Homeಮುಖಪುಟಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು" ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳದ ಹೌರಾದಲ್ಲಿ ಝೊಮಾಟೊ ಡೆಲಿವರಿ ನೌಕರರ ಮುಷ್ಕರಕ್ಕೂ ಆಹಾರ, ಧರ್ಮ ಅಥವಾ ನಂಬಿಕೆಗೂ ಯಾವುದೇ ಸಂಬಂಧ ಇಲ್ಲ ಎಂದು ಕಂಪನಿಯ ಸ್ಥಾಪಕರು ತನ್ನ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಹೇಳಿದ್ದು, ಅರ್ಥಪೂರ್ಣ ಉದ್ಯೋಗ ಮತ್ತು ಜೀವನ ನಿರ್ವಹಣೆಯ ಅವಕಾಶವನ್ನು ಧರ್ಮ ಮತ್ತು ವೈಯಕ್ತಿಕ ಆಹಾರದ ಆಯ್ಕೆಯ ಜೊತೆಗೆ ತಳಕುಹಾಕಲಾಗುತ್ತಿರುವ ಬಗ್ಗೆ ಎಚ್ಚರದಿಂದಿರಬೇಕು ಎಂದು ತಿಳಿಸಿದ್ದಾರೆ.

“ಗದ್ದಲವನ್ನು ಕಡೆಗಣಿಸಿ; ಅದರಿಂದ ವಿಚಲಿತರಾಗದಿರಿ ಎಂದು ಎಂದು ಸಂಸ್ಥೆಯ ಸ್ಥಾಪಕ ದೀಪಿಂದರ್ ಗೋಯಲ್ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಒತ್ತಾಯಿಸಿದ್ದಾರೆ. ಈ “ಪ್ರತಿಭಟನೆ”ಯು ಕೋಲ್ಕತ್ತಾದ ಹೌರಾ ಪ್ರದೇಶದ ಕೆಲವೇ ಡೆಲಿವರಿ ಪಾಲುದಾರರಿಗೆ ಸೀಮಿತವಾಗಿದ್ದು, ಕೆಲವು ತೀರಾ ಉತ್ಪ್ರೇಕ್ಷಿತ ವರದಿಗಳಲ್ಲಿ ಕಾಣಿಸಲಾಗಿರುವಂತೆ ಇಡೀ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಪ್ರಶ್ನೆಯು ಮೂಲತಃ ದರಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದ್ದಾಗಿದ್ದು, ಅದನ್ನು ನಾವು ಆಗಾಗ ಮಾಡುತ್ತಿರುತ್ತೇವೆ ಎಂದವರು ಹೇಳಿದ್ದಾರೆ.

ಕೋಲ್ಕತ್ತಾದ ಹೊರಭಾಗದಲ್ಲಿರುವ ಹೌರಾದ ನೌಕರರ ವಿಭಾವೊಂದು ತಾವು ಬೀಫ್ ಮತ್ತು ಪೋರ್ಕ್ (ದನ ಮತ್ತು ಹಂದಿ ಮಾಂಸ) ಇರುವ ಆಹಾರವನ್ನು ಡೆಲಿವರಿ ಮಾಡುವುದಿಲ್ಲ ಎಂದು ಕಳೆದೊಂದು ವಾರದಿಂದ ಮುಷ್ಕರ ನಡೆಸುತ್ತಿದ್ದಾರೆ.

“ಕಂಪನಿಯು ನಮ್ಮ ಬೇಡಿಕೆಗಳನ್ನು ಕೇಳುತ್ತಿಲ್ಲ. ನಮ್ಮ ಇಚ್ಛೆಗೆ ವಿರುದ್ಧವಾಗಿ ಬೀಫ್ ಮತ್ತು ಪೋರ್ಕ್ ಡೆಲಿವರಿ ಮಾಡುವಂತೆ ಒತ್ತಾಯಿಸಲಾಗುತ್ತದೆ. ಹಿಂದೂಗಳು ಬೀಫ್ ಡೆಲಿವರಿ ಮಾಡಲು ಒಪ್ಪುತ್ತಿಲ್ಲ ಮತ್ತು ಮುಸ್ಲಿಮರು ಪೋರ್ಕ್ ಡೆಲಿವರಿ ಮಾಡಲು ಬಯಸುತ್ತಿಲ್ಲ ಎಂದು ಮೌಸಿನ್ ಅಕ್ತರ್ ಎಂಬ ನೌಕರ ಟಿವಿ ವಾಹಿನಿಯೊಂದಕ್ಕೆ ಹೇಳಿದ್ದಾಗಿ ವರದಿಯಾಗಿದೆ.

ಆದರೆ, ನೌಕರರ ಅಸಮಾಧಾನವು ಬೇಡಿಕೆಯ ಪ್ರಮಾಣಕ್ಕೆ ಅನುಗುಣವಾಗಿ ಡೆಲಿವರಿ ಪಾಲುದಾರರಿಗೆ ಆಹಾರ ದರಪಟ್ಟಿಯನ್ನು ಪರಿಷ್ಕರಿಸುವ ವ್ಯವಸ್ಥೆಗೆ ಸಂಬಂಧಿಸಿದ್ದಾಗಿದೆ ಎಂದು ಗೋಯಲ್ ತನ್ನ ಇ-ಮೈಲ್‌ನಲ್ಲಿ ತಿಳಿಸಿದ್ದಾರೆ.

“ದರ ಪರಿಷ್ಕರಣೆಯ ಬಳಿಕ ನಮ್ಮ ಡೆಲಿವರಿ ಪಾಲುದಾರರು ಅಷ್ಟೇ ಪ್ರಮಾಣದಲ್ಲಿ ಅಷ್ಟೇ ಪ್ರಮಾಣದಲ್ಲಿ ಹಣ ಗಳಿಸುತ್ತಾರೆ. ಇದರಿಂದ ನಮ್ಮ ಘಟಕಗಳ ಆರ್ಥಿಕತೆ ಸುಧಾರಿಸುತ್ತದೆ ಮತ್ತು ವ್ಯಾಪಾರವು ಹೆಚ್ಚು ಕಾರ್ಯಸಾಧುವಾಗುತ್ತದೆ. ಇದು ನಮ್ಮ ವಹಿವಾಟಿನ ವಿಸ್ತರಣೆಗೆ ಅವಕಾಶ ಮಾಡಿಕೊಟ್ಟು ಹೆಚ್ಚುಹೆಚ್ಚು ಡೆಲಿವರಿ ಪಾಲುದಾರರಿಗೆ ಉದ್ಯೋಗಾವಕಾಶ ಒದಗಿಸಲು ಸಾಧ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಕೆಲವೊಂದು ಡೆಲಿವರಿ ಹುಡುಗರಿಗೆ ದರಪಟ್ಟಿ ಪರಿಷ್ಕರಣೆ ಅರ್ಥವಾಗುವುದಿಲ್ಲ. ಅವರು ಬದಲಾವಣೆಯ ವಿರುದ್ಧ ಪ್ರತಿಭಟಿಸುತ್ತಾರೆ. ಹೌರಾದ ಈ ಪ್ರಕರಣದಲ್ಲಿ ಡೆಲಿವರಿ ಹುಡುಗರು ಸಂಸ್ಥೆಯ ಪ್ರತಿನಿಧಿಗಳ ಜೊತೆಗೆ ರಚನಾತ್ಮಕ ಮಾತುಕತೆಯಲ್ಲಿ ತೊಡಗುವುದು ಬಿಟ್ಟು ಸ್ಥಳೀಯ ರಾಜಕಾರಣಿಯೊಬ್ಬರ ಜೊತೆ ಸೇರಿಕೊಂಡು ಸಮಸ್ಯೆಯನ್ನು ತಪ್ಪಾಗಿ ಪ್ರತಿಬಿಂಬಿಸಿದರು” ಎಂದು ಗೋಯಲ್ ವಿವರಿಸಿದ್ದಾರೆ.

“ಇದು ನಮಗೆ ಗೊತ್ತಾದುದು ಹೇಗೆಂದರೆ ನಾವು ನಮ್ಮ ಡೆಲಿವರಿ ಡಾಟಾಬೇಸನ್ನು ಪರಿಶೀಲಿಸಿದಾಗ ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು” ಎಂದು ಅವರು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಬಿಜೆಪಿಯ ಉತ್ತರ ಹೌರಾ ಮಂಡಲದ ಬಿಜೆಪಿ ಕಾರ್ಯದರ್ಶಿ, ಸದಸ್ಯತ್ವ ಅಭಿಯಾನದ ಉಸ್ತುವಾರಿ ಎಂದು ಹೇಳಿಕೊಂಡಿರುವ ಸಂಜೀವ ಕುಮಾರ್ ಶುಕ್ಲಾ ಎಂಬ ಸ್ಥಳೀಯ ರಾಜಕಾರಣಿಯೊಬ್ಬ ಈ ಪ್ರಕರಣದಲ್ಲಿ ಶಾಮೀಲಾದ ಬಳಿಕ ಅದು ಪ್ರಚಾರ ಪಡೆದುಕೊಂಡಿತು. ಹೌರಾದಲ್ಲಿ ಝೊಮಾಟೊದ ಹೊಟೇಲುಗಳ ಸರಣಿಯಲ್ಲಿ ಅಲ್ಲಿನ ಬೀಫ್ ಬಿರಿಯಾನಿ ಹೊಟೇಲೊಂದನ್ನು ಸೇರಿಸಿಕೊಳ್ಳಲಾಗುತ್ತಿದೆ ಎಂಬ ವದಂತಿಯ ಬಳಿಕ ಈ ಪ್ರತಿಭಟನೆ ಜೀವತಳೆಯಿತು.

ಇತ್ತೀಚೆಗಷ್ಟೇ ಮತಾಂಧನೊಬ್ಬ ಮುಸ್ಲಿಮ್ ವ್ಯಕ್ತಿಯೊಬ್ಬ ತಂದ ಆಹಾರವನ್ನು ಸ್ವೀಕರಿಸಲು ನಿರಾಕರಿಸಿದ್ದಾಗಿ ಫೇಸ್‌ಬುಕ್‌ನಲ್ಲಿ ಪ್ರಚಾರ ಮಾಡಿದಾಗ ಝೊಮಾಟೊ ಸುದ್ದಿ ಮಾಡಿತ್ತು. “ಆಹಾರಕ್ಕೆ ಧರ್ಮವಿಲ್ಲ; ಆಹಾರವೇ ಧರ್ಮ” ಎಂದು ಪ್ರತಿಕ್ರಿಯೆ ನೀಡುವ ಮೂಲಕ ಝೊಮಾಟೊ ಮೆಚ್ಚುಗೆಗೆ ಪಾತ್ರವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...