Homeಕರ್ನಾಟಕಉದ್ಯೋಗಿಗಳ ಶೋಷಣೆ ಮಾಡುತ್ತಿದೆಯೇ ಮಂಗಳೂರಿನ "ಝೊಮೆಟೊ"?

ಉದ್ಯೋಗಿಗಳ ಶೋಷಣೆ ಮಾಡುತ್ತಿದೆಯೇ ಮಂಗಳೂರಿನ “ಝೊಮೆಟೊ”?

ಆರಂಭದಲ್ಲಿ ಉತ್ತಮ ಉದ್ಯೋಗದಾತನಾಗಿ ಕಂಡಿದ್ದ ಈ ಕಂಪನಿ ಈಗ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಬೇಕು. ಖುಷಿಯಿಂದ ಹೊಟ್ಟೆ ತುಂಬಿಸಿಕೊಳ್ಳುವ ಗ್ರಾಹಕರೂ ಕೂಡ ನಮಗೆ ಆಹಾರ ತಲುಪಿಸುವ ಉದ್ಯೋಗಿಗಳ ಪರ ದನಿ ಎತ್ತಬೇಕಿದೆ.

- Advertisement -
- Advertisement -

ಮನೆ ಮನೆಗೆ ಆಹಾರ ಪೂರೈಕೆಯ ಕಂಪನಿಗಳಾದ ಸ್ವಿಗ್ಗಿ, ಝೊಮೆಟೊ ಮತ್ತು ಉಬರ್‌ ಈಟ್ಸ್‌ ದೇಶಾದ್ಯಂತ ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸಿವೆ. ಜೊತೆಗೆ ಕುಳಿತಲ್ಲಿಗೆ ಬಯಸಿದ ಆಹಾರ ಸಿಗುವುದರಿಂದ ಗ್ರಾಹಕರು ಸಹ ಖುಷಿಗೊಂಡಿದ್ದರು. ಆರಂಭದಲ್ಲಿ ಉತ್ತಮ ಸೇವೆ ನೀಡಿದ್ದರಿಂದ ಗ್ರಾಹಕರು ಮತ್ತು ಉದ್ಯೋಗಿಗಳು ಇಬ್ಬರೂ ಸಂಭ್ರಮಪಟ್ಟಿದ್ದು ಸುಳ್ಳಲ್ಲ. ಆದರೆ ಬರುಬರುತ್ತಾ ಈ ಕಂಪನಿಗಳು ಲಾಭದ ದಾಹಕ್ಕೆ ಬಿದ್ದು ಉದ್ಯೋಗಿಗಳನ್ನು ಕಡೆಗಣಿಸುತ್ತಿದ್ದಾರೆ, ಅವರ ಶೋಷಣೆ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ತಮ್ಮ ಮೇಲಿನ ಶೋಷಣೆಯ ವಿರುದ್ಧ ಪ್ರತಿಭಟಿಸಲು ಉದ್ಯೋಗಿಗಳು ಹಿಂದೇಟು ಹಾಕುತ್ತಾರೆ. ಅದಕ್ಕೆ ಮೊದಲ ಕಾರಣ ಅವರನ್ನು ನೇಮಿಸಿಕೊಳ್ಳುವಾಗಲೇ ಉದ್ಯೋಗಿಗಳು ಅಥವಾ ಕಾರ್ಮಿಕರು ಎಂದು ಕರೆಯದೇ ಪಾಲುದಾರರು (ಪಾರ್ಟನರ್‍ಸ್‌) ಎಂದು ನೇಮಿಸಿಕೊಳ್ಳಲಾಗುತ್ತದೆ. ಹಾಗಾಗಿ ಹೋರಾಟ ಮಾಡುವುದು ಅವರ ಹಕ್ಕಾಗಿರುವುದಿಲ್ಲ ಎಂದು ಬೆದರಿಸಲಾಗುತ್ತದೆ.

ದೊಡ್ಡ ದೊಡ್ಡ ಕಂಪೆನಿಗಳಿಗೆ ತನ್ನ ಉದ್ಯೋಗಿಗಳೆಂದರೆ ಯಾವತ್ತಿಗೂ ಅಷ್ಟಕ್ಕಷ್ಟೇ. ಉದ್ಯೋಗಿಗಳ ಅಳಲನ್ನು ಅವು ಕೇಳುವುದೇ ಇಲ್ಲ. ತನ್ನ ಉದ್ಯೋಗಿಗಳನ್ನು ಆದಷ್ಟು ದುಡಿಸಿ ತನ್ನ ಜೇಬನ್ನು ತುಂಬಿಕೊಳ್ಳುವ ಆಲೋಚನೆಯನ್ನೇ ಹೆಚ್ಚಿನ ಕಂಪೆನಿಗಳು ಹೊಂದಿವೆ. ದಿನವಿಡೀ ದುಡಿದರೂ ತನ್ನ ಕುಟುಂಬದ ಹೊಟ್ಟೆಗೆ ಆಹಾರ ನೀಡುವಷ್ಟು ಹಣ ಉಳಿಯುವುದಿಲ್ಲ ಎಂದರೆ ಅಂತಹ ಉದ್ಯೋಗಿಗಳ ಪಾಡನ್ನು ನೀವೇ ಆಲೋಚಿಸಿ. ಇಂತಹುದೇ ಆರೋಪದಲ್ಲಿ ಆಹಾರ ಪೂರೈಕೆಯ ದಿಗ್ಗಜ ಎನಿಸಿಕೊಂಡ “ಝೊಮೆಟೊ” ಸಿಲುಕಿಕೊಂಡಿದೆ. ಉದ್ಯೋಗಿಗಳು ರಕ್ತ ಬಸಿದು ದುಡಿದರೂ ಅವರಿಗೆ ನ್ಯಾಯಯುತ ಪಾಲನ್ನು ಕಂಪೆನಿ ನೀಡದೆ ಅನ್ಯಾಯ ಮಾಡುತ್ತಿದೆ ಎಂಬ ಆರೋಪ ದಟ್ಟವಾಗಿ ಕೇಳಿಬಂದಿದೆ.

ಮೋಸ ಎಲ್ಲಿ?

ಈ ಮೊದಲು ಒಂದು ಆರ್ಡರ್‌ಗೆ 35 ರೂಗಳು ಮತ್ತು ಉತ್ತಮ ರೇಟಿಂಗ್‌ಗೆ 10ರೂ ಕೊಡಲಾಗುತ್ತಿತ್ತು. ಆನಂತರ ಒಂದು ಆರ್ಡರ್‌ಗೆ 30 ರೂಗಳು ಮತ್ತು ಉತ್ತಮ ರೇಟಿಂಗ್‌ಗೆ 10ರೂ ಇತ್ತು. ಈಗ ಒಂದು ಆರ್ಡರ್‌ಗೆ 20 ರೂಗಳು ಮತ್ತು ಉತ್ತಮ ರೇಟಿಂಗ್‌ಗೆ 5 ರೂ ಇಳಿಸಲಾಗಿದೆ. ಮಾರ್ಚ್‌ನಿಂದ ಆರ್ಡರ್‌ವೊಂದಕ್ಕೆ 16ರೂಗಿಳಿಸಲು ಚಿಂತನೆ ನಡೆದಿದೆ ಎನ್ನಲಾಗುತ್ತಿದೆ.

ಮೊದಲು 10 ಆರ್ಡರ್‌ಗಳನ್ನು ಪೂರೈಸಿದರೆ 200-300ರೂ ಇನ್ಸೆಂಟೀವ್‌ ಸಿಗುತ್ತಿತ್ತು. ಈಗ ಅಷ್ಟು ಸಿಗಬೇಕಾದರೆ ದಿನಕ್ಕೆ 20 ಆರ್ಡರ್‌ಗಳನ್ನು ಪೂರೈಸಬೇಕು ಮತ್ತು ಕನಿಷ್ಠ ದಿನದಲ್ಲಿ 10:30 ಗಂಟೆಗಳ ಕಾಲ ಆನ್‌ಲೈನ್‌‌ನಲ್ಲಿ ಇರಬೇಕು ಎಂಬ ನಿಯಮ ಹೇರಲಾಗಿದೆ.

ಈ ಮೊದಲ 160 ಗಂಟೆಗಳು ಕೆಲಸ ನಿರ್ವಹಿಸಿದ್ದರೆ ಕೊಡುತ್ತಿದ್ದ ಇನ್ಸೆಂಟೀವ್‌ ಅನ್ನು ಈಗ 190 ಗಂಟೆಗಳಿಗೆ ಏರಿಸಲಾಗಿದೆ.

ಸ್ವಿಗ್ಗಿ ಕಂಪನಿ
ಝೊಮೆಟೊ

ಒಟ್ಟಾರೆ ದಿನೇ ದಿನೇ ಉದ್ಯೋಗಿಗಳಿಗೆ ಸಿಗುತ್ತಿದ್ದ ಹಣದಲ್ಲಿ ಕಡಿತವಾಗುತ್ತಿದೆ. ಮೊದಲು ಒಂದೇ ರೆಸ್ಟೋರೆಂಟ್‌ನಿಂದ ಆಹಾರ ತೆಗೆದುಕೊಂಡು ಹೋಗುತ್ತಿದ್ದವರು ಈಗ ಒಂದೇ ಆರ್ಡರ್‌ಗೆ ಎರಡು ರೆಸ್ಟೋರೆಂಟ್‌ಗಳಿಂದ ತೆಗೆದುಕೊಂಡುಹೋಗಬೇಕಾಗಿದೆ. ಪೆಟ್ರೊಲ್‌ ಖರ್ಚು ಕಳೆದು ದಿನಕ್ಕೆ 500 ರೂ ಉಳಿಸಿ ತಿಂಗಳಿಗೆ 15000 ರೂ ಸಂಪಾದಿಸುತ್ತಿದ್ದ ಉದ್ಯೋಗಿಗಳು ಈಗ ತಿಂಗಳಿಗೆ 10000 ಉಳಿಸುವುದೇ ಕಷ್ಟ ಎನ್ನುತ್ತಿದ್ದಾರೆ. ಮೊದಲು ಪಾರ್ಟ್ ಟೈಂ ಆಗಿ ಕೆಲಸ ಮಾಡುತ್ತಿದ್ದವರಿಗೆ ಈಗ ಹೊಸ ನಿಯಮಗಳ ಬಳಿಕ ಅವಕಾಶವೇ ಇಲ್ಲದಂತಾಗಿದೆ.

ಮಂಗಳೂರಿನ ಝೊಮೆಟೊ ಸಂಸ್ಥೆಯಲ್ಲಿನ ಡೆಲಿವರಿ ಬಾಯ್‌ಗಳು ಕಳೆದ ಮೂರು ದಿನದಿಂದ ಕೆಲಸಕ್ಕೆ  ಹೋಗದೆ ತನ್ನ ಕಂಪೆನಿಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕಂಪೆನಿ ತಮ್ಮ ಬೆವರಿನ ಪಾಲನ್ನು ನೀಡುತ್ತಿಲ್ಲ ಎಂದು ಉದ್ಯೋಗಿಗಳು ಆರೋಪಿಸುತ್ತಿದ್ದಾರೆ‌. ಆದರೂ ಕಂಪೆನಿಯು ಅವರನ್ನು ಮಾತನಾಡಿಸದೇ ಕೆಲಸದಿಂದ ಕಿತ್ತೊಗೆಯುವ ಬೆದರಿಕೆಯ ಜೊತೆಗೆ, ತಮ್ಮ ವಿರುದ್ಧ ಮಾತನಾಡಿದ ಉದ್ಯೋಗಿಗಳಿಗೆ ಆರ್ಡರ್ ಸಿಗದಂತೆ ಅವರ ಮೊಬೈಲನ್ನು ಬ್ಲಾಕ್ ಮಾಡಿದೆ ಎಂಬ ಆರೋಪಗಳಿವೆ.

ವರ್ಷಗಳಿಂದಲೂ ಝೊಮೆಟೊ ಸಂಸ್ಥೆಯಲ್ಲಿ ದುಡಿಯುತ್ತಿರುವ ಹೆಸರು ಹೇಳಲು ಇಚ್ಚಿಸದ ಉದ್ಯೋಗಿಯೊಬ್ಬರ ಪ್ರಕಾರ “ನಾವು ಕಳೆದ ಮೂರು ದಿನದಿಂದ ಸುಮಾರು ಇನ್ನೂರರಷ್ಟು ಉದ್ಯೋಗಿಗಳು ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಕಂಪೆನಿಯು ಸೌಜನ್ಯಕ್ಕಾದರೂ ನಮ್ಮೊಂದಿಗೆ ಮಾತುಕತೆ ನಡೆಸುತ್ತಿಲ್ಲ. ಅವರ ವಿರುದ್ಧ ಮಾತಾನಾಡಿದ ಸುಮಾರು ಆರು ಜನರ ಮೊಬೈಲಿನ ಆರ್ಡರನ್ನು ಕಂಪೆನಿ ಬ್ಲಾಕ್ ಮಾಡಿದೆ. ಕಳೆದ ಒಂದು ವರ್ಷದಿಂದ ಈ ಕಂಪೆನಿಯಲ್ಲಿ ದುಡಿಯುತ್ತಾ ಇದ್ದೇವೆ. ಈಗ ಸತತವಾಗಿ ನಮ್ಮ ‌ದುಡಿಮೆಯ ಹಣವನ್ನು ಇಳಿಕೆ ಮಾಡುತ್ತಿದ್ದಾರೆ. ಈಗಲೇ ನೋಡಿ ಎಂಟು ಗಂಟೆಯಿಂದ ಕರ್ತವ್ಯದಲ್ಲಿ ಇದ್ದೇನೆ ಆದರೂ ನೂರೈವತ್ತು ರುಪಾಯಿಗಳ ದುಡಿಮೆಯೂ ಆಗಿಲ್ಲ” ಎಂದು ಅಳಲು ತೋಡಿಕೊಂಡರು.

ಅವರ ದುಡಿಮೆಯನ್ನು ತಿಳಿಸುವ ಸ್ಕ್ರೀನ್‌ ಶಾಟ್‌ ಹೀಗಿದೆ.

ಹೆಸರು ಹೇಳಲು ಇಚ್ಛಿಸದ ಮತ್ತೊಬ್ಬ ಉದ್ಯೋಗಿ “ಝೊಮೆಟೊ ಕಂಪೆನಿಯು ಸತತವಾಗಿ ರೇಟ್ ಕಾರ್ಡ್ ಇಳಿಸುತ್ತಿದೆ. ಹಿಂದೆಯೆಲ್ಲ ಒಂದು ಆರ್ಡರ್ ಸುಮಾರು ಇಪ್ಪತ್ತು ‌ನಿಮಿಷದಲ್ಲಿ ಮುಗಿಯುತ್ತಿತ್ತು. ಈಗ ಕಂಪನಿಯೂ ಎರೆಡೆರೆಡು ರೆಸ್ಟೊರೆಂಟಿನ ಆರ್ಡರ್ ನೀಡುತ್ತಿದೆ. ಇದರಿಂದ ಒಂದು ಆರ್ಡರ್‌ನ ಆಹಾರವನ್ನು ತಲುಪಿಸಲು ಸುಮಾರು ಒಂದರಿಂದ ಒಂದುವರೆ ಗಂಟೆಗಳು ತಗುಲುತ್ತದೆ. ಅಲ್ಲದೆ ಹಿಂದೆಯೆಲ್ಲ ನಮ್ಮ ಟಾರ್ಗೆಟ್‌ ಮುಗಿಸಿ ಯಾವಾಗ ಬೇಕಾದರೂ ನಾವು ಮನೆಗೆ ಹೋಗಬಹುದಾಗಿತ್ತು. ಆದರೆ ಈಗ ರಾತ್ರಿ ಹತ್ತರಿಂದ ಹನ್ನೊಂದು ಗಂಟೆಯವರೆಗೂ ಕೆಲಸ ನಿರ್ವಹಿಸಬೇಕು ಇಲ್ಲವೆಂದರೆ ನಮ್ಮ ಇನ್ಸೆಂಟಿವ್ ಕಡಿತಗೊಳಿಸುತ್ತಾರೆ” ಎಂದು ಹೇಳುತ್ತಾರೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ಮಂಗಳೂರಿನ ಝೊಮೆಟೊ ಕಛೇರಿಯ ಮೇಲ್ವಿಚಾರಕರಾದ ಹರಿ ಪ್ರಸಾದ್ ಅವರನ್ನು ನಾನುಗೌರಿ.ಕಾಂ ವತಿಯಿಂದ ಸಂಪರ್ಕಿಸಿಲು ಪ್ರಯತ್ನಿಸಿತು. ಆದರೆ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಮತ್ತೊಬ್ಬ ಮೇಲ್ವಿಚಾರಕರಾದ ಸಿರಾಜ್ ಅವರನ್ನು ಸಂಪರ್ಕಿಸಿದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಒಂದು ಸಂಸ್ಥೆಯನ್ನು ಕಟ್ಟಿ ಬೆಳೆಸುವುದರಲ್ಲಿ ತಳಮಟ್ಟದ ಉದ್ಯೋಗಿಗಳ ಕೊಡುಗೆ ಮಹತ್ತದ್ದೇ ಆಗಿದೆ. ಕಂಪೆನಿಯು ಏಕಾಏಕಿ ಸತತವಾಗಿ ತಮ್ಮ ರೇಟ್ ಕಾರ್ಡನ್ನು ಇಳಿಕೆ ಮಾಡಿದುದರ ಫಲವಾಗಿ ಉದ್ಯೋಗಿಗಳು ಕಂಗಾಲಾಗಿದ್ದಾರೆ. ರಾತ್ರಿ ಹತ್ತು ಗಂಟೆಯವರೆಗೂ ದುಡಿದರೂ ದುಡಿಮೆಗೆ ಸರಿಯಾದ ಪ್ರತಿಫಲ ಸಿಗುತ್ತಿಲ್ಲ. ಹೊಸ ಉದ್ಯೋಗಿಗಳನ್ನು ಇಟ್ಟು ಅವರನ್ನು ಬೆದರಿಸುತ್ತಾ ದುಡಿಸುತ್ತಿದ್ದಾರೆ ಹಾಗಾಗಿ ನಮ್ಮ ಧ್ವನಿ ಅವರಿಗೆ ಕೇಳುತ್ತಿಲ್ಲ ಎಂದು ಉದ್ಯೋಗಿಗಳು ಆರೋಪಿಸುತ್ತಿದ್ದಾರೆ. ಉದ್ಯೋಗಿಗಳ ಮನವಿಯನ್ನು ಕೇಳದ ಝೊಮೆಟೊ ಸಂಸ್ಥೆಯ ವಿರುದ್ಧ ದೊಡ್ಡ ಮಟ್ಟದ ಹೋರಾಟ ನಡೆಸುವ ಬಗ್ಗೆ ಆಲೋಚಿಸುತ್ತಿರುವುದಾಗಿ ಉದ್ಯೋಗಿಗಳು ತಿಳಿಸಿದ್ದಾರೆ.

ಆದರೆ ಪ್ರತಿಭಟನೆಗೆ ಮುಂದಾದರೆ ಝೊಮೆಟೊ ಕಂಪನಿಯು ಪೊಲೀಸ್‌ ಕೇಸ್‌ ಹಾಕುವ ಬೆದರಿಕೆಯೊಡ್ಡಿದೆ. ಇದು ಕೇವಲ ಮಂಗಳೂರಿನ ಕಥೆ ಮಾತ್ರ ಅಲ್ಲ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಈ ಶೋಷಣೆ ಮುಂದುವರೆಯುತ್ತಿದೆ. ಆರಂಭದಲ್ಲಿ ಉತ್ತಮ ಉದ್ಯೋಗದಾತನಾಗಿ ಕಂಡಿದ್ದ ಈ ಕಂಪನಿ ಈಗ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಬೇಕು. ಖುಷಿಯಿಂದ ಹೊಟ್ಟೆ ತುಂಬಿಸಿಕೊಳ್ಳುವ ಗ್ರಾಹಕರೂ ಕೂಡ ನಮಗೆ ಆಹಾರ ತಲುಪಿಸುವ ಉದ್ಯೋಗಿಗಳ ಪರ ದನಿ ಎತ್ತಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....