Homeಕರ್ನಾಟಕ10 ನಿಮಿಷಗಳಲ್ಲಿ ಆಹಾರ ವಿತರಣೆ ನಿಯಮ ಘೊಷಿಸಿದ ‘ಜೊಮೆಟೊ’; ತೀವ್ರ ವಿರೋಧ

10 ನಿಮಿಷಗಳಲ್ಲಿ ಆಹಾರ ವಿತರಣೆ ನಿಯಮ ಘೊಷಿಸಿದ ‘ಜೊಮೆಟೊ’; ತೀವ್ರ ವಿರೋಧ

- Advertisement -
- Advertisement -

ಆನ್‌ಲೈನ್‌‌ ಆಹಾರ ವಿತರಣಾ ಕಂಪೆನಿ ಜೊಮೊಟೊ ಸಿಇಒ ದೀಪಿಂದರ್‌ ಗೋಯಲ್‌ ಅವರು ಮಾರ್ಚ್ 21ರ ಸೋಮವಾದಂದು, ತಮ್ಮ ಕಂಪನಿಯು ಶೀಘ್ರದಲ್ಲೇ ಹತ್ತು ನಿಮಿಷಗಳಲ್ಲಿ ಆಹಾರ ವಿತರಣೆಯನ್ನು ಪ್ರಾರಂಭಿಸಲಿದೆ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣದ ಬಳಕೆದಾರರು ಮತ್ತು ಆಹಾರವನ್ನು ವಿತರಣೆ ಮಾಡುವ ಕಾರ್ಮಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹಲವಾರು ಜನರು ಹತ್ತು ನಿಮಿಷಗಳಲ್ಲಿ ಆಹಾರವನ್ನು ವಿತರಣೆ ಮಾಡಲು ಹೇಗೆ ಸಾಧ್ಯ ಎಂದ ಪ್ರಶ್ನಿಸಿದ್ದಾರೆ. ಕಂಪೆನಿಯ ಈ ನೀತಿಯಿಂದಾಗಿ ವಿತರಣೆ ಮಾಡುವ ಸಿಬ್ಬಂದಿಯ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

10 ನಿಮಿಷದ ವಿತರಣೆಯ ಕಲ್ಪನೆಯನ್ನು ಜೊಮಾಟೊಗೆ ಬಂಡವಾಳ ಹೂಡಿಕೆ ಮಾಡಿದ ಕಂಪನಿಯಾದ ಬ್ಲಿಂಕಿಟ್‌‌ ಮೊದಲು ಮುಂದಿಟ್ಟಿತ್ತು. ಹತ್ತು ನಿಮಿಷದಲ್ಲಿ ವಿತರಣೆ ಮಾಡುವ ವ್ಯಾಪಾರಿ ಮಾದರಿಯು ದಿನಸಿ ವಸ್ತುಗಳನ್ನು ವಿತರಣೆ ಮಾಡುವ ಕಂಪೆನಿಗಳಲ್ಲಿ ಸಾಮಾನ್ಯವಾಗಿದೆ.

ಇದನ್ನೂ ಓದಿ: ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

ಕಂಪೆನಿಯ ನಿರ್ಧಾರಗಳನ್ನು ಮುಂದಿಡುತ್ತಾ ಮಾತನಾಡಿದ ದೀಪಿಂದರ್ ಗೋಯಲ್, “ಜೊಮಾಟೊ ವಿತರಣಾ ಕಾರ್ಮಿಕರ ಮೇಲೆ ವೇಗವಾಗಿ ತಲುಪಿಸಲು ಯಾವುದೇ ಒತ್ತಡವನ್ನು ಹೇರುವುದಿಲ್ಲ. ವಿತರಣೆಗೆ ಮಾಡಲಾದ ಭರವಸೆಯ ಸಮಯದ ಬಗ್ಗೆ ಅವರಿಗೆ ತಿಳಿಸಲಾಗುವುದಿಲ್ಲ. ಸಮಯ ನಿರ್ವಹಣೆಯನ್ನು ರಸ್ತೆಯಲ್ಲಿ ಮಾಡಲಾಗುವುದಿಲ್ಲ ಮತ್ತು ಇದರಿಂದಾಗಿ ಯಾವುದೆ ಜೀವಕ್ಕೆ ಅಪಾಯವಿಲ್ಲ” ಎಂದು ಹೇಳಿದ್ದಾರೆ.

ಗ್ರಾಹಕರು ತಮ್ಮ ಅಗತ್ಯಗಳಿಗೆ ಅನುಸಾರವಾಗಿ ತ್ವರಿತ ಸೇವೆಯನ್ನು ಬಯಸುತ್ತಿದ್ದಾರೆ ಎಂದು ಗೋಯಲ್ ಹೇಳಿದ್ದು, ಪ್ರಸ್ತುತ ಜೊಮೊಟೊದಲ್ಲಿ ಇರುವ 30 ನಿಮಿಷಗಳ ಸರಾಸರಿ ವಿತರಣಾ ಸಮಯವು ತುಂಬಾ ನಿಧಾನವಾಗಿದ್ದು, ಅದು ತುಂಬಾ ಹಳೆಯ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರಿನಲ್ಲಿ ಜೊಮೆಟೊ ಕಂಪೆನಿಯಲ್ಲಿ ಆಹಾರ ವಿತರಣೆ ಮಾಡುತ್ತಿರುವ ಮಂಡ್ಯದ ದಲೀಪ್‌, “ಈ ಬಗ್ಗೆ ನಮಗೆ ಇನ್ನೂ ಯಾವುದೆ ನೋಟಿಫಿಕೇಷನ್ ಬಂದಿಲ್ಲ. ಆದರೆ ಹತ್ತು ನಿಮಿಷದಲ್ಲಿ ಆಹಾರ ವಿತರಣೆ ಮಾಡಲು ಸಾಧ್ಯವೆ ಇಲ್ಲ. ಗ್ರಾಹಕರು ಆರ್ಡರ್‌ ಮಾಡಿದ ಆಹಾರ ಹೊಟೆಲ್‌ನಲ್ಲಿ ತಯಾರಾಗಿ ಪ್ಯಾಕ್ ಆಗುವಾಗಲೆ ಹತ್ತು ನಿಮಿಷ ಆಗಿರುತ್ತದೆ. ಉಳಿದಂತೆ ಬೆಂಗಳೂರಿನ ಟ್ರಾಫಿಕ್‌ನಲ್ಲಿ ಗ್ರಾಹಕರನ್ನು ತಲುಪಲು ತುಂಬಾ ಸಮಯ ಹಿಡಿಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಯ್ಕಾಟ್ ಚೀನಾ: ಟೀಶರ್ಟ್‌ ಸುಟ್ಟು ಪ್ರತಿಭಟಿಸಿದ ಜೊಮಾಟೊ ಉದ್ಯೋಗಿಗಳು!

ಮಂಗಳೂರಿನಲ್ಲಿ ಜೊಮೆಟೊ ವಿತರಣೆ ಮಾಡುವ ಅನೀಶ್ ಮಾತನಾಡಿ, “ಇದು ಅಪಾಯವನ್ನೂ ತಂದೊಡ್ಡಬಹುದು. ಕಂಪೆನಿಯ ದಂಡಕ್ಕೆ ಹೆದರಿ ವೇಗವಾಗಿ ಅಹಾರ ವಿತರಣೆ ಮಾಡಲು ಹೊರಟರೆ ಅಪಘಾತ ಆಗುವ ಸಾಧ್ಯತೆ ಕೂಡಾ ಇರುತ್ತದೆ. ಈಗಾಗಲೆ ನೀಡಿರುವ 30 ನಿಮಿಷಗಳ ಸಮಯವೇ ಸಾಕಾಗುವುದಿಲ್ಲ. ಅದರಲ್ಲೂ ಹೊಸದಾಗಿ ಜೊಮೊಟೊಗೆ ಕೆಲಸಕ್ಕೆ ಸೇರಿದ ಕಾರ್ಮಿಕರಿಗೆ ಗೂಗಲ್‌ ಲೊಕೇಷನ್ ನೋಡಿಕೊಂಡು ಹೋದರೆ ಈಗ ಇರುವ ಸಮಯವೇ ಸಾಕಾಗುವುದಿಲ್ಲ. ಪ್ರತಿ ವಿತರಣೆಗೆ ದಂಡ ಕಟ್ಟುತ್ತಿದ್ದಾರೆ. ಇನ್ನು ಹತ್ತು ನಿಮಿಷಗಳ ನಿಯಮ ಬಂದರೆ ಅಷ್ಟೆ ಕತೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಸ್ವಾತಿ ಅವರು, “ಬಂಡವಾಳಶಾಹಿ ಕಂಪೆನಿಗಳು ಯಾವ ಮಟ್ಟಿಗೆ ತನ್ನ ಕಾರ್ಮಿಕರನ್ನು ಹಿಂಡಿ ಹಿಪ್ಪೆ ಮಾಡಲು ತಯಾರಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಈಗಾಗಲೆ ಈ ಕಂಪೆನಿಗಳು ತಮ್ಮ ಕಾರ್ಮಿಕರನ್ನು ‘ಪಾಲುದಾರ’ ಎಂದು ಹೇಳುತ್ತಾ ಅವರು ಕಾರ್ಮಿಕರ ಹಕ್ಕುಗಳನ್ನು ನೀಡದೆ ವಂಚಿಸುತ್ತಿದೆ. ಹತ್ತು ನಿಮಿಷದಲ್ಲಿ ಆಹಾರ ವಿತರಣೆ ಎಂಬುವುದು ಅಮಾವನೀಯ ನಡೆಯಾಗಿದೆ. ಸರ್ಕಾರ ಈ ಕಂಪೆನಿಗಳನ್ನು ಹದ್ದುಬಸ್ತಿನಲ್ಲಿ ಇಡಲು ನಿಯಮಗಳನ್ನು ರೂಪಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊಮೊಟೊ ನಿರ್ಧಾರವನ್ನು ಕಾಂಗ್ರೆಸ್ ನಾಯಕ, ಸಂಸದ ಕಾರ್ತಿ ಚಿದಂಬರಂ ಅವರು ವಿರೋಧಿಸಿದ್ದು, ಅವಾಸ್ತವಿಕ ನಿರ್ಧಾರಗಳಿಂದ ವಿತರಣೆ ಮಾಡುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮಾರ್ಗಸೂಚಿಗಳನ್ನು ನಿರೂಪಿಸಲು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ವಿತರಣಾ ಕಂಪನಿಗಳಾದ ಸ್ವಿಗ್ಗಿ ಮತ್ತು ಜೊಮಾಟೊವನ್ನು ನಿಯಂತ್ರಿಸುವಂತೆ ಸರ್ಕಾರಕ್ಕೆ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

“ಭಾರತದಲ್ಲಿ ಆನ್‌ಲೈನ್‌‌ ವಿತರಣೆ ಮಾಡುವ ಮಾರುಕಟ್ಟೆ(‘ಗಿಗ್ ಆರ್ಥಿಕತೆ)ಯಲ್ಲಿ 1.5 ಕೋಟಿ ಕಾರ್ಮಿಕರಿದ್ದಾರೆ ಎಂದು ಅಂದಾಜಿಸಲಾಗಿದೆ. ಇದು 2.5 ಕೋಟಿಯಿಂದ ಮತ್ತು ದೀರ್ಘಾವಧಿಯಲ್ಲಿ 10 ಕೋಟಿಯವರೆಗೆ ಬೆಳೆಯಲಿದೆ” ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

“ಕಾರ್ಮಿಕರು ದ್ವಿಚಕ್ರ ವಾಹನವನ್ನು ಓಡಿಸುತ್ತಾರೆ. ಅದು ಅವರ ವೈಯಕ್ತಿಕ ವಾಹನವಾಗಿದ್ದಾಗಿಯೂ, ವಾಣಿಜ್ಯ ವಿತರಣೆಯನ್ನು ಮಾಡುತ್ತಿದ್ದಾರೆ. ಹಿಂಬದಿಯ ಸೀಟ್‌ನಲ್ಲಿ ಅಥವಾ ಕ್ಯಾರಿಯರ್‌ನಲ್ಲಿ ಭಾರಿ ತೂಕವನ್ನು ಸಾಗಿಸುತ್ತಾರೆ. ಈ ಕಾರ್ಮಿಕರಿಗೆ ಯಾವುದೇ ರಕ್ಷಣೆ ಇಲ್ಲ. ಈ ವಾಹನಗಳನ್ನು ವಾಣಿಜ್ಯ ವಿತರಣೆಗೆ ಎಂದು ಯಾವುದೇ ವರ್ಗೀಕರಣವಾಗಿಲ್ಲ. ಅಪಘಾತ ಸಂಭವಿಸಿದರೆ ಪರಿಹಾರ ನೀಡಲು ವಿಮಾ ಕಂಪನಿಗಳು ನಿರಾಕರಿಸುತ್ತವೆ. ಆದ್ದರಿಂದ ಈ ವಿತರಣಾ ಕಂಪನಿಗಳನ್ನು ನಿಯಂತ್ರಿಸಬೇಕು’’ ಎಂದು ಹೇಳಿದ್ದಾರೆ.

ಚಿದಂಬರಂ ಅವರು ಈ ‘ಅವಾಸ್ತವಿಕ ಮತ್ತು ಅವಿವೇಕದ’ ವಿತರಣಾ ಸಮಯವನ್ನು ಹೊಂದಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದು ಈ ಕಾರ್ಮಿಕರ ಜೀವನವನ್ನು ದೊಡ್ಡ ಗಂಡಾಂತರಕ್ಕೆ ತಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗೋಯಲ್‌, “10 ನಿಮಿಷದ ವಿತರಣೆಯು, ಈ ಹಿಂದಿನ 30 ನಿಮಿಷದ ವಿತರಣೆಯಂತೆ ಸುರಕ್ಷಿತವಾಗಿರುತ್ತದೆ. ಇದು ನಿರ್ದಿಷ್ಟ ಹತ್ತಿರದ ಸ್ಥಳಗಳಿಗೆ ಮತ್ತು ಜನಪ್ರಿಯ ಪ್ರಮಾಣಿತ ಮೆನುವನ್ನು ಮಾತ್ರ ಹೊಂದಿದೆ” ಎಂದು ಸ್ಪಷ್ಟೀಕರಣ ನೀಡಿದ್ದಾರೆ. ತಡವಾಗಿ ಅಥವಾ ಸಮಯಕ್ಕೆ ಸರಿಯಾಗಿ ವಿತರಿಸಲು ಆಗದ ಕಾರ್ಮಿಕರಿಗೆ ಯಾವುದೇ ದಂಡ ಇರುವುದಿಲ್ಲ ಮತ್ತು ಸಮಯದ ಮಿತಿಯ ಬಗ್ಗೆ ಅವರಿಗೆ ತಿಳಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು’: ಪ್ರತಿಭಟನಾಕಾರರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 10. ನಿಮಿಷದಲ್ಲಿ ಡೆಲಿವರಿ ಮಾಡೋಕೆ ಹೋದ್ರೆ 108 ನಲ್ಲಿ ವಾಪಾಸ್ ಬರ್ಬೇಕಾಗುತ್ತೆ , ಸದ್ಯ ಇಲ್ಲಾ ಎಲ್ಲ ಜೊಮಾಟೋ ಡೆಲಿವರಿ ಬಾಯ್ಸ್ ಇದನ್ನೂ ತಿರಸ್ಕಾರ ಮಾಡಿ ಇದಾರ ವಿರುದ್ಧ ಹೋರಾಟ ಮಾಡ್ಬೇಕು ,

LEAVE A REPLY

Please enter your comment!
Please enter your name here

- Advertisment -

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...