Homeಮುಖಪುಟಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು" ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳದ ಹೌರಾದಲ್ಲಿ ಝೊಮಾಟೊ ಡೆಲಿವರಿ ನೌಕರರ ಮುಷ್ಕರಕ್ಕೂ ಆಹಾರ, ಧರ್ಮ ಅಥವಾ ನಂಬಿಕೆಗೂ ಯಾವುದೇ ಸಂಬಂಧ ಇಲ್ಲ ಎಂದು ಕಂಪನಿಯ ಸ್ಥಾಪಕರು ತನ್ನ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಹೇಳಿದ್ದು, ಅರ್ಥಪೂರ್ಣ ಉದ್ಯೋಗ ಮತ್ತು ಜೀವನ ನಿರ್ವಹಣೆಯ ಅವಕಾಶವನ್ನು ಧರ್ಮ ಮತ್ತು ವೈಯಕ್ತಿಕ ಆಹಾರದ ಆಯ್ಕೆಯ ಜೊತೆಗೆ ತಳಕುಹಾಕಲಾಗುತ್ತಿರುವ ಬಗ್ಗೆ ಎಚ್ಚರದಿಂದಿರಬೇಕು ಎಂದು ತಿಳಿಸಿದ್ದಾರೆ.

“ಗದ್ದಲವನ್ನು ಕಡೆಗಣಿಸಿ; ಅದರಿಂದ ವಿಚಲಿತರಾಗದಿರಿ ಎಂದು ಎಂದು ಸಂಸ್ಥೆಯ ಸ್ಥಾಪಕ ದೀಪಿಂದರ್ ಗೋಯಲ್ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಒತ್ತಾಯಿಸಿದ್ದಾರೆ. ಈ “ಪ್ರತಿಭಟನೆ”ಯು ಕೋಲ್ಕತ್ತಾದ ಹೌರಾ ಪ್ರದೇಶದ ಕೆಲವೇ ಡೆಲಿವರಿ ಪಾಲುದಾರರಿಗೆ ಸೀಮಿತವಾಗಿದ್ದು, ಕೆಲವು ತೀರಾ ಉತ್ಪ್ರೇಕ್ಷಿತ ವರದಿಗಳಲ್ಲಿ ಕಾಣಿಸಲಾಗಿರುವಂತೆ ಇಡೀ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಪ್ರಶ್ನೆಯು ಮೂಲತಃ ದರಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದ್ದಾಗಿದ್ದು, ಅದನ್ನು ನಾವು ಆಗಾಗ ಮಾಡುತ್ತಿರುತ್ತೇವೆ ಎಂದವರು ಹೇಳಿದ್ದಾರೆ.

ಕೋಲ್ಕತ್ತಾದ ಹೊರಭಾಗದಲ್ಲಿರುವ ಹೌರಾದ ನೌಕರರ ವಿಭಾವೊಂದು ತಾವು ಬೀಫ್ ಮತ್ತು ಪೋರ್ಕ್ (ದನ ಮತ್ತು ಹಂದಿ ಮಾಂಸ) ಇರುವ ಆಹಾರವನ್ನು ಡೆಲಿವರಿ ಮಾಡುವುದಿಲ್ಲ ಎಂದು ಕಳೆದೊಂದು ವಾರದಿಂದ ಮುಷ್ಕರ ನಡೆಸುತ್ತಿದ್ದಾರೆ.

“ಕಂಪನಿಯು ನಮ್ಮ ಬೇಡಿಕೆಗಳನ್ನು ಕೇಳುತ್ತಿಲ್ಲ. ನಮ್ಮ ಇಚ್ಛೆಗೆ ವಿರುದ್ಧವಾಗಿ ಬೀಫ್ ಮತ್ತು ಪೋರ್ಕ್ ಡೆಲಿವರಿ ಮಾಡುವಂತೆ ಒತ್ತಾಯಿಸಲಾಗುತ್ತದೆ. ಹಿಂದೂಗಳು ಬೀಫ್ ಡೆಲಿವರಿ ಮಾಡಲು ಒಪ್ಪುತ್ತಿಲ್ಲ ಮತ್ತು ಮುಸ್ಲಿಮರು ಪೋರ್ಕ್ ಡೆಲಿವರಿ ಮಾಡಲು ಬಯಸುತ್ತಿಲ್ಲ ಎಂದು ಮೌಸಿನ್ ಅಕ್ತರ್ ಎಂಬ ನೌಕರ ಟಿವಿ ವಾಹಿನಿಯೊಂದಕ್ಕೆ ಹೇಳಿದ್ದಾಗಿ ವರದಿಯಾಗಿದೆ.

ಆದರೆ, ನೌಕರರ ಅಸಮಾಧಾನವು ಬೇಡಿಕೆಯ ಪ್ರಮಾಣಕ್ಕೆ ಅನುಗುಣವಾಗಿ ಡೆಲಿವರಿ ಪಾಲುದಾರರಿಗೆ ಆಹಾರ ದರಪಟ್ಟಿಯನ್ನು ಪರಿಷ್ಕರಿಸುವ ವ್ಯವಸ್ಥೆಗೆ ಸಂಬಂಧಿಸಿದ್ದಾಗಿದೆ ಎಂದು ಗೋಯಲ್ ತನ್ನ ಇ-ಮೈಲ್‌ನಲ್ಲಿ ತಿಳಿಸಿದ್ದಾರೆ.

“ದರ ಪರಿಷ್ಕರಣೆಯ ಬಳಿಕ ನಮ್ಮ ಡೆಲಿವರಿ ಪಾಲುದಾರರು ಅಷ್ಟೇ ಪ್ರಮಾಣದಲ್ಲಿ ಅಷ್ಟೇ ಪ್ರಮಾಣದಲ್ಲಿ ಹಣ ಗಳಿಸುತ್ತಾರೆ. ಇದರಿಂದ ನಮ್ಮ ಘಟಕಗಳ ಆರ್ಥಿಕತೆ ಸುಧಾರಿಸುತ್ತದೆ ಮತ್ತು ವ್ಯಾಪಾರವು ಹೆಚ್ಚು ಕಾರ್ಯಸಾಧುವಾಗುತ್ತದೆ. ಇದು ನಮ್ಮ ವಹಿವಾಟಿನ ವಿಸ್ತರಣೆಗೆ ಅವಕಾಶ ಮಾಡಿಕೊಟ್ಟು ಹೆಚ್ಚುಹೆಚ್ಚು ಡೆಲಿವರಿ ಪಾಲುದಾರರಿಗೆ ಉದ್ಯೋಗಾವಕಾಶ ಒದಗಿಸಲು ಸಾಧ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಕೆಲವೊಂದು ಡೆಲಿವರಿ ಹುಡುಗರಿಗೆ ದರಪಟ್ಟಿ ಪರಿಷ್ಕರಣೆ ಅರ್ಥವಾಗುವುದಿಲ್ಲ. ಅವರು ಬದಲಾವಣೆಯ ವಿರುದ್ಧ ಪ್ರತಿಭಟಿಸುತ್ತಾರೆ. ಹೌರಾದ ಈ ಪ್ರಕರಣದಲ್ಲಿ ಡೆಲಿವರಿ ಹುಡುಗರು ಸಂಸ್ಥೆಯ ಪ್ರತಿನಿಧಿಗಳ ಜೊತೆಗೆ ರಚನಾತ್ಮಕ ಮಾತುಕತೆಯಲ್ಲಿ ತೊಡಗುವುದು ಬಿಟ್ಟು ಸ್ಥಳೀಯ ರಾಜಕಾರಣಿಯೊಬ್ಬರ ಜೊತೆ ಸೇರಿಕೊಂಡು ಸಮಸ್ಯೆಯನ್ನು ತಪ್ಪಾಗಿ ಪ್ರತಿಬಿಂಬಿಸಿದರು” ಎಂದು ಗೋಯಲ್ ವಿವರಿಸಿದ್ದಾರೆ.

“ಇದು ನಮಗೆ ಗೊತ್ತಾದುದು ಹೇಗೆಂದರೆ ನಾವು ನಮ್ಮ ಡೆಲಿವರಿ ಡಾಟಾಬೇಸನ್ನು ಪರಿಶೀಲಿಸಿದಾಗ ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು” ಎಂದು ಅವರು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಬಿಜೆಪಿಯ ಉತ್ತರ ಹೌರಾ ಮಂಡಲದ ಬಿಜೆಪಿ ಕಾರ್ಯದರ್ಶಿ, ಸದಸ್ಯತ್ವ ಅಭಿಯಾನದ ಉಸ್ತುವಾರಿ ಎಂದು ಹೇಳಿಕೊಂಡಿರುವ ಸಂಜೀವ ಕುಮಾರ್ ಶುಕ್ಲಾ ಎಂಬ ಸ್ಥಳೀಯ ರಾಜಕಾರಣಿಯೊಬ್ಬ ಈ ಪ್ರಕರಣದಲ್ಲಿ ಶಾಮೀಲಾದ ಬಳಿಕ ಅದು ಪ್ರಚಾರ ಪಡೆದುಕೊಂಡಿತು. ಹೌರಾದಲ್ಲಿ ಝೊಮಾಟೊದ ಹೊಟೇಲುಗಳ ಸರಣಿಯಲ್ಲಿ ಅಲ್ಲಿನ ಬೀಫ್ ಬಿರಿಯಾನಿ ಹೊಟೇಲೊಂದನ್ನು ಸೇರಿಸಿಕೊಳ್ಳಲಾಗುತ್ತಿದೆ ಎಂಬ ವದಂತಿಯ ಬಳಿಕ ಈ ಪ್ರತಿಭಟನೆ ಜೀವತಳೆಯಿತು.

ಇತ್ತೀಚೆಗಷ್ಟೇ ಮತಾಂಧನೊಬ್ಬ ಮುಸ್ಲಿಮ್ ವ್ಯಕ್ತಿಯೊಬ್ಬ ತಂದ ಆಹಾರವನ್ನು ಸ್ವೀಕರಿಸಲು ನಿರಾಕರಿಸಿದ್ದಾಗಿ ಫೇಸ್‌ಬುಕ್‌ನಲ್ಲಿ ಪ್ರಚಾರ ಮಾಡಿದಾಗ ಝೊಮಾಟೊ ಸುದ್ದಿ ಮಾಡಿತ್ತು. “ಆಹಾರಕ್ಕೆ ಧರ್ಮವಿಲ್ಲ; ಆಹಾರವೇ ಧರ್ಮ” ಎಂದು ಪ್ರತಿಕ್ರಿಯೆ ನೀಡುವ ಮೂಲಕ ಝೊಮಾಟೊ ಮೆಚ್ಚುಗೆಗೆ ಪಾತ್ರವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...