Homeಕರ್ನಾಟಕ10 ನಿಮಿಷಗಳಲ್ಲಿ ಆಹಾರ ವಿತರಣೆ ನಿಯಮ ಘೊಷಿಸಿದ ‘ಜೊಮೆಟೊ’; ತೀವ್ರ ವಿರೋಧ

10 ನಿಮಿಷಗಳಲ್ಲಿ ಆಹಾರ ವಿತರಣೆ ನಿಯಮ ಘೊಷಿಸಿದ ‘ಜೊಮೆಟೊ’; ತೀವ್ರ ವಿರೋಧ

- Advertisement -
- Advertisement -

ಆನ್‌ಲೈನ್‌‌ ಆಹಾರ ವಿತರಣಾ ಕಂಪೆನಿ ಜೊಮೊಟೊ ಸಿಇಒ ದೀಪಿಂದರ್‌ ಗೋಯಲ್‌ ಅವರು ಮಾರ್ಚ್ 21ರ ಸೋಮವಾದಂದು, ತಮ್ಮ ಕಂಪನಿಯು ಶೀಘ್ರದಲ್ಲೇ ಹತ್ತು ನಿಮಿಷಗಳಲ್ಲಿ ಆಹಾರ ವಿತರಣೆಯನ್ನು ಪ್ರಾರಂಭಿಸಲಿದೆ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣದ ಬಳಕೆದಾರರು ಮತ್ತು ಆಹಾರವನ್ನು ವಿತರಣೆ ಮಾಡುವ ಕಾರ್ಮಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹಲವಾರು ಜನರು ಹತ್ತು ನಿಮಿಷಗಳಲ್ಲಿ ಆಹಾರವನ್ನು ವಿತರಣೆ ಮಾಡಲು ಹೇಗೆ ಸಾಧ್ಯ ಎಂದ ಪ್ರಶ್ನಿಸಿದ್ದಾರೆ. ಕಂಪೆನಿಯ ಈ ನೀತಿಯಿಂದಾಗಿ ವಿತರಣೆ ಮಾಡುವ ಸಿಬ್ಬಂದಿಯ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

10 ನಿಮಿಷದ ವಿತರಣೆಯ ಕಲ್ಪನೆಯನ್ನು ಜೊಮಾಟೊಗೆ ಬಂಡವಾಳ ಹೂಡಿಕೆ ಮಾಡಿದ ಕಂಪನಿಯಾದ ಬ್ಲಿಂಕಿಟ್‌‌ ಮೊದಲು ಮುಂದಿಟ್ಟಿತ್ತು. ಹತ್ತು ನಿಮಿಷದಲ್ಲಿ ವಿತರಣೆ ಮಾಡುವ ವ್ಯಾಪಾರಿ ಮಾದರಿಯು ದಿನಸಿ ವಸ್ತುಗಳನ್ನು ವಿತರಣೆ ಮಾಡುವ ಕಂಪೆನಿಗಳಲ್ಲಿ ಸಾಮಾನ್ಯವಾಗಿದೆ.

ಇದನ್ನೂ ಓದಿ: ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

ಕಂಪೆನಿಯ ನಿರ್ಧಾರಗಳನ್ನು ಮುಂದಿಡುತ್ತಾ ಮಾತನಾಡಿದ ದೀಪಿಂದರ್ ಗೋಯಲ್, “ಜೊಮಾಟೊ ವಿತರಣಾ ಕಾರ್ಮಿಕರ ಮೇಲೆ ವೇಗವಾಗಿ ತಲುಪಿಸಲು ಯಾವುದೇ ಒತ್ತಡವನ್ನು ಹೇರುವುದಿಲ್ಲ. ವಿತರಣೆಗೆ ಮಾಡಲಾದ ಭರವಸೆಯ ಸಮಯದ ಬಗ್ಗೆ ಅವರಿಗೆ ತಿಳಿಸಲಾಗುವುದಿಲ್ಲ. ಸಮಯ ನಿರ್ವಹಣೆಯನ್ನು ರಸ್ತೆಯಲ್ಲಿ ಮಾಡಲಾಗುವುದಿಲ್ಲ ಮತ್ತು ಇದರಿಂದಾಗಿ ಯಾವುದೆ ಜೀವಕ್ಕೆ ಅಪಾಯವಿಲ್ಲ” ಎಂದು ಹೇಳಿದ್ದಾರೆ.

ಗ್ರಾಹಕರು ತಮ್ಮ ಅಗತ್ಯಗಳಿಗೆ ಅನುಸಾರವಾಗಿ ತ್ವರಿತ ಸೇವೆಯನ್ನು ಬಯಸುತ್ತಿದ್ದಾರೆ ಎಂದು ಗೋಯಲ್ ಹೇಳಿದ್ದು, ಪ್ರಸ್ತುತ ಜೊಮೊಟೊದಲ್ಲಿ ಇರುವ 30 ನಿಮಿಷಗಳ ಸರಾಸರಿ ವಿತರಣಾ ಸಮಯವು ತುಂಬಾ ನಿಧಾನವಾಗಿದ್ದು, ಅದು ತುಂಬಾ ಹಳೆಯ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರಿನಲ್ಲಿ ಜೊಮೆಟೊ ಕಂಪೆನಿಯಲ್ಲಿ ಆಹಾರ ವಿತರಣೆ ಮಾಡುತ್ತಿರುವ ಮಂಡ್ಯದ ದಲೀಪ್‌, “ಈ ಬಗ್ಗೆ ನಮಗೆ ಇನ್ನೂ ಯಾವುದೆ ನೋಟಿಫಿಕೇಷನ್ ಬಂದಿಲ್ಲ. ಆದರೆ ಹತ್ತು ನಿಮಿಷದಲ್ಲಿ ಆಹಾರ ವಿತರಣೆ ಮಾಡಲು ಸಾಧ್ಯವೆ ಇಲ್ಲ. ಗ್ರಾಹಕರು ಆರ್ಡರ್‌ ಮಾಡಿದ ಆಹಾರ ಹೊಟೆಲ್‌ನಲ್ಲಿ ತಯಾರಾಗಿ ಪ್ಯಾಕ್ ಆಗುವಾಗಲೆ ಹತ್ತು ನಿಮಿಷ ಆಗಿರುತ್ತದೆ. ಉಳಿದಂತೆ ಬೆಂಗಳೂರಿನ ಟ್ರಾಫಿಕ್‌ನಲ್ಲಿ ಗ್ರಾಹಕರನ್ನು ತಲುಪಲು ತುಂಬಾ ಸಮಯ ಹಿಡಿಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಯ್ಕಾಟ್ ಚೀನಾ: ಟೀಶರ್ಟ್‌ ಸುಟ್ಟು ಪ್ರತಿಭಟಿಸಿದ ಜೊಮಾಟೊ ಉದ್ಯೋಗಿಗಳು!

ಮಂಗಳೂರಿನಲ್ಲಿ ಜೊಮೆಟೊ ವಿತರಣೆ ಮಾಡುವ ಅನೀಶ್ ಮಾತನಾಡಿ, “ಇದು ಅಪಾಯವನ್ನೂ ತಂದೊಡ್ಡಬಹುದು. ಕಂಪೆನಿಯ ದಂಡಕ್ಕೆ ಹೆದರಿ ವೇಗವಾಗಿ ಅಹಾರ ವಿತರಣೆ ಮಾಡಲು ಹೊರಟರೆ ಅಪಘಾತ ಆಗುವ ಸಾಧ್ಯತೆ ಕೂಡಾ ಇರುತ್ತದೆ. ಈಗಾಗಲೆ ನೀಡಿರುವ 30 ನಿಮಿಷಗಳ ಸಮಯವೇ ಸಾಕಾಗುವುದಿಲ್ಲ. ಅದರಲ್ಲೂ ಹೊಸದಾಗಿ ಜೊಮೊಟೊಗೆ ಕೆಲಸಕ್ಕೆ ಸೇರಿದ ಕಾರ್ಮಿಕರಿಗೆ ಗೂಗಲ್‌ ಲೊಕೇಷನ್ ನೋಡಿಕೊಂಡು ಹೋದರೆ ಈಗ ಇರುವ ಸಮಯವೇ ಸಾಕಾಗುವುದಿಲ್ಲ. ಪ್ರತಿ ವಿತರಣೆಗೆ ದಂಡ ಕಟ್ಟುತ್ತಿದ್ದಾರೆ. ಇನ್ನು ಹತ್ತು ನಿಮಿಷಗಳ ನಿಯಮ ಬಂದರೆ ಅಷ್ಟೆ ಕತೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಸ್ವಾತಿ ಅವರು, “ಬಂಡವಾಳಶಾಹಿ ಕಂಪೆನಿಗಳು ಯಾವ ಮಟ್ಟಿಗೆ ತನ್ನ ಕಾರ್ಮಿಕರನ್ನು ಹಿಂಡಿ ಹಿಪ್ಪೆ ಮಾಡಲು ತಯಾರಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಈಗಾಗಲೆ ಈ ಕಂಪೆನಿಗಳು ತಮ್ಮ ಕಾರ್ಮಿಕರನ್ನು ‘ಪಾಲುದಾರ’ ಎಂದು ಹೇಳುತ್ತಾ ಅವರು ಕಾರ್ಮಿಕರ ಹಕ್ಕುಗಳನ್ನು ನೀಡದೆ ವಂಚಿಸುತ್ತಿದೆ. ಹತ್ತು ನಿಮಿಷದಲ್ಲಿ ಆಹಾರ ವಿತರಣೆ ಎಂಬುವುದು ಅಮಾವನೀಯ ನಡೆಯಾಗಿದೆ. ಸರ್ಕಾರ ಈ ಕಂಪೆನಿಗಳನ್ನು ಹದ್ದುಬಸ್ತಿನಲ್ಲಿ ಇಡಲು ನಿಯಮಗಳನ್ನು ರೂಪಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊಮೊಟೊ ನಿರ್ಧಾರವನ್ನು ಕಾಂಗ್ರೆಸ್ ನಾಯಕ, ಸಂಸದ ಕಾರ್ತಿ ಚಿದಂಬರಂ ಅವರು ವಿರೋಧಿಸಿದ್ದು, ಅವಾಸ್ತವಿಕ ನಿರ್ಧಾರಗಳಿಂದ ವಿತರಣೆ ಮಾಡುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮಾರ್ಗಸೂಚಿಗಳನ್ನು ನಿರೂಪಿಸಲು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ವಿತರಣಾ ಕಂಪನಿಗಳಾದ ಸ್ವಿಗ್ಗಿ ಮತ್ತು ಜೊಮಾಟೊವನ್ನು ನಿಯಂತ್ರಿಸುವಂತೆ ಸರ್ಕಾರಕ್ಕೆ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

“ಭಾರತದಲ್ಲಿ ಆನ್‌ಲೈನ್‌‌ ವಿತರಣೆ ಮಾಡುವ ಮಾರುಕಟ್ಟೆ(‘ಗಿಗ್ ಆರ್ಥಿಕತೆ)ಯಲ್ಲಿ 1.5 ಕೋಟಿ ಕಾರ್ಮಿಕರಿದ್ದಾರೆ ಎಂದು ಅಂದಾಜಿಸಲಾಗಿದೆ. ಇದು 2.5 ಕೋಟಿಯಿಂದ ಮತ್ತು ದೀರ್ಘಾವಧಿಯಲ್ಲಿ 10 ಕೋಟಿಯವರೆಗೆ ಬೆಳೆಯಲಿದೆ” ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

“ಕಾರ್ಮಿಕರು ದ್ವಿಚಕ್ರ ವಾಹನವನ್ನು ಓಡಿಸುತ್ತಾರೆ. ಅದು ಅವರ ವೈಯಕ್ತಿಕ ವಾಹನವಾಗಿದ್ದಾಗಿಯೂ, ವಾಣಿಜ್ಯ ವಿತರಣೆಯನ್ನು ಮಾಡುತ್ತಿದ್ದಾರೆ. ಹಿಂಬದಿಯ ಸೀಟ್‌ನಲ್ಲಿ ಅಥವಾ ಕ್ಯಾರಿಯರ್‌ನಲ್ಲಿ ಭಾರಿ ತೂಕವನ್ನು ಸಾಗಿಸುತ್ತಾರೆ. ಈ ಕಾರ್ಮಿಕರಿಗೆ ಯಾವುದೇ ರಕ್ಷಣೆ ಇಲ್ಲ. ಈ ವಾಹನಗಳನ್ನು ವಾಣಿಜ್ಯ ವಿತರಣೆಗೆ ಎಂದು ಯಾವುದೇ ವರ್ಗೀಕರಣವಾಗಿಲ್ಲ. ಅಪಘಾತ ಸಂಭವಿಸಿದರೆ ಪರಿಹಾರ ನೀಡಲು ವಿಮಾ ಕಂಪನಿಗಳು ನಿರಾಕರಿಸುತ್ತವೆ. ಆದ್ದರಿಂದ ಈ ವಿತರಣಾ ಕಂಪನಿಗಳನ್ನು ನಿಯಂತ್ರಿಸಬೇಕು’’ ಎಂದು ಹೇಳಿದ್ದಾರೆ.

ಚಿದಂಬರಂ ಅವರು ಈ ‘ಅವಾಸ್ತವಿಕ ಮತ್ತು ಅವಿವೇಕದ’ ವಿತರಣಾ ಸಮಯವನ್ನು ಹೊಂದಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದು ಈ ಕಾರ್ಮಿಕರ ಜೀವನವನ್ನು ದೊಡ್ಡ ಗಂಡಾಂತರಕ್ಕೆ ತಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗೋಯಲ್‌, “10 ನಿಮಿಷದ ವಿತರಣೆಯು, ಈ ಹಿಂದಿನ 30 ನಿಮಿಷದ ವಿತರಣೆಯಂತೆ ಸುರಕ್ಷಿತವಾಗಿರುತ್ತದೆ. ಇದು ನಿರ್ದಿಷ್ಟ ಹತ್ತಿರದ ಸ್ಥಳಗಳಿಗೆ ಮತ್ತು ಜನಪ್ರಿಯ ಪ್ರಮಾಣಿತ ಮೆನುವನ್ನು ಮಾತ್ರ ಹೊಂದಿದೆ” ಎಂದು ಸ್ಪಷ್ಟೀಕರಣ ನೀಡಿದ್ದಾರೆ. ತಡವಾಗಿ ಅಥವಾ ಸಮಯಕ್ಕೆ ಸರಿಯಾಗಿ ವಿತರಿಸಲು ಆಗದ ಕಾರ್ಮಿಕರಿಗೆ ಯಾವುದೇ ದಂಡ ಇರುವುದಿಲ್ಲ ಮತ್ತು ಸಮಯದ ಮಿತಿಯ ಬಗ್ಗೆ ಅವರಿಗೆ ತಿಳಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು’: ಪ್ರತಿಭಟನಾಕಾರರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 10. ನಿಮಿಷದಲ್ಲಿ ಡೆಲಿವರಿ ಮಾಡೋಕೆ ಹೋದ್ರೆ 108 ನಲ್ಲಿ ವಾಪಾಸ್ ಬರ್ಬೇಕಾಗುತ್ತೆ , ಸದ್ಯ ಇಲ್ಲಾ ಎಲ್ಲ ಜೊಮಾಟೋ ಡೆಲಿವರಿ ಬಾಯ್ಸ್ ಇದನ್ನೂ ತಿರಸ್ಕಾರ ಮಾಡಿ ಇದಾರ ವಿರುದ್ಧ ಹೋರಾಟ ಮಾಡ್ಬೇಕು ,

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...