Homeಮುಖಪುಟಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು" ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳದ ಹೌರಾದಲ್ಲಿ ಝೊಮಾಟೊ ಡೆಲಿವರಿ ನೌಕರರ ಮುಷ್ಕರಕ್ಕೂ ಆಹಾರ, ಧರ್ಮ ಅಥವಾ ನಂಬಿಕೆಗೂ ಯಾವುದೇ ಸಂಬಂಧ ಇಲ್ಲ ಎಂದು ಕಂಪನಿಯ ಸ್ಥಾಪಕರು ತನ್ನ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಹೇಳಿದ್ದು, ಅರ್ಥಪೂರ್ಣ ಉದ್ಯೋಗ ಮತ್ತು ಜೀವನ ನಿರ್ವಹಣೆಯ ಅವಕಾಶವನ್ನು ಧರ್ಮ ಮತ್ತು ವೈಯಕ್ತಿಕ ಆಹಾರದ ಆಯ್ಕೆಯ ಜೊತೆಗೆ ತಳಕುಹಾಕಲಾಗುತ್ತಿರುವ ಬಗ್ಗೆ ಎಚ್ಚರದಿಂದಿರಬೇಕು ಎಂದು ತಿಳಿಸಿದ್ದಾರೆ.

“ಗದ್ದಲವನ್ನು ಕಡೆಗಣಿಸಿ; ಅದರಿಂದ ವಿಚಲಿತರಾಗದಿರಿ ಎಂದು ಎಂದು ಸಂಸ್ಥೆಯ ಸ್ಥಾಪಕ ದೀಪಿಂದರ್ ಗೋಯಲ್ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಒತ್ತಾಯಿಸಿದ್ದಾರೆ. ಈ “ಪ್ರತಿಭಟನೆ”ಯು ಕೋಲ್ಕತ್ತಾದ ಹೌರಾ ಪ್ರದೇಶದ ಕೆಲವೇ ಡೆಲಿವರಿ ಪಾಲುದಾರರಿಗೆ ಸೀಮಿತವಾಗಿದ್ದು, ಕೆಲವು ತೀರಾ ಉತ್ಪ್ರೇಕ್ಷಿತ ವರದಿಗಳಲ್ಲಿ ಕಾಣಿಸಲಾಗಿರುವಂತೆ ಇಡೀ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಪ್ರಶ್ನೆಯು ಮೂಲತಃ ದರಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದ್ದಾಗಿದ್ದು, ಅದನ್ನು ನಾವು ಆಗಾಗ ಮಾಡುತ್ತಿರುತ್ತೇವೆ ಎಂದವರು ಹೇಳಿದ್ದಾರೆ.

ಕೋಲ್ಕತ್ತಾದ ಹೊರಭಾಗದಲ್ಲಿರುವ ಹೌರಾದ ನೌಕರರ ವಿಭಾವೊಂದು ತಾವು ಬೀಫ್ ಮತ್ತು ಪೋರ್ಕ್ (ದನ ಮತ್ತು ಹಂದಿ ಮಾಂಸ) ಇರುವ ಆಹಾರವನ್ನು ಡೆಲಿವರಿ ಮಾಡುವುದಿಲ್ಲ ಎಂದು ಕಳೆದೊಂದು ವಾರದಿಂದ ಮುಷ್ಕರ ನಡೆಸುತ್ತಿದ್ದಾರೆ.

“ಕಂಪನಿಯು ನಮ್ಮ ಬೇಡಿಕೆಗಳನ್ನು ಕೇಳುತ್ತಿಲ್ಲ. ನಮ್ಮ ಇಚ್ಛೆಗೆ ವಿರುದ್ಧವಾಗಿ ಬೀಫ್ ಮತ್ತು ಪೋರ್ಕ್ ಡೆಲಿವರಿ ಮಾಡುವಂತೆ ಒತ್ತಾಯಿಸಲಾಗುತ್ತದೆ. ಹಿಂದೂಗಳು ಬೀಫ್ ಡೆಲಿವರಿ ಮಾಡಲು ಒಪ್ಪುತ್ತಿಲ್ಲ ಮತ್ತು ಮುಸ್ಲಿಮರು ಪೋರ್ಕ್ ಡೆಲಿವರಿ ಮಾಡಲು ಬಯಸುತ್ತಿಲ್ಲ ಎಂದು ಮೌಸಿನ್ ಅಕ್ತರ್ ಎಂಬ ನೌಕರ ಟಿವಿ ವಾಹಿನಿಯೊಂದಕ್ಕೆ ಹೇಳಿದ್ದಾಗಿ ವರದಿಯಾಗಿದೆ.

ಆದರೆ, ನೌಕರರ ಅಸಮಾಧಾನವು ಬೇಡಿಕೆಯ ಪ್ರಮಾಣಕ್ಕೆ ಅನುಗುಣವಾಗಿ ಡೆಲಿವರಿ ಪಾಲುದಾರರಿಗೆ ಆಹಾರ ದರಪಟ್ಟಿಯನ್ನು ಪರಿಷ್ಕರಿಸುವ ವ್ಯವಸ್ಥೆಗೆ ಸಂಬಂಧಿಸಿದ್ದಾಗಿದೆ ಎಂದು ಗೋಯಲ್ ತನ್ನ ಇ-ಮೈಲ್‌ನಲ್ಲಿ ತಿಳಿಸಿದ್ದಾರೆ.

“ದರ ಪರಿಷ್ಕರಣೆಯ ಬಳಿಕ ನಮ್ಮ ಡೆಲಿವರಿ ಪಾಲುದಾರರು ಅಷ್ಟೇ ಪ್ರಮಾಣದಲ್ಲಿ ಅಷ್ಟೇ ಪ್ರಮಾಣದಲ್ಲಿ ಹಣ ಗಳಿಸುತ್ತಾರೆ. ಇದರಿಂದ ನಮ್ಮ ಘಟಕಗಳ ಆರ್ಥಿಕತೆ ಸುಧಾರಿಸುತ್ತದೆ ಮತ್ತು ವ್ಯಾಪಾರವು ಹೆಚ್ಚು ಕಾರ್ಯಸಾಧುವಾಗುತ್ತದೆ. ಇದು ನಮ್ಮ ವಹಿವಾಟಿನ ವಿಸ್ತರಣೆಗೆ ಅವಕಾಶ ಮಾಡಿಕೊಟ್ಟು ಹೆಚ್ಚುಹೆಚ್ಚು ಡೆಲಿವರಿ ಪಾಲುದಾರರಿಗೆ ಉದ್ಯೋಗಾವಕಾಶ ಒದಗಿಸಲು ಸಾಧ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಕೆಲವೊಂದು ಡೆಲಿವರಿ ಹುಡುಗರಿಗೆ ದರಪಟ್ಟಿ ಪರಿಷ್ಕರಣೆ ಅರ್ಥವಾಗುವುದಿಲ್ಲ. ಅವರು ಬದಲಾವಣೆಯ ವಿರುದ್ಧ ಪ್ರತಿಭಟಿಸುತ್ತಾರೆ. ಹೌರಾದ ಈ ಪ್ರಕರಣದಲ್ಲಿ ಡೆಲಿವರಿ ಹುಡುಗರು ಸಂಸ್ಥೆಯ ಪ್ರತಿನಿಧಿಗಳ ಜೊತೆಗೆ ರಚನಾತ್ಮಕ ಮಾತುಕತೆಯಲ್ಲಿ ತೊಡಗುವುದು ಬಿಟ್ಟು ಸ್ಥಳೀಯ ರಾಜಕಾರಣಿಯೊಬ್ಬರ ಜೊತೆ ಸೇರಿಕೊಂಡು ಸಮಸ್ಯೆಯನ್ನು ತಪ್ಪಾಗಿ ಪ್ರತಿಬಿಂಬಿಸಿದರು” ಎಂದು ಗೋಯಲ್ ವಿವರಿಸಿದ್ದಾರೆ.

“ಇದು ನಮಗೆ ಗೊತ್ತಾದುದು ಹೇಗೆಂದರೆ ನಾವು ನಮ್ಮ ಡೆಲಿವರಿ ಡಾಟಾಬೇಸನ್ನು ಪರಿಶೀಲಿಸಿದಾಗ ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು” ಎಂದು ಅವರು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಬಿಜೆಪಿಯ ಉತ್ತರ ಹೌರಾ ಮಂಡಲದ ಬಿಜೆಪಿ ಕಾರ್ಯದರ್ಶಿ, ಸದಸ್ಯತ್ವ ಅಭಿಯಾನದ ಉಸ್ತುವಾರಿ ಎಂದು ಹೇಳಿಕೊಂಡಿರುವ ಸಂಜೀವ ಕುಮಾರ್ ಶುಕ್ಲಾ ಎಂಬ ಸ್ಥಳೀಯ ರಾಜಕಾರಣಿಯೊಬ್ಬ ಈ ಪ್ರಕರಣದಲ್ಲಿ ಶಾಮೀಲಾದ ಬಳಿಕ ಅದು ಪ್ರಚಾರ ಪಡೆದುಕೊಂಡಿತು. ಹೌರಾದಲ್ಲಿ ಝೊಮಾಟೊದ ಹೊಟೇಲುಗಳ ಸರಣಿಯಲ್ಲಿ ಅಲ್ಲಿನ ಬೀಫ್ ಬಿರಿಯಾನಿ ಹೊಟೇಲೊಂದನ್ನು ಸೇರಿಸಿಕೊಳ್ಳಲಾಗುತ್ತಿದೆ ಎಂಬ ವದಂತಿಯ ಬಳಿಕ ಈ ಪ್ರತಿಭಟನೆ ಜೀವತಳೆಯಿತು.

ಇತ್ತೀಚೆಗಷ್ಟೇ ಮತಾಂಧನೊಬ್ಬ ಮುಸ್ಲಿಮ್ ವ್ಯಕ್ತಿಯೊಬ್ಬ ತಂದ ಆಹಾರವನ್ನು ಸ್ವೀಕರಿಸಲು ನಿರಾಕರಿಸಿದ್ದಾಗಿ ಫೇಸ್‌ಬುಕ್‌ನಲ್ಲಿ ಪ್ರಚಾರ ಮಾಡಿದಾಗ ಝೊಮಾಟೊ ಸುದ್ದಿ ಮಾಡಿತ್ತು. “ಆಹಾರಕ್ಕೆ ಧರ್ಮವಿಲ್ಲ; ಆಹಾರವೇ ಧರ್ಮ” ಎಂದು ಪ್ರತಿಕ್ರಿಯೆ ನೀಡುವ ಮೂಲಕ ಝೊಮಾಟೊ ಮೆಚ್ಚುಗೆಗೆ ಪಾತ್ರವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...