Homeಮುಖಪುಟಮರಣದಂಡನೆ ರದ್ದುಗೊಳಿಸಿದ ಝಿಂಬಾಬ್ವೆ : ಐತಿಹಾಸಿಕ ನಿರ್ಧಾರ ಸ್ವಾಗತಿಸಿದ ಮಾನವ ಹಕ್ಕು ಸಂಘಟನೆಗಳು

ಮರಣದಂಡನೆ ರದ್ದುಗೊಳಿಸಿದ ಝಿಂಬಾಬ್ವೆ : ಐತಿಹಾಸಿಕ ನಿರ್ಧಾರ ಸ್ವಾಗತಿಸಿದ ಮಾನವ ಹಕ್ಕು ಸಂಘಟನೆಗಳು

- Advertisement -
- Advertisement -

ಮಹತ್ವದ ಬೆಳವಣಿಗೆಯಲ್ಲಿ ಝಿಂಬಾಬ್ವೆ ರಾಷ್ಟ್ರದಲ್ಲಿ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದು ಎರಡು ದಶಕಗಳ ಬಹು ನಿರೀಕ್ಷಿತ ನಿರ್ಧಾರವಾಗಿತ್ತು.

1960ರ ದಶಕದ ಸ್ವಾತಂತ್ರ್ಯ ಸಮರದ ಸಮಯದಲ್ಲಿ ಸ್ವತಃ ಮರಣದಂಡನೆಗೆ ಗುರಿಯಾಗಿ, ಬಳಿಕ ಅದರಿಂದ ಪಾರಾಗಿದ್ದ ಅಧ್ಯಕ್ಷ ಎಮರ್ಸನ್‌ ನಂಗಾಗ್ವ ಅವರು ಸಂಸತ್ತಿನಲ್ಲಿ ಮಂಡಿಸಿದ ಮಸೂದೆ ಅಂಗೀಕಾರಗೊಂಡಿದೆ.  ಈ ಮೂಲಕ ಮರಣದಂಡನೆ ಶಿಕ್ಷೆ ರದ್ದಾಗಿದೆ.

ಪ್ರಸ್ತುತ ಝಿಂಬಾಬ್ವೆಯಲ್ಲಿ ಸುಮಾರು 60 ಕೈದಿಗಳು ಮರಣದಂಡನೆ ಶಿಕ್ಷೆ ಘೋಷಣೆಯಾದವರಿದ್ದಾರೆ. ಹೊಸ ಕಾನೂನಿನ ಪ್ರಕಾರ ಅವರ ಶಿಕ್ಷೆ ಜೀವಾವಧಿಗೆ ಪರಿವರ್ತನೆಯಾಗುವ ಸಾಧ್ಯತೆ ಇದೆ.

ಝಿಂಬಾಬ್ವೆಯಲ್ಲಿ 2005ರಲ್ಲಿ ಕೊನೆಯದಾಗಿ ವ್ಯಕ್ತಿಯೊಬ್ಬರನ್ನು ಗಲ್ಲಿಗೇರಿಸಲಾಗಿತ್ತು. ಆ ಬಳಿಕ ಈ ರೀತಿಯ ಶಿಕ್ಷೆ ಜಾರಿಯಾಗಿಲ್ಲ. ವರದಿಗಳ ಪ್ರಕಾರ, ಮರಣದಂಡನೆ ಶಿಕ್ಷೆ ವಿಧಿಸುವ ಕೆಲಸ ಮಾಡಲು ಆ ದೇಶದಲ್ಲಿ ಯಾರೂ ಮುಂದೆ ಬರುತ್ತಿಲ್ಲವಂತೆ.

ಝಿಂಬಾಬ್ವೆ ದೇಶ ತೆಗೆದುಕೊಂಡಿರುವ ಐತಿಹಾಸಿಕ ನಿರ್ಧಾರವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಸ್ವಾಗತಿಸಿದ್ದು, “ಇದು ಈ ಪ್ರದೇಶದಲ್ಲಿ ನಿರ್ಮೂಲನವಾದಿ ಚಳವಳಿಗೆ ಭರವಸೆಯ ದಾರಿ ದೀಪವಾಗಿದೆ” ಎಂದಿದೆ.

ಇತರ ಆಫ್ರಿಕನ್ ದೇಶಗಳಾದ ಕೀನ್ಯಾ, ಲೈಬೀರಿಯಾ ಮತ್ತು ಘಾನಾ ಕೂಡ ಮರಣದಂಡನೆಯನ್ನು ರದ್ದುಗೊಳಿಸುವತ್ತ ಇತ್ತೀಚೆಗೆ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಂಡಿವೆ. ಆದರೆ, ಮರಣದಂಡನೆ ಇನ್ನೂ ರದ್ದಾಗಿಲ್ಲ ಎಂದು ಮಾನವ ಹಕ್ಕುಗಳ ಸಂಘಟನೆಗಳು ಹೇಳಿವೆ.

2017ರಿಂದ ಝಿಂಬ್ವಾಬೆಯ ಅಧ್ಯಕ್ಷರಾಗಿರುವ ಎಮರ್ಸನ್‌ ನಂಗಾಗ್ವ ಅವರು, 1960ರ ದಶಕದಲ್ಲಿ ಬಿಳಿಯ ಅಲ್ಪಸಂಖ್ಯಾತರ ಆಳ್ವಿಕೆಯಿಂದ ದೇಶವನ್ನು ಸ್ವಾತಂತ್ರ್ಯಗೊಳಿಸಿದ ಹೋರಾಟದ ವೇಳೆ ರೈಲು ಸ್ಪೋಟಿಸಿದ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ಬಳಿಕ ಅದು 10 ವರ್ಷಗಳ ಜೈಲು ಶಿಕ್ಷೆಗೆ ಪರಿವರ್ತನೆಗೊಂಡ ಪರಿಣಾಮ ಎಮರ್ಸನ್‌ ಬದುಕುಳಿದರು. ಆಗಿನಿಂದ ಮರಣದಂಡನೆಯ ವಿರುದ್ದ ಅವರು ಕಠಿಣ ನಿಲುವು ಹೊಂದಿದ್ದಾರೆ. ಅದು ಈಗ ಮರಣದಂಡನೆಯ ಸಂಪೂರ್ಣ ರದ್ದತಿಗೆ ಕಾರಣವಾಗಿದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಪ್ರಕಾರ, ವಿಶ್ವದ ಮುಕ್ಕಾಲು ಭಾಗದಷ್ಟು ದೇಶಗಳು ಮರಣದಂಡನೆಯನ್ನು ಶಿಕ್ಷೆಯಾಗಿ ಬಳಸುತ್ತವೆ. ಜಾಗತಿಕವಾಗಿ 113 ದೇಶಗಳಲ್ಲಿ 24 ಆಫ್ರಿಕನ್ ದೇಶಗಳು ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿವೆ ಎಂದು ಅದು ಹೇಳುತ್ತದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ವರದಿ 2023ರಲ್ಲಿ ಜಾಗತಿಕವಾಗಿ 1,153 ತಿಳಿದಿರುವ ಮರಣದಂಡನೆಗಳನ್ನು ದಾಖಲಿಸಿದೆ. ಇದು ಹಿಂದಿನ ವರ್ಷದ 883ಕ್ಕಿಂತ ಹೆಚ್ಚಾಗಿದೆ. ಆದರೂ ಮರಣದಂಡನೆಗಳನ್ನು ಜಾರಿಗೊಳಿಸಿದ ದೇಶಗಳ ಸಂಖ್ಯೆ 20ರಿಂದ 16ಕ್ಕೆ ಇಳಿದಿವೆ. ಉತ್ತರ ಕೊರಿಯಾ, ವಿಯೆಟ್ನಾಂ ಮತ್ತು ಚೀನಾ ಅತಿ ಹೆಚ್ಚು ಮರಣದಂಡನೆ ವಿಧಿಸುವ ರಾಷ್ಟ್ರಗಳು. ಆದರೆ, ಇವುಗಳು ಗೌಪ್ಯತೆಯ ಕಾರಣಕ್ಕೆ ಅಂಕಿ ಅಂಶಗಳನ್ನು ನೀಡುತ್ತಿಲ್ಲ ಎಂದು ಆಮ್ನೆಸ್ಟಿ ಹೇಳಿದೆ.

2023ರಲ್ಲಿ ಅಮ್ನೆಸ್ಟಿ ದಾಖಲಿಸಿದ ಒಟ್ಟು ಮರಣದಂಡನೆಗಳಲ್ಲಿ ಇರಾನ್ ಮತ್ತು ಸೌದಿ ಅರೇಬಿಯಾದ ಪಾಲು ಸುಮಾರು ಶೇಖಡ 90ರಷ್ಟಿದೆ, ನಂತರದ ಸ್ಥಾನಗಳಲ್ಲಿ ಸೊಮಾಲಿಯಾ ಮತ್ತು ಯುಎಸ್‌ ಇದೆ.

ಇದನ್ನೂ ಓದಿ : ಸಿಂಗಾಪುರ ಕೆಫೆಯಲ್ಲಿ ಕ್ಯಾಷಿಯರ್‌ ಕುರಿತು ಜನಾಂಗೀಯ ಟೀಕೆ; ಭಾರತೀಯ ಮೂಲದ ವ್ಯಕ್ತಿಗೆ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...