Homeಅಂತರಾಷ್ಟ್ರೀಯಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

ಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

- Advertisement -
- Advertisement -

ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಭಾರತೀಯ ಮೂಲದ ಎಡಪಂಥೀಯ ಸಮಾಜವಾದಿ, 34 ವರ್ಷದ ಝೊಹ್ರಾನ್ ಕ್ವಾಮೆ ಮಮ್ದಾನಿ ಜಯಗಳಿಸಿದ್ದಾರೆ. ಈ ಮೂಲಕ ಅಮೆರಿಕದ ಅತಿದೊಡ್ಡ ನಗರದ ಮೊದಲ ಮುಸ್ಲಿಂ ಮೇಯರ್ ಆಗಿ ಇತಿಹಾಸ ಸೃಷ್ಟಿಸಿದ್ದಾರೆ.

ಮಂಗಳವಾರ (ನವೆಂಬರ್ 4, 2025) ನಡೆದ ಚುನಾವಣೆಯಲ್ಲಿ ಒಟ್ಟು 20 ಲಕ್ಷ ಮತಗಳು ಚಲಾವಣೆಯಾಗಿದ್ದು, ಅದರಲ್ಲಿ ಅತಿ ಹೆಚ್ಚು, ಅಂದರೆ ಶೇಕಡ 50ರಷ್ಟು ಅಥವಾ 10 ಲಕ್ಷ ಮತಗಳನ್ನು ಪಡೆಯುವ ಮೂಲಕ ಮಮ್ದಾನಿ ಗೆಲುವು ಸಾಧಿಸಿದ್ದಾರೆ.

ಅವರ ಪ್ರತಿಸ್ಪರ್ಧಿಗಳಾದ ಸ್ವತಂತ್ರ ಅಭ್ಯರ್ಥಿ ಆಂಡ್ರ್ಯೂ ಕ್ಯೂಮೋ ಪರ ಶೇಕಡ 40ರಷ್ಟು ಅಥವಾ 8 ಲಕ್ಷ ಮತಗಳು ಚಲಾವಣೆಯಾಗಿವೆ. ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಕರ್ಟಿಸ್ ಸ್ಲಿವಾ ಪರ ಕೇವಲ 10 ಶೇಕಡ ಜನರು ಮಾತ್ರ ಮತ ಹಾಕಿದ್ದಾರೆ. ಇನ್ನು ಭ್ರಷ್ಟಾಚಾರದ ಆರೋಪ ಹೊತ್ತು ಮೇಯರ್ ಸ್ಥಾನದಿಂದ ನಿರ್ಗಮಿಸಿದ್ದ ಸ್ವತಂತ್ರ ಅಭ್ಯರ್ಥಿ ಎರಿಕ್ ಆಡಮ್ಸ್ ಈ ಬಾರಿ ಚುನಾವಣೆಯಿಂದ ಹೊರಗುಳಿದಿದ್ದರು.

2025ರ ಜೂನ್‌ನಲ್ಲಿ ಎಲ್ಲಾ ಪಕ್ಷಗಳ ಒಳಗೆ ಯಾರು ಅಭ್ಯರ್ಥಿಯಾಗಬೇಕು ಎಂಬ ಪ್ರಾಥಮಿಕ ಚುನಾವಣೆ ನಡೆದಿತ್ತು. ಡೆಮಾಕ್ರಟಿಕ್ ಪಕ್ಷದಲ್ಲಿ ಆಂಡ್ರ್ಯೂ ಕ್ಯೂಮೋ ವಿರುದ್ದ ಮಮ್ದಾನಿ ಗೆದ್ದಿದ್ದರು. ನವೆಂಬರ್ 4ರಂದು ಸಾರ್ವತ್ರಿಕ ಚುನಾವಣೆ (ಜನರಲ್ ಎಲೆಕ್ಷನ್) ನಡೆದಿದೆ. ಇದರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕ್ಯೂಮೋ ಅವರನ್ನು ಮತ್ತೆ ಸೋಲಿಸಿ ಮಮ್ದಾನಿ ಗೆಲುವಿನ ನಗೆ ಬೀರಿದ್ದಾರೆ.

ಈ ಬಾರಿ ಚಲಾವಣೆಯಾದ 20 ಲಕ್ಷ ಮತಗಳು ಕಳೆದ 40 ವರ್ಷಗಳಲ್ಲಿ ಅತ್ಯಧಿಕ ಎಂದು ವರದಿಗಳು ಹೇಳಿವೆ. ಶೇಕಡ 80ರಷ್ಟು ಮತಗಳು ಎಣಿಕೆಯಾದ ಬಳಿಕ, ಮಮ್ದಾನಿ ಗೆಲುವಿನ ಕುರಿತು ಅಂತಾರಾಷ್ಟ್ರೀಯ ಮಾಧ್ಯಮಗಳಾದ ಎನ್‌ಬಿಸಿ, ಸಿಎನ್‌ಎನ್‌ ಮತ್ತು ಪೊಲಿಟಿಕೋ ವರದಿ ಮಾಡಿವೆ.

ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮಮ್ದಾನಿ ಡೆಮಾಕ್ರಟಿಕ್ ಪಕ್ಷದ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಟೀಕಿಸಿದ್ದರು. ಮಮ್ದಾನಿ ‘ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ’ ಎಂದು‌ ಜರೆದಿದ್ದರು.

ಅಮೆರಿಕದ ಕಾಂಗ್ರೆಸ್ (ಸಂಸತ್‌) ಸದಸ್ಯೆ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕೊರ್ಟೆಝ್ (ಎಒಸಿ) ಮತ್ತು ಸೆನೆಟರ್ ಚಕ್ ಶುಮರ್ ಸೇರಿದಂತೆ, ಮಮ್ದಾನಿ‌ ಅವರನ್ನು ಬೆಂಬಲಿಸಿದ ಇತರ ಪ್ರಗತಿಪರ ನಾಯಕರ ವಿರುದ್ದವೂ ಟ್ರಂಪ್‌ ಕಿಡಿಕಾರಿದ್ದರು.

“ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚರಾದ ಝೊಹ್ರಾನ್ ಮಮ್ದಾನಿ‌ ಅವರನ್ನು ನ್ಯೂಯಾರ್ಕ್‌ ನಗರದ ಮೇಯರ್‌ ಅಭ್ಯರ್ಥಿಯ ಪ್ರಾಥಮಿಕ ಚುನಾವಣೆಯಲ್ಲಿ ಆಯ್ಕೆ ಮಾಡುವ ಮೂಲಕ, ಡೆಮೋಕ್ರಾಟ್‌ಗಳು ತಮ್ಮ ನಿಜ ಬಣ್ಣ ಬಯಲು ಮಾಡಿದ್ದಾರೆ ” ಎಂದು ಟ್ರಂಪ್‌ ತಮ್ಮ ಟ್ರುಥ್ ಸೋಶಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಮಾಡಿದ್ದರು.

“ಮಮ್ದಾನಿ ಭಯಾನಕವಾಗಿ ಕಾಣುತ್ತಾರೆ, ಅವರ ಧ್ವನಿ ಗಡಸುತನದಿಂದ ಕೂಡಿದೆ, ಅವರು ತುಂಬಾ ಬುದ್ಧಿವಂತರಲ್ಲ. ಆದರೆ, ಡೆಮೊಕ್ರಾಟ್‌ಗಳು ಇಂತಹವರನ್ನು ಬೆಂಬಲಿಸುತ್ತಿದ್ದಾರೆ” ಎಂದು ಟ್ರಂಪ್‌ ತೀವ್ರ ಅಸಮಾಧಾನ ಹೊರಹಾಕಿದ್ದರು.

ಭಾರತದ ಪ್ರಖ್ಯಾತ ಸಿನಿಮಾ ನಿರ್ಮಾಪಕಿ ಮೀರಾ ನಾಯರ್ ಮತ್ತು ಭಾರತೀಯ ಮೂಲದ ಉಗಾಂಡಾದ ಮಾರ್ಕ್ಸ್‌ವಾದಿ ವಿದ್ವಾಂಸ ಮಹಮೂದ್ ಮಮ್ದಾನಿ ಅವರ ಮಗನಾಗಿರುವ ಝೊಹ್ರಾನ್ ಮಮ್ದಾನಿ, 1991ರಲ್ಲಿ ಆಫ್ರಿಕಾದ ಉಗಾಂಡದಲ್ಲಿ ಜನಿಸಿದವರು. ನಂತರ ಅವರು ಅಮೆರಿಕದ ನ್ಯೂಯಾರ್ಕ್ ನಗರದಲ್ಲಾಗಿದೆ ಬೆಳೆದದ್ದು.

ಮಮ್ದಾನಿ ಅವರ ರಾಜಕೀಯ ಜೀವನ 2018ರಲ್ಲಿ ಆರಂಭವಾಯಿತು. ಆದರೆ, ಆ ವರ್ಷ ನ್ಯೂಯಾರ್ಕ್ ರಾಜ್ಯ ಸಭೆಯ ಪ್ರಾಥಮಿಕ ಚುನಾವಣೆಯಲ್ಲಿ ಅವರು ಸೋತರು. 2020ರಲ್ಲಿ ಡೆಮಾಕ್ರಟಿಕ್ ಸೋಷಲಿಸ್ಟ್ಸ್ ಆಫ್ ಅಮೆರಿಕ (ಡಿಎಸ್‌ಎ) ಬೆಂಬಲದೊಂದಿಗೆ ಅದೇ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಿ, ಪ್ರಾಥಮಿಕ ಚುನಾವಣೆಯಲ್ಲಿ ಶೇಕಡ 55ರಷ್ಟು ಮತ ಪಡೆದು ಗೆದ್ದರು. ನಂತರ ಸಾರ್ವತ್ರಿಕ ಚುನಾವಣೆಯಲ್ಲಿ (ಜನರಲ್ ಎಲೆಕ್ಷನ್‌) ಶೇಕಡ 80ಕ್ಕಿಂತ ಹೆಚ್ಚು ಮತಗಳನ್ನು ಪಡೆದು ಗೆಲ್ಲುವ ಮೂಲಕ ಕ್ವೀನ್ಸ್‌ನ 36ನೇ ಜಿಲ್ಲೆಯ ವಿಧಾನಸಭಾ ಸದಸ್ಯರಾದರು.

2024ರ ಡಿಸೆಂಬರ್‌ನಲ್ಲಿ ಮೇಯರ್ ಚುನಾವಣೆಗೆ ಪ್ರಚಾರ ಆರಂಭಿಸಿದ ಮಮ್ದಾನಿ, ಜೂನ್ 2025ರ ಪ್ರಾಥಮಿಕ ಚುನಾವಣೆಯಲ್ಲಿ ಹಿಂದಿನ ಗವರ್ನರ್ ಆಂಡ್ರ್ಯೂ ಕ್ಯೂಮೋವನ್ನು ಶೇಕಡ 52ರಷ್ಟು ಮತಗಳ ಅಂತರದಿಂದ ಸೋಲಿಸಿದರು. ನವೆಂಬರ್ 4, 2025ರ ಸಾರ್ವವತ್ರಿಕ ಚುನಾವಣೆಯಲ್ಲಿ ಶೇಕಡ 50.2ರಷ್ಟು ಮತಗಳನ್ನು ಪಡೆದು ಕ್ಯೂಮೋವನ್ನು ಮತ್ತೆ ಸೋಲಿಸಿ, ನ್ಯೂಯಾರ್ಕ್‌ ನಗರದ ಮೊದಲ ಮುಸ್ಲಿಂ ಮತ್ತು 100 ವರ್ಷಗಳಲ್ಲಿ ಅತ್ಯಂತ ಕಿರಿಯ ಮೇಯರ್ ಆದರು.

2026ರ ಜನವರಿ 1ರಂದು ಅಧಿಕಾರ ಸ್ವೀಕರಿಸಲಿರುವ ಮಮ್ದಾನಿ, ತಳಹಂತದ ಧನಸಹಾಯ, ಯುವಕರ ಬೆಂಬಲ ಮತ್ತು ಟಿಕ್‌ ಟಾಕ್-ಆಧಾರಿತ ಪ್ರಚಾರದೊಂದಿಗೆ ಸೋಷಲಿಸ್ಟ್ ರಾಜಕಾರಣದ ಹೊಸ ಮುಖವಾಗಿ ಹೊರಹೊಮ್ಮಿದ್ದಾರೆ.

ಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...