Homeಮುಖಪುಟಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು" ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳದ ಹೌರಾದಲ್ಲಿ ಝೊಮಾಟೊ ಡೆಲಿವರಿ ನೌಕರರ ಮುಷ್ಕರಕ್ಕೂ ಆಹಾರ, ಧರ್ಮ ಅಥವಾ ನಂಬಿಕೆಗೂ ಯಾವುದೇ ಸಂಬಂಧ ಇಲ್ಲ ಎಂದು ಕಂಪನಿಯ ಸ್ಥಾಪಕರು ತನ್ನ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಹೇಳಿದ್ದು, ಅರ್ಥಪೂರ್ಣ ಉದ್ಯೋಗ ಮತ್ತು ಜೀವನ ನಿರ್ವಹಣೆಯ ಅವಕಾಶವನ್ನು ಧರ್ಮ ಮತ್ತು ವೈಯಕ್ತಿಕ ಆಹಾರದ ಆಯ್ಕೆಯ ಜೊತೆಗೆ ತಳಕುಹಾಕಲಾಗುತ್ತಿರುವ ಬಗ್ಗೆ ಎಚ್ಚರದಿಂದಿರಬೇಕು ಎಂದು ತಿಳಿಸಿದ್ದಾರೆ.

“ಗದ್ದಲವನ್ನು ಕಡೆಗಣಿಸಿ; ಅದರಿಂದ ವಿಚಲಿತರಾಗದಿರಿ ಎಂದು ಎಂದು ಸಂಸ್ಥೆಯ ಸ್ಥಾಪಕ ದೀಪಿಂದರ್ ಗೋಯಲ್ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಒತ್ತಾಯಿಸಿದ್ದಾರೆ. ಈ “ಪ್ರತಿಭಟನೆ”ಯು ಕೋಲ್ಕತ್ತಾದ ಹೌರಾ ಪ್ರದೇಶದ ಕೆಲವೇ ಡೆಲಿವರಿ ಪಾಲುದಾರರಿಗೆ ಸೀಮಿತವಾಗಿದ್ದು, ಕೆಲವು ತೀರಾ ಉತ್ಪ್ರೇಕ್ಷಿತ ವರದಿಗಳಲ್ಲಿ ಕಾಣಿಸಲಾಗಿರುವಂತೆ ಇಡೀ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಪ್ರಶ್ನೆಯು ಮೂಲತಃ ದರಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದ್ದಾಗಿದ್ದು, ಅದನ್ನು ನಾವು ಆಗಾಗ ಮಾಡುತ್ತಿರುತ್ತೇವೆ ಎಂದವರು ಹೇಳಿದ್ದಾರೆ.

ಕೋಲ್ಕತ್ತಾದ ಹೊರಭಾಗದಲ್ಲಿರುವ ಹೌರಾದ ನೌಕರರ ವಿಭಾವೊಂದು ತಾವು ಬೀಫ್ ಮತ್ತು ಪೋರ್ಕ್ (ದನ ಮತ್ತು ಹಂದಿ ಮಾಂಸ) ಇರುವ ಆಹಾರವನ್ನು ಡೆಲಿವರಿ ಮಾಡುವುದಿಲ್ಲ ಎಂದು ಕಳೆದೊಂದು ವಾರದಿಂದ ಮುಷ್ಕರ ನಡೆಸುತ್ತಿದ್ದಾರೆ.

“ಕಂಪನಿಯು ನಮ್ಮ ಬೇಡಿಕೆಗಳನ್ನು ಕೇಳುತ್ತಿಲ್ಲ. ನಮ್ಮ ಇಚ್ಛೆಗೆ ವಿರುದ್ಧವಾಗಿ ಬೀಫ್ ಮತ್ತು ಪೋರ್ಕ್ ಡೆಲಿವರಿ ಮಾಡುವಂತೆ ಒತ್ತಾಯಿಸಲಾಗುತ್ತದೆ. ಹಿಂದೂಗಳು ಬೀಫ್ ಡೆಲಿವರಿ ಮಾಡಲು ಒಪ್ಪುತ್ತಿಲ್ಲ ಮತ್ತು ಮುಸ್ಲಿಮರು ಪೋರ್ಕ್ ಡೆಲಿವರಿ ಮಾಡಲು ಬಯಸುತ್ತಿಲ್ಲ ಎಂದು ಮೌಸಿನ್ ಅಕ್ತರ್ ಎಂಬ ನೌಕರ ಟಿವಿ ವಾಹಿನಿಯೊಂದಕ್ಕೆ ಹೇಳಿದ್ದಾಗಿ ವರದಿಯಾಗಿದೆ.

ಆದರೆ, ನೌಕರರ ಅಸಮಾಧಾನವು ಬೇಡಿಕೆಯ ಪ್ರಮಾಣಕ್ಕೆ ಅನುಗುಣವಾಗಿ ಡೆಲಿವರಿ ಪಾಲುದಾರರಿಗೆ ಆಹಾರ ದರಪಟ್ಟಿಯನ್ನು ಪರಿಷ್ಕರಿಸುವ ವ್ಯವಸ್ಥೆಗೆ ಸಂಬಂಧಿಸಿದ್ದಾಗಿದೆ ಎಂದು ಗೋಯಲ್ ತನ್ನ ಇ-ಮೈಲ್‌ನಲ್ಲಿ ತಿಳಿಸಿದ್ದಾರೆ.

“ದರ ಪರಿಷ್ಕರಣೆಯ ಬಳಿಕ ನಮ್ಮ ಡೆಲಿವರಿ ಪಾಲುದಾರರು ಅಷ್ಟೇ ಪ್ರಮಾಣದಲ್ಲಿ ಅಷ್ಟೇ ಪ್ರಮಾಣದಲ್ಲಿ ಹಣ ಗಳಿಸುತ್ತಾರೆ. ಇದರಿಂದ ನಮ್ಮ ಘಟಕಗಳ ಆರ್ಥಿಕತೆ ಸುಧಾರಿಸುತ್ತದೆ ಮತ್ತು ವ್ಯಾಪಾರವು ಹೆಚ್ಚು ಕಾರ್ಯಸಾಧುವಾಗುತ್ತದೆ. ಇದು ನಮ್ಮ ವಹಿವಾಟಿನ ವಿಸ್ತರಣೆಗೆ ಅವಕಾಶ ಮಾಡಿಕೊಟ್ಟು ಹೆಚ್ಚುಹೆಚ್ಚು ಡೆಲಿವರಿ ಪಾಲುದಾರರಿಗೆ ಉದ್ಯೋಗಾವಕಾಶ ಒದಗಿಸಲು ಸಾಧ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಕೆಲವೊಂದು ಡೆಲಿವರಿ ಹುಡುಗರಿಗೆ ದರಪಟ್ಟಿ ಪರಿಷ್ಕರಣೆ ಅರ್ಥವಾಗುವುದಿಲ್ಲ. ಅವರು ಬದಲಾವಣೆಯ ವಿರುದ್ಧ ಪ್ರತಿಭಟಿಸುತ್ತಾರೆ. ಹೌರಾದ ಈ ಪ್ರಕರಣದಲ್ಲಿ ಡೆಲಿವರಿ ಹುಡುಗರು ಸಂಸ್ಥೆಯ ಪ್ರತಿನಿಧಿಗಳ ಜೊತೆಗೆ ರಚನಾತ್ಮಕ ಮಾತುಕತೆಯಲ್ಲಿ ತೊಡಗುವುದು ಬಿಟ್ಟು ಸ್ಥಳೀಯ ರಾಜಕಾರಣಿಯೊಬ್ಬರ ಜೊತೆ ಸೇರಿಕೊಂಡು ಸಮಸ್ಯೆಯನ್ನು ತಪ್ಪಾಗಿ ಪ್ರತಿಬಿಂಬಿಸಿದರು” ಎಂದು ಗೋಯಲ್ ವಿವರಿಸಿದ್ದಾರೆ.

“ಇದು ನಮಗೆ ಗೊತ್ತಾದುದು ಹೇಗೆಂದರೆ ನಾವು ನಮ್ಮ ಡೆಲಿವರಿ ಡಾಟಾಬೇಸನ್ನು ಪರಿಶೀಲಿಸಿದಾಗ ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು” ಎಂದು ಅವರು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಬಿಜೆಪಿಯ ಉತ್ತರ ಹೌರಾ ಮಂಡಲದ ಬಿಜೆಪಿ ಕಾರ್ಯದರ್ಶಿ, ಸದಸ್ಯತ್ವ ಅಭಿಯಾನದ ಉಸ್ತುವಾರಿ ಎಂದು ಹೇಳಿಕೊಂಡಿರುವ ಸಂಜೀವ ಕುಮಾರ್ ಶುಕ್ಲಾ ಎಂಬ ಸ್ಥಳೀಯ ರಾಜಕಾರಣಿಯೊಬ್ಬ ಈ ಪ್ರಕರಣದಲ್ಲಿ ಶಾಮೀಲಾದ ಬಳಿಕ ಅದು ಪ್ರಚಾರ ಪಡೆದುಕೊಂಡಿತು. ಹೌರಾದಲ್ಲಿ ಝೊಮಾಟೊದ ಹೊಟೇಲುಗಳ ಸರಣಿಯಲ್ಲಿ ಅಲ್ಲಿನ ಬೀಫ್ ಬಿರಿಯಾನಿ ಹೊಟೇಲೊಂದನ್ನು ಸೇರಿಸಿಕೊಳ್ಳಲಾಗುತ್ತಿದೆ ಎಂಬ ವದಂತಿಯ ಬಳಿಕ ಈ ಪ್ರತಿಭಟನೆ ಜೀವತಳೆಯಿತು.

ಇತ್ತೀಚೆಗಷ್ಟೇ ಮತಾಂಧನೊಬ್ಬ ಮುಸ್ಲಿಮ್ ವ್ಯಕ್ತಿಯೊಬ್ಬ ತಂದ ಆಹಾರವನ್ನು ಸ್ವೀಕರಿಸಲು ನಿರಾಕರಿಸಿದ್ದಾಗಿ ಫೇಸ್‌ಬುಕ್‌ನಲ್ಲಿ ಪ್ರಚಾರ ಮಾಡಿದಾಗ ಝೊಮಾಟೊ ಸುದ್ದಿ ಮಾಡಿತ್ತು. “ಆಹಾರಕ್ಕೆ ಧರ್ಮವಿಲ್ಲ; ಆಹಾರವೇ ಧರ್ಮ” ಎಂದು ಪ್ರತಿಕ್ರಿಯೆ ನೀಡುವ ಮೂಲಕ ಝೊಮಾಟೊ ಮೆಚ್ಚುಗೆಗೆ ಪಾತ್ರವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...