ್ಲಿ 3,65,683 ಆಗಿತ್ತು ಎಂದು ಉತ್ತರ ಹೇಳಿದೆ.

ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಅನುಸರಿಸದ ಕಾರಣ ಮನರೇಗಾ ಅಡಿಯಲ್ಲಿ ಪಶ್ಚಿಮ ಬಂಗಾಳಕ್ಕೆ ಹಣವನ್ನು ಬಿಡುಗಡೆ ಮಾಡುವುದನ್ನು ಮಾರ್ಚ್ 9, 2022 ರಂದು ನಿಲ್ಲಿಸಲಾಗಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಈ ಹಿಂದೆ ಹೇಳಿದ್ದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆ, 2005 ರ ಸೆಕ್ಷನ್ 27 ರ ಅಡಿಯಲ್ಲಿ ನಿಬಂಧನೆಗಳ ಪ್ರಕಾರ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಒಟ್ಟಾರೆಯಾಗಿ, 2023-24ರಲ್ಲಿ ಸುಮಾರು 44,99,343 ಕುಟುಂಬಗಳು ಮನರೇಗಾ ಅಡಿಯಲ್ಲಿ 100 ದಿನಗಳ ಉದ್ಯೋಗವನ್ನು ಪಡೆದಿವೆ.

ಯೋಜನೆಯಡಿಯಲ್ಲಿ ರಚಿಸಲಾದ ಉದ್ಯೋಗದ ಒಟ್ಟು ವ್ಯಕ್ತಿ-ದಿನಗಳ ಕುರಿತು ಮತ್ತೊಂದು ಲಿಖಿತ ಉತ್ತರದಲ್ಲಿ ಪಾಸ್ವಾನ್, 2023-24ರಲ್ಲಿ ಈ ಯೋಜನೆಯಡಿ ಪಶ್ಚಿಮ ಬಂಗಾಳದಲ್ಲಿ 1.65 ಲಕ್ಷ ವ್ಯಕ್ತಿ-ದಿನಗಳ ಉದ್ಯೋಗವನ್ನು ನೀಡಲಾಗಿದೆ ಎಂದು ಹೇಳಿದರು.

2022-23 ರಲ್ಲಿ, 3.78 ಕೋಟಿ ವ್ಯಕ್ತಿ-ದಿನಗಳ ಉದ್ಯೋಗವನ್ನು ಸೃಷ್ಟಿಸಲಾಯಿತು. ಆದರೆಮ 2021-22 ರಲ್ಲಿ ಈ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಸುಮಾರು 36.42 ಕೋಟಿ ವ್ಯಕ್ತಿ-ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗಿದೆ. ಒಟ್ಟಾರೆಯಾಗಿ, 2023-24 ರಲ್ಲಿ, ದೇಶದಾದ್ಯಂತ ಯೋಜನೆಯಡಿಯಲ್ಲಿ 312.37 ಕೋಟಿ ವ್ಯಕ್ತಿ-ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗಿದೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ; ಗವರ್ನರ್‌ಗಳು ಬೇಡದ ಪಾತ್ರ ನಿರ್ವಹಿಸುತ್ತಾ ಸಕ್ರಿಯ ಪಾತ್ರ ವಹಿಸಬೇಕಾದಾಗ ನಿಷ್ಕ್ರಿಯರಾಗಿದ್ದಾರೆ: ಜಸ್ಟೀಸ್ ಬಿವಿ ನಾಗರತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...