Homeಮುಖಪುಟಮರಣದಂಡನೆ ರದ್ದುಗೊಳಿಸಿದ ಝಿಂಬಾಬ್ವೆ : ಐತಿಹಾಸಿಕ ನಿರ್ಧಾರ ಸ್ವಾಗತಿಸಿದ ಮಾನವ ಹಕ್ಕು ಸಂಘಟನೆಗಳು

ಮರಣದಂಡನೆ ರದ್ದುಗೊಳಿಸಿದ ಝಿಂಬಾಬ್ವೆ : ಐತಿಹಾಸಿಕ ನಿರ್ಧಾರ ಸ್ವಾಗತಿಸಿದ ಮಾನವ ಹಕ್ಕು ಸಂಘಟನೆಗಳು

- Advertisement -
- Advertisement -

ಮಹತ್ವದ ಬೆಳವಣಿಗೆಯಲ್ಲಿ ಝಿಂಬಾಬ್ವೆ ರಾಷ್ಟ್ರದಲ್ಲಿ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದು ಎರಡು ದಶಕಗಳ ಬಹು ನಿರೀಕ್ಷಿತ ನಿರ್ಧಾರವಾಗಿತ್ತು.

1960ರ ದಶಕದ ಸ್ವಾತಂತ್ರ್ಯ ಸಮರದ ಸಮಯದಲ್ಲಿ ಸ್ವತಃ ಮರಣದಂಡನೆಗೆ ಗುರಿಯಾಗಿ, ಬಳಿಕ ಅದರಿಂದ ಪಾರಾಗಿದ್ದ ಅಧ್ಯಕ್ಷ ಎಮರ್ಸನ್‌ ನಂಗಾಗ್ವ ಅವರು ಸಂಸತ್ತಿನಲ್ಲಿ ಮಂಡಿಸಿದ ಮಸೂದೆ ಅಂಗೀಕಾರಗೊಂಡಿದೆ.  ಈ ಮೂಲಕ ಮರಣದಂಡನೆ ಶಿಕ್ಷೆ ರದ್ದಾಗಿದೆ.

ಪ್ರಸ್ತುತ ಝಿಂಬಾಬ್ವೆಯಲ್ಲಿ ಸುಮಾರು 60 ಕೈದಿಗಳು ಮರಣದಂಡನೆ ಶಿಕ್ಷೆ ಘೋಷಣೆಯಾದವರಿದ್ದಾರೆ. ಹೊಸ ಕಾನೂನಿನ ಪ್ರಕಾರ ಅವರ ಶಿಕ್ಷೆ ಜೀವಾವಧಿಗೆ ಪರಿವರ್ತನೆಯಾಗುವ ಸಾಧ್ಯತೆ ಇದೆ.

ಝಿಂಬಾಬ್ವೆಯಲ್ಲಿ 2005ರಲ್ಲಿ ಕೊನೆಯದಾಗಿ ವ್ಯಕ್ತಿಯೊಬ್ಬರನ್ನು ಗಲ್ಲಿಗೇರಿಸಲಾಗಿತ್ತು. ಆ ಬಳಿಕ ಈ ರೀತಿಯ ಶಿಕ್ಷೆ ಜಾರಿಯಾಗಿಲ್ಲ. ವರದಿಗಳ ಪ್ರಕಾರ, ಮರಣದಂಡನೆ ಶಿಕ್ಷೆ ವಿಧಿಸುವ ಕೆಲಸ ಮಾಡಲು ಆ ದೇಶದಲ್ಲಿ ಯಾರೂ ಮುಂದೆ ಬರುತ್ತಿಲ್ಲವಂತೆ.

ಝಿಂಬಾಬ್ವೆ ದೇಶ ತೆಗೆದುಕೊಂಡಿರುವ ಐತಿಹಾಸಿಕ ನಿರ್ಧಾರವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಸ್ವಾಗತಿಸಿದ್ದು, “ಇದು ಈ ಪ್ರದೇಶದಲ್ಲಿ ನಿರ್ಮೂಲನವಾದಿ ಚಳವಳಿಗೆ ಭರವಸೆಯ ದಾರಿ ದೀಪವಾಗಿದೆ” ಎಂದಿದೆ.

ಇತರ ಆಫ್ರಿಕನ್ ದೇಶಗಳಾದ ಕೀನ್ಯಾ, ಲೈಬೀರಿಯಾ ಮತ್ತು ಘಾನಾ ಕೂಡ ಮರಣದಂಡನೆಯನ್ನು ರದ್ದುಗೊಳಿಸುವತ್ತ ಇತ್ತೀಚೆಗೆ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಂಡಿವೆ. ಆದರೆ, ಮರಣದಂಡನೆ ಇನ್ನೂ ರದ್ದಾಗಿಲ್ಲ ಎಂದು ಮಾನವ ಹಕ್ಕುಗಳ ಸಂಘಟನೆಗಳು ಹೇಳಿವೆ.

2017ರಿಂದ ಝಿಂಬ್ವಾಬೆಯ ಅಧ್ಯಕ್ಷರಾಗಿರುವ ಎಮರ್ಸನ್‌ ನಂಗಾಗ್ವ ಅವರು, 1960ರ ದಶಕದಲ್ಲಿ ಬಿಳಿಯ ಅಲ್ಪಸಂಖ್ಯಾತರ ಆಳ್ವಿಕೆಯಿಂದ ದೇಶವನ್ನು ಸ್ವಾತಂತ್ರ್ಯಗೊಳಿಸಿದ ಹೋರಾಟದ ವೇಳೆ ರೈಲು ಸ್ಪೋಟಿಸಿದ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ಬಳಿಕ ಅದು 10 ವರ್ಷಗಳ ಜೈಲು ಶಿಕ್ಷೆಗೆ ಪರಿವರ್ತನೆಗೊಂಡ ಪರಿಣಾಮ ಎಮರ್ಸನ್‌ ಬದುಕುಳಿದರು. ಆಗಿನಿಂದ ಮರಣದಂಡನೆಯ ವಿರುದ್ದ ಅವರು ಕಠಿಣ ನಿಲುವು ಹೊಂದಿದ್ದಾರೆ. ಅದು ಈಗ ಮರಣದಂಡನೆಯ ಸಂಪೂರ್ಣ ರದ್ದತಿಗೆ ಕಾರಣವಾಗಿದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಪ್ರಕಾರ, ವಿಶ್ವದ ಮುಕ್ಕಾಲು ಭಾಗದಷ್ಟು ದೇಶಗಳು ಮರಣದಂಡನೆಯನ್ನು ಶಿಕ್ಷೆಯಾಗಿ ಬಳಸುತ್ತವೆ. ಜಾಗತಿಕವಾಗಿ 113 ದೇಶಗಳಲ್ಲಿ 24 ಆಫ್ರಿಕನ್ ದೇಶಗಳು ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿವೆ ಎಂದು ಅದು ಹೇಳುತ್ತದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ವರದಿ 2023ರಲ್ಲಿ ಜಾಗತಿಕವಾಗಿ 1,153 ತಿಳಿದಿರುವ ಮರಣದಂಡನೆಗಳನ್ನು ದಾಖಲಿಸಿದೆ. ಇದು ಹಿಂದಿನ ವರ್ಷದ 883ಕ್ಕಿಂತ ಹೆಚ್ಚಾಗಿದೆ. ಆದರೂ ಮರಣದಂಡನೆಗಳನ್ನು ಜಾರಿಗೊಳಿಸಿದ ದೇಶಗಳ ಸಂಖ್ಯೆ 20ರಿಂದ 16ಕ್ಕೆ ಇಳಿದಿವೆ. ಉತ್ತರ ಕೊರಿಯಾ, ವಿಯೆಟ್ನಾಂ ಮತ್ತು ಚೀನಾ ಅತಿ ಹೆಚ್ಚು ಮರಣದಂಡನೆ ವಿಧಿಸುವ ರಾಷ್ಟ್ರಗಳು. ಆದರೆ, ಇವುಗಳು ಗೌಪ್ಯತೆಯ ಕಾರಣಕ್ಕೆ ಅಂಕಿ ಅಂಶಗಳನ್ನು ನೀಡುತ್ತಿಲ್ಲ ಎಂದು ಆಮ್ನೆಸ್ಟಿ ಹೇಳಿದೆ.

2023ರಲ್ಲಿ ಅಮ್ನೆಸ್ಟಿ ದಾಖಲಿಸಿದ ಒಟ್ಟು ಮರಣದಂಡನೆಗಳಲ್ಲಿ ಇರಾನ್ ಮತ್ತು ಸೌದಿ ಅರೇಬಿಯಾದ ಪಾಲು ಸುಮಾರು ಶೇಖಡ 90ರಷ್ಟಿದೆ, ನಂತರದ ಸ್ಥಾನಗಳಲ್ಲಿ ಸೊಮಾಲಿಯಾ ಮತ್ತು ಯುಎಸ್‌ ಇದೆ.

ಇದನ್ನೂ ಓದಿ : ಸಿಂಗಾಪುರ ಕೆಫೆಯಲ್ಲಿ ಕ್ಯಾಷಿಯರ್‌ ಕುರಿತು ಜನಾಂಗೀಯ ಟೀಕೆ; ಭಾರತೀಯ ಮೂಲದ ವ್ಯಕ್ತಿಗೆ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...