Homeಮುಖಪುಟಮರಣದಂಡನೆ ರದ್ದುಗೊಳಿಸಿದ ಝಿಂಬಾಬ್ವೆ : ಐತಿಹಾಸಿಕ ನಿರ್ಧಾರ ಸ್ವಾಗತಿಸಿದ ಮಾನವ ಹಕ್ಕು ಸಂಘಟನೆಗಳು

ಮರಣದಂಡನೆ ರದ್ದುಗೊಳಿಸಿದ ಝಿಂಬಾಬ್ವೆ : ಐತಿಹಾಸಿಕ ನಿರ್ಧಾರ ಸ್ವಾಗತಿಸಿದ ಮಾನವ ಹಕ್ಕು ಸಂಘಟನೆಗಳು

- Advertisement -
- Advertisement -

ಮಹತ್ವದ ಬೆಳವಣಿಗೆಯಲ್ಲಿ ಝಿಂಬಾಬ್ವೆ ರಾಷ್ಟ್ರದಲ್ಲಿ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದು ಎರಡು ದಶಕಗಳ ಬಹು ನಿರೀಕ್ಷಿತ ನಿರ್ಧಾರವಾಗಿತ್ತು.

1960ರ ದಶಕದ ಸ್ವಾತಂತ್ರ್ಯ ಸಮರದ ಸಮಯದಲ್ಲಿ ಸ್ವತಃ ಮರಣದಂಡನೆಗೆ ಗುರಿಯಾಗಿ, ಬಳಿಕ ಅದರಿಂದ ಪಾರಾಗಿದ್ದ ಅಧ್ಯಕ್ಷ ಎಮರ್ಸನ್‌ ನಂಗಾಗ್ವ ಅವರು ಸಂಸತ್ತಿನಲ್ಲಿ ಮಂಡಿಸಿದ ಮಸೂದೆ ಅಂಗೀಕಾರಗೊಂಡಿದೆ.  ಈ ಮೂಲಕ ಮರಣದಂಡನೆ ಶಿಕ್ಷೆ ರದ್ದಾಗಿದೆ.

ಪ್ರಸ್ತುತ ಝಿಂಬಾಬ್ವೆಯಲ್ಲಿ ಸುಮಾರು 60 ಕೈದಿಗಳು ಮರಣದಂಡನೆ ಶಿಕ್ಷೆ ಘೋಷಣೆಯಾದವರಿದ್ದಾರೆ. ಹೊಸ ಕಾನೂನಿನ ಪ್ರಕಾರ ಅವರ ಶಿಕ್ಷೆ ಜೀವಾವಧಿಗೆ ಪರಿವರ್ತನೆಯಾಗುವ ಸಾಧ್ಯತೆ ಇದೆ.

ಝಿಂಬಾಬ್ವೆಯಲ್ಲಿ 2005ರಲ್ಲಿ ಕೊನೆಯದಾಗಿ ವ್ಯಕ್ತಿಯೊಬ್ಬರನ್ನು ಗಲ್ಲಿಗೇರಿಸಲಾಗಿತ್ತು. ಆ ಬಳಿಕ ಈ ರೀತಿಯ ಶಿಕ್ಷೆ ಜಾರಿಯಾಗಿಲ್ಲ. ವರದಿಗಳ ಪ್ರಕಾರ, ಮರಣದಂಡನೆ ಶಿಕ್ಷೆ ವಿಧಿಸುವ ಕೆಲಸ ಮಾಡಲು ಆ ದೇಶದಲ್ಲಿ ಯಾರೂ ಮುಂದೆ ಬರುತ್ತಿಲ್ಲವಂತೆ.

ಝಿಂಬಾಬ್ವೆ ದೇಶ ತೆಗೆದುಕೊಂಡಿರುವ ಐತಿಹಾಸಿಕ ನಿರ್ಧಾರವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಸ್ವಾಗತಿಸಿದ್ದು, “ಇದು ಈ ಪ್ರದೇಶದಲ್ಲಿ ನಿರ್ಮೂಲನವಾದಿ ಚಳವಳಿಗೆ ಭರವಸೆಯ ದಾರಿ ದೀಪವಾಗಿದೆ” ಎಂದಿದೆ.

ಇತರ ಆಫ್ರಿಕನ್ ದೇಶಗಳಾದ ಕೀನ್ಯಾ, ಲೈಬೀರಿಯಾ ಮತ್ತು ಘಾನಾ ಕೂಡ ಮರಣದಂಡನೆಯನ್ನು ರದ್ದುಗೊಳಿಸುವತ್ತ ಇತ್ತೀಚೆಗೆ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಂಡಿವೆ. ಆದರೆ, ಮರಣದಂಡನೆ ಇನ್ನೂ ರದ್ದಾಗಿಲ್ಲ ಎಂದು ಮಾನವ ಹಕ್ಕುಗಳ ಸಂಘಟನೆಗಳು ಹೇಳಿವೆ.

2017ರಿಂದ ಝಿಂಬ್ವಾಬೆಯ ಅಧ್ಯಕ್ಷರಾಗಿರುವ ಎಮರ್ಸನ್‌ ನಂಗಾಗ್ವ ಅವರು, 1960ರ ದಶಕದಲ್ಲಿ ಬಿಳಿಯ ಅಲ್ಪಸಂಖ್ಯಾತರ ಆಳ್ವಿಕೆಯಿಂದ ದೇಶವನ್ನು ಸ್ವಾತಂತ್ರ್ಯಗೊಳಿಸಿದ ಹೋರಾಟದ ವೇಳೆ ರೈಲು ಸ್ಪೋಟಿಸಿದ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ಬಳಿಕ ಅದು 10 ವರ್ಷಗಳ ಜೈಲು ಶಿಕ್ಷೆಗೆ ಪರಿವರ್ತನೆಗೊಂಡ ಪರಿಣಾಮ ಎಮರ್ಸನ್‌ ಬದುಕುಳಿದರು. ಆಗಿನಿಂದ ಮರಣದಂಡನೆಯ ವಿರುದ್ದ ಅವರು ಕಠಿಣ ನಿಲುವು ಹೊಂದಿದ್ದಾರೆ. ಅದು ಈಗ ಮರಣದಂಡನೆಯ ಸಂಪೂರ್ಣ ರದ್ದತಿಗೆ ಕಾರಣವಾಗಿದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಪ್ರಕಾರ, ವಿಶ್ವದ ಮುಕ್ಕಾಲು ಭಾಗದಷ್ಟು ದೇಶಗಳು ಮರಣದಂಡನೆಯನ್ನು ಶಿಕ್ಷೆಯಾಗಿ ಬಳಸುತ್ತವೆ. ಜಾಗತಿಕವಾಗಿ 113 ದೇಶಗಳಲ್ಲಿ 24 ಆಫ್ರಿಕನ್ ದೇಶಗಳು ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿವೆ ಎಂದು ಅದು ಹೇಳುತ್ತದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ವರದಿ 2023ರಲ್ಲಿ ಜಾಗತಿಕವಾಗಿ 1,153 ತಿಳಿದಿರುವ ಮರಣದಂಡನೆಗಳನ್ನು ದಾಖಲಿಸಿದೆ. ಇದು ಹಿಂದಿನ ವರ್ಷದ 883ಕ್ಕಿಂತ ಹೆಚ್ಚಾಗಿದೆ. ಆದರೂ ಮರಣದಂಡನೆಗಳನ್ನು ಜಾರಿಗೊಳಿಸಿದ ದೇಶಗಳ ಸಂಖ್ಯೆ 20ರಿಂದ 16ಕ್ಕೆ ಇಳಿದಿವೆ. ಉತ್ತರ ಕೊರಿಯಾ, ವಿಯೆಟ್ನಾಂ ಮತ್ತು ಚೀನಾ ಅತಿ ಹೆಚ್ಚು ಮರಣದಂಡನೆ ವಿಧಿಸುವ ರಾಷ್ಟ್ರಗಳು. ಆದರೆ, ಇವುಗಳು ಗೌಪ್ಯತೆಯ ಕಾರಣಕ್ಕೆ ಅಂಕಿ ಅಂಶಗಳನ್ನು ನೀಡುತ್ತಿಲ್ಲ ಎಂದು ಆಮ್ನೆಸ್ಟಿ ಹೇಳಿದೆ.

2023ರಲ್ಲಿ ಅಮ್ನೆಸ್ಟಿ ದಾಖಲಿಸಿದ ಒಟ್ಟು ಮರಣದಂಡನೆಗಳಲ್ಲಿ ಇರಾನ್ ಮತ್ತು ಸೌದಿ ಅರೇಬಿಯಾದ ಪಾಲು ಸುಮಾರು ಶೇಖಡ 90ರಷ್ಟಿದೆ, ನಂತರದ ಸ್ಥಾನಗಳಲ್ಲಿ ಸೊಮಾಲಿಯಾ ಮತ್ತು ಯುಎಸ್‌ ಇದೆ.

ಇದನ್ನೂ ಓದಿ : ಸಿಂಗಾಪುರ ಕೆಫೆಯಲ್ಲಿ ಕ್ಯಾಷಿಯರ್‌ ಕುರಿತು ಜನಾಂಗೀಯ ಟೀಕೆ; ಭಾರತೀಯ ಮೂಲದ ವ್ಯಕ್ತಿಗೆ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...