Homeಮುಖಪುಟಮರಣದಂಡನೆ ರದ್ದುಗೊಳಿಸಿದ ಝಿಂಬಾಬ್ವೆ : ಐತಿಹಾಸಿಕ ನಿರ್ಧಾರ ಸ್ವಾಗತಿಸಿದ ಮಾನವ ಹಕ್ಕು ಸಂಘಟನೆಗಳು

ಮರಣದಂಡನೆ ರದ್ದುಗೊಳಿಸಿದ ಝಿಂಬಾಬ್ವೆ : ಐತಿಹಾಸಿಕ ನಿರ್ಧಾರ ಸ್ವಾಗತಿಸಿದ ಮಾನವ ಹಕ್ಕು ಸಂಘಟನೆಗಳು

- Advertisement -
- Advertisement -

ಮಹತ್ವದ ಬೆಳವಣಿಗೆಯಲ್ಲಿ ಝಿಂಬಾಬ್ವೆ ರಾಷ್ಟ್ರದಲ್ಲಿ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದು ಎರಡು ದಶಕಗಳ ಬಹು ನಿರೀಕ್ಷಿತ ನಿರ್ಧಾರವಾಗಿತ್ತು.

1960ರ ದಶಕದ ಸ್ವಾತಂತ್ರ್ಯ ಸಮರದ ಸಮಯದಲ್ಲಿ ಸ್ವತಃ ಮರಣದಂಡನೆಗೆ ಗುರಿಯಾಗಿ, ಬಳಿಕ ಅದರಿಂದ ಪಾರಾಗಿದ್ದ ಅಧ್ಯಕ್ಷ ಎಮರ್ಸನ್‌ ನಂಗಾಗ್ವ ಅವರು ಸಂಸತ್ತಿನಲ್ಲಿ ಮಂಡಿಸಿದ ಮಸೂದೆ ಅಂಗೀಕಾರಗೊಂಡಿದೆ.  ಈ ಮೂಲಕ ಮರಣದಂಡನೆ ಶಿಕ್ಷೆ ರದ್ದಾಗಿದೆ.

ಪ್ರಸ್ತುತ ಝಿಂಬಾಬ್ವೆಯಲ್ಲಿ ಸುಮಾರು 60 ಕೈದಿಗಳು ಮರಣದಂಡನೆ ಶಿಕ್ಷೆ ಘೋಷಣೆಯಾದವರಿದ್ದಾರೆ. ಹೊಸ ಕಾನೂನಿನ ಪ್ರಕಾರ ಅವರ ಶಿಕ್ಷೆ ಜೀವಾವಧಿಗೆ ಪರಿವರ್ತನೆಯಾಗುವ ಸಾಧ್ಯತೆ ಇದೆ.

ಝಿಂಬಾಬ್ವೆಯಲ್ಲಿ 2005ರಲ್ಲಿ ಕೊನೆಯದಾಗಿ ವ್ಯಕ್ತಿಯೊಬ್ಬರನ್ನು ಗಲ್ಲಿಗೇರಿಸಲಾಗಿತ್ತು. ಆ ಬಳಿಕ ಈ ರೀತಿಯ ಶಿಕ್ಷೆ ಜಾರಿಯಾಗಿಲ್ಲ. ವರದಿಗಳ ಪ್ರಕಾರ, ಮರಣದಂಡನೆ ಶಿಕ್ಷೆ ವಿಧಿಸುವ ಕೆಲಸ ಮಾಡಲು ಆ ದೇಶದಲ್ಲಿ ಯಾರೂ ಮುಂದೆ ಬರುತ್ತಿಲ್ಲವಂತೆ.

ಝಿಂಬಾಬ್ವೆ ದೇಶ ತೆಗೆದುಕೊಂಡಿರುವ ಐತಿಹಾಸಿಕ ನಿರ್ಧಾರವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಸ್ವಾಗತಿಸಿದ್ದು, “ಇದು ಈ ಪ್ರದೇಶದಲ್ಲಿ ನಿರ್ಮೂಲನವಾದಿ ಚಳವಳಿಗೆ ಭರವಸೆಯ ದಾರಿ ದೀಪವಾಗಿದೆ” ಎಂದಿದೆ.

ಇತರ ಆಫ್ರಿಕನ್ ದೇಶಗಳಾದ ಕೀನ್ಯಾ, ಲೈಬೀರಿಯಾ ಮತ್ತು ಘಾನಾ ಕೂಡ ಮರಣದಂಡನೆಯನ್ನು ರದ್ದುಗೊಳಿಸುವತ್ತ ಇತ್ತೀಚೆಗೆ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಂಡಿವೆ. ಆದರೆ, ಮರಣದಂಡನೆ ಇನ್ನೂ ರದ್ದಾಗಿಲ್ಲ ಎಂದು ಮಾನವ ಹಕ್ಕುಗಳ ಸಂಘಟನೆಗಳು ಹೇಳಿವೆ.

2017ರಿಂದ ಝಿಂಬ್ವಾಬೆಯ ಅಧ್ಯಕ್ಷರಾಗಿರುವ ಎಮರ್ಸನ್‌ ನಂಗಾಗ್ವ ಅವರು, 1960ರ ದಶಕದಲ್ಲಿ ಬಿಳಿಯ ಅಲ್ಪಸಂಖ್ಯಾತರ ಆಳ್ವಿಕೆಯಿಂದ ದೇಶವನ್ನು ಸ್ವಾತಂತ್ರ್ಯಗೊಳಿಸಿದ ಹೋರಾಟದ ವೇಳೆ ರೈಲು ಸ್ಪೋಟಿಸಿದ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ಬಳಿಕ ಅದು 10 ವರ್ಷಗಳ ಜೈಲು ಶಿಕ್ಷೆಗೆ ಪರಿವರ್ತನೆಗೊಂಡ ಪರಿಣಾಮ ಎಮರ್ಸನ್‌ ಬದುಕುಳಿದರು. ಆಗಿನಿಂದ ಮರಣದಂಡನೆಯ ವಿರುದ್ದ ಅವರು ಕಠಿಣ ನಿಲುವು ಹೊಂದಿದ್ದಾರೆ. ಅದು ಈಗ ಮರಣದಂಡನೆಯ ಸಂಪೂರ್ಣ ರದ್ದತಿಗೆ ಕಾರಣವಾಗಿದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಪ್ರಕಾರ, ವಿಶ್ವದ ಮುಕ್ಕಾಲು ಭಾಗದಷ್ಟು ದೇಶಗಳು ಮರಣದಂಡನೆಯನ್ನು ಶಿಕ್ಷೆಯಾಗಿ ಬಳಸುತ್ತವೆ. ಜಾಗತಿಕವಾಗಿ 113 ದೇಶಗಳಲ್ಲಿ 24 ಆಫ್ರಿಕನ್ ದೇಶಗಳು ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿವೆ ಎಂದು ಅದು ಹೇಳುತ್ತದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ವರದಿ 2023ರಲ್ಲಿ ಜಾಗತಿಕವಾಗಿ 1,153 ತಿಳಿದಿರುವ ಮರಣದಂಡನೆಗಳನ್ನು ದಾಖಲಿಸಿದೆ. ಇದು ಹಿಂದಿನ ವರ್ಷದ 883ಕ್ಕಿಂತ ಹೆಚ್ಚಾಗಿದೆ. ಆದರೂ ಮರಣದಂಡನೆಗಳನ್ನು ಜಾರಿಗೊಳಿಸಿದ ದೇಶಗಳ ಸಂಖ್ಯೆ 20ರಿಂದ 16ಕ್ಕೆ ಇಳಿದಿವೆ. ಉತ್ತರ ಕೊರಿಯಾ, ವಿಯೆಟ್ನಾಂ ಮತ್ತು ಚೀನಾ ಅತಿ ಹೆಚ್ಚು ಮರಣದಂಡನೆ ವಿಧಿಸುವ ರಾಷ್ಟ್ರಗಳು. ಆದರೆ, ಇವುಗಳು ಗೌಪ್ಯತೆಯ ಕಾರಣಕ್ಕೆ ಅಂಕಿ ಅಂಶಗಳನ್ನು ನೀಡುತ್ತಿಲ್ಲ ಎಂದು ಆಮ್ನೆಸ್ಟಿ ಹೇಳಿದೆ.

2023ರಲ್ಲಿ ಅಮ್ನೆಸ್ಟಿ ದಾಖಲಿಸಿದ ಒಟ್ಟು ಮರಣದಂಡನೆಗಳಲ್ಲಿ ಇರಾನ್ ಮತ್ತು ಸೌದಿ ಅರೇಬಿಯಾದ ಪಾಲು ಸುಮಾರು ಶೇಖಡ 90ರಷ್ಟಿದೆ, ನಂತರದ ಸ್ಥಾನಗಳಲ್ಲಿ ಸೊಮಾಲಿಯಾ ಮತ್ತು ಯುಎಸ್‌ ಇದೆ.

ಇದನ್ನೂ ಓದಿ : ಸಿಂಗಾಪುರ ಕೆಫೆಯಲ್ಲಿ ಕ್ಯಾಷಿಯರ್‌ ಕುರಿತು ಜನಾಂಗೀಯ ಟೀಕೆ; ಭಾರತೀಯ ಮೂಲದ ವ್ಯಕ್ತಿಗೆ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...