Homeಮುಖಪುಟಹಿಂದೂವಲ್ಲದ ಕಾರಣಕ್ಕೆ ಜೊಮ್ಯಾಟೊ ಆರ್ಡರ್ ರದ್ದು ಮಾಡಿದ ಯುವಕನಿಗೆ ನೋಟಿಸ್ ಕಳಿಸಿದ ಪೊಲೀಸ್

ಹಿಂದೂವಲ್ಲದ ಕಾರಣಕ್ಕೆ ಜೊಮ್ಯಾಟೊ ಆರ್ಡರ್ ರದ್ದು ಮಾಡಿದ ಯುವಕನಿಗೆ ನೋಟಿಸ್ ಕಳಿಸಿದ ಪೊಲೀಸ್

ಮುಂದುವರಿದ ಜೊಮ್ಯಾಟೋ ಜಗಳ: ಇಂದಿನ ಟ್ರೆಂಡ್ ಆರ್ಡರ್ ಮತ್ತು ಬಾಯ್ಕಟ್ ಜೊಮ್ಯಾಟೋ

- Advertisement -
- Advertisement -

ಡೆಲಿವರಿ ಬಾಯ್ ಹಿಂದೂವಲ್ಲದ ಕಾರಣಕ್ಕೆ ಜೊಮ್ಯಾಟೊ ಆರ್ಡರ್ ರದ್ದು ಮಾಡಿದ ಮಧ್ಯಪ್ರದೇಶದ ಜಬಲ್ ಪುರದ ನಿವಾಸಿ ಯುವಕನಿಗೆ ನೋಟಿಸ್ ಕಳಿಸಲು ಪೊಲೀಸ್ ಇಲಾಖೆ ತಯಾರಿ ನಡೆಸಿದೆ. ಜಬಲ್ ಪುರದ ಎಸ್.ಪಿ ಯಾದ ಅಮಿತ್ ಸಿಂಗ್ ರವರು ಸ್ವಯಂಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಮುಂದಾಗಿದ್ದಾರೆ. ಈ ಘಟನೆಯು ನಿಜವಾಗಿದ್ದರೆ ಅದು ಇನ್ನೊಂದು ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೃತ್ಯವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಆಹಾರಕ್ಕೆ ಧರ್ಮವಿಲ್ಲ, ಆಹಾರವೇ ಧರ್ಮ ಎಂದು ಟ್ವೀಟ್ ಮಾಡುವ ಮೂಲಕ ಸಾವಿರಾರು ಜನರ ಮನಗೆದ್ದಿದ್ದ ಜೊಮ್ಯಾಟೋ ಕುರಿತ ಪರ-ವಿರುದ್ಧದ ಚರ್ಚೆ ಇಂದೂ ಮುಂದುವರೆದಿದೆ. ಟ್ವಿಟ್ಟರ್ ಟ್ರೆಂಡಿಂಗ್ ನಲ್ಲಿ ಜೊಮ್ಯಾಟೋ 60 ಸಾವಿರದಷ್ಟು ಟ್ರೆಂಡ್ ಆದರೆ ಬಾಯ್ಕಟ್ ಜೊಮ್ಯಾಟೋ ಕೂಡ 51 ಸಾವಿರದಷ್ಟು ಟ್ರೆಂಡ್ ಆಗಿದೆ.

ಹಿಂದೂ ಅಲ್ಲದ ಮುಸ್ಲಿಂ ರೈಡರ್ ಆಹಾರ ತರುವುದನ್ನು ಬದಲಿಸಿಲು ಸೂಚಿಸಿದ್ದ ಅಮಿತ್ ಶುಕ್ಲಾ ಎಂಬ ಗ್ರಾಹಕನ ಕೋರಿಕೆಯನ್ನು ಜೊಮ್ಯಾಟೋ ತಿರಸ್ಕರಿಸಿತ್ತು ಮಾತ್ರವಲ್ಲ ಈ ಕಾರಣಕ್ಕಾಗಿ ಕ್ಯಾನ್ಸಲ್ ಮಾಡಿದರೆ ಹಣ ಮರುಪಾವತಿಸುವುದಿಲ್ಲ ಎಂದು ಹೇಳಿತ್ತು. ಇದನ್ನು ಅವರು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದರು.

ಅದಕ್ಕೆ ಜೊಮ್ಯಾಟೋ ಮತ್ತು ಅದರ ಸ್ಥಾಪಕ “ಭಾರತದ ವೈವಿಧ್ಯತೆ, ನಮ್ಮ ಗ್ರಾಹಕರು ಮತ್ತು ಪಾಲುದಾರರ ಅಮೂಲ್ಯ ಘನತೆಯ ಬಗ್ಗೆ ನಮಗೆ ಹೆಮ್ಮೆಯಿದೆ. ಈ ನಮ್ಮ ಮೌಲ್ಯಗಳಿಗೆ ಅಡ್ಡಿಬರುವ/ತೊಡಕಾಗುವ ಯಾವುದೇ ವ್ಯವಹಾರವನ್ನು ಕಳೆದುಕೊಳ್ಳಲು ನಮಗೆ ಬೇಸರವಿಲ್ಲ” ಎಂದು ಟ್ವೀಟ್ ಮಾಡಿದ್ದರು.

ಜೊಮ್ಯಾಟೊ ನಡೆಯನ್ನು ಮೆಚ್ಚಿ ಹಲವರು ಇಂದಿನಿಂದ ಜ್ಯೊಮ್ಯಾಟೊದಲ್ಲಿಯೇ ಆರ್ಡರ್ ಮಾಡುತ್ತೇವೆ ಎಂದು ಬರೆದುಕೊಂಡಿದ್ದರು. ಯುವ ಚಿಂತಕ ಧೃವ್ ರಾಠೀ, ಆಕಾಶ್ ಬ್ಯಾನರ್ಜಿ, ಬಾಲಿವುಡ್ ನಟಿ ಸ್ವರ ಭಾಸ್ಕರ್, ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್, ಕಾಶ್ಮೀರದ ಓಮರ್ ಅಬ್ದುಲ್ಲಾ ಇನ್ನು ಹಲವಾರು ಜನ ಜ್ಯೊಮ್ಯಾಟೊ ನಿಲುವನ್ನು ಬೆಂಬಲಿಸಿದ್ದರು. ಒಂದಾದರು ಜ್ಯೊಮ್ಯಾಟೊಗೆ ಆರ್ಡರ್ ಮಾಡಿ ಎಂದು ಕರೆ ಸಹ ನೀಡಿದ್ದರು.

ಅದು ಟ್ಟಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಲೇ ಹಿಂದುತ್ವ ಪ್ರತಿಪಾದಕರು ಟ್ವಿಟ್ಟರ್ ಗೆ ಲಗ್ಗೆ ಇಟ್ಟಿದ್ದಾರೆ. ಬಾಯ್ಕಟ್ ಜೊಮ್ಯಾಟೋ ಎಂದು ಟ್ವಿಟ್ಟರ್ ನಲ್ಲಿ ಟ್ರೆಂಡ್ ಮಾಡಲು ಮುಂದಾಗಿದ್ದಾರೆ. ಮುಸ್ಲಿಂಮರೇಕೆ ಹಲಾಲ್ ಕಟ್ ಆದ ಆಹಾರವನ್ನೇ ಬಳಸಬೇಕು ಎಂದೆಲ್ಲಾ ಚೇಡಿಸಿದ್ದಲ್ಲದೇ ತಮ್ಮ ಮೊಬೈಲ್ ನಲ್ಲಿನ ಜ್ಯೊಮ್ಯಾಟೊ ಆಪ್ ಅನ್ನು ಅನ್ ಇನ್ಸ್ಟಾಲ್ ಮಾಡುವ ಫೋಟೋಗಳನ್ನು ಹಾಕಿದ್ದಾರೆ. ಜೊತೆಗೆ ಉಬರ್ ಈಟ್ಸ್ ಆಪ್ ಹಾಕಿಕೊಂಡಿರುವುದಾಗಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...