Homeಕರ್ನಾಟಕ10 ನಿಮಿಷಗಳಲ್ಲಿ ಆಹಾರ ವಿತರಣೆ ನಿಯಮ ಘೊಷಿಸಿದ ‘ಜೊಮೆಟೊ’; ತೀವ್ರ ವಿರೋಧ

10 ನಿಮಿಷಗಳಲ್ಲಿ ಆಹಾರ ವಿತರಣೆ ನಿಯಮ ಘೊಷಿಸಿದ ‘ಜೊಮೆಟೊ’; ತೀವ್ರ ವಿರೋಧ

- Advertisement -
- Advertisement -

ಆನ್‌ಲೈನ್‌‌ ಆಹಾರ ವಿತರಣಾ ಕಂಪೆನಿ ಜೊಮೊಟೊ ಸಿಇಒ ದೀಪಿಂದರ್‌ ಗೋಯಲ್‌ ಅವರು ಮಾರ್ಚ್ 21ರ ಸೋಮವಾದಂದು, ತಮ್ಮ ಕಂಪನಿಯು ಶೀಘ್ರದಲ್ಲೇ ಹತ್ತು ನಿಮಿಷಗಳಲ್ಲಿ ಆಹಾರ ವಿತರಣೆಯನ್ನು ಪ್ರಾರಂಭಿಸಲಿದೆ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣದ ಬಳಕೆದಾರರು ಮತ್ತು ಆಹಾರವನ್ನು ವಿತರಣೆ ಮಾಡುವ ಕಾರ್ಮಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹಲವಾರು ಜನರು ಹತ್ತು ನಿಮಿಷಗಳಲ್ಲಿ ಆಹಾರವನ್ನು ವಿತರಣೆ ಮಾಡಲು ಹೇಗೆ ಸಾಧ್ಯ ಎಂದ ಪ್ರಶ್ನಿಸಿದ್ದಾರೆ. ಕಂಪೆನಿಯ ಈ ನೀತಿಯಿಂದಾಗಿ ವಿತರಣೆ ಮಾಡುವ ಸಿಬ್ಬಂದಿಯ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

10 ನಿಮಿಷದ ವಿತರಣೆಯ ಕಲ್ಪನೆಯನ್ನು ಜೊಮಾಟೊಗೆ ಬಂಡವಾಳ ಹೂಡಿಕೆ ಮಾಡಿದ ಕಂಪನಿಯಾದ ಬ್ಲಿಂಕಿಟ್‌‌ ಮೊದಲು ಮುಂದಿಟ್ಟಿತ್ತು. ಹತ್ತು ನಿಮಿಷದಲ್ಲಿ ವಿತರಣೆ ಮಾಡುವ ವ್ಯಾಪಾರಿ ಮಾದರಿಯು ದಿನಸಿ ವಸ್ತುಗಳನ್ನು ವಿತರಣೆ ಮಾಡುವ ಕಂಪೆನಿಗಳಲ್ಲಿ ಸಾಮಾನ್ಯವಾಗಿದೆ.

ಇದನ್ನೂ ಓದಿ: ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

ಕಂಪೆನಿಯ ನಿರ್ಧಾರಗಳನ್ನು ಮುಂದಿಡುತ್ತಾ ಮಾತನಾಡಿದ ದೀಪಿಂದರ್ ಗೋಯಲ್, “ಜೊಮಾಟೊ ವಿತರಣಾ ಕಾರ್ಮಿಕರ ಮೇಲೆ ವೇಗವಾಗಿ ತಲುಪಿಸಲು ಯಾವುದೇ ಒತ್ತಡವನ್ನು ಹೇರುವುದಿಲ್ಲ. ವಿತರಣೆಗೆ ಮಾಡಲಾದ ಭರವಸೆಯ ಸಮಯದ ಬಗ್ಗೆ ಅವರಿಗೆ ತಿಳಿಸಲಾಗುವುದಿಲ್ಲ. ಸಮಯ ನಿರ್ವಹಣೆಯನ್ನು ರಸ್ತೆಯಲ್ಲಿ ಮಾಡಲಾಗುವುದಿಲ್ಲ ಮತ್ತು ಇದರಿಂದಾಗಿ ಯಾವುದೆ ಜೀವಕ್ಕೆ ಅಪಾಯವಿಲ್ಲ” ಎಂದು ಹೇಳಿದ್ದಾರೆ.

ಗ್ರಾಹಕರು ತಮ್ಮ ಅಗತ್ಯಗಳಿಗೆ ಅನುಸಾರವಾಗಿ ತ್ವರಿತ ಸೇವೆಯನ್ನು ಬಯಸುತ್ತಿದ್ದಾರೆ ಎಂದು ಗೋಯಲ್ ಹೇಳಿದ್ದು, ಪ್ರಸ್ತುತ ಜೊಮೊಟೊದಲ್ಲಿ ಇರುವ 30 ನಿಮಿಷಗಳ ಸರಾಸರಿ ವಿತರಣಾ ಸಮಯವು ತುಂಬಾ ನಿಧಾನವಾಗಿದ್ದು, ಅದು ತುಂಬಾ ಹಳೆಯ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರಿನಲ್ಲಿ ಜೊಮೆಟೊ ಕಂಪೆನಿಯಲ್ಲಿ ಆಹಾರ ವಿತರಣೆ ಮಾಡುತ್ತಿರುವ ಮಂಡ್ಯದ ದಲೀಪ್‌, “ಈ ಬಗ್ಗೆ ನಮಗೆ ಇನ್ನೂ ಯಾವುದೆ ನೋಟಿಫಿಕೇಷನ್ ಬಂದಿಲ್ಲ. ಆದರೆ ಹತ್ತು ನಿಮಿಷದಲ್ಲಿ ಆಹಾರ ವಿತರಣೆ ಮಾಡಲು ಸಾಧ್ಯವೆ ಇಲ್ಲ. ಗ್ರಾಹಕರು ಆರ್ಡರ್‌ ಮಾಡಿದ ಆಹಾರ ಹೊಟೆಲ್‌ನಲ್ಲಿ ತಯಾರಾಗಿ ಪ್ಯಾಕ್ ಆಗುವಾಗಲೆ ಹತ್ತು ನಿಮಿಷ ಆಗಿರುತ್ತದೆ. ಉಳಿದಂತೆ ಬೆಂಗಳೂರಿನ ಟ್ರಾಫಿಕ್‌ನಲ್ಲಿ ಗ್ರಾಹಕರನ್ನು ತಲುಪಲು ತುಂಬಾ ಸಮಯ ಹಿಡಿಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಯ್ಕಾಟ್ ಚೀನಾ: ಟೀಶರ್ಟ್‌ ಸುಟ್ಟು ಪ್ರತಿಭಟಿಸಿದ ಜೊಮಾಟೊ ಉದ್ಯೋಗಿಗಳು!

ಮಂಗಳೂರಿನಲ್ಲಿ ಜೊಮೆಟೊ ವಿತರಣೆ ಮಾಡುವ ಅನೀಶ್ ಮಾತನಾಡಿ, “ಇದು ಅಪಾಯವನ್ನೂ ತಂದೊಡ್ಡಬಹುದು. ಕಂಪೆನಿಯ ದಂಡಕ್ಕೆ ಹೆದರಿ ವೇಗವಾಗಿ ಅಹಾರ ವಿತರಣೆ ಮಾಡಲು ಹೊರಟರೆ ಅಪಘಾತ ಆಗುವ ಸಾಧ್ಯತೆ ಕೂಡಾ ಇರುತ್ತದೆ. ಈಗಾಗಲೆ ನೀಡಿರುವ 30 ನಿಮಿಷಗಳ ಸಮಯವೇ ಸಾಕಾಗುವುದಿಲ್ಲ. ಅದರಲ್ಲೂ ಹೊಸದಾಗಿ ಜೊಮೊಟೊಗೆ ಕೆಲಸಕ್ಕೆ ಸೇರಿದ ಕಾರ್ಮಿಕರಿಗೆ ಗೂಗಲ್‌ ಲೊಕೇಷನ್ ನೋಡಿಕೊಂಡು ಹೋದರೆ ಈಗ ಇರುವ ಸಮಯವೇ ಸಾಕಾಗುವುದಿಲ್ಲ. ಪ್ರತಿ ವಿತರಣೆಗೆ ದಂಡ ಕಟ್ಟುತ್ತಿದ್ದಾರೆ. ಇನ್ನು ಹತ್ತು ನಿಮಿಷಗಳ ನಿಯಮ ಬಂದರೆ ಅಷ್ಟೆ ಕತೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಸ್ವಾತಿ ಅವರು, “ಬಂಡವಾಳಶಾಹಿ ಕಂಪೆನಿಗಳು ಯಾವ ಮಟ್ಟಿಗೆ ತನ್ನ ಕಾರ್ಮಿಕರನ್ನು ಹಿಂಡಿ ಹಿಪ್ಪೆ ಮಾಡಲು ತಯಾರಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಈಗಾಗಲೆ ಈ ಕಂಪೆನಿಗಳು ತಮ್ಮ ಕಾರ್ಮಿಕರನ್ನು ‘ಪಾಲುದಾರ’ ಎಂದು ಹೇಳುತ್ತಾ ಅವರು ಕಾರ್ಮಿಕರ ಹಕ್ಕುಗಳನ್ನು ನೀಡದೆ ವಂಚಿಸುತ್ತಿದೆ. ಹತ್ತು ನಿಮಿಷದಲ್ಲಿ ಆಹಾರ ವಿತರಣೆ ಎಂಬುವುದು ಅಮಾವನೀಯ ನಡೆಯಾಗಿದೆ. ಸರ್ಕಾರ ಈ ಕಂಪೆನಿಗಳನ್ನು ಹದ್ದುಬಸ್ತಿನಲ್ಲಿ ಇಡಲು ನಿಯಮಗಳನ್ನು ರೂಪಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊಮೊಟೊ ನಿರ್ಧಾರವನ್ನು ಕಾಂಗ್ರೆಸ್ ನಾಯಕ, ಸಂಸದ ಕಾರ್ತಿ ಚಿದಂಬರಂ ಅವರು ವಿರೋಧಿಸಿದ್ದು, ಅವಾಸ್ತವಿಕ ನಿರ್ಧಾರಗಳಿಂದ ವಿತರಣೆ ಮಾಡುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮಾರ್ಗಸೂಚಿಗಳನ್ನು ನಿರೂಪಿಸಲು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ವಿತರಣಾ ಕಂಪನಿಗಳಾದ ಸ್ವಿಗ್ಗಿ ಮತ್ತು ಜೊಮಾಟೊವನ್ನು ನಿಯಂತ್ರಿಸುವಂತೆ ಸರ್ಕಾರಕ್ಕೆ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

“ಭಾರತದಲ್ಲಿ ಆನ್‌ಲೈನ್‌‌ ವಿತರಣೆ ಮಾಡುವ ಮಾರುಕಟ್ಟೆ(‘ಗಿಗ್ ಆರ್ಥಿಕತೆ)ಯಲ್ಲಿ 1.5 ಕೋಟಿ ಕಾರ್ಮಿಕರಿದ್ದಾರೆ ಎಂದು ಅಂದಾಜಿಸಲಾಗಿದೆ. ಇದು 2.5 ಕೋಟಿಯಿಂದ ಮತ್ತು ದೀರ್ಘಾವಧಿಯಲ್ಲಿ 10 ಕೋಟಿಯವರೆಗೆ ಬೆಳೆಯಲಿದೆ” ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

“ಕಾರ್ಮಿಕರು ದ್ವಿಚಕ್ರ ವಾಹನವನ್ನು ಓಡಿಸುತ್ತಾರೆ. ಅದು ಅವರ ವೈಯಕ್ತಿಕ ವಾಹನವಾಗಿದ್ದಾಗಿಯೂ, ವಾಣಿಜ್ಯ ವಿತರಣೆಯನ್ನು ಮಾಡುತ್ತಿದ್ದಾರೆ. ಹಿಂಬದಿಯ ಸೀಟ್‌ನಲ್ಲಿ ಅಥವಾ ಕ್ಯಾರಿಯರ್‌ನಲ್ಲಿ ಭಾರಿ ತೂಕವನ್ನು ಸಾಗಿಸುತ್ತಾರೆ. ಈ ಕಾರ್ಮಿಕರಿಗೆ ಯಾವುದೇ ರಕ್ಷಣೆ ಇಲ್ಲ. ಈ ವಾಹನಗಳನ್ನು ವಾಣಿಜ್ಯ ವಿತರಣೆಗೆ ಎಂದು ಯಾವುದೇ ವರ್ಗೀಕರಣವಾಗಿಲ್ಲ. ಅಪಘಾತ ಸಂಭವಿಸಿದರೆ ಪರಿಹಾರ ನೀಡಲು ವಿಮಾ ಕಂಪನಿಗಳು ನಿರಾಕರಿಸುತ್ತವೆ. ಆದ್ದರಿಂದ ಈ ವಿತರಣಾ ಕಂಪನಿಗಳನ್ನು ನಿಯಂತ್ರಿಸಬೇಕು’’ ಎಂದು ಹೇಳಿದ್ದಾರೆ.

ಚಿದಂಬರಂ ಅವರು ಈ ‘ಅವಾಸ್ತವಿಕ ಮತ್ತು ಅವಿವೇಕದ’ ವಿತರಣಾ ಸಮಯವನ್ನು ಹೊಂದಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದು ಈ ಕಾರ್ಮಿಕರ ಜೀವನವನ್ನು ದೊಡ್ಡ ಗಂಡಾಂತರಕ್ಕೆ ತಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗೋಯಲ್‌, “10 ನಿಮಿಷದ ವಿತರಣೆಯು, ಈ ಹಿಂದಿನ 30 ನಿಮಿಷದ ವಿತರಣೆಯಂತೆ ಸುರಕ್ಷಿತವಾಗಿರುತ್ತದೆ. ಇದು ನಿರ್ದಿಷ್ಟ ಹತ್ತಿರದ ಸ್ಥಳಗಳಿಗೆ ಮತ್ತು ಜನಪ್ರಿಯ ಪ್ರಮಾಣಿತ ಮೆನುವನ್ನು ಮಾತ್ರ ಹೊಂದಿದೆ” ಎಂದು ಸ್ಪಷ್ಟೀಕರಣ ನೀಡಿದ್ದಾರೆ. ತಡವಾಗಿ ಅಥವಾ ಸಮಯಕ್ಕೆ ಸರಿಯಾಗಿ ವಿತರಿಸಲು ಆಗದ ಕಾರ್ಮಿಕರಿಗೆ ಯಾವುದೇ ದಂಡ ಇರುವುದಿಲ್ಲ ಮತ್ತು ಸಮಯದ ಮಿತಿಯ ಬಗ್ಗೆ ಅವರಿಗೆ ತಿಳಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು’: ಪ್ರತಿಭಟನಾಕಾರರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 10. ನಿಮಿಷದಲ್ಲಿ ಡೆಲಿವರಿ ಮಾಡೋಕೆ ಹೋದ್ರೆ 108 ನಲ್ಲಿ ವಾಪಾಸ್ ಬರ್ಬೇಕಾಗುತ್ತೆ , ಸದ್ಯ ಇಲ್ಲಾ ಎಲ್ಲ ಜೊಮಾಟೋ ಡೆಲಿವರಿ ಬಾಯ್ಸ್ ಇದನ್ನೂ ತಿರಸ್ಕಾರ ಮಾಡಿ ಇದಾರ ವಿರುದ್ಧ ಹೋರಾಟ ಮಾಡ್ಬೇಕು ,

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...