Homeಮುಖಪುಟಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು" ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳದ ಹೌರಾದಲ್ಲಿ ಝೊಮಾಟೊ ಡೆಲಿವರಿ ನೌಕರರ ಮುಷ್ಕರಕ್ಕೂ ಆಹಾರ, ಧರ್ಮ ಅಥವಾ ನಂಬಿಕೆಗೂ ಯಾವುದೇ ಸಂಬಂಧ ಇಲ್ಲ ಎಂದು ಕಂಪನಿಯ ಸ್ಥಾಪಕರು ತನ್ನ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಹೇಳಿದ್ದು, ಅರ್ಥಪೂರ್ಣ ಉದ್ಯೋಗ ಮತ್ತು ಜೀವನ ನಿರ್ವಹಣೆಯ ಅವಕಾಶವನ್ನು ಧರ್ಮ ಮತ್ತು ವೈಯಕ್ತಿಕ ಆಹಾರದ ಆಯ್ಕೆಯ ಜೊತೆಗೆ ತಳಕುಹಾಕಲಾಗುತ್ತಿರುವ ಬಗ್ಗೆ ಎಚ್ಚರದಿಂದಿರಬೇಕು ಎಂದು ತಿಳಿಸಿದ್ದಾರೆ.

“ಗದ್ದಲವನ್ನು ಕಡೆಗಣಿಸಿ; ಅದರಿಂದ ವಿಚಲಿತರಾಗದಿರಿ ಎಂದು ಎಂದು ಸಂಸ್ಥೆಯ ಸ್ಥಾಪಕ ದೀಪಿಂದರ್ ಗೋಯಲ್ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಒತ್ತಾಯಿಸಿದ್ದಾರೆ. ಈ “ಪ್ರತಿಭಟನೆ”ಯು ಕೋಲ್ಕತ್ತಾದ ಹೌರಾ ಪ್ರದೇಶದ ಕೆಲವೇ ಡೆಲಿವರಿ ಪಾಲುದಾರರಿಗೆ ಸೀಮಿತವಾಗಿದ್ದು, ಕೆಲವು ತೀರಾ ಉತ್ಪ್ರೇಕ್ಷಿತ ವರದಿಗಳಲ್ಲಿ ಕಾಣಿಸಲಾಗಿರುವಂತೆ ಇಡೀ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಪ್ರಶ್ನೆಯು ಮೂಲತಃ ದರಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದ್ದಾಗಿದ್ದು, ಅದನ್ನು ನಾವು ಆಗಾಗ ಮಾಡುತ್ತಿರುತ್ತೇವೆ ಎಂದವರು ಹೇಳಿದ್ದಾರೆ.

ಕೋಲ್ಕತ್ತಾದ ಹೊರಭಾಗದಲ್ಲಿರುವ ಹೌರಾದ ನೌಕರರ ವಿಭಾವೊಂದು ತಾವು ಬೀಫ್ ಮತ್ತು ಪೋರ್ಕ್ (ದನ ಮತ್ತು ಹಂದಿ ಮಾಂಸ) ಇರುವ ಆಹಾರವನ್ನು ಡೆಲಿವರಿ ಮಾಡುವುದಿಲ್ಲ ಎಂದು ಕಳೆದೊಂದು ವಾರದಿಂದ ಮುಷ್ಕರ ನಡೆಸುತ್ತಿದ್ದಾರೆ.

“ಕಂಪನಿಯು ನಮ್ಮ ಬೇಡಿಕೆಗಳನ್ನು ಕೇಳುತ್ತಿಲ್ಲ. ನಮ್ಮ ಇಚ್ಛೆಗೆ ವಿರುದ್ಧವಾಗಿ ಬೀಫ್ ಮತ್ತು ಪೋರ್ಕ್ ಡೆಲಿವರಿ ಮಾಡುವಂತೆ ಒತ್ತಾಯಿಸಲಾಗುತ್ತದೆ. ಹಿಂದೂಗಳು ಬೀಫ್ ಡೆಲಿವರಿ ಮಾಡಲು ಒಪ್ಪುತ್ತಿಲ್ಲ ಮತ್ತು ಮುಸ್ಲಿಮರು ಪೋರ್ಕ್ ಡೆಲಿವರಿ ಮಾಡಲು ಬಯಸುತ್ತಿಲ್ಲ ಎಂದು ಮೌಸಿನ್ ಅಕ್ತರ್ ಎಂಬ ನೌಕರ ಟಿವಿ ವಾಹಿನಿಯೊಂದಕ್ಕೆ ಹೇಳಿದ್ದಾಗಿ ವರದಿಯಾಗಿದೆ.

ಆದರೆ, ನೌಕರರ ಅಸಮಾಧಾನವು ಬೇಡಿಕೆಯ ಪ್ರಮಾಣಕ್ಕೆ ಅನುಗುಣವಾಗಿ ಡೆಲಿವರಿ ಪಾಲುದಾರರಿಗೆ ಆಹಾರ ದರಪಟ್ಟಿಯನ್ನು ಪರಿಷ್ಕರಿಸುವ ವ್ಯವಸ್ಥೆಗೆ ಸಂಬಂಧಿಸಿದ್ದಾಗಿದೆ ಎಂದು ಗೋಯಲ್ ತನ್ನ ಇ-ಮೈಲ್‌ನಲ್ಲಿ ತಿಳಿಸಿದ್ದಾರೆ.

“ದರ ಪರಿಷ್ಕರಣೆಯ ಬಳಿಕ ನಮ್ಮ ಡೆಲಿವರಿ ಪಾಲುದಾರರು ಅಷ್ಟೇ ಪ್ರಮಾಣದಲ್ಲಿ ಅಷ್ಟೇ ಪ್ರಮಾಣದಲ್ಲಿ ಹಣ ಗಳಿಸುತ್ತಾರೆ. ಇದರಿಂದ ನಮ್ಮ ಘಟಕಗಳ ಆರ್ಥಿಕತೆ ಸುಧಾರಿಸುತ್ತದೆ ಮತ್ತು ವ್ಯಾಪಾರವು ಹೆಚ್ಚು ಕಾರ್ಯಸಾಧುವಾಗುತ್ತದೆ. ಇದು ನಮ್ಮ ವಹಿವಾಟಿನ ವಿಸ್ತರಣೆಗೆ ಅವಕಾಶ ಮಾಡಿಕೊಟ್ಟು ಹೆಚ್ಚುಹೆಚ್ಚು ಡೆಲಿವರಿ ಪಾಲುದಾರರಿಗೆ ಉದ್ಯೋಗಾವಕಾಶ ಒದಗಿಸಲು ಸಾಧ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಕೆಲವೊಂದು ಡೆಲಿವರಿ ಹುಡುಗರಿಗೆ ದರಪಟ್ಟಿ ಪರಿಷ್ಕರಣೆ ಅರ್ಥವಾಗುವುದಿಲ್ಲ. ಅವರು ಬದಲಾವಣೆಯ ವಿರುದ್ಧ ಪ್ರತಿಭಟಿಸುತ್ತಾರೆ. ಹೌರಾದ ಈ ಪ್ರಕರಣದಲ್ಲಿ ಡೆಲಿವರಿ ಹುಡುಗರು ಸಂಸ್ಥೆಯ ಪ್ರತಿನಿಧಿಗಳ ಜೊತೆಗೆ ರಚನಾತ್ಮಕ ಮಾತುಕತೆಯಲ್ಲಿ ತೊಡಗುವುದು ಬಿಟ್ಟು ಸ್ಥಳೀಯ ರಾಜಕಾರಣಿಯೊಬ್ಬರ ಜೊತೆ ಸೇರಿಕೊಂಡು ಸಮಸ್ಯೆಯನ್ನು ತಪ್ಪಾಗಿ ಪ್ರತಿಬಿಂಬಿಸಿದರು” ಎಂದು ಗೋಯಲ್ ವಿವರಿಸಿದ್ದಾರೆ.

“ಇದು ನಮಗೆ ಗೊತ್ತಾದುದು ಹೇಗೆಂದರೆ ನಾವು ನಮ್ಮ ಡೆಲಿವರಿ ಡಾಟಾಬೇಸನ್ನು ಪರಿಶೀಲಿಸಿದಾಗ ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು” ಎಂದು ಅವರು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಬಿಜೆಪಿಯ ಉತ್ತರ ಹೌರಾ ಮಂಡಲದ ಬಿಜೆಪಿ ಕಾರ್ಯದರ್ಶಿ, ಸದಸ್ಯತ್ವ ಅಭಿಯಾನದ ಉಸ್ತುವಾರಿ ಎಂದು ಹೇಳಿಕೊಂಡಿರುವ ಸಂಜೀವ ಕುಮಾರ್ ಶುಕ್ಲಾ ಎಂಬ ಸ್ಥಳೀಯ ರಾಜಕಾರಣಿಯೊಬ್ಬ ಈ ಪ್ರಕರಣದಲ್ಲಿ ಶಾಮೀಲಾದ ಬಳಿಕ ಅದು ಪ್ರಚಾರ ಪಡೆದುಕೊಂಡಿತು. ಹೌರಾದಲ್ಲಿ ಝೊಮಾಟೊದ ಹೊಟೇಲುಗಳ ಸರಣಿಯಲ್ಲಿ ಅಲ್ಲಿನ ಬೀಫ್ ಬಿರಿಯಾನಿ ಹೊಟೇಲೊಂದನ್ನು ಸೇರಿಸಿಕೊಳ್ಳಲಾಗುತ್ತಿದೆ ಎಂಬ ವದಂತಿಯ ಬಳಿಕ ಈ ಪ್ರತಿಭಟನೆ ಜೀವತಳೆಯಿತು.

ಇತ್ತೀಚೆಗಷ್ಟೇ ಮತಾಂಧನೊಬ್ಬ ಮುಸ್ಲಿಮ್ ವ್ಯಕ್ತಿಯೊಬ್ಬ ತಂದ ಆಹಾರವನ್ನು ಸ್ವೀಕರಿಸಲು ನಿರಾಕರಿಸಿದ್ದಾಗಿ ಫೇಸ್‌ಬುಕ್‌ನಲ್ಲಿ ಪ್ರಚಾರ ಮಾಡಿದಾಗ ಝೊಮಾಟೊ ಸುದ್ದಿ ಮಾಡಿತ್ತು. “ಆಹಾರಕ್ಕೆ ಧರ್ಮವಿಲ್ಲ; ಆಹಾರವೇ ಧರ್ಮ” ಎಂದು ಪ್ರತಿಕ್ರಿಯೆ ನೀಡುವ ಮೂಲಕ ಝೊಮಾಟೊ ಮೆಚ್ಚುಗೆಗೆ ಪಾತ್ರವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...