Homeಅಂತರಾಷ್ಟ್ರೀಯಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

ಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

- Advertisement -
- Advertisement -

ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಭಾರತೀಯ ಮೂಲದ ಎಡಪಂಥೀಯ ಸಮಾಜವಾದಿ, 34 ವರ್ಷದ ಝೊಹ್ರಾನ್ ಕ್ವಾಮೆ ಮಮ್ದಾನಿ ಜಯಗಳಿಸಿದ್ದಾರೆ. ಈ ಮೂಲಕ ಅಮೆರಿಕದ ಅತಿದೊಡ್ಡ ನಗರದ ಮೊದಲ ಮುಸ್ಲಿಂ ಮೇಯರ್ ಆಗಿ ಇತಿಹಾಸ ಸೃಷ್ಟಿಸಿದ್ದಾರೆ.

ಮಂಗಳವಾರ (ನವೆಂಬರ್ 4, 2025) ನಡೆದ ಚುನಾವಣೆಯಲ್ಲಿ ಒಟ್ಟು 20 ಲಕ್ಷ ಮತಗಳು ಚಲಾವಣೆಯಾಗಿದ್ದು, ಅದರಲ್ಲಿ ಅತಿ ಹೆಚ್ಚು, ಅಂದರೆ ಶೇಕಡ 50ರಷ್ಟು ಅಥವಾ 10 ಲಕ್ಷ ಮತಗಳನ್ನು ಪಡೆಯುವ ಮೂಲಕ ಮಮ್ದಾನಿ ಗೆಲುವು ಸಾಧಿಸಿದ್ದಾರೆ.

ಅವರ ಪ್ರತಿಸ್ಪರ್ಧಿಗಳಾದ ಸ್ವತಂತ್ರ ಅಭ್ಯರ್ಥಿ ಆಂಡ್ರ್ಯೂ ಕ್ಯೂಮೋ ಪರ ಶೇಕಡ 40ರಷ್ಟು ಅಥವಾ 8 ಲಕ್ಷ ಮತಗಳು ಚಲಾವಣೆಯಾಗಿವೆ. ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಕರ್ಟಿಸ್ ಸ್ಲಿವಾ ಪರ ಕೇವಲ 10 ಶೇಕಡ ಜನರು ಮಾತ್ರ ಮತ ಹಾಕಿದ್ದಾರೆ. ಇನ್ನು ಭ್ರಷ್ಟಾಚಾರದ ಆರೋಪ ಹೊತ್ತು ಮೇಯರ್ ಸ್ಥಾನದಿಂದ ನಿರ್ಗಮಿಸಿದ್ದ ಸ್ವತಂತ್ರ ಅಭ್ಯರ್ಥಿ ಎರಿಕ್ ಆಡಮ್ಸ್ ಈ ಬಾರಿ ಚುನಾವಣೆಯಿಂದ ಹೊರಗುಳಿದಿದ್ದರು.

2025ರ ಜೂನ್‌ನಲ್ಲಿ ಎಲ್ಲಾ ಪಕ್ಷಗಳ ಒಳಗೆ ಯಾರು ಅಭ್ಯರ್ಥಿಯಾಗಬೇಕು ಎಂಬ ಪ್ರಾಥಮಿಕ ಚುನಾವಣೆ ನಡೆದಿತ್ತು. ಡೆಮಾಕ್ರಟಿಕ್ ಪಕ್ಷದಲ್ಲಿ ಆಂಡ್ರ್ಯೂ ಕ್ಯೂಮೋ ವಿರುದ್ದ ಮಮ್ದಾನಿ ಗೆದ್ದಿದ್ದರು. ನವೆಂಬರ್ 4ರಂದು ಸಾರ್ವತ್ರಿಕ ಚುನಾವಣೆ (ಜನರಲ್ ಎಲೆಕ್ಷನ್) ನಡೆದಿದೆ. ಇದರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕ್ಯೂಮೋ ಅವರನ್ನು ಮತ್ತೆ ಸೋಲಿಸಿ ಮಮ್ದಾನಿ ಗೆಲುವಿನ ನಗೆ ಬೀರಿದ್ದಾರೆ.

ಈ ಬಾರಿ ಚಲಾವಣೆಯಾದ 20 ಲಕ್ಷ ಮತಗಳು ಕಳೆದ 40 ವರ್ಷಗಳಲ್ಲಿ ಅತ್ಯಧಿಕ ಎಂದು ವರದಿಗಳು ಹೇಳಿವೆ. ಶೇಕಡ 80ರಷ್ಟು ಮತಗಳು ಎಣಿಕೆಯಾದ ಬಳಿಕ, ಮಮ್ದಾನಿ ಗೆಲುವಿನ ಕುರಿತು ಅಂತಾರಾಷ್ಟ್ರೀಯ ಮಾಧ್ಯಮಗಳಾದ ಎನ್‌ಬಿಸಿ, ಸಿಎನ್‌ಎನ್‌ ಮತ್ತು ಪೊಲಿಟಿಕೋ ವರದಿ ಮಾಡಿವೆ.

ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮಮ್ದಾನಿ ಡೆಮಾಕ್ರಟಿಕ್ ಪಕ್ಷದ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಟೀಕಿಸಿದ್ದರು. ಮಮ್ದಾನಿ ‘ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ’ ಎಂದು‌ ಜರೆದಿದ್ದರು.

ಅಮೆರಿಕದ ಕಾಂಗ್ರೆಸ್ (ಸಂಸತ್‌) ಸದಸ್ಯೆ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕೊರ್ಟೆಝ್ (ಎಒಸಿ) ಮತ್ತು ಸೆನೆಟರ್ ಚಕ್ ಶುಮರ್ ಸೇರಿದಂತೆ, ಮಮ್ದಾನಿ‌ ಅವರನ್ನು ಬೆಂಬಲಿಸಿದ ಇತರ ಪ್ರಗತಿಪರ ನಾಯಕರ ವಿರುದ್ದವೂ ಟ್ರಂಪ್‌ ಕಿಡಿಕಾರಿದ್ದರು.

“ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚರಾದ ಝೊಹ್ರಾನ್ ಮಮ್ದಾನಿ‌ ಅವರನ್ನು ನ್ಯೂಯಾರ್ಕ್‌ ನಗರದ ಮೇಯರ್‌ ಅಭ್ಯರ್ಥಿಯ ಪ್ರಾಥಮಿಕ ಚುನಾವಣೆಯಲ್ಲಿ ಆಯ್ಕೆ ಮಾಡುವ ಮೂಲಕ, ಡೆಮೋಕ್ರಾಟ್‌ಗಳು ತಮ್ಮ ನಿಜ ಬಣ್ಣ ಬಯಲು ಮಾಡಿದ್ದಾರೆ ” ಎಂದು ಟ್ರಂಪ್‌ ತಮ್ಮ ಟ್ರುಥ್ ಸೋಶಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಮಾಡಿದ್ದರು.

“ಮಮ್ದಾನಿ ಭಯಾನಕವಾಗಿ ಕಾಣುತ್ತಾರೆ, ಅವರ ಧ್ವನಿ ಗಡಸುತನದಿಂದ ಕೂಡಿದೆ, ಅವರು ತುಂಬಾ ಬುದ್ಧಿವಂತರಲ್ಲ. ಆದರೆ, ಡೆಮೊಕ್ರಾಟ್‌ಗಳು ಇಂತಹವರನ್ನು ಬೆಂಬಲಿಸುತ್ತಿದ್ದಾರೆ” ಎಂದು ಟ್ರಂಪ್‌ ತೀವ್ರ ಅಸಮಾಧಾನ ಹೊರಹಾಕಿದ್ದರು.

ಭಾರತದ ಪ್ರಖ್ಯಾತ ಸಿನಿಮಾ ನಿರ್ಮಾಪಕಿ ಮೀರಾ ನಾಯರ್ ಮತ್ತು ಭಾರತೀಯ ಮೂಲದ ಉಗಾಂಡಾದ ಮಾರ್ಕ್ಸ್‌ವಾದಿ ವಿದ್ವಾಂಸ ಮಹಮೂದ್ ಮಮ್ದಾನಿ ಅವರ ಮಗನಾಗಿರುವ ಝೊಹ್ರಾನ್ ಮಮ್ದಾನಿ, 1991ರಲ್ಲಿ ಆಫ್ರಿಕಾದ ಉಗಾಂಡದಲ್ಲಿ ಜನಿಸಿದವರು. ನಂತರ ಅವರು ಅಮೆರಿಕದ ನ್ಯೂಯಾರ್ಕ್ ನಗರದಲ್ಲಾಗಿದೆ ಬೆಳೆದದ್ದು.

ಮಮ್ದಾನಿ ಅವರ ರಾಜಕೀಯ ಜೀವನ 2018ರಲ್ಲಿ ಆರಂಭವಾಯಿತು. ಆದರೆ, ಆ ವರ್ಷ ನ್ಯೂಯಾರ್ಕ್ ರಾಜ್ಯ ಸಭೆಯ ಪ್ರಾಥಮಿಕ ಚುನಾವಣೆಯಲ್ಲಿ ಅವರು ಸೋತರು. 2020ರಲ್ಲಿ ಡೆಮಾಕ್ರಟಿಕ್ ಸೋಷಲಿಸ್ಟ್ಸ್ ಆಫ್ ಅಮೆರಿಕ (ಡಿಎಸ್‌ಎ) ಬೆಂಬಲದೊಂದಿಗೆ ಅದೇ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಿ, ಪ್ರಾಥಮಿಕ ಚುನಾವಣೆಯಲ್ಲಿ ಶೇಕಡ 55ರಷ್ಟು ಮತ ಪಡೆದು ಗೆದ್ದರು. ನಂತರ ಸಾರ್ವತ್ರಿಕ ಚುನಾವಣೆಯಲ್ಲಿ (ಜನರಲ್ ಎಲೆಕ್ಷನ್‌) ಶೇಕಡ 80ಕ್ಕಿಂತ ಹೆಚ್ಚು ಮತಗಳನ್ನು ಪಡೆದು ಗೆಲ್ಲುವ ಮೂಲಕ ಕ್ವೀನ್ಸ್‌ನ 36ನೇ ಜಿಲ್ಲೆಯ ವಿಧಾನಸಭಾ ಸದಸ್ಯರಾದರು.

2024ರ ಡಿಸೆಂಬರ್‌ನಲ್ಲಿ ಮೇಯರ್ ಚುನಾವಣೆಗೆ ಪ್ರಚಾರ ಆರಂಭಿಸಿದ ಮಮ್ದಾನಿ, ಜೂನ್ 2025ರ ಪ್ರಾಥಮಿಕ ಚುನಾವಣೆಯಲ್ಲಿ ಹಿಂದಿನ ಗವರ್ನರ್ ಆಂಡ್ರ್ಯೂ ಕ್ಯೂಮೋವನ್ನು ಶೇಕಡ 52ರಷ್ಟು ಮತಗಳ ಅಂತರದಿಂದ ಸೋಲಿಸಿದರು. ನವೆಂಬರ್ 4, 2025ರ ಸಾರ್ವವತ್ರಿಕ ಚುನಾವಣೆಯಲ್ಲಿ ಶೇಕಡ 50.2ರಷ್ಟು ಮತಗಳನ್ನು ಪಡೆದು ಕ್ಯೂಮೋವನ್ನು ಮತ್ತೆ ಸೋಲಿಸಿ, ನ್ಯೂಯಾರ್ಕ್‌ ನಗರದ ಮೊದಲ ಮುಸ್ಲಿಂ ಮತ್ತು 100 ವರ್ಷಗಳಲ್ಲಿ ಅತ್ಯಂತ ಕಿರಿಯ ಮೇಯರ್ ಆದರು.

2026ರ ಜನವರಿ 1ರಂದು ಅಧಿಕಾರ ಸ್ವೀಕರಿಸಲಿರುವ ಮಮ್ದಾನಿ, ತಳಹಂತದ ಧನಸಹಾಯ, ಯುವಕರ ಬೆಂಬಲ ಮತ್ತು ಟಿಕ್‌ ಟಾಕ್-ಆಧಾರಿತ ಪ್ರಚಾರದೊಂದಿಗೆ ಸೋಷಲಿಸ್ಟ್ ರಾಜಕಾರಣದ ಹೊಸ ಮುಖವಾಗಿ ಹೊರಹೊಮ್ಮಿದ್ದಾರೆ.

ಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...