Homeದಲಿತ್ ಫೈಲ್ಸ್ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

- Advertisement -
- Advertisement -

ಆನ್‌ಲೈನ್‌ ಮೂಲಕ ಆಹಾರ ಡೆಲಿವರಿ ಮಾಡುವ ಜೊಮಾಟೊ ಸಂಸ್ಥೆ ನೀಡಿದ ಜಾಹೀರಾತು ‘ಅಸ್ಪೃಶ್ಯತೆ’ ಆಚರಣೆ ಮಾಡಿದೆ ಎಂಬ ಗುರುತರವಾದ ಆರೋಪ ಬಂದಿದ್ದು, ಟೀಕೆಗಳು ವ್ಯಕ್ತವಾದ ಬಳಿಕ ಜಾಹೀರಾತನ್ನು ಜೊಮೊಟೊ ತೆರವು ಮಾಡಿದೆ.

ಅಮೀರ್‌ ಖಾನ್ ಅಭಿನಯದ ಲಗಾನ್ ಚಿತ್ರದಲ್ಲಿನ ದಲಿತ ಪಾತ್ರವಾದ “ಕಚ್ರಾ”ನನ್ನು ತ್ಯಾಜ್ಯದಿಂದ ತಯಾರಿಸಿದ ಮರು ಬಳಕೆಯ ವಸ್ತು ಎಂಬಂತೆ ಚಿತ್ರಿಸಿರುವುದು ಭಾರೀ ವಿರೋಧಕ್ಕೆ ಒಳಗಾಗಿದೆ. ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾದ ಬಳಿಕ ಜಾಹೀರಾತನ್ನು ಹಿಂಪಡೆಯಲಾಗಿದೆ.

ಲಗಾನ್‌ನಲ್ಲಿ ‘ಕಾಚ್ರಾ’ ಪಾತ್ರವನ್ನು ಮಾಡಿರುವ ವ್ಯಕ್ತಿಯೇ ಈ ಜಾಹೀರಾತಿನಲ್ಲೂ ಅಭಿನಯಿಸಿದ್ದಾರೆ. ‘ಕಚ್ರಾ’ (ಕಸ) ಎಂಬ ಹಿಂದಿ ಪದವನ್ನು ಜಾಹೀರಾತಿನಲ್ಲೂ ಬಳಸಲಾಗಿದೆ. ಕಾಚ್ರಾ ಪಾತ್ರ ಮಾಡಿರುವ ವ್ಯಕ್ತಿ ಮತ್ತು ಕಸ ಎಂಬ ಪದವು ಒಂದಕ್ಕೊಂದು ತಾಳೆಯಾಗಿದ್ದು, ಟೀಕೆಗೆ ಗುರಿಯಾಗಿದೆ.

ಲಗಾನ್‌ ಚಿತ್ರದಲ್ಲಿ ‘ಕಚ್ರಾ’ ಪಾತ್ರವನ್ನು ನಿರ್ವಹಿಸಿದ ನಟ ಆದಿತ್ಯ ಲಖಿಯಾ ಅವರನ್ನು ಮರುಬಳಕೆಯ ವಸ್ತುವಿನಿಂದ ಮಾಡಿದ ‘ಟೇಬಲ್‌, ಹ್ಯಾಂಡ್ ಟವಲ್‌, ಲ್ಯಾಂಪ್‌, ಫ್ಲವರ್‌ ಫಾಟ್‌’ ರೀತಿ ಚಿತ್ರಿಸಲಾಗಿದೆ. ಈ ವಸ್ತುಗಳನ್ನು ತಯಾರಿಸಲು ಮರುಬಳಕೆ ಮಾಡಬಹುದಾದ ಕಸವನ್ನು ಬಳಸಲಾಗಿದೆ ಎಂಬಂತೆ ಬಿಂಬಿಸಲಾಗಿದೆ. ಜೂನ್ 5 ರಂದು ವಿಶ್ವ ಪರಿಸರ ದಿನದಂದು ಜಾಹೀರಾತನ್ನು ಅಪ್ಲೋಡ್ ಮಾಡಲಾಗಿತ್ತು.

ಕಸವನ್ನು ಮರುಬಳಕೆ ಮಾಡುವಂತೆ ಸಂದೇಶ ನೀಡುವ ಜಾಹೀರಾತು ನೀಡಲು ಹೋಗಿ ಈ ರೀತಿಯ ಅಸ್ಪೃಶ್ಯತೆಯನ್ನು ಜೊಮೊಟೊ ಆಚರಿಸಿದೆ. ವಿರೋಧ ವ್ಯಕ್ತವಾದ ಬಳಿಕ, “ನಾವು ಕೆಲವು ಸಮುದಾಯಗಳು ಮತ್ತು ವ್ಯಕ್ತಿಗಳ ಭಾವನೆಗಳನ್ನು ಘಾಸಿಗೊಳಿಸಿರಬಹುದು” ಎಂದಿರುವ ಜೊಮೊಟೊ, “ನಾವು ವೀಡಿಯೊವನ್ನು ತೆಗೆದುಹಾಕಿದ್ದೇವೆ” ಎಂದು ತಿಳಿಸಿದೆ.

ಚಲನಚಿತ್ರ ನಿರ್ದೇಶಕ ನೀರಜ್ ಘಯ್ವಾನ್ ಸೇರಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಹಲವರು ಜಾಹೀರಾತನ್ನು ಖಂಡಿಸಿದ್ದಾರೆ. “ಇದು ಜಾತಿವಾದಿ ಮತ್ತು ಅಮಾನವೀಯ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

“ಲಗಾನ್‌ ಸಿನಿಮಾದಲ್ಲಿನ ಕಚ್ರಾ ಪಾತ್ರವು ದಲಿತರ ಅಮಾನವೀಯ (ಸ್ಥಿತಿ), ಧ್ವನಿರಹಿತ ಚಿತ್ರಣಗಳಲ್ಲಿ ಒಂದಾಗಿದೆ” ಎಂದು ಘಯ್ವಾನ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಝೊಮಾಟೊ ಅದೇ ಪಾತ್ರವನ್ನು ಬಳಸಿದೆ. ಜಾತಿವಾದಿ ವಾಣಿಜ್ಯ ಉದ್ದೇಶವನ್ನು ಹೊಂದಿದೆ. ಮನುಷ್ಯ ಎಂಬುವವನು ಮಲವೇ? ನೀವು ಗಂಭೀರವಾಗಿದ್ದೀರಾ? ಇದು ಅಸೂಕ್ಷ್ಮ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಚಿತ್ರ ನಿರ್ಮಾಪಕಿ ಮಧುರಿತಾ ಆನಂದ್ ಪ್ರತಿಕ್ರಿಯಿಸಿ, “ಈ ಜಾಹೀರಾತು ಆಕ್ಷೇಪಾರ್ಹವಾಗಿದೆ. ಇದನ್ನು ರೂಪಿಸಿದ, ಅನುಮೋದಿಸಿದ ಮತ್ತು ಇದರ ಬಗ್ಗೆ ಒಮ್ಮೆ ಯೋಚಿಸದೆ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿದ ಈ ಜನರು ಯಾರು ಎಂದು ಆಶ್ಚರ್ಯಪಡಬೇಕು” ಎಂದು ವಿಷಾದಿಸಿದ್ದಾರೆ.

ಸಂವಹನ ತಂತ್ರಗಾರಿಕೆ ಸಲಹೆಗಾರ ಕಾರ್ತಿಕ್ ಶ್ರೀನಿವಾಸನ್ ಪಿಟಿಐಗೆ ಪ್ರತಿಕ್ರಿಯಿಸಿ, “ಈ ಪಾತ್ರವು ಅಮಾನವೀಯ, ಕೀಳು ಕೆಲಸಗಳನ್ನು ಮಾಡುತ್ತದೆ ಎಂಬ ಬಗ್ಗೆ ಜೊಮಾಟೊ ಸಮರ್ಪಕವಾಗಿ ಯೋಚಿಸಲಿಲ್ಲ” ಎಂದಿದ್ದಾರೆ.

“ಲಗಾನ್‌ನಲ್ಲಿ ಕಚ್ರಾ ಪಾತ್ರಕ್ಕೆ ಒಂದು ಚಿತ್ರಣವಿದೆ. ವಾಣಿಜ್ಯ ಮನರಂಜನೆ ಕ್ಷೇತ್ರದಲ್ಲಿ ಜಾತಿಗಳನ್ನು ಹೇಗೆ ಚಿತ್ರಿಸಲಾಗಿದೆ, ನಿರ್ದಿಷ್ಟವಾಗಿ ದಲಿತರನ್ನು ಹೇಗೆ ನೋಡಲಾಗಿದೆ ಅಥವಾ ಸ್ಟೀರಿಯೊಟೈಪ್ ಮಾಡಲಾಗಿದೆ ಎಂದು ತಿಳಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...