Homeಅಂತರಾಷ್ಟ್ರೀಯಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

ಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

- Advertisement -
- Advertisement -

ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಭಾರತೀಯ ಮೂಲದ ಎಡಪಂಥೀಯ ಸಮಾಜವಾದಿ, 34 ವರ್ಷದ ಝೊಹ್ರಾನ್ ಕ್ವಾಮೆ ಮಮ್ದಾನಿ ಜಯಗಳಿಸಿದ್ದಾರೆ. ಈ ಮೂಲಕ ಅಮೆರಿಕದ ಅತಿದೊಡ್ಡ ನಗರದ ಮೊದಲ ಮುಸ್ಲಿಂ ಮೇಯರ್ ಆಗಿ ಇತಿಹಾಸ ಸೃಷ್ಟಿಸಿದ್ದಾರೆ.

ಮಂಗಳವಾರ (ನವೆಂಬರ್ 4, 2025) ನಡೆದ ಚುನಾವಣೆಯಲ್ಲಿ ಒಟ್ಟು 20 ಲಕ್ಷ ಮತಗಳು ಚಲಾವಣೆಯಾಗಿದ್ದು, ಅದರಲ್ಲಿ ಅತಿ ಹೆಚ್ಚು, ಅಂದರೆ ಶೇಕಡ 50ರಷ್ಟು ಅಥವಾ 10 ಲಕ್ಷ ಮತಗಳನ್ನು ಪಡೆಯುವ ಮೂಲಕ ಮಮ್ದಾನಿ ಗೆಲುವು ಸಾಧಿಸಿದ್ದಾರೆ.

ಅವರ ಪ್ರತಿಸ್ಪರ್ಧಿಗಳಾದ ಸ್ವತಂತ್ರ ಅಭ್ಯರ್ಥಿ ಆಂಡ್ರ್ಯೂ ಕ್ಯೂಮೋ ಪರ ಶೇಕಡ 40ರಷ್ಟು ಅಥವಾ 8 ಲಕ್ಷ ಮತಗಳು ಚಲಾವಣೆಯಾಗಿವೆ. ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಕರ್ಟಿಸ್ ಸ್ಲಿವಾ ಪರ ಕೇವಲ 10 ಶೇಕಡ ಜನರು ಮಾತ್ರ ಮತ ಹಾಕಿದ್ದಾರೆ. ಇನ್ನು ಭ್ರಷ್ಟಾಚಾರದ ಆರೋಪ ಹೊತ್ತು ಮೇಯರ್ ಸ್ಥಾನದಿಂದ ನಿರ್ಗಮಿಸಿದ್ದ ಸ್ವತಂತ್ರ ಅಭ್ಯರ್ಥಿ ಎರಿಕ್ ಆಡಮ್ಸ್ ಈ ಬಾರಿ ಚುನಾವಣೆಯಿಂದ ಹೊರಗುಳಿದಿದ್ದರು.

2025ರ ಜೂನ್‌ನಲ್ಲಿ ಎಲ್ಲಾ ಪಕ್ಷಗಳ ಒಳಗೆ ಯಾರು ಅಭ್ಯರ್ಥಿಯಾಗಬೇಕು ಎಂಬ ಪ್ರಾಥಮಿಕ ಚುನಾವಣೆ ನಡೆದಿತ್ತು. ಡೆಮಾಕ್ರಟಿಕ್ ಪಕ್ಷದಲ್ಲಿ ಆಂಡ್ರ್ಯೂ ಕ್ಯೂಮೋ ವಿರುದ್ದ ಮಮ್ದಾನಿ ಗೆದ್ದಿದ್ದರು. ನವೆಂಬರ್ 4ರಂದು ಸಾರ್ವತ್ರಿಕ ಚುನಾವಣೆ (ಜನರಲ್ ಎಲೆಕ್ಷನ್) ನಡೆದಿದೆ. ಇದರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕ್ಯೂಮೋ ಅವರನ್ನು ಮತ್ತೆ ಸೋಲಿಸಿ ಮಮ್ದಾನಿ ಗೆಲುವಿನ ನಗೆ ಬೀರಿದ್ದಾರೆ.

ಈ ಬಾರಿ ಚಲಾವಣೆಯಾದ 20 ಲಕ್ಷ ಮತಗಳು ಕಳೆದ 40 ವರ್ಷಗಳಲ್ಲಿ ಅತ್ಯಧಿಕ ಎಂದು ವರದಿಗಳು ಹೇಳಿವೆ. ಶೇಕಡ 80ರಷ್ಟು ಮತಗಳು ಎಣಿಕೆಯಾದ ಬಳಿಕ, ಮಮ್ದಾನಿ ಗೆಲುವಿನ ಕುರಿತು ಅಂತಾರಾಷ್ಟ್ರೀಯ ಮಾಧ್ಯಮಗಳಾದ ಎನ್‌ಬಿಸಿ, ಸಿಎನ್‌ಎನ್‌ ಮತ್ತು ಪೊಲಿಟಿಕೋ ವರದಿ ಮಾಡಿವೆ.

ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮಮ್ದಾನಿ ಡೆಮಾಕ್ರಟಿಕ್ ಪಕ್ಷದ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಟೀಕಿಸಿದ್ದರು. ಮಮ್ದಾನಿ ‘ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ’ ಎಂದು‌ ಜರೆದಿದ್ದರು.

ಅಮೆರಿಕದ ಕಾಂಗ್ರೆಸ್ (ಸಂಸತ್‌) ಸದಸ್ಯೆ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕೊರ್ಟೆಝ್ (ಎಒಸಿ) ಮತ್ತು ಸೆನೆಟರ್ ಚಕ್ ಶುಮರ್ ಸೇರಿದಂತೆ, ಮಮ್ದಾನಿ‌ ಅವರನ್ನು ಬೆಂಬಲಿಸಿದ ಇತರ ಪ್ರಗತಿಪರ ನಾಯಕರ ವಿರುದ್ದವೂ ಟ್ರಂಪ್‌ ಕಿಡಿಕಾರಿದ್ದರು.

“ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚರಾದ ಝೊಹ್ರಾನ್ ಮಮ್ದಾನಿ‌ ಅವರನ್ನು ನ್ಯೂಯಾರ್ಕ್‌ ನಗರದ ಮೇಯರ್‌ ಅಭ್ಯರ್ಥಿಯ ಪ್ರಾಥಮಿಕ ಚುನಾವಣೆಯಲ್ಲಿ ಆಯ್ಕೆ ಮಾಡುವ ಮೂಲಕ, ಡೆಮೋಕ್ರಾಟ್‌ಗಳು ತಮ್ಮ ನಿಜ ಬಣ್ಣ ಬಯಲು ಮಾಡಿದ್ದಾರೆ ” ಎಂದು ಟ್ರಂಪ್‌ ತಮ್ಮ ಟ್ರುಥ್ ಸೋಶಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಮಾಡಿದ್ದರು.

“ಮಮ್ದಾನಿ ಭಯಾನಕವಾಗಿ ಕಾಣುತ್ತಾರೆ, ಅವರ ಧ್ವನಿ ಗಡಸುತನದಿಂದ ಕೂಡಿದೆ, ಅವರು ತುಂಬಾ ಬುದ್ಧಿವಂತರಲ್ಲ. ಆದರೆ, ಡೆಮೊಕ್ರಾಟ್‌ಗಳು ಇಂತಹವರನ್ನು ಬೆಂಬಲಿಸುತ್ತಿದ್ದಾರೆ” ಎಂದು ಟ್ರಂಪ್‌ ತೀವ್ರ ಅಸಮಾಧಾನ ಹೊರಹಾಕಿದ್ದರು.

ಭಾರತದ ಪ್ರಖ್ಯಾತ ಸಿನಿಮಾ ನಿರ್ಮಾಪಕಿ ಮೀರಾ ನಾಯರ್ ಮತ್ತು ಭಾರತೀಯ ಮೂಲದ ಉಗಾಂಡಾದ ಮಾರ್ಕ್ಸ್‌ವಾದಿ ವಿದ್ವಾಂಸ ಮಹಮೂದ್ ಮಮ್ದಾನಿ ಅವರ ಮಗನಾಗಿರುವ ಝೊಹ್ರಾನ್ ಮಮ್ದಾನಿ, 1991ರಲ್ಲಿ ಆಫ್ರಿಕಾದ ಉಗಾಂಡದಲ್ಲಿ ಜನಿಸಿದವರು. ನಂತರ ಅವರು ಅಮೆರಿಕದ ನ್ಯೂಯಾರ್ಕ್ ನಗರದಲ್ಲಾಗಿದೆ ಬೆಳೆದದ್ದು.

ಮಮ್ದಾನಿ ಅವರ ರಾಜಕೀಯ ಜೀವನ 2018ರಲ್ಲಿ ಆರಂಭವಾಯಿತು. ಆದರೆ, ಆ ವರ್ಷ ನ್ಯೂಯಾರ್ಕ್ ರಾಜ್ಯ ಸಭೆಯ ಪ್ರಾಥಮಿಕ ಚುನಾವಣೆಯಲ್ಲಿ ಅವರು ಸೋತರು. 2020ರಲ್ಲಿ ಡೆಮಾಕ್ರಟಿಕ್ ಸೋಷಲಿಸ್ಟ್ಸ್ ಆಫ್ ಅಮೆರಿಕ (ಡಿಎಸ್‌ಎ) ಬೆಂಬಲದೊಂದಿಗೆ ಅದೇ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಿ, ಪ್ರಾಥಮಿಕ ಚುನಾವಣೆಯಲ್ಲಿ ಶೇಕಡ 55ರಷ್ಟು ಮತ ಪಡೆದು ಗೆದ್ದರು. ನಂತರ ಸಾರ್ವತ್ರಿಕ ಚುನಾವಣೆಯಲ್ಲಿ (ಜನರಲ್ ಎಲೆಕ್ಷನ್‌) ಶೇಕಡ 80ಕ್ಕಿಂತ ಹೆಚ್ಚು ಮತಗಳನ್ನು ಪಡೆದು ಗೆಲ್ಲುವ ಮೂಲಕ ಕ್ವೀನ್ಸ್‌ನ 36ನೇ ಜಿಲ್ಲೆಯ ವಿಧಾನಸಭಾ ಸದಸ್ಯರಾದರು.

2024ರ ಡಿಸೆಂಬರ್‌ನಲ್ಲಿ ಮೇಯರ್ ಚುನಾವಣೆಗೆ ಪ್ರಚಾರ ಆರಂಭಿಸಿದ ಮಮ್ದಾನಿ, ಜೂನ್ 2025ರ ಪ್ರಾಥಮಿಕ ಚುನಾವಣೆಯಲ್ಲಿ ಹಿಂದಿನ ಗವರ್ನರ್ ಆಂಡ್ರ್ಯೂ ಕ್ಯೂಮೋವನ್ನು ಶೇಕಡ 52ರಷ್ಟು ಮತಗಳ ಅಂತರದಿಂದ ಸೋಲಿಸಿದರು. ನವೆಂಬರ್ 4, 2025ರ ಸಾರ್ವವತ್ರಿಕ ಚುನಾವಣೆಯಲ್ಲಿ ಶೇಕಡ 50.2ರಷ್ಟು ಮತಗಳನ್ನು ಪಡೆದು ಕ್ಯೂಮೋವನ್ನು ಮತ್ತೆ ಸೋಲಿಸಿ, ನ್ಯೂಯಾರ್ಕ್‌ ನಗರದ ಮೊದಲ ಮುಸ್ಲಿಂ ಮತ್ತು 100 ವರ್ಷಗಳಲ್ಲಿ ಅತ್ಯಂತ ಕಿರಿಯ ಮೇಯರ್ ಆದರು.

2026ರ ಜನವರಿ 1ರಂದು ಅಧಿಕಾರ ಸ್ವೀಕರಿಸಲಿರುವ ಮಮ್ದಾನಿ, ತಳಹಂತದ ಧನಸಹಾಯ, ಯುವಕರ ಬೆಂಬಲ ಮತ್ತು ಟಿಕ್‌ ಟಾಕ್-ಆಧಾರಿತ ಪ್ರಚಾರದೊಂದಿಗೆ ಸೋಷಲಿಸ್ಟ್ ರಾಜಕಾರಣದ ಹೊಸ ಮುಖವಾಗಿ ಹೊರಹೊಮ್ಮಿದ್ದಾರೆ.

ಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ...