Homeಮುಖಪುಟಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು" ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳದ ಹೌರಾದಲ್ಲಿ ಝೊಮಾಟೊ ಡೆಲಿವರಿ ನೌಕರರ ಮುಷ್ಕರಕ್ಕೂ ಆಹಾರ, ಧರ್ಮ ಅಥವಾ ನಂಬಿಕೆಗೂ ಯಾವುದೇ ಸಂಬಂಧ ಇಲ್ಲ ಎಂದು ಕಂಪನಿಯ ಸ್ಥಾಪಕರು ತನ್ನ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಹೇಳಿದ್ದು, ಅರ್ಥಪೂರ್ಣ ಉದ್ಯೋಗ ಮತ್ತು ಜೀವನ ನಿರ್ವಹಣೆಯ ಅವಕಾಶವನ್ನು ಧರ್ಮ ಮತ್ತು ವೈಯಕ್ತಿಕ ಆಹಾರದ ಆಯ್ಕೆಯ ಜೊತೆಗೆ ತಳಕುಹಾಕಲಾಗುತ್ತಿರುವ ಬಗ್ಗೆ ಎಚ್ಚರದಿಂದಿರಬೇಕು ಎಂದು ತಿಳಿಸಿದ್ದಾರೆ.

“ಗದ್ದಲವನ್ನು ಕಡೆಗಣಿಸಿ; ಅದರಿಂದ ವಿಚಲಿತರಾಗದಿರಿ ಎಂದು ಎಂದು ಸಂಸ್ಥೆಯ ಸ್ಥಾಪಕ ದೀಪಿಂದರ್ ಗೋಯಲ್ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಒತ್ತಾಯಿಸಿದ್ದಾರೆ. ಈ “ಪ್ರತಿಭಟನೆ”ಯು ಕೋಲ್ಕತ್ತಾದ ಹೌರಾ ಪ್ರದೇಶದ ಕೆಲವೇ ಡೆಲಿವರಿ ಪಾಲುದಾರರಿಗೆ ಸೀಮಿತವಾಗಿದ್ದು, ಕೆಲವು ತೀರಾ ಉತ್ಪ್ರೇಕ್ಷಿತ ವರದಿಗಳಲ್ಲಿ ಕಾಣಿಸಲಾಗಿರುವಂತೆ ಇಡೀ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಪ್ರಶ್ನೆಯು ಮೂಲತಃ ದರಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದ್ದಾಗಿದ್ದು, ಅದನ್ನು ನಾವು ಆಗಾಗ ಮಾಡುತ್ತಿರುತ್ತೇವೆ ಎಂದವರು ಹೇಳಿದ್ದಾರೆ.

ಕೋಲ್ಕತ್ತಾದ ಹೊರಭಾಗದಲ್ಲಿರುವ ಹೌರಾದ ನೌಕರರ ವಿಭಾವೊಂದು ತಾವು ಬೀಫ್ ಮತ್ತು ಪೋರ್ಕ್ (ದನ ಮತ್ತು ಹಂದಿ ಮಾಂಸ) ಇರುವ ಆಹಾರವನ್ನು ಡೆಲಿವರಿ ಮಾಡುವುದಿಲ್ಲ ಎಂದು ಕಳೆದೊಂದು ವಾರದಿಂದ ಮುಷ್ಕರ ನಡೆಸುತ್ತಿದ್ದಾರೆ.

“ಕಂಪನಿಯು ನಮ್ಮ ಬೇಡಿಕೆಗಳನ್ನು ಕೇಳುತ್ತಿಲ್ಲ. ನಮ್ಮ ಇಚ್ಛೆಗೆ ವಿರುದ್ಧವಾಗಿ ಬೀಫ್ ಮತ್ತು ಪೋರ್ಕ್ ಡೆಲಿವರಿ ಮಾಡುವಂತೆ ಒತ್ತಾಯಿಸಲಾಗುತ್ತದೆ. ಹಿಂದೂಗಳು ಬೀಫ್ ಡೆಲಿವರಿ ಮಾಡಲು ಒಪ್ಪುತ್ತಿಲ್ಲ ಮತ್ತು ಮುಸ್ಲಿಮರು ಪೋರ್ಕ್ ಡೆಲಿವರಿ ಮಾಡಲು ಬಯಸುತ್ತಿಲ್ಲ ಎಂದು ಮೌಸಿನ್ ಅಕ್ತರ್ ಎಂಬ ನೌಕರ ಟಿವಿ ವಾಹಿನಿಯೊಂದಕ್ಕೆ ಹೇಳಿದ್ದಾಗಿ ವರದಿಯಾಗಿದೆ.

ಆದರೆ, ನೌಕರರ ಅಸಮಾಧಾನವು ಬೇಡಿಕೆಯ ಪ್ರಮಾಣಕ್ಕೆ ಅನುಗುಣವಾಗಿ ಡೆಲಿವರಿ ಪಾಲುದಾರರಿಗೆ ಆಹಾರ ದರಪಟ್ಟಿಯನ್ನು ಪರಿಷ್ಕರಿಸುವ ವ್ಯವಸ್ಥೆಗೆ ಸಂಬಂಧಿಸಿದ್ದಾಗಿದೆ ಎಂದು ಗೋಯಲ್ ತನ್ನ ಇ-ಮೈಲ್‌ನಲ್ಲಿ ತಿಳಿಸಿದ್ದಾರೆ.

“ದರ ಪರಿಷ್ಕರಣೆಯ ಬಳಿಕ ನಮ್ಮ ಡೆಲಿವರಿ ಪಾಲುದಾರರು ಅಷ್ಟೇ ಪ್ರಮಾಣದಲ್ಲಿ ಅಷ್ಟೇ ಪ್ರಮಾಣದಲ್ಲಿ ಹಣ ಗಳಿಸುತ್ತಾರೆ. ಇದರಿಂದ ನಮ್ಮ ಘಟಕಗಳ ಆರ್ಥಿಕತೆ ಸುಧಾರಿಸುತ್ತದೆ ಮತ್ತು ವ್ಯಾಪಾರವು ಹೆಚ್ಚು ಕಾರ್ಯಸಾಧುವಾಗುತ್ತದೆ. ಇದು ನಮ್ಮ ವಹಿವಾಟಿನ ವಿಸ್ತರಣೆಗೆ ಅವಕಾಶ ಮಾಡಿಕೊಟ್ಟು ಹೆಚ್ಚುಹೆಚ್ಚು ಡೆಲಿವರಿ ಪಾಲುದಾರರಿಗೆ ಉದ್ಯೋಗಾವಕಾಶ ಒದಗಿಸಲು ಸಾಧ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಕೆಲವೊಂದು ಡೆಲಿವರಿ ಹುಡುಗರಿಗೆ ದರಪಟ್ಟಿ ಪರಿಷ್ಕರಣೆ ಅರ್ಥವಾಗುವುದಿಲ್ಲ. ಅವರು ಬದಲಾವಣೆಯ ವಿರುದ್ಧ ಪ್ರತಿಭಟಿಸುತ್ತಾರೆ. ಹೌರಾದ ಈ ಪ್ರಕರಣದಲ್ಲಿ ಡೆಲಿವರಿ ಹುಡುಗರು ಸಂಸ್ಥೆಯ ಪ್ರತಿನಿಧಿಗಳ ಜೊತೆಗೆ ರಚನಾತ್ಮಕ ಮಾತುಕತೆಯಲ್ಲಿ ತೊಡಗುವುದು ಬಿಟ್ಟು ಸ್ಥಳೀಯ ರಾಜಕಾರಣಿಯೊಬ್ಬರ ಜೊತೆ ಸೇರಿಕೊಂಡು ಸಮಸ್ಯೆಯನ್ನು ತಪ್ಪಾಗಿ ಪ್ರತಿಬಿಂಬಿಸಿದರು” ಎಂದು ಗೋಯಲ್ ವಿವರಿಸಿದ್ದಾರೆ.

“ಇದು ನಮಗೆ ಗೊತ್ತಾದುದು ಹೇಗೆಂದರೆ ನಾವು ನಮ್ಮ ಡೆಲಿವರಿ ಡಾಟಾಬೇಸನ್ನು ಪರಿಶೀಲಿಸಿದಾಗ ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು” ಎಂದು ಅವರು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಬಿಜೆಪಿಯ ಉತ್ತರ ಹೌರಾ ಮಂಡಲದ ಬಿಜೆಪಿ ಕಾರ್ಯದರ್ಶಿ, ಸದಸ್ಯತ್ವ ಅಭಿಯಾನದ ಉಸ್ತುವಾರಿ ಎಂದು ಹೇಳಿಕೊಂಡಿರುವ ಸಂಜೀವ ಕುಮಾರ್ ಶುಕ್ಲಾ ಎಂಬ ಸ್ಥಳೀಯ ರಾಜಕಾರಣಿಯೊಬ್ಬ ಈ ಪ್ರಕರಣದಲ್ಲಿ ಶಾಮೀಲಾದ ಬಳಿಕ ಅದು ಪ್ರಚಾರ ಪಡೆದುಕೊಂಡಿತು. ಹೌರಾದಲ್ಲಿ ಝೊಮಾಟೊದ ಹೊಟೇಲುಗಳ ಸರಣಿಯಲ್ಲಿ ಅಲ್ಲಿನ ಬೀಫ್ ಬಿರಿಯಾನಿ ಹೊಟೇಲೊಂದನ್ನು ಸೇರಿಸಿಕೊಳ್ಳಲಾಗುತ್ತಿದೆ ಎಂಬ ವದಂತಿಯ ಬಳಿಕ ಈ ಪ್ರತಿಭಟನೆ ಜೀವತಳೆಯಿತು.

ಇತ್ತೀಚೆಗಷ್ಟೇ ಮತಾಂಧನೊಬ್ಬ ಮುಸ್ಲಿಮ್ ವ್ಯಕ್ತಿಯೊಬ್ಬ ತಂದ ಆಹಾರವನ್ನು ಸ್ವೀಕರಿಸಲು ನಿರಾಕರಿಸಿದ್ದಾಗಿ ಫೇಸ್‌ಬುಕ್‌ನಲ್ಲಿ ಪ್ರಚಾರ ಮಾಡಿದಾಗ ಝೊಮಾಟೊ ಸುದ್ದಿ ಮಾಡಿತ್ತು. “ಆಹಾರಕ್ಕೆ ಧರ್ಮವಿಲ್ಲ; ಆಹಾರವೇ ಧರ್ಮ” ಎಂದು ಪ್ರತಿಕ್ರಿಯೆ ನೀಡುವ ಮೂಲಕ ಝೊಮಾಟೊ ಮೆಚ್ಚುಗೆಗೆ ಪಾತ್ರವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...