Homeಕರ್ನಾಟಕ10 ನಿಮಿಷಗಳಲ್ಲಿ ಆಹಾರ ವಿತರಣೆ ನಿಯಮ ಘೊಷಿಸಿದ ‘ಜೊಮೆಟೊ’; ತೀವ್ರ ವಿರೋಧ

10 ನಿಮಿಷಗಳಲ್ಲಿ ಆಹಾರ ವಿತರಣೆ ನಿಯಮ ಘೊಷಿಸಿದ ‘ಜೊಮೆಟೊ’; ತೀವ್ರ ವಿರೋಧ

- Advertisement -
- Advertisement -

ಆನ್‌ಲೈನ್‌‌ ಆಹಾರ ವಿತರಣಾ ಕಂಪೆನಿ ಜೊಮೊಟೊ ಸಿಇಒ ದೀಪಿಂದರ್‌ ಗೋಯಲ್‌ ಅವರು ಮಾರ್ಚ್ 21ರ ಸೋಮವಾದಂದು, ತಮ್ಮ ಕಂಪನಿಯು ಶೀಘ್ರದಲ್ಲೇ ಹತ್ತು ನಿಮಿಷಗಳಲ್ಲಿ ಆಹಾರ ವಿತರಣೆಯನ್ನು ಪ್ರಾರಂಭಿಸಲಿದೆ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣದ ಬಳಕೆದಾರರು ಮತ್ತು ಆಹಾರವನ್ನು ವಿತರಣೆ ಮಾಡುವ ಕಾರ್ಮಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹಲವಾರು ಜನರು ಹತ್ತು ನಿಮಿಷಗಳಲ್ಲಿ ಆಹಾರವನ್ನು ವಿತರಣೆ ಮಾಡಲು ಹೇಗೆ ಸಾಧ್ಯ ಎಂದ ಪ್ರಶ್ನಿಸಿದ್ದಾರೆ. ಕಂಪೆನಿಯ ಈ ನೀತಿಯಿಂದಾಗಿ ವಿತರಣೆ ಮಾಡುವ ಸಿಬ್ಬಂದಿಯ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

10 ನಿಮಿಷದ ವಿತರಣೆಯ ಕಲ್ಪನೆಯನ್ನು ಜೊಮಾಟೊಗೆ ಬಂಡವಾಳ ಹೂಡಿಕೆ ಮಾಡಿದ ಕಂಪನಿಯಾದ ಬ್ಲಿಂಕಿಟ್‌‌ ಮೊದಲು ಮುಂದಿಟ್ಟಿತ್ತು. ಹತ್ತು ನಿಮಿಷದಲ್ಲಿ ವಿತರಣೆ ಮಾಡುವ ವ್ಯಾಪಾರಿ ಮಾದರಿಯು ದಿನಸಿ ವಸ್ತುಗಳನ್ನು ವಿತರಣೆ ಮಾಡುವ ಕಂಪೆನಿಗಳಲ್ಲಿ ಸಾಮಾನ್ಯವಾಗಿದೆ.

ಇದನ್ನೂ ಓದಿ: ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

ಕಂಪೆನಿಯ ನಿರ್ಧಾರಗಳನ್ನು ಮುಂದಿಡುತ್ತಾ ಮಾತನಾಡಿದ ದೀಪಿಂದರ್ ಗೋಯಲ್, “ಜೊಮಾಟೊ ವಿತರಣಾ ಕಾರ್ಮಿಕರ ಮೇಲೆ ವೇಗವಾಗಿ ತಲುಪಿಸಲು ಯಾವುದೇ ಒತ್ತಡವನ್ನು ಹೇರುವುದಿಲ್ಲ. ವಿತರಣೆಗೆ ಮಾಡಲಾದ ಭರವಸೆಯ ಸಮಯದ ಬಗ್ಗೆ ಅವರಿಗೆ ತಿಳಿಸಲಾಗುವುದಿಲ್ಲ. ಸಮಯ ನಿರ್ವಹಣೆಯನ್ನು ರಸ್ತೆಯಲ್ಲಿ ಮಾಡಲಾಗುವುದಿಲ್ಲ ಮತ್ತು ಇದರಿಂದಾಗಿ ಯಾವುದೆ ಜೀವಕ್ಕೆ ಅಪಾಯವಿಲ್ಲ” ಎಂದು ಹೇಳಿದ್ದಾರೆ.

ಗ್ರಾಹಕರು ತಮ್ಮ ಅಗತ್ಯಗಳಿಗೆ ಅನುಸಾರವಾಗಿ ತ್ವರಿತ ಸೇವೆಯನ್ನು ಬಯಸುತ್ತಿದ್ದಾರೆ ಎಂದು ಗೋಯಲ್ ಹೇಳಿದ್ದು, ಪ್ರಸ್ತುತ ಜೊಮೊಟೊದಲ್ಲಿ ಇರುವ 30 ನಿಮಿಷಗಳ ಸರಾಸರಿ ವಿತರಣಾ ಸಮಯವು ತುಂಬಾ ನಿಧಾನವಾಗಿದ್ದು, ಅದು ತುಂಬಾ ಹಳೆಯ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರಿನಲ್ಲಿ ಜೊಮೆಟೊ ಕಂಪೆನಿಯಲ್ಲಿ ಆಹಾರ ವಿತರಣೆ ಮಾಡುತ್ತಿರುವ ಮಂಡ್ಯದ ದಲೀಪ್‌, “ಈ ಬಗ್ಗೆ ನಮಗೆ ಇನ್ನೂ ಯಾವುದೆ ನೋಟಿಫಿಕೇಷನ್ ಬಂದಿಲ್ಲ. ಆದರೆ ಹತ್ತು ನಿಮಿಷದಲ್ಲಿ ಆಹಾರ ವಿತರಣೆ ಮಾಡಲು ಸಾಧ್ಯವೆ ಇಲ್ಲ. ಗ್ರಾಹಕರು ಆರ್ಡರ್‌ ಮಾಡಿದ ಆಹಾರ ಹೊಟೆಲ್‌ನಲ್ಲಿ ತಯಾರಾಗಿ ಪ್ಯಾಕ್ ಆಗುವಾಗಲೆ ಹತ್ತು ನಿಮಿಷ ಆಗಿರುತ್ತದೆ. ಉಳಿದಂತೆ ಬೆಂಗಳೂರಿನ ಟ್ರಾಫಿಕ್‌ನಲ್ಲಿ ಗ್ರಾಹಕರನ್ನು ತಲುಪಲು ತುಂಬಾ ಸಮಯ ಹಿಡಿಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಯ್ಕಾಟ್ ಚೀನಾ: ಟೀಶರ್ಟ್‌ ಸುಟ್ಟು ಪ್ರತಿಭಟಿಸಿದ ಜೊಮಾಟೊ ಉದ್ಯೋಗಿಗಳು!

ಮಂಗಳೂರಿನಲ್ಲಿ ಜೊಮೆಟೊ ವಿತರಣೆ ಮಾಡುವ ಅನೀಶ್ ಮಾತನಾಡಿ, “ಇದು ಅಪಾಯವನ್ನೂ ತಂದೊಡ್ಡಬಹುದು. ಕಂಪೆನಿಯ ದಂಡಕ್ಕೆ ಹೆದರಿ ವೇಗವಾಗಿ ಅಹಾರ ವಿತರಣೆ ಮಾಡಲು ಹೊರಟರೆ ಅಪಘಾತ ಆಗುವ ಸಾಧ್ಯತೆ ಕೂಡಾ ಇರುತ್ತದೆ. ಈಗಾಗಲೆ ನೀಡಿರುವ 30 ನಿಮಿಷಗಳ ಸಮಯವೇ ಸಾಕಾಗುವುದಿಲ್ಲ. ಅದರಲ್ಲೂ ಹೊಸದಾಗಿ ಜೊಮೊಟೊಗೆ ಕೆಲಸಕ್ಕೆ ಸೇರಿದ ಕಾರ್ಮಿಕರಿಗೆ ಗೂಗಲ್‌ ಲೊಕೇಷನ್ ನೋಡಿಕೊಂಡು ಹೋದರೆ ಈಗ ಇರುವ ಸಮಯವೇ ಸಾಕಾಗುವುದಿಲ್ಲ. ಪ್ರತಿ ವಿತರಣೆಗೆ ದಂಡ ಕಟ್ಟುತ್ತಿದ್ದಾರೆ. ಇನ್ನು ಹತ್ತು ನಿಮಿಷಗಳ ನಿಯಮ ಬಂದರೆ ಅಷ್ಟೆ ಕತೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಸ್ವಾತಿ ಅವರು, “ಬಂಡವಾಳಶಾಹಿ ಕಂಪೆನಿಗಳು ಯಾವ ಮಟ್ಟಿಗೆ ತನ್ನ ಕಾರ್ಮಿಕರನ್ನು ಹಿಂಡಿ ಹಿಪ್ಪೆ ಮಾಡಲು ತಯಾರಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಈಗಾಗಲೆ ಈ ಕಂಪೆನಿಗಳು ತಮ್ಮ ಕಾರ್ಮಿಕರನ್ನು ‘ಪಾಲುದಾರ’ ಎಂದು ಹೇಳುತ್ತಾ ಅವರು ಕಾರ್ಮಿಕರ ಹಕ್ಕುಗಳನ್ನು ನೀಡದೆ ವಂಚಿಸುತ್ತಿದೆ. ಹತ್ತು ನಿಮಿಷದಲ್ಲಿ ಆಹಾರ ವಿತರಣೆ ಎಂಬುವುದು ಅಮಾವನೀಯ ನಡೆಯಾಗಿದೆ. ಸರ್ಕಾರ ಈ ಕಂಪೆನಿಗಳನ್ನು ಹದ್ದುಬಸ್ತಿನಲ್ಲಿ ಇಡಲು ನಿಯಮಗಳನ್ನು ರೂಪಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊಮೊಟೊ ನಿರ್ಧಾರವನ್ನು ಕಾಂಗ್ರೆಸ್ ನಾಯಕ, ಸಂಸದ ಕಾರ್ತಿ ಚಿದಂಬರಂ ಅವರು ವಿರೋಧಿಸಿದ್ದು, ಅವಾಸ್ತವಿಕ ನಿರ್ಧಾರಗಳಿಂದ ವಿತರಣೆ ಮಾಡುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮಾರ್ಗಸೂಚಿಗಳನ್ನು ನಿರೂಪಿಸಲು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ವಿತರಣಾ ಕಂಪನಿಗಳಾದ ಸ್ವಿಗ್ಗಿ ಮತ್ತು ಜೊಮಾಟೊವನ್ನು ನಿಯಂತ್ರಿಸುವಂತೆ ಸರ್ಕಾರಕ್ಕೆ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

“ಭಾರತದಲ್ಲಿ ಆನ್‌ಲೈನ್‌‌ ವಿತರಣೆ ಮಾಡುವ ಮಾರುಕಟ್ಟೆ(‘ಗಿಗ್ ಆರ್ಥಿಕತೆ)ಯಲ್ಲಿ 1.5 ಕೋಟಿ ಕಾರ್ಮಿಕರಿದ್ದಾರೆ ಎಂದು ಅಂದಾಜಿಸಲಾಗಿದೆ. ಇದು 2.5 ಕೋಟಿಯಿಂದ ಮತ್ತು ದೀರ್ಘಾವಧಿಯಲ್ಲಿ 10 ಕೋಟಿಯವರೆಗೆ ಬೆಳೆಯಲಿದೆ” ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

“ಕಾರ್ಮಿಕರು ದ್ವಿಚಕ್ರ ವಾಹನವನ್ನು ಓಡಿಸುತ್ತಾರೆ. ಅದು ಅವರ ವೈಯಕ್ತಿಕ ವಾಹನವಾಗಿದ್ದಾಗಿಯೂ, ವಾಣಿಜ್ಯ ವಿತರಣೆಯನ್ನು ಮಾಡುತ್ತಿದ್ದಾರೆ. ಹಿಂಬದಿಯ ಸೀಟ್‌ನಲ್ಲಿ ಅಥವಾ ಕ್ಯಾರಿಯರ್‌ನಲ್ಲಿ ಭಾರಿ ತೂಕವನ್ನು ಸಾಗಿಸುತ್ತಾರೆ. ಈ ಕಾರ್ಮಿಕರಿಗೆ ಯಾವುದೇ ರಕ್ಷಣೆ ಇಲ್ಲ. ಈ ವಾಹನಗಳನ್ನು ವಾಣಿಜ್ಯ ವಿತರಣೆಗೆ ಎಂದು ಯಾವುದೇ ವರ್ಗೀಕರಣವಾಗಿಲ್ಲ. ಅಪಘಾತ ಸಂಭವಿಸಿದರೆ ಪರಿಹಾರ ನೀಡಲು ವಿಮಾ ಕಂಪನಿಗಳು ನಿರಾಕರಿಸುತ್ತವೆ. ಆದ್ದರಿಂದ ಈ ವಿತರಣಾ ಕಂಪನಿಗಳನ್ನು ನಿಯಂತ್ರಿಸಬೇಕು’’ ಎಂದು ಹೇಳಿದ್ದಾರೆ.

ಚಿದಂಬರಂ ಅವರು ಈ ‘ಅವಾಸ್ತವಿಕ ಮತ್ತು ಅವಿವೇಕದ’ ವಿತರಣಾ ಸಮಯವನ್ನು ಹೊಂದಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದು ಈ ಕಾರ್ಮಿಕರ ಜೀವನವನ್ನು ದೊಡ್ಡ ಗಂಡಾಂತರಕ್ಕೆ ತಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗೋಯಲ್‌, “10 ನಿಮಿಷದ ವಿತರಣೆಯು, ಈ ಹಿಂದಿನ 30 ನಿಮಿಷದ ವಿತರಣೆಯಂತೆ ಸುರಕ್ಷಿತವಾಗಿರುತ್ತದೆ. ಇದು ನಿರ್ದಿಷ್ಟ ಹತ್ತಿರದ ಸ್ಥಳಗಳಿಗೆ ಮತ್ತು ಜನಪ್ರಿಯ ಪ್ರಮಾಣಿತ ಮೆನುವನ್ನು ಮಾತ್ರ ಹೊಂದಿದೆ” ಎಂದು ಸ್ಪಷ್ಟೀಕರಣ ನೀಡಿದ್ದಾರೆ. ತಡವಾಗಿ ಅಥವಾ ಸಮಯಕ್ಕೆ ಸರಿಯಾಗಿ ವಿತರಿಸಲು ಆಗದ ಕಾರ್ಮಿಕರಿಗೆ ಯಾವುದೇ ದಂಡ ಇರುವುದಿಲ್ಲ ಮತ್ತು ಸಮಯದ ಮಿತಿಯ ಬಗ್ಗೆ ಅವರಿಗೆ ತಿಳಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು’: ಪ್ರತಿಭಟನಾಕಾರರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 10. ನಿಮಿಷದಲ್ಲಿ ಡೆಲಿವರಿ ಮಾಡೋಕೆ ಹೋದ್ರೆ 108 ನಲ್ಲಿ ವಾಪಾಸ್ ಬರ್ಬೇಕಾಗುತ್ತೆ , ಸದ್ಯ ಇಲ್ಲಾ ಎಲ್ಲ ಜೊಮಾಟೋ ಡೆಲಿವರಿ ಬಾಯ್ಸ್ ಇದನ್ನೂ ತಿರಸ್ಕಾರ ಮಾಡಿ ಇದಾರ ವಿರುದ್ಧ ಹೋರಾಟ ಮಾಡ್ಬೇಕು ,

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...