Homeಮುಖಪುಟಮರಣದಂಡನೆ ರದ್ದುಗೊಳಿಸಿದ ಝಿಂಬಾಬ್ವೆ : ಐತಿಹಾಸಿಕ ನಿರ್ಧಾರ ಸ್ವಾಗತಿಸಿದ ಮಾನವ ಹಕ್ಕು ಸಂಘಟನೆಗಳು

ಮರಣದಂಡನೆ ರದ್ದುಗೊಳಿಸಿದ ಝಿಂಬಾಬ್ವೆ : ಐತಿಹಾಸಿಕ ನಿರ್ಧಾರ ಸ್ವಾಗತಿಸಿದ ಮಾನವ ಹಕ್ಕು ಸಂಘಟನೆಗಳು

- Advertisement -
- Advertisement -

ಮಹತ್ವದ ಬೆಳವಣಿಗೆಯಲ್ಲಿ ಝಿಂಬಾಬ್ವೆ ರಾಷ್ಟ್ರದಲ್ಲಿ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದು ಎರಡು ದಶಕಗಳ ಬಹು ನಿರೀಕ್ಷಿತ ನಿರ್ಧಾರವಾಗಿತ್ತು.

1960ರ ದಶಕದ ಸ್ವಾತಂತ್ರ್ಯ ಸಮರದ ಸಮಯದಲ್ಲಿ ಸ್ವತಃ ಮರಣದಂಡನೆಗೆ ಗುರಿಯಾಗಿ, ಬಳಿಕ ಅದರಿಂದ ಪಾರಾಗಿದ್ದ ಅಧ್ಯಕ್ಷ ಎಮರ್ಸನ್‌ ನಂಗಾಗ್ವ ಅವರು ಸಂಸತ್ತಿನಲ್ಲಿ ಮಂಡಿಸಿದ ಮಸೂದೆ ಅಂಗೀಕಾರಗೊಂಡಿದೆ.  ಈ ಮೂಲಕ ಮರಣದಂಡನೆ ಶಿಕ್ಷೆ ರದ್ದಾಗಿದೆ.

ಪ್ರಸ್ತುತ ಝಿಂಬಾಬ್ವೆಯಲ್ಲಿ ಸುಮಾರು 60 ಕೈದಿಗಳು ಮರಣದಂಡನೆ ಶಿಕ್ಷೆ ಘೋಷಣೆಯಾದವರಿದ್ದಾರೆ. ಹೊಸ ಕಾನೂನಿನ ಪ್ರಕಾರ ಅವರ ಶಿಕ್ಷೆ ಜೀವಾವಧಿಗೆ ಪರಿವರ್ತನೆಯಾಗುವ ಸಾಧ್ಯತೆ ಇದೆ.

ಝಿಂಬಾಬ್ವೆಯಲ್ಲಿ 2005ರಲ್ಲಿ ಕೊನೆಯದಾಗಿ ವ್ಯಕ್ತಿಯೊಬ್ಬರನ್ನು ಗಲ್ಲಿಗೇರಿಸಲಾಗಿತ್ತು. ಆ ಬಳಿಕ ಈ ರೀತಿಯ ಶಿಕ್ಷೆ ಜಾರಿಯಾಗಿಲ್ಲ. ವರದಿಗಳ ಪ್ರಕಾರ, ಮರಣದಂಡನೆ ಶಿಕ್ಷೆ ವಿಧಿಸುವ ಕೆಲಸ ಮಾಡಲು ಆ ದೇಶದಲ್ಲಿ ಯಾರೂ ಮುಂದೆ ಬರುತ್ತಿಲ್ಲವಂತೆ.

ಝಿಂಬಾಬ್ವೆ ದೇಶ ತೆಗೆದುಕೊಂಡಿರುವ ಐತಿಹಾಸಿಕ ನಿರ್ಧಾರವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಸ್ವಾಗತಿಸಿದ್ದು, “ಇದು ಈ ಪ್ರದೇಶದಲ್ಲಿ ನಿರ್ಮೂಲನವಾದಿ ಚಳವಳಿಗೆ ಭರವಸೆಯ ದಾರಿ ದೀಪವಾಗಿದೆ” ಎಂದಿದೆ.

ಇತರ ಆಫ್ರಿಕನ್ ದೇಶಗಳಾದ ಕೀನ್ಯಾ, ಲೈಬೀರಿಯಾ ಮತ್ತು ಘಾನಾ ಕೂಡ ಮರಣದಂಡನೆಯನ್ನು ರದ್ದುಗೊಳಿಸುವತ್ತ ಇತ್ತೀಚೆಗೆ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಂಡಿವೆ. ಆದರೆ, ಮರಣದಂಡನೆ ಇನ್ನೂ ರದ್ದಾಗಿಲ್ಲ ಎಂದು ಮಾನವ ಹಕ್ಕುಗಳ ಸಂಘಟನೆಗಳು ಹೇಳಿವೆ.

2017ರಿಂದ ಝಿಂಬ್ವಾಬೆಯ ಅಧ್ಯಕ್ಷರಾಗಿರುವ ಎಮರ್ಸನ್‌ ನಂಗಾಗ್ವ ಅವರು, 1960ರ ದಶಕದಲ್ಲಿ ಬಿಳಿಯ ಅಲ್ಪಸಂಖ್ಯಾತರ ಆಳ್ವಿಕೆಯಿಂದ ದೇಶವನ್ನು ಸ್ವಾತಂತ್ರ್ಯಗೊಳಿಸಿದ ಹೋರಾಟದ ವೇಳೆ ರೈಲು ಸ್ಪೋಟಿಸಿದ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ಬಳಿಕ ಅದು 10 ವರ್ಷಗಳ ಜೈಲು ಶಿಕ್ಷೆಗೆ ಪರಿವರ್ತನೆಗೊಂಡ ಪರಿಣಾಮ ಎಮರ್ಸನ್‌ ಬದುಕುಳಿದರು. ಆಗಿನಿಂದ ಮರಣದಂಡನೆಯ ವಿರುದ್ದ ಅವರು ಕಠಿಣ ನಿಲುವು ಹೊಂದಿದ್ದಾರೆ. ಅದು ಈಗ ಮರಣದಂಡನೆಯ ಸಂಪೂರ್ಣ ರದ್ದತಿಗೆ ಕಾರಣವಾಗಿದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಪ್ರಕಾರ, ವಿಶ್ವದ ಮುಕ್ಕಾಲು ಭಾಗದಷ್ಟು ದೇಶಗಳು ಮರಣದಂಡನೆಯನ್ನು ಶಿಕ್ಷೆಯಾಗಿ ಬಳಸುತ್ತವೆ. ಜಾಗತಿಕವಾಗಿ 113 ದೇಶಗಳಲ್ಲಿ 24 ಆಫ್ರಿಕನ್ ದೇಶಗಳು ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿವೆ ಎಂದು ಅದು ಹೇಳುತ್ತದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ವರದಿ 2023ರಲ್ಲಿ ಜಾಗತಿಕವಾಗಿ 1,153 ತಿಳಿದಿರುವ ಮರಣದಂಡನೆಗಳನ್ನು ದಾಖಲಿಸಿದೆ. ಇದು ಹಿಂದಿನ ವರ್ಷದ 883ಕ್ಕಿಂತ ಹೆಚ್ಚಾಗಿದೆ. ಆದರೂ ಮರಣದಂಡನೆಗಳನ್ನು ಜಾರಿಗೊಳಿಸಿದ ದೇಶಗಳ ಸಂಖ್ಯೆ 20ರಿಂದ 16ಕ್ಕೆ ಇಳಿದಿವೆ. ಉತ್ತರ ಕೊರಿಯಾ, ವಿಯೆಟ್ನಾಂ ಮತ್ತು ಚೀನಾ ಅತಿ ಹೆಚ್ಚು ಮರಣದಂಡನೆ ವಿಧಿಸುವ ರಾಷ್ಟ್ರಗಳು. ಆದರೆ, ಇವುಗಳು ಗೌಪ್ಯತೆಯ ಕಾರಣಕ್ಕೆ ಅಂಕಿ ಅಂಶಗಳನ್ನು ನೀಡುತ್ತಿಲ್ಲ ಎಂದು ಆಮ್ನೆಸ್ಟಿ ಹೇಳಿದೆ.

2023ರಲ್ಲಿ ಅಮ್ನೆಸ್ಟಿ ದಾಖಲಿಸಿದ ಒಟ್ಟು ಮರಣದಂಡನೆಗಳಲ್ಲಿ ಇರಾನ್ ಮತ್ತು ಸೌದಿ ಅರೇಬಿಯಾದ ಪಾಲು ಸುಮಾರು ಶೇಖಡ 90ರಷ್ಟಿದೆ, ನಂತರದ ಸ್ಥಾನಗಳಲ್ಲಿ ಸೊಮಾಲಿಯಾ ಮತ್ತು ಯುಎಸ್‌ ಇದೆ.

ಇದನ್ನೂ ಓದಿ : ಸಿಂಗಾಪುರ ಕೆಫೆಯಲ್ಲಿ ಕ್ಯಾಷಿಯರ್‌ ಕುರಿತು ಜನಾಂಗೀಯ ಟೀಕೆ; ಭಾರತೀಯ ಮೂಲದ ವ್ಯಕ್ತಿಗೆ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...