Homeಮುಖಪುಟಬಂಗಾಳದ ಉದ್ಯೋಗ ಖಾತ್ರಿಗೆ ಕೇಂದ್ರದಿಂದ ಶೂನ್ಯ ನಿಧಿ; ಪುರಾವೆ ಹಂಚಿಕೊಂಡ ಡೆರೆಕ್ ಒ'ಬ್ರೇನ್

ಬಂಗಾಳದ ಉದ್ಯೋಗ ಖಾತ್ರಿಗೆ ಕೇಂದ್ರದಿಂದ ಶೂನ್ಯ ನಿಧಿ; ಪುರಾವೆ ಹಂಚಿಕೊಂಡ ಡೆರೆಕ್ ಒ’ಬ್ರೇನ್

- Advertisement -
- Advertisement -

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ಕುರಿತ ಪ್ರಶ್ನೆಗೆ ಸರ್ಕಾರವು ರಾಜ್ಯಸಭೆಯಲ್ಲಿ ನೀಡಿದ ಉತ್ತರವನ್ನು ಉಲ್ಲೇಖಿಸಿ, “ಬಿಜೆಪಿ ನೇತೃತ್ವದ ಕೇಂದ್ರವು ಪಶ್ಚಿಮ ಬಂಗಾಳಕ್ಕೆ 100 ದಿನಗಳ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗಾಗಿ ‘ಶೂನ್ಯ ಅನುದಾನ’ ನೀಡಲಾಗಿದೆ ಎಂಬುದನ್ನು ಅಂತಿಮವಾಗಿ ಒಪ್ಪಿಕೊಂಡಿದೆ” ಎಂದು ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಹೇಳಿದ್ದಾರೆ.

2021ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಕೇಂದ್ರವು ಪಶ್ಚಿಮ ಬಂಗಾಳಕ್ಕೆ ಏನು ಪಾವತಿಸಿದೆ ಎಂಬುದನ್ನು ಸಾಬೀತುಪಡಿಸಲು ಟಿಎಂಸಿ ಮತ್ತು ಅದರ ಲೋಕಸಭಾ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಈ ಯೋಜನೆಯ ಬಗ್ಗೆ ಶ್ವೇತಪತ್ರವನ್ನು ಒತ್ತಾಯಿಸುತ್ತಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಓ’ಬ್ರೇನ್ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಅಂತಿಮವಾಗಿ ಎಂಎನ್‌ಆರ್‌ಇಜಿಎ ನಿಧಿಗಾಗಿ ಬಂಗಾಳಕ್ಕೆ ಶೂನ್ಯ ಅನುದಾನ ನೀಡಲಾಗಿದೆ ಎಂದು ಮೋದಿ ಸರ್ಕಾರವು ಸಂಸತ್ತಿನೊಳಗೆ ಒಪ್ಪಿಕೊಂಡಿದೆ” ಎಂದು ಓ’ಬ್ರೇನ್ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ, 2023-24ರಲ್ಲಿ 100 ದಿನಗಳ ವೇತನ ಉದ್ಯೋಗವನ್ನು ಪೂರ್ಣಗೊಳಿಸಿದ ಕುಟುಂಬಗಳ ಸಂಖ್ಯೆ “ಶೂನ್ಯ” ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಕಮಲೇಶ್ ಪಾಸ್ವಾನ್ ಸಂಸತ್ತಿನ ಮೇಲ್ಮನೆಯಲ್ಲಿ ನೀಡಿದ ಲಿಖಿತ ಉತ್ತರ ನೀಡಿದ್ದಾರೆ.

2022-23ರಲ್ಲಿ ರಾಜ್ಯದಲ್ಲಿ 1,618 ಕುಟುಂಬಗಳಿಗೆ ಯೋಜನೆಯಡಿ 100 ದಿನಗಳ ಕೆಲಸ ದೊರೆತಿದ್ದರೆ, 2021-22ರಲ್ಲಿ 4,71,136 ಎಂದು ಉತ್ತರದಲ್ಲಿ ತಿಳಿಸಲಾಗಿದೆ. 2020-21ರ ಮೊದಲ ಕೋವಿಡ್ ವರ್ಷದಲ್ಲಿ ಈ ಸಂಖ್ಯೆ 6,78,633 ಮತ್ತು 2019-20ರಲ್ಲಿ 3,65,683 ಆಗಿತ್ತು ಎಂದು ಉತ್ತರ ಹೇಳಿದೆ.

ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಅನುಸರಿಸದ ಕಾರಣ ಮನರೇಗಾ ಅಡಿಯಲ್ಲಿ ಪಶ್ಚಿಮ ಬಂಗಾಳಕ್ಕೆ ಹಣವನ್ನು ಬಿಡುಗಡೆ ಮಾಡುವುದನ್ನು ಮಾರ್ಚ್ 9, 2022 ರಂದು ನಿಲ್ಲಿಸಲಾಗಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಈ ಹಿಂದೆ ಹೇಳಿದ್ದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆ, 2005 ರ ಸೆಕ್ಷನ್ 27 ರ ಅಡಿಯಲ್ಲಿ ನಿಬಂಧನೆಗಳ ಪ್ರಕಾರ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಒಟ್ಟಾರೆಯಾಗಿ, 2023-24ರಲ್ಲಿ ಸುಮಾರು 44,99,343 ಕುಟುಂಬಗಳು ಮನರೇಗಾ ಅಡಿಯಲ್ಲಿ 100 ದಿನಗಳ ಉದ್ಯೋಗವನ್ನು ಪಡೆದಿವೆ.

ಯೋಜನೆಯಡಿಯಲ್ಲಿ ರಚಿಸಲಾದ ಉದ್ಯೋಗದ ಒಟ್ಟು ವ್ಯಕ್ತಿ-ದಿನಗಳ ಕುರಿತು ಮತ್ತೊಂದು ಲಿಖಿತ ಉತ್ತರದಲ್ಲಿ ಪಾಸ್ವಾನ್, 2023-24ರಲ್ಲಿ ಈ ಯೋಜನೆಯಡಿ ಪಶ್ಚಿಮ ಬಂಗಾಳದಲ್ಲಿ 1.65 ಲಕ್ಷ ವ್ಯಕ್ತಿ-ದಿನಗಳ ಉದ್ಯೋಗವನ್ನು ನೀಡಲಾಗಿದೆ ಎಂದು ಹೇಳಿದರು.

2022-23 ರಲ್ಲಿ, 3.78 ಕೋಟಿ ವ್ಯಕ್ತಿ-ದಿನಗಳ ಉದ್ಯೋಗವನ್ನು ಸೃಷ್ಟಿಸಲಾಯಿತು. ಆದರೆಮ 2021-22 ರಲ್ಲಿ ಈ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಸುಮಾರು 36.42 ಕೋಟಿ ವ್ಯಕ್ತಿ-ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗಿದೆ. ಒಟ್ಟಾರೆಯಾಗಿ, 2023-24 ರಲ್ಲಿ, ದೇಶದಾದ್ಯಂತ ಯೋಜನೆಯಡಿಯಲ್ಲಿ 312.37 ಕೋಟಿ ವ್ಯಕ್ತಿ-ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗಿದೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ; ಗವರ್ನರ್‌ಗಳು ಬೇಡದ ಪಾತ್ರ ನಿರ್ವಹಿಸುತ್ತಾ ಸಕ್ರಿಯ ಪಾತ್ರ ವಹಿಸಬೇಕಾದಾಗ ನಿಷ್ಕ್ರಿಯರಾಗಿದ್ದಾರೆ: ಜಸ್ಟೀಸ್ ಬಿವಿ ನಾಗರತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...