Homeಮುಖಪುಟಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು" ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳದ ಹೌರಾದಲ್ಲಿ ಝೊಮಾಟೊ ಡೆಲಿವರಿ ನೌಕರರ ಮುಷ್ಕರಕ್ಕೂ ಆಹಾರ, ಧರ್ಮ ಅಥವಾ ನಂಬಿಕೆಗೂ ಯಾವುದೇ ಸಂಬಂಧ ಇಲ್ಲ ಎಂದು ಕಂಪನಿಯ ಸ್ಥಾಪಕರು ತನ್ನ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಹೇಳಿದ್ದು, ಅರ್ಥಪೂರ್ಣ ಉದ್ಯೋಗ ಮತ್ತು ಜೀವನ ನಿರ್ವಹಣೆಯ ಅವಕಾಶವನ್ನು ಧರ್ಮ ಮತ್ತು ವೈಯಕ್ತಿಕ ಆಹಾರದ ಆಯ್ಕೆಯ ಜೊತೆಗೆ ತಳಕುಹಾಕಲಾಗುತ್ತಿರುವ ಬಗ್ಗೆ ಎಚ್ಚರದಿಂದಿರಬೇಕು ಎಂದು ತಿಳಿಸಿದ್ದಾರೆ.

“ಗದ್ದಲವನ್ನು ಕಡೆಗಣಿಸಿ; ಅದರಿಂದ ವಿಚಲಿತರಾಗದಿರಿ ಎಂದು ಎಂದು ಸಂಸ್ಥೆಯ ಸ್ಥಾಪಕ ದೀಪಿಂದರ್ ಗೋಯಲ್ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಒತ್ತಾಯಿಸಿದ್ದಾರೆ. ಈ “ಪ್ರತಿಭಟನೆ”ಯು ಕೋಲ್ಕತ್ತಾದ ಹೌರಾ ಪ್ರದೇಶದ ಕೆಲವೇ ಡೆಲಿವರಿ ಪಾಲುದಾರರಿಗೆ ಸೀಮಿತವಾಗಿದ್ದು, ಕೆಲವು ತೀರಾ ಉತ್ಪ್ರೇಕ್ಷಿತ ವರದಿಗಳಲ್ಲಿ ಕಾಣಿಸಲಾಗಿರುವಂತೆ ಇಡೀ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಪ್ರಶ್ನೆಯು ಮೂಲತಃ ದರಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದ್ದಾಗಿದ್ದು, ಅದನ್ನು ನಾವು ಆಗಾಗ ಮಾಡುತ್ತಿರುತ್ತೇವೆ ಎಂದವರು ಹೇಳಿದ್ದಾರೆ.

ಕೋಲ್ಕತ್ತಾದ ಹೊರಭಾಗದಲ್ಲಿರುವ ಹೌರಾದ ನೌಕರರ ವಿಭಾವೊಂದು ತಾವು ಬೀಫ್ ಮತ್ತು ಪೋರ್ಕ್ (ದನ ಮತ್ತು ಹಂದಿ ಮಾಂಸ) ಇರುವ ಆಹಾರವನ್ನು ಡೆಲಿವರಿ ಮಾಡುವುದಿಲ್ಲ ಎಂದು ಕಳೆದೊಂದು ವಾರದಿಂದ ಮುಷ್ಕರ ನಡೆಸುತ್ತಿದ್ದಾರೆ.

“ಕಂಪನಿಯು ನಮ್ಮ ಬೇಡಿಕೆಗಳನ್ನು ಕೇಳುತ್ತಿಲ್ಲ. ನಮ್ಮ ಇಚ್ಛೆಗೆ ವಿರುದ್ಧವಾಗಿ ಬೀಫ್ ಮತ್ತು ಪೋರ್ಕ್ ಡೆಲಿವರಿ ಮಾಡುವಂತೆ ಒತ್ತಾಯಿಸಲಾಗುತ್ತದೆ. ಹಿಂದೂಗಳು ಬೀಫ್ ಡೆಲಿವರಿ ಮಾಡಲು ಒಪ್ಪುತ್ತಿಲ್ಲ ಮತ್ತು ಮುಸ್ಲಿಮರು ಪೋರ್ಕ್ ಡೆಲಿವರಿ ಮಾಡಲು ಬಯಸುತ್ತಿಲ್ಲ ಎಂದು ಮೌಸಿನ್ ಅಕ್ತರ್ ಎಂಬ ನೌಕರ ಟಿವಿ ವಾಹಿನಿಯೊಂದಕ್ಕೆ ಹೇಳಿದ್ದಾಗಿ ವರದಿಯಾಗಿದೆ.

ಆದರೆ, ನೌಕರರ ಅಸಮಾಧಾನವು ಬೇಡಿಕೆಯ ಪ್ರಮಾಣಕ್ಕೆ ಅನುಗುಣವಾಗಿ ಡೆಲಿವರಿ ಪಾಲುದಾರರಿಗೆ ಆಹಾರ ದರಪಟ್ಟಿಯನ್ನು ಪರಿಷ್ಕರಿಸುವ ವ್ಯವಸ್ಥೆಗೆ ಸಂಬಂಧಿಸಿದ್ದಾಗಿದೆ ಎಂದು ಗೋಯಲ್ ತನ್ನ ಇ-ಮೈಲ್‌ನಲ್ಲಿ ತಿಳಿಸಿದ್ದಾರೆ.

“ದರ ಪರಿಷ್ಕರಣೆಯ ಬಳಿಕ ನಮ್ಮ ಡೆಲಿವರಿ ಪಾಲುದಾರರು ಅಷ್ಟೇ ಪ್ರಮಾಣದಲ್ಲಿ ಅಷ್ಟೇ ಪ್ರಮಾಣದಲ್ಲಿ ಹಣ ಗಳಿಸುತ್ತಾರೆ. ಇದರಿಂದ ನಮ್ಮ ಘಟಕಗಳ ಆರ್ಥಿಕತೆ ಸುಧಾರಿಸುತ್ತದೆ ಮತ್ತು ವ್ಯಾಪಾರವು ಹೆಚ್ಚು ಕಾರ್ಯಸಾಧುವಾಗುತ್ತದೆ. ಇದು ನಮ್ಮ ವಹಿವಾಟಿನ ವಿಸ್ತರಣೆಗೆ ಅವಕಾಶ ಮಾಡಿಕೊಟ್ಟು ಹೆಚ್ಚುಹೆಚ್ಚು ಡೆಲಿವರಿ ಪಾಲುದಾರರಿಗೆ ಉದ್ಯೋಗಾವಕಾಶ ಒದಗಿಸಲು ಸಾಧ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಕೆಲವೊಂದು ಡೆಲಿವರಿ ಹುಡುಗರಿಗೆ ದರಪಟ್ಟಿ ಪರಿಷ್ಕರಣೆ ಅರ್ಥವಾಗುವುದಿಲ್ಲ. ಅವರು ಬದಲಾವಣೆಯ ವಿರುದ್ಧ ಪ್ರತಿಭಟಿಸುತ್ತಾರೆ. ಹೌರಾದ ಈ ಪ್ರಕರಣದಲ್ಲಿ ಡೆಲಿವರಿ ಹುಡುಗರು ಸಂಸ್ಥೆಯ ಪ್ರತಿನಿಧಿಗಳ ಜೊತೆಗೆ ರಚನಾತ್ಮಕ ಮಾತುಕತೆಯಲ್ಲಿ ತೊಡಗುವುದು ಬಿಟ್ಟು ಸ್ಥಳೀಯ ರಾಜಕಾರಣಿಯೊಬ್ಬರ ಜೊತೆ ಸೇರಿಕೊಂಡು ಸಮಸ್ಯೆಯನ್ನು ತಪ್ಪಾಗಿ ಪ್ರತಿಬಿಂಬಿಸಿದರು” ಎಂದು ಗೋಯಲ್ ವಿವರಿಸಿದ್ದಾರೆ.

“ಇದು ನಮಗೆ ಗೊತ್ತಾದುದು ಹೇಗೆಂದರೆ ನಾವು ನಮ್ಮ ಡೆಲಿವರಿ ಡಾಟಾಬೇಸನ್ನು ಪರಿಶೀಲಿಸಿದಾಗ ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು” ಎಂದು ಅವರು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಬಿಜೆಪಿಯ ಉತ್ತರ ಹೌರಾ ಮಂಡಲದ ಬಿಜೆಪಿ ಕಾರ್ಯದರ್ಶಿ, ಸದಸ್ಯತ್ವ ಅಭಿಯಾನದ ಉಸ್ತುವಾರಿ ಎಂದು ಹೇಳಿಕೊಂಡಿರುವ ಸಂಜೀವ ಕುಮಾರ್ ಶುಕ್ಲಾ ಎಂಬ ಸ್ಥಳೀಯ ರಾಜಕಾರಣಿಯೊಬ್ಬ ಈ ಪ್ರಕರಣದಲ್ಲಿ ಶಾಮೀಲಾದ ಬಳಿಕ ಅದು ಪ್ರಚಾರ ಪಡೆದುಕೊಂಡಿತು. ಹೌರಾದಲ್ಲಿ ಝೊಮಾಟೊದ ಹೊಟೇಲುಗಳ ಸರಣಿಯಲ್ಲಿ ಅಲ್ಲಿನ ಬೀಫ್ ಬಿರಿಯಾನಿ ಹೊಟೇಲೊಂದನ್ನು ಸೇರಿಸಿಕೊಳ್ಳಲಾಗುತ್ತಿದೆ ಎಂಬ ವದಂತಿಯ ಬಳಿಕ ಈ ಪ್ರತಿಭಟನೆ ಜೀವತಳೆಯಿತು.

ಇತ್ತೀಚೆಗಷ್ಟೇ ಮತಾಂಧನೊಬ್ಬ ಮುಸ್ಲಿಮ್ ವ್ಯಕ್ತಿಯೊಬ್ಬ ತಂದ ಆಹಾರವನ್ನು ಸ್ವೀಕರಿಸಲು ನಿರಾಕರಿಸಿದ್ದಾಗಿ ಫೇಸ್‌ಬುಕ್‌ನಲ್ಲಿ ಪ್ರಚಾರ ಮಾಡಿದಾಗ ಝೊಮಾಟೊ ಸುದ್ದಿ ಮಾಡಿತ್ತು. “ಆಹಾರಕ್ಕೆ ಧರ್ಮವಿಲ್ಲ; ಆಹಾರವೇ ಧರ್ಮ” ಎಂದು ಪ್ರತಿಕ್ರಿಯೆ ನೀಡುವ ಮೂಲಕ ಝೊಮಾಟೊ ಮೆಚ್ಚುಗೆಗೆ ಪಾತ್ರವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತಾಂತರ ವಿರೋಧಿ ಮಸೂದೆಗೆ ಮಹಾರಾಷ್ಟ್ರ ಸಚಿವ ಸಂಪುಟ ಅನುಮೋದನೆ

ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರಗಳನ್ನು ಗುರಿಯಾಗಿಸಿಕೊಂಡು ರಚಿಸಲಾದ 'ಧರ್ಮ ಸ್ವಾತಂತ್ರ್ಯ ಆಡಳಿತ, 2026' ಕರಡನ್ನು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅನುಮೋದಿಸಿದೆ. ಇದು ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5...

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...