Homeಕರ್ನಾಟಕ10 ನಿಮಿಷಗಳಲ್ಲಿ ಆಹಾರ ವಿತರಣೆ ನಿಯಮ ಘೊಷಿಸಿದ ‘ಜೊಮೆಟೊ’; ತೀವ್ರ ವಿರೋಧ

10 ನಿಮಿಷಗಳಲ್ಲಿ ಆಹಾರ ವಿತರಣೆ ನಿಯಮ ಘೊಷಿಸಿದ ‘ಜೊಮೆಟೊ’; ತೀವ್ರ ವಿರೋಧ

- Advertisement -
- Advertisement -

ಆನ್‌ಲೈನ್‌‌ ಆಹಾರ ವಿತರಣಾ ಕಂಪೆನಿ ಜೊಮೊಟೊ ಸಿಇಒ ದೀಪಿಂದರ್‌ ಗೋಯಲ್‌ ಅವರು ಮಾರ್ಚ್ 21ರ ಸೋಮವಾದಂದು, ತಮ್ಮ ಕಂಪನಿಯು ಶೀಘ್ರದಲ್ಲೇ ಹತ್ತು ನಿಮಿಷಗಳಲ್ಲಿ ಆಹಾರ ವಿತರಣೆಯನ್ನು ಪ್ರಾರಂಭಿಸಲಿದೆ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣದ ಬಳಕೆದಾರರು ಮತ್ತು ಆಹಾರವನ್ನು ವಿತರಣೆ ಮಾಡುವ ಕಾರ್ಮಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹಲವಾರು ಜನರು ಹತ್ತು ನಿಮಿಷಗಳಲ್ಲಿ ಆಹಾರವನ್ನು ವಿತರಣೆ ಮಾಡಲು ಹೇಗೆ ಸಾಧ್ಯ ಎಂದ ಪ್ರಶ್ನಿಸಿದ್ದಾರೆ. ಕಂಪೆನಿಯ ಈ ನೀತಿಯಿಂದಾಗಿ ವಿತರಣೆ ಮಾಡುವ ಸಿಬ್ಬಂದಿಯ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

10 ನಿಮಿಷದ ವಿತರಣೆಯ ಕಲ್ಪನೆಯನ್ನು ಜೊಮಾಟೊಗೆ ಬಂಡವಾಳ ಹೂಡಿಕೆ ಮಾಡಿದ ಕಂಪನಿಯಾದ ಬ್ಲಿಂಕಿಟ್‌‌ ಮೊದಲು ಮುಂದಿಟ್ಟಿತ್ತು. ಹತ್ತು ನಿಮಿಷದಲ್ಲಿ ವಿತರಣೆ ಮಾಡುವ ವ್ಯಾಪಾರಿ ಮಾದರಿಯು ದಿನಸಿ ವಸ್ತುಗಳನ್ನು ವಿತರಣೆ ಮಾಡುವ ಕಂಪೆನಿಗಳಲ್ಲಿ ಸಾಮಾನ್ಯವಾಗಿದೆ.

ಇದನ್ನೂ ಓದಿ: ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

ಕಂಪೆನಿಯ ನಿರ್ಧಾರಗಳನ್ನು ಮುಂದಿಡುತ್ತಾ ಮಾತನಾಡಿದ ದೀಪಿಂದರ್ ಗೋಯಲ್, “ಜೊಮಾಟೊ ವಿತರಣಾ ಕಾರ್ಮಿಕರ ಮೇಲೆ ವೇಗವಾಗಿ ತಲುಪಿಸಲು ಯಾವುದೇ ಒತ್ತಡವನ್ನು ಹೇರುವುದಿಲ್ಲ. ವಿತರಣೆಗೆ ಮಾಡಲಾದ ಭರವಸೆಯ ಸಮಯದ ಬಗ್ಗೆ ಅವರಿಗೆ ತಿಳಿಸಲಾಗುವುದಿಲ್ಲ. ಸಮಯ ನಿರ್ವಹಣೆಯನ್ನು ರಸ್ತೆಯಲ್ಲಿ ಮಾಡಲಾಗುವುದಿಲ್ಲ ಮತ್ತು ಇದರಿಂದಾಗಿ ಯಾವುದೆ ಜೀವಕ್ಕೆ ಅಪಾಯವಿಲ್ಲ” ಎಂದು ಹೇಳಿದ್ದಾರೆ.

ಗ್ರಾಹಕರು ತಮ್ಮ ಅಗತ್ಯಗಳಿಗೆ ಅನುಸಾರವಾಗಿ ತ್ವರಿತ ಸೇವೆಯನ್ನು ಬಯಸುತ್ತಿದ್ದಾರೆ ಎಂದು ಗೋಯಲ್ ಹೇಳಿದ್ದು, ಪ್ರಸ್ತುತ ಜೊಮೊಟೊದಲ್ಲಿ ಇರುವ 30 ನಿಮಿಷಗಳ ಸರಾಸರಿ ವಿತರಣಾ ಸಮಯವು ತುಂಬಾ ನಿಧಾನವಾಗಿದ್ದು, ಅದು ತುಂಬಾ ಹಳೆಯ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರಿನಲ್ಲಿ ಜೊಮೆಟೊ ಕಂಪೆನಿಯಲ್ಲಿ ಆಹಾರ ವಿತರಣೆ ಮಾಡುತ್ತಿರುವ ಮಂಡ್ಯದ ದಲೀಪ್‌, “ಈ ಬಗ್ಗೆ ನಮಗೆ ಇನ್ನೂ ಯಾವುದೆ ನೋಟಿಫಿಕೇಷನ್ ಬಂದಿಲ್ಲ. ಆದರೆ ಹತ್ತು ನಿಮಿಷದಲ್ಲಿ ಆಹಾರ ವಿತರಣೆ ಮಾಡಲು ಸಾಧ್ಯವೆ ಇಲ್ಲ. ಗ್ರಾಹಕರು ಆರ್ಡರ್‌ ಮಾಡಿದ ಆಹಾರ ಹೊಟೆಲ್‌ನಲ್ಲಿ ತಯಾರಾಗಿ ಪ್ಯಾಕ್ ಆಗುವಾಗಲೆ ಹತ್ತು ನಿಮಿಷ ಆಗಿರುತ್ತದೆ. ಉಳಿದಂತೆ ಬೆಂಗಳೂರಿನ ಟ್ರಾಫಿಕ್‌ನಲ್ಲಿ ಗ್ರಾಹಕರನ್ನು ತಲುಪಲು ತುಂಬಾ ಸಮಯ ಹಿಡಿಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಯ್ಕಾಟ್ ಚೀನಾ: ಟೀಶರ್ಟ್‌ ಸುಟ್ಟು ಪ್ರತಿಭಟಿಸಿದ ಜೊಮಾಟೊ ಉದ್ಯೋಗಿಗಳು!

ಮಂಗಳೂರಿನಲ್ಲಿ ಜೊಮೆಟೊ ವಿತರಣೆ ಮಾಡುವ ಅನೀಶ್ ಮಾತನಾಡಿ, “ಇದು ಅಪಾಯವನ್ನೂ ತಂದೊಡ್ಡಬಹುದು. ಕಂಪೆನಿಯ ದಂಡಕ್ಕೆ ಹೆದರಿ ವೇಗವಾಗಿ ಅಹಾರ ವಿತರಣೆ ಮಾಡಲು ಹೊರಟರೆ ಅಪಘಾತ ಆಗುವ ಸಾಧ್ಯತೆ ಕೂಡಾ ಇರುತ್ತದೆ. ಈಗಾಗಲೆ ನೀಡಿರುವ 30 ನಿಮಿಷಗಳ ಸಮಯವೇ ಸಾಕಾಗುವುದಿಲ್ಲ. ಅದರಲ್ಲೂ ಹೊಸದಾಗಿ ಜೊಮೊಟೊಗೆ ಕೆಲಸಕ್ಕೆ ಸೇರಿದ ಕಾರ್ಮಿಕರಿಗೆ ಗೂಗಲ್‌ ಲೊಕೇಷನ್ ನೋಡಿಕೊಂಡು ಹೋದರೆ ಈಗ ಇರುವ ಸಮಯವೇ ಸಾಕಾಗುವುದಿಲ್ಲ. ಪ್ರತಿ ವಿತರಣೆಗೆ ದಂಡ ಕಟ್ಟುತ್ತಿದ್ದಾರೆ. ಇನ್ನು ಹತ್ತು ನಿಮಿಷಗಳ ನಿಯಮ ಬಂದರೆ ಅಷ್ಟೆ ಕತೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಸ್ವಾತಿ ಅವರು, “ಬಂಡವಾಳಶಾಹಿ ಕಂಪೆನಿಗಳು ಯಾವ ಮಟ್ಟಿಗೆ ತನ್ನ ಕಾರ್ಮಿಕರನ್ನು ಹಿಂಡಿ ಹಿಪ್ಪೆ ಮಾಡಲು ತಯಾರಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಈಗಾಗಲೆ ಈ ಕಂಪೆನಿಗಳು ತಮ್ಮ ಕಾರ್ಮಿಕರನ್ನು ‘ಪಾಲುದಾರ’ ಎಂದು ಹೇಳುತ್ತಾ ಅವರು ಕಾರ್ಮಿಕರ ಹಕ್ಕುಗಳನ್ನು ನೀಡದೆ ವಂಚಿಸುತ್ತಿದೆ. ಹತ್ತು ನಿಮಿಷದಲ್ಲಿ ಆಹಾರ ವಿತರಣೆ ಎಂಬುವುದು ಅಮಾವನೀಯ ನಡೆಯಾಗಿದೆ. ಸರ್ಕಾರ ಈ ಕಂಪೆನಿಗಳನ್ನು ಹದ್ದುಬಸ್ತಿನಲ್ಲಿ ಇಡಲು ನಿಯಮಗಳನ್ನು ರೂಪಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊಮೊಟೊ ನಿರ್ಧಾರವನ್ನು ಕಾಂಗ್ರೆಸ್ ನಾಯಕ, ಸಂಸದ ಕಾರ್ತಿ ಚಿದಂಬರಂ ಅವರು ವಿರೋಧಿಸಿದ್ದು, ಅವಾಸ್ತವಿಕ ನಿರ್ಧಾರಗಳಿಂದ ವಿತರಣೆ ಮಾಡುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮಾರ್ಗಸೂಚಿಗಳನ್ನು ನಿರೂಪಿಸಲು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ವಿತರಣಾ ಕಂಪನಿಗಳಾದ ಸ್ವಿಗ್ಗಿ ಮತ್ತು ಜೊಮಾಟೊವನ್ನು ನಿಯಂತ್ರಿಸುವಂತೆ ಸರ್ಕಾರಕ್ಕೆ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

“ಭಾರತದಲ್ಲಿ ಆನ್‌ಲೈನ್‌‌ ವಿತರಣೆ ಮಾಡುವ ಮಾರುಕಟ್ಟೆ(‘ಗಿಗ್ ಆರ್ಥಿಕತೆ)ಯಲ್ಲಿ 1.5 ಕೋಟಿ ಕಾರ್ಮಿಕರಿದ್ದಾರೆ ಎಂದು ಅಂದಾಜಿಸಲಾಗಿದೆ. ಇದು 2.5 ಕೋಟಿಯಿಂದ ಮತ್ತು ದೀರ್ಘಾವಧಿಯಲ್ಲಿ 10 ಕೋಟಿಯವರೆಗೆ ಬೆಳೆಯಲಿದೆ” ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

“ಕಾರ್ಮಿಕರು ದ್ವಿಚಕ್ರ ವಾಹನವನ್ನು ಓಡಿಸುತ್ತಾರೆ. ಅದು ಅವರ ವೈಯಕ್ತಿಕ ವಾಹನವಾಗಿದ್ದಾಗಿಯೂ, ವಾಣಿಜ್ಯ ವಿತರಣೆಯನ್ನು ಮಾಡುತ್ತಿದ್ದಾರೆ. ಹಿಂಬದಿಯ ಸೀಟ್‌ನಲ್ಲಿ ಅಥವಾ ಕ್ಯಾರಿಯರ್‌ನಲ್ಲಿ ಭಾರಿ ತೂಕವನ್ನು ಸಾಗಿಸುತ್ತಾರೆ. ಈ ಕಾರ್ಮಿಕರಿಗೆ ಯಾವುದೇ ರಕ್ಷಣೆ ಇಲ್ಲ. ಈ ವಾಹನಗಳನ್ನು ವಾಣಿಜ್ಯ ವಿತರಣೆಗೆ ಎಂದು ಯಾವುದೇ ವರ್ಗೀಕರಣವಾಗಿಲ್ಲ. ಅಪಘಾತ ಸಂಭವಿಸಿದರೆ ಪರಿಹಾರ ನೀಡಲು ವಿಮಾ ಕಂಪನಿಗಳು ನಿರಾಕರಿಸುತ್ತವೆ. ಆದ್ದರಿಂದ ಈ ವಿತರಣಾ ಕಂಪನಿಗಳನ್ನು ನಿಯಂತ್ರಿಸಬೇಕು’’ ಎಂದು ಹೇಳಿದ್ದಾರೆ.

ಚಿದಂಬರಂ ಅವರು ಈ ‘ಅವಾಸ್ತವಿಕ ಮತ್ತು ಅವಿವೇಕದ’ ವಿತರಣಾ ಸಮಯವನ್ನು ಹೊಂದಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದು ಈ ಕಾರ್ಮಿಕರ ಜೀವನವನ್ನು ದೊಡ್ಡ ಗಂಡಾಂತರಕ್ಕೆ ತಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗೋಯಲ್‌, “10 ನಿಮಿಷದ ವಿತರಣೆಯು, ಈ ಹಿಂದಿನ 30 ನಿಮಿಷದ ವಿತರಣೆಯಂತೆ ಸುರಕ್ಷಿತವಾಗಿರುತ್ತದೆ. ಇದು ನಿರ್ದಿಷ್ಟ ಹತ್ತಿರದ ಸ್ಥಳಗಳಿಗೆ ಮತ್ತು ಜನಪ್ರಿಯ ಪ್ರಮಾಣಿತ ಮೆನುವನ್ನು ಮಾತ್ರ ಹೊಂದಿದೆ” ಎಂದು ಸ್ಪಷ್ಟೀಕರಣ ನೀಡಿದ್ದಾರೆ. ತಡವಾಗಿ ಅಥವಾ ಸಮಯಕ್ಕೆ ಸರಿಯಾಗಿ ವಿತರಿಸಲು ಆಗದ ಕಾರ್ಮಿಕರಿಗೆ ಯಾವುದೇ ದಂಡ ಇರುವುದಿಲ್ಲ ಮತ್ತು ಸಮಯದ ಮಿತಿಯ ಬಗ್ಗೆ ಅವರಿಗೆ ತಿಳಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು’: ಪ್ರತಿಭಟನಾಕಾರರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 10. ನಿಮಿಷದಲ್ಲಿ ಡೆಲಿವರಿ ಮಾಡೋಕೆ ಹೋದ್ರೆ 108 ನಲ್ಲಿ ವಾಪಾಸ್ ಬರ್ಬೇಕಾಗುತ್ತೆ , ಸದ್ಯ ಇಲ್ಲಾ ಎಲ್ಲ ಜೊಮಾಟೋ ಡೆಲಿವರಿ ಬಾಯ್ಸ್ ಇದನ್ನೂ ತಿರಸ್ಕಾರ ಮಾಡಿ ಇದಾರ ವಿರುದ್ಧ ಹೋರಾಟ ಮಾಡ್ಬೇಕು ,

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...