Homeದಲಿತ್ ಫೈಲ್ಸ್ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

- Advertisement -
- Advertisement -

ಆನ್‌ಲೈನ್‌ ಮೂಲಕ ಆಹಾರ ಡೆಲಿವರಿ ಮಾಡುವ ಜೊಮಾಟೊ ಸಂಸ್ಥೆ ನೀಡಿದ ಜಾಹೀರಾತು ‘ಅಸ್ಪೃಶ್ಯತೆ’ ಆಚರಣೆ ಮಾಡಿದೆ ಎಂಬ ಗುರುತರವಾದ ಆರೋಪ ಬಂದಿದ್ದು, ಟೀಕೆಗಳು ವ್ಯಕ್ತವಾದ ಬಳಿಕ ಜಾಹೀರಾತನ್ನು ಜೊಮೊಟೊ ತೆರವು ಮಾಡಿದೆ.

ಅಮೀರ್‌ ಖಾನ್ ಅಭಿನಯದ ಲಗಾನ್ ಚಿತ್ರದಲ್ಲಿನ ದಲಿತ ಪಾತ್ರವಾದ “ಕಚ್ರಾ”ನನ್ನು ತ್ಯಾಜ್ಯದಿಂದ ತಯಾರಿಸಿದ ಮರು ಬಳಕೆಯ ವಸ್ತು ಎಂಬಂತೆ ಚಿತ್ರಿಸಿರುವುದು ಭಾರೀ ವಿರೋಧಕ್ಕೆ ಒಳಗಾಗಿದೆ. ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾದ ಬಳಿಕ ಜಾಹೀರಾತನ್ನು ಹಿಂಪಡೆಯಲಾಗಿದೆ.

ಲಗಾನ್‌ನಲ್ಲಿ ‘ಕಾಚ್ರಾ’ ಪಾತ್ರವನ್ನು ಮಾಡಿರುವ ವ್ಯಕ್ತಿಯೇ ಈ ಜಾಹೀರಾತಿನಲ್ಲೂ ಅಭಿನಯಿಸಿದ್ದಾರೆ. ‘ಕಚ್ರಾ’ (ಕಸ) ಎಂಬ ಹಿಂದಿ ಪದವನ್ನು ಜಾಹೀರಾತಿನಲ್ಲೂ ಬಳಸಲಾಗಿದೆ. ಕಾಚ್ರಾ ಪಾತ್ರ ಮಾಡಿರುವ ವ್ಯಕ್ತಿ ಮತ್ತು ಕಸ ಎಂಬ ಪದವು ಒಂದಕ್ಕೊಂದು ತಾಳೆಯಾಗಿದ್ದು, ಟೀಕೆಗೆ ಗುರಿಯಾಗಿದೆ.

ಲಗಾನ್‌ ಚಿತ್ರದಲ್ಲಿ ‘ಕಚ್ರಾ’ ಪಾತ್ರವನ್ನು ನಿರ್ವಹಿಸಿದ ನಟ ಆದಿತ್ಯ ಲಖಿಯಾ ಅವರನ್ನು ಮರುಬಳಕೆಯ ವಸ್ತುವಿನಿಂದ ಮಾಡಿದ ‘ಟೇಬಲ್‌, ಹ್ಯಾಂಡ್ ಟವಲ್‌, ಲ್ಯಾಂಪ್‌, ಫ್ಲವರ್‌ ಫಾಟ್‌’ ರೀತಿ ಚಿತ್ರಿಸಲಾಗಿದೆ. ಈ ವಸ್ತುಗಳನ್ನು ತಯಾರಿಸಲು ಮರುಬಳಕೆ ಮಾಡಬಹುದಾದ ಕಸವನ್ನು ಬಳಸಲಾಗಿದೆ ಎಂಬಂತೆ ಬಿಂಬಿಸಲಾಗಿದೆ. ಜೂನ್ 5 ರಂದು ವಿಶ್ವ ಪರಿಸರ ದಿನದಂದು ಜಾಹೀರಾತನ್ನು ಅಪ್ಲೋಡ್ ಮಾಡಲಾಗಿತ್ತು.

ಕಸವನ್ನು ಮರುಬಳಕೆ ಮಾಡುವಂತೆ ಸಂದೇಶ ನೀಡುವ ಜಾಹೀರಾತು ನೀಡಲು ಹೋಗಿ ಈ ರೀತಿಯ ಅಸ್ಪೃಶ್ಯತೆಯನ್ನು ಜೊಮೊಟೊ ಆಚರಿಸಿದೆ. ವಿರೋಧ ವ್ಯಕ್ತವಾದ ಬಳಿಕ, “ನಾವು ಕೆಲವು ಸಮುದಾಯಗಳು ಮತ್ತು ವ್ಯಕ್ತಿಗಳ ಭಾವನೆಗಳನ್ನು ಘಾಸಿಗೊಳಿಸಿರಬಹುದು” ಎಂದಿರುವ ಜೊಮೊಟೊ, “ನಾವು ವೀಡಿಯೊವನ್ನು ತೆಗೆದುಹಾಕಿದ್ದೇವೆ” ಎಂದು ತಿಳಿಸಿದೆ.

ಚಲನಚಿತ್ರ ನಿರ್ದೇಶಕ ನೀರಜ್ ಘಯ್ವಾನ್ ಸೇರಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಹಲವರು ಜಾಹೀರಾತನ್ನು ಖಂಡಿಸಿದ್ದಾರೆ. “ಇದು ಜಾತಿವಾದಿ ಮತ್ತು ಅಮಾನವೀಯ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

“ಲಗಾನ್‌ ಸಿನಿಮಾದಲ್ಲಿನ ಕಚ್ರಾ ಪಾತ್ರವು ದಲಿತರ ಅಮಾನವೀಯ (ಸ್ಥಿತಿ), ಧ್ವನಿರಹಿತ ಚಿತ್ರಣಗಳಲ್ಲಿ ಒಂದಾಗಿದೆ” ಎಂದು ಘಯ್ವಾನ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಝೊಮಾಟೊ ಅದೇ ಪಾತ್ರವನ್ನು ಬಳಸಿದೆ. ಜಾತಿವಾದಿ ವಾಣಿಜ್ಯ ಉದ್ದೇಶವನ್ನು ಹೊಂದಿದೆ. ಮನುಷ್ಯ ಎಂಬುವವನು ಮಲವೇ? ನೀವು ಗಂಭೀರವಾಗಿದ್ದೀರಾ? ಇದು ಅಸೂಕ್ಷ್ಮ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಚಿತ್ರ ನಿರ್ಮಾಪಕಿ ಮಧುರಿತಾ ಆನಂದ್ ಪ್ರತಿಕ್ರಿಯಿಸಿ, “ಈ ಜಾಹೀರಾತು ಆಕ್ಷೇಪಾರ್ಹವಾಗಿದೆ. ಇದನ್ನು ರೂಪಿಸಿದ, ಅನುಮೋದಿಸಿದ ಮತ್ತು ಇದರ ಬಗ್ಗೆ ಒಮ್ಮೆ ಯೋಚಿಸದೆ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿದ ಈ ಜನರು ಯಾರು ಎಂದು ಆಶ್ಚರ್ಯಪಡಬೇಕು” ಎಂದು ವಿಷಾದಿಸಿದ್ದಾರೆ.

ಸಂವಹನ ತಂತ್ರಗಾರಿಕೆ ಸಲಹೆಗಾರ ಕಾರ್ತಿಕ್ ಶ್ರೀನಿವಾಸನ್ ಪಿಟಿಐಗೆ ಪ್ರತಿಕ್ರಿಯಿಸಿ, “ಈ ಪಾತ್ರವು ಅಮಾನವೀಯ, ಕೀಳು ಕೆಲಸಗಳನ್ನು ಮಾಡುತ್ತದೆ ಎಂಬ ಬಗ್ಗೆ ಜೊಮಾಟೊ ಸಮರ್ಪಕವಾಗಿ ಯೋಚಿಸಲಿಲ್ಲ” ಎಂದಿದ್ದಾರೆ.

“ಲಗಾನ್‌ನಲ್ಲಿ ಕಚ್ರಾ ಪಾತ್ರಕ್ಕೆ ಒಂದು ಚಿತ್ರಣವಿದೆ. ವಾಣಿಜ್ಯ ಮನರಂಜನೆ ಕ್ಷೇತ್ರದಲ್ಲಿ ಜಾತಿಗಳನ್ನು ಹೇಗೆ ಚಿತ್ರಿಸಲಾಗಿದೆ, ನಿರ್ದಿಷ್ಟವಾಗಿ ದಲಿತರನ್ನು ಹೇಗೆ ನೋಡಲಾಗಿದೆ ಅಥವಾ ಸ್ಟೀರಿಯೊಟೈಪ್ ಮಾಡಲಾಗಿದೆ ಎಂದು ತಿಳಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...