Homeಅಂತರಾಷ್ಟ್ರೀಯಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

ಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

- Advertisement -
- Advertisement -

ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಭಾರತೀಯ ಮೂಲದ ಎಡಪಂಥೀಯ ಸಮಾಜವಾದಿ, 34 ವರ್ಷದ ಝೊಹ್ರಾನ್ ಕ್ವಾಮೆ ಮಮ್ದಾನಿ ಜಯಗಳಿಸಿದ್ದಾರೆ. ಈ ಮೂಲಕ ಅಮೆರಿಕದ ಅತಿದೊಡ್ಡ ನಗರದ ಮೊದಲ ಮುಸ್ಲಿಂ ಮೇಯರ್ ಆಗಿ ಇತಿಹಾಸ ಸೃಷ್ಟಿಸಿದ್ದಾರೆ.

ಮಂಗಳವಾರ (ನವೆಂಬರ್ 4, 2025) ನಡೆದ ಚುನಾವಣೆಯಲ್ಲಿ ಒಟ್ಟು 20 ಲಕ್ಷ ಮತಗಳು ಚಲಾವಣೆಯಾಗಿದ್ದು, ಅದರಲ್ಲಿ ಅತಿ ಹೆಚ್ಚು, ಅಂದರೆ ಶೇಕಡ 50ರಷ್ಟು ಅಥವಾ 10 ಲಕ್ಷ ಮತಗಳನ್ನು ಪಡೆಯುವ ಮೂಲಕ ಮಮ್ದಾನಿ ಗೆಲುವು ಸಾಧಿಸಿದ್ದಾರೆ.

ಅವರ ಪ್ರತಿಸ್ಪರ್ಧಿಗಳಾದ ಸ್ವತಂತ್ರ ಅಭ್ಯರ್ಥಿ ಆಂಡ್ರ್ಯೂ ಕ್ಯೂಮೋ ಪರ ಶೇಕಡ 40ರಷ್ಟು ಅಥವಾ 8 ಲಕ್ಷ ಮತಗಳು ಚಲಾವಣೆಯಾಗಿವೆ. ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಕರ್ಟಿಸ್ ಸ್ಲಿವಾ ಪರ ಕೇವಲ 10 ಶೇಕಡ ಜನರು ಮಾತ್ರ ಮತ ಹಾಕಿದ್ದಾರೆ. ಇನ್ನು ಭ್ರಷ್ಟಾಚಾರದ ಆರೋಪ ಹೊತ್ತು ಮೇಯರ್ ಸ್ಥಾನದಿಂದ ನಿರ್ಗಮಿಸಿದ್ದ ಸ್ವತಂತ್ರ ಅಭ್ಯರ್ಥಿ ಎರಿಕ್ ಆಡಮ್ಸ್ ಈ ಬಾರಿ ಚುನಾವಣೆಯಿಂದ ಹೊರಗುಳಿದಿದ್ದರು.

2025ರ ಜೂನ್‌ನಲ್ಲಿ ಎಲ್ಲಾ ಪಕ್ಷಗಳ ಒಳಗೆ ಯಾರು ಅಭ್ಯರ್ಥಿಯಾಗಬೇಕು ಎಂಬ ಪ್ರಾಥಮಿಕ ಚುನಾವಣೆ ನಡೆದಿತ್ತು. ಡೆಮಾಕ್ರಟಿಕ್ ಪಕ್ಷದಲ್ಲಿ ಆಂಡ್ರ್ಯೂ ಕ್ಯೂಮೋ ವಿರುದ್ದ ಮಮ್ದಾನಿ ಗೆದ್ದಿದ್ದರು. ನವೆಂಬರ್ 4ರಂದು ಸಾರ್ವತ್ರಿಕ ಚುನಾವಣೆ (ಜನರಲ್ ಎಲೆಕ್ಷನ್) ನಡೆದಿದೆ. ಇದರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕ್ಯೂಮೋ ಅವರನ್ನು ಮತ್ತೆ ಸೋಲಿಸಿ ಮಮ್ದಾನಿ ಗೆಲುವಿನ ನಗೆ ಬೀರಿದ್ದಾರೆ.

ಈ ಬಾರಿ ಚಲಾವಣೆಯಾದ 20 ಲಕ್ಷ ಮತಗಳು ಕಳೆದ 40 ವರ್ಷಗಳಲ್ಲಿ ಅತ್ಯಧಿಕ ಎಂದು ವರದಿಗಳು ಹೇಳಿವೆ. ಶೇಕಡ 80ರಷ್ಟು ಮತಗಳು ಎಣಿಕೆಯಾದ ಬಳಿಕ, ಮಮ್ದಾನಿ ಗೆಲುವಿನ ಕುರಿತು ಅಂತಾರಾಷ್ಟ್ರೀಯ ಮಾಧ್ಯಮಗಳಾದ ಎನ್‌ಬಿಸಿ, ಸಿಎನ್‌ಎನ್‌ ಮತ್ತು ಪೊಲಿಟಿಕೋ ವರದಿ ಮಾಡಿವೆ.

ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮಮ್ದಾನಿ ಡೆಮಾಕ್ರಟಿಕ್ ಪಕ್ಷದ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಟೀಕಿಸಿದ್ದರು. ಮಮ್ದಾನಿ ‘ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ’ ಎಂದು‌ ಜರೆದಿದ್ದರು.

ಅಮೆರಿಕದ ಕಾಂಗ್ರೆಸ್ (ಸಂಸತ್‌) ಸದಸ್ಯೆ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕೊರ್ಟೆಝ್ (ಎಒಸಿ) ಮತ್ತು ಸೆನೆಟರ್ ಚಕ್ ಶುಮರ್ ಸೇರಿದಂತೆ, ಮಮ್ದಾನಿ‌ ಅವರನ್ನು ಬೆಂಬಲಿಸಿದ ಇತರ ಪ್ರಗತಿಪರ ನಾಯಕರ ವಿರುದ್ದವೂ ಟ್ರಂಪ್‌ ಕಿಡಿಕಾರಿದ್ದರು.

“ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚರಾದ ಝೊಹ್ರಾನ್ ಮಮ್ದಾನಿ‌ ಅವರನ್ನು ನ್ಯೂಯಾರ್ಕ್‌ ನಗರದ ಮೇಯರ್‌ ಅಭ್ಯರ್ಥಿಯ ಪ್ರಾಥಮಿಕ ಚುನಾವಣೆಯಲ್ಲಿ ಆಯ್ಕೆ ಮಾಡುವ ಮೂಲಕ, ಡೆಮೋಕ್ರಾಟ್‌ಗಳು ತಮ್ಮ ನಿಜ ಬಣ್ಣ ಬಯಲು ಮಾಡಿದ್ದಾರೆ ” ಎಂದು ಟ್ರಂಪ್‌ ತಮ್ಮ ಟ್ರುಥ್ ಸೋಶಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಮಾಡಿದ್ದರು.

“ಮಮ್ದಾನಿ ಭಯಾನಕವಾಗಿ ಕಾಣುತ್ತಾರೆ, ಅವರ ಧ್ವನಿ ಗಡಸುತನದಿಂದ ಕೂಡಿದೆ, ಅವರು ತುಂಬಾ ಬುದ್ಧಿವಂತರಲ್ಲ. ಆದರೆ, ಡೆಮೊಕ್ರಾಟ್‌ಗಳು ಇಂತಹವರನ್ನು ಬೆಂಬಲಿಸುತ್ತಿದ್ದಾರೆ” ಎಂದು ಟ್ರಂಪ್‌ ತೀವ್ರ ಅಸಮಾಧಾನ ಹೊರಹಾಕಿದ್ದರು.

ಭಾರತದ ಪ್ರಖ್ಯಾತ ಸಿನಿಮಾ ನಿರ್ಮಾಪಕಿ ಮೀರಾ ನಾಯರ್ ಮತ್ತು ಭಾರತೀಯ ಮೂಲದ ಉಗಾಂಡಾದ ಮಾರ್ಕ್ಸ್‌ವಾದಿ ವಿದ್ವಾಂಸ ಮಹಮೂದ್ ಮಮ್ದಾನಿ ಅವರ ಮಗನಾಗಿರುವ ಝೊಹ್ರಾನ್ ಮಮ್ದಾನಿ, 1991ರಲ್ಲಿ ಆಫ್ರಿಕಾದ ಉಗಾಂಡದಲ್ಲಿ ಜನಿಸಿದವರು. ನಂತರ ಅವರು ಅಮೆರಿಕದ ನ್ಯೂಯಾರ್ಕ್ ನಗರದಲ್ಲಾಗಿದೆ ಬೆಳೆದದ್ದು.

ಮಮ್ದಾನಿ ಅವರ ರಾಜಕೀಯ ಜೀವನ 2018ರಲ್ಲಿ ಆರಂಭವಾಯಿತು. ಆದರೆ, ಆ ವರ್ಷ ನ್ಯೂಯಾರ್ಕ್ ರಾಜ್ಯ ಸಭೆಯ ಪ್ರಾಥಮಿಕ ಚುನಾವಣೆಯಲ್ಲಿ ಅವರು ಸೋತರು. 2020ರಲ್ಲಿ ಡೆಮಾಕ್ರಟಿಕ್ ಸೋಷಲಿಸ್ಟ್ಸ್ ಆಫ್ ಅಮೆರಿಕ (ಡಿಎಸ್‌ಎ) ಬೆಂಬಲದೊಂದಿಗೆ ಅದೇ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಿ, ಪ್ರಾಥಮಿಕ ಚುನಾವಣೆಯಲ್ಲಿ ಶೇಕಡ 55ರಷ್ಟು ಮತ ಪಡೆದು ಗೆದ್ದರು. ನಂತರ ಸಾರ್ವತ್ರಿಕ ಚುನಾವಣೆಯಲ್ಲಿ (ಜನರಲ್ ಎಲೆಕ್ಷನ್‌) ಶೇಕಡ 80ಕ್ಕಿಂತ ಹೆಚ್ಚು ಮತಗಳನ್ನು ಪಡೆದು ಗೆಲ್ಲುವ ಮೂಲಕ ಕ್ವೀನ್ಸ್‌ನ 36ನೇ ಜಿಲ್ಲೆಯ ವಿಧಾನಸಭಾ ಸದಸ್ಯರಾದರು.

2024ರ ಡಿಸೆಂಬರ್‌ನಲ್ಲಿ ಮೇಯರ್ ಚುನಾವಣೆಗೆ ಪ್ರಚಾರ ಆರಂಭಿಸಿದ ಮಮ್ದಾನಿ, ಜೂನ್ 2025ರ ಪ್ರಾಥಮಿಕ ಚುನಾವಣೆಯಲ್ಲಿ ಹಿಂದಿನ ಗವರ್ನರ್ ಆಂಡ್ರ್ಯೂ ಕ್ಯೂಮೋವನ್ನು ಶೇಕಡ 52ರಷ್ಟು ಮತಗಳ ಅಂತರದಿಂದ ಸೋಲಿಸಿದರು. ನವೆಂಬರ್ 4, 2025ರ ಸಾರ್ವವತ್ರಿಕ ಚುನಾವಣೆಯಲ್ಲಿ ಶೇಕಡ 50.2ರಷ್ಟು ಮತಗಳನ್ನು ಪಡೆದು ಕ್ಯೂಮೋವನ್ನು ಮತ್ತೆ ಸೋಲಿಸಿ, ನ್ಯೂಯಾರ್ಕ್‌ ನಗರದ ಮೊದಲ ಮುಸ್ಲಿಂ ಮತ್ತು 100 ವರ್ಷಗಳಲ್ಲಿ ಅತ್ಯಂತ ಕಿರಿಯ ಮೇಯರ್ ಆದರು.

2026ರ ಜನವರಿ 1ರಂದು ಅಧಿಕಾರ ಸ್ವೀಕರಿಸಲಿರುವ ಮಮ್ದಾನಿ, ತಳಹಂತದ ಧನಸಹಾಯ, ಯುವಕರ ಬೆಂಬಲ ಮತ್ತು ಟಿಕ್‌ ಟಾಕ್-ಆಧಾರಿತ ಪ್ರಚಾರದೊಂದಿಗೆ ಸೋಷಲಿಸ್ಟ್ ರಾಜಕಾರಣದ ಹೊಸ ಮುಖವಾಗಿ ಹೊರಹೊಮ್ಮಿದ್ದಾರೆ.

ಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...