Homeಅಂತರಾಷ್ಟ್ರೀಯಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

ಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

- Advertisement -
- Advertisement -

ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಭಾರತೀಯ ಮೂಲದ ಎಡಪಂಥೀಯ ಸಮಾಜವಾದಿ, 34 ವರ್ಷದ ಝೊಹ್ರಾನ್ ಕ್ವಾಮೆ ಮಮ್ದಾನಿ ಜಯಗಳಿಸಿದ್ದಾರೆ. ಈ ಮೂಲಕ ಅಮೆರಿಕದ ಅತಿದೊಡ್ಡ ನಗರದ ಮೊದಲ ಮುಸ್ಲಿಂ ಮೇಯರ್ ಆಗಿ ಇತಿಹಾಸ ಸೃಷ್ಟಿಸಿದ್ದಾರೆ.

ಮಂಗಳವಾರ (ನವೆಂಬರ್ 4, 2025) ನಡೆದ ಚುನಾವಣೆಯಲ್ಲಿ ಒಟ್ಟು 20 ಲಕ್ಷ ಮತಗಳು ಚಲಾವಣೆಯಾಗಿದ್ದು, ಅದರಲ್ಲಿ ಅತಿ ಹೆಚ್ಚು, ಅಂದರೆ ಶೇಕಡ 50ರಷ್ಟು ಅಥವಾ 10 ಲಕ್ಷ ಮತಗಳನ್ನು ಪಡೆಯುವ ಮೂಲಕ ಮಮ್ದಾನಿ ಗೆಲುವು ಸಾಧಿಸಿದ್ದಾರೆ.

ಅವರ ಪ್ರತಿಸ್ಪರ್ಧಿಗಳಾದ ಸ್ವತಂತ್ರ ಅಭ್ಯರ್ಥಿ ಆಂಡ್ರ್ಯೂ ಕ್ಯೂಮೋ ಪರ ಶೇಕಡ 40ರಷ್ಟು ಅಥವಾ 8 ಲಕ್ಷ ಮತಗಳು ಚಲಾವಣೆಯಾಗಿವೆ. ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಕರ್ಟಿಸ್ ಸ್ಲಿವಾ ಪರ ಕೇವಲ 10 ಶೇಕಡ ಜನರು ಮಾತ್ರ ಮತ ಹಾಕಿದ್ದಾರೆ. ಇನ್ನು ಭ್ರಷ್ಟಾಚಾರದ ಆರೋಪ ಹೊತ್ತು ಮೇಯರ್ ಸ್ಥಾನದಿಂದ ನಿರ್ಗಮಿಸಿದ್ದ ಸ್ವತಂತ್ರ ಅಭ್ಯರ್ಥಿ ಎರಿಕ್ ಆಡಮ್ಸ್ ಈ ಬಾರಿ ಚುನಾವಣೆಯಿಂದ ಹೊರಗುಳಿದಿದ್ದರು.

2025ರ ಜೂನ್‌ನಲ್ಲಿ ಎಲ್ಲಾ ಪಕ್ಷಗಳ ಒಳಗೆ ಯಾರು ಅಭ್ಯರ್ಥಿಯಾಗಬೇಕು ಎಂಬ ಪ್ರಾಥಮಿಕ ಚುನಾವಣೆ ನಡೆದಿತ್ತು. ಡೆಮಾಕ್ರಟಿಕ್ ಪಕ್ಷದಲ್ಲಿ ಆಂಡ್ರ್ಯೂ ಕ್ಯೂಮೋ ವಿರುದ್ದ ಮಮ್ದಾನಿ ಗೆದ್ದಿದ್ದರು. ನವೆಂಬರ್ 4ರಂದು ಸಾರ್ವತ್ರಿಕ ಚುನಾವಣೆ (ಜನರಲ್ ಎಲೆಕ್ಷನ್) ನಡೆದಿದೆ. ಇದರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕ್ಯೂಮೋ ಅವರನ್ನು ಮತ್ತೆ ಸೋಲಿಸಿ ಮಮ್ದಾನಿ ಗೆಲುವಿನ ನಗೆ ಬೀರಿದ್ದಾರೆ.

ಈ ಬಾರಿ ಚಲಾವಣೆಯಾದ 20 ಲಕ್ಷ ಮತಗಳು ಕಳೆದ 40 ವರ್ಷಗಳಲ್ಲಿ ಅತ್ಯಧಿಕ ಎಂದು ವರದಿಗಳು ಹೇಳಿವೆ. ಶೇಕಡ 80ರಷ್ಟು ಮತಗಳು ಎಣಿಕೆಯಾದ ಬಳಿಕ, ಮಮ್ದಾನಿ ಗೆಲುವಿನ ಕುರಿತು ಅಂತಾರಾಷ್ಟ್ರೀಯ ಮಾಧ್ಯಮಗಳಾದ ಎನ್‌ಬಿಸಿ, ಸಿಎನ್‌ಎನ್‌ ಮತ್ತು ಪೊಲಿಟಿಕೋ ವರದಿ ಮಾಡಿವೆ.

ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮಮ್ದಾನಿ ಡೆಮಾಕ್ರಟಿಕ್ ಪಕ್ಷದ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಟೀಕಿಸಿದ್ದರು. ಮಮ್ದಾನಿ ‘ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ’ ಎಂದು‌ ಜರೆದಿದ್ದರು.

ಅಮೆರಿಕದ ಕಾಂಗ್ರೆಸ್ (ಸಂಸತ್‌) ಸದಸ್ಯೆ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕೊರ್ಟೆಝ್ (ಎಒಸಿ) ಮತ್ತು ಸೆನೆಟರ್ ಚಕ್ ಶುಮರ್ ಸೇರಿದಂತೆ, ಮಮ್ದಾನಿ‌ ಅವರನ್ನು ಬೆಂಬಲಿಸಿದ ಇತರ ಪ್ರಗತಿಪರ ನಾಯಕರ ವಿರುದ್ದವೂ ಟ್ರಂಪ್‌ ಕಿಡಿಕಾರಿದ್ದರು.

“ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚರಾದ ಝೊಹ್ರಾನ್ ಮಮ್ದಾನಿ‌ ಅವರನ್ನು ನ್ಯೂಯಾರ್ಕ್‌ ನಗರದ ಮೇಯರ್‌ ಅಭ್ಯರ್ಥಿಯ ಪ್ರಾಥಮಿಕ ಚುನಾವಣೆಯಲ್ಲಿ ಆಯ್ಕೆ ಮಾಡುವ ಮೂಲಕ, ಡೆಮೋಕ್ರಾಟ್‌ಗಳು ತಮ್ಮ ನಿಜ ಬಣ್ಣ ಬಯಲು ಮಾಡಿದ್ದಾರೆ ” ಎಂದು ಟ್ರಂಪ್‌ ತಮ್ಮ ಟ್ರುಥ್ ಸೋಶಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಮಾಡಿದ್ದರು.

“ಮಮ್ದಾನಿ ಭಯಾನಕವಾಗಿ ಕಾಣುತ್ತಾರೆ, ಅವರ ಧ್ವನಿ ಗಡಸುತನದಿಂದ ಕೂಡಿದೆ, ಅವರು ತುಂಬಾ ಬುದ್ಧಿವಂತರಲ್ಲ. ಆದರೆ, ಡೆಮೊಕ್ರಾಟ್‌ಗಳು ಇಂತಹವರನ್ನು ಬೆಂಬಲಿಸುತ್ತಿದ್ದಾರೆ” ಎಂದು ಟ್ರಂಪ್‌ ತೀವ್ರ ಅಸಮಾಧಾನ ಹೊರಹಾಕಿದ್ದರು.

ಭಾರತದ ಪ್ರಖ್ಯಾತ ಸಿನಿಮಾ ನಿರ್ಮಾಪಕಿ ಮೀರಾ ನಾಯರ್ ಮತ್ತು ಭಾರತೀಯ ಮೂಲದ ಉಗಾಂಡಾದ ಮಾರ್ಕ್ಸ್‌ವಾದಿ ವಿದ್ವಾಂಸ ಮಹಮೂದ್ ಮಮ್ದಾನಿ ಅವರ ಮಗನಾಗಿರುವ ಝೊಹ್ರಾನ್ ಮಮ್ದಾನಿ, 1991ರಲ್ಲಿ ಆಫ್ರಿಕಾದ ಉಗಾಂಡದಲ್ಲಿ ಜನಿಸಿದವರು. ನಂತರ ಅವರು ಅಮೆರಿಕದ ನ್ಯೂಯಾರ್ಕ್ ನಗರದಲ್ಲಾಗಿದೆ ಬೆಳೆದದ್ದು.

ಮಮ್ದಾನಿ ಅವರ ರಾಜಕೀಯ ಜೀವನ 2018ರಲ್ಲಿ ಆರಂಭವಾಯಿತು. ಆದರೆ, ಆ ವರ್ಷ ನ್ಯೂಯಾರ್ಕ್ ರಾಜ್ಯ ಸಭೆಯ ಪ್ರಾಥಮಿಕ ಚುನಾವಣೆಯಲ್ಲಿ ಅವರು ಸೋತರು. 2020ರಲ್ಲಿ ಡೆಮಾಕ್ರಟಿಕ್ ಸೋಷಲಿಸ್ಟ್ಸ್ ಆಫ್ ಅಮೆರಿಕ (ಡಿಎಸ್‌ಎ) ಬೆಂಬಲದೊಂದಿಗೆ ಅದೇ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಿ, ಪ್ರಾಥಮಿಕ ಚುನಾವಣೆಯಲ್ಲಿ ಶೇಕಡ 55ರಷ್ಟು ಮತ ಪಡೆದು ಗೆದ್ದರು. ನಂತರ ಸಾರ್ವತ್ರಿಕ ಚುನಾವಣೆಯಲ್ಲಿ (ಜನರಲ್ ಎಲೆಕ್ಷನ್‌) ಶೇಕಡ 80ಕ್ಕಿಂತ ಹೆಚ್ಚು ಮತಗಳನ್ನು ಪಡೆದು ಗೆಲ್ಲುವ ಮೂಲಕ ಕ್ವೀನ್ಸ್‌ನ 36ನೇ ಜಿಲ್ಲೆಯ ವಿಧಾನಸಭಾ ಸದಸ್ಯರಾದರು.

2024ರ ಡಿಸೆಂಬರ್‌ನಲ್ಲಿ ಮೇಯರ್ ಚುನಾವಣೆಗೆ ಪ್ರಚಾರ ಆರಂಭಿಸಿದ ಮಮ್ದಾನಿ, ಜೂನ್ 2025ರ ಪ್ರಾಥಮಿಕ ಚುನಾವಣೆಯಲ್ಲಿ ಹಿಂದಿನ ಗವರ್ನರ್ ಆಂಡ್ರ್ಯೂ ಕ್ಯೂಮೋವನ್ನು ಶೇಕಡ 52ರಷ್ಟು ಮತಗಳ ಅಂತರದಿಂದ ಸೋಲಿಸಿದರು. ನವೆಂಬರ್ 4, 2025ರ ಸಾರ್ವವತ್ರಿಕ ಚುನಾವಣೆಯಲ್ಲಿ ಶೇಕಡ 50.2ರಷ್ಟು ಮತಗಳನ್ನು ಪಡೆದು ಕ್ಯೂಮೋವನ್ನು ಮತ್ತೆ ಸೋಲಿಸಿ, ನ್ಯೂಯಾರ್ಕ್‌ ನಗರದ ಮೊದಲ ಮುಸ್ಲಿಂ ಮತ್ತು 100 ವರ್ಷಗಳಲ್ಲಿ ಅತ್ಯಂತ ಕಿರಿಯ ಮೇಯರ್ ಆದರು.

2026ರ ಜನವರಿ 1ರಂದು ಅಧಿಕಾರ ಸ್ವೀಕರಿಸಲಿರುವ ಮಮ್ದಾನಿ, ತಳಹಂತದ ಧನಸಹಾಯ, ಯುವಕರ ಬೆಂಬಲ ಮತ್ತು ಟಿಕ್‌ ಟಾಕ್-ಆಧಾರಿತ ಪ್ರಚಾರದೊಂದಿಗೆ ಸೋಷಲಿಸ್ಟ್ ರಾಜಕಾರಣದ ಹೊಸ ಮುಖವಾಗಿ ಹೊರಹೊಮ್ಮಿದ್ದಾರೆ.

ಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...