Homeದಲಿತ್ ಫೈಲ್ಸ್ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

- Advertisement -
- Advertisement -

ಆನ್‌ಲೈನ್‌ ಮೂಲಕ ಆಹಾರ ಡೆಲಿವರಿ ಮಾಡುವ ಜೊಮಾಟೊ ಸಂಸ್ಥೆ ನೀಡಿದ ಜಾಹೀರಾತು ‘ಅಸ್ಪೃಶ್ಯತೆ’ ಆಚರಣೆ ಮಾಡಿದೆ ಎಂಬ ಗುರುತರವಾದ ಆರೋಪ ಬಂದಿದ್ದು, ಟೀಕೆಗಳು ವ್ಯಕ್ತವಾದ ಬಳಿಕ ಜಾಹೀರಾತನ್ನು ಜೊಮೊಟೊ ತೆರವು ಮಾಡಿದೆ.

ಅಮೀರ್‌ ಖಾನ್ ಅಭಿನಯದ ಲಗಾನ್ ಚಿತ್ರದಲ್ಲಿನ ದಲಿತ ಪಾತ್ರವಾದ “ಕಚ್ರಾ”ನನ್ನು ತ್ಯಾಜ್ಯದಿಂದ ತಯಾರಿಸಿದ ಮರು ಬಳಕೆಯ ವಸ್ತು ಎಂಬಂತೆ ಚಿತ್ರಿಸಿರುವುದು ಭಾರೀ ವಿರೋಧಕ್ಕೆ ಒಳಗಾಗಿದೆ. ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾದ ಬಳಿಕ ಜಾಹೀರಾತನ್ನು ಹಿಂಪಡೆಯಲಾಗಿದೆ.

ಲಗಾನ್‌ನಲ್ಲಿ ‘ಕಾಚ್ರಾ’ ಪಾತ್ರವನ್ನು ಮಾಡಿರುವ ವ್ಯಕ್ತಿಯೇ ಈ ಜಾಹೀರಾತಿನಲ್ಲೂ ಅಭಿನಯಿಸಿದ್ದಾರೆ. ‘ಕಚ್ರಾ’ (ಕಸ) ಎಂಬ ಹಿಂದಿ ಪದವನ್ನು ಜಾಹೀರಾತಿನಲ್ಲೂ ಬಳಸಲಾಗಿದೆ. ಕಾಚ್ರಾ ಪಾತ್ರ ಮಾಡಿರುವ ವ್ಯಕ್ತಿ ಮತ್ತು ಕಸ ಎಂಬ ಪದವು ಒಂದಕ್ಕೊಂದು ತಾಳೆಯಾಗಿದ್ದು, ಟೀಕೆಗೆ ಗುರಿಯಾಗಿದೆ.

ಲಗಾನ್‌ ಚಿತ್ರದಲ್ಲಿ ‘ಕಚ್ರಾ’ ಪಾತ್ರವನ್ನು ನಿರ್ವಹಿಸಿದ ನಟ ಆದಿತ್ಯ ಲಖಿಯಾ ಅವರನ್ನು ಮರುಬಳಕೆಯ ವಸ್ತುವಿನಿಂದ ಮಾಡಿದ ‘ಟೇಬಲ್‌, ಹ್ಯಾಂಡ್ ಟವಲ್‌, ಲ್ಯಾಂಪ್‌, ಫ್ಲವರ್‌ ಫಾಟ್‌’ ರೀತಿ ಚಿತ್ರಿಸಲಾಗಿದೆ. ಈ ವಸ್ತುಗಳನ್ನು ತಯಾರಿಸಲು ಮರುಬಳಕೆ ಮಾಡಬಹುದಾದ ಕಸವನ್ನು ಬಳಸಲಾಗಿದೆ ಎಂಬಂತೆ ಬಿಂಬಿಸಲಾಗಿದೆ. ಜೂನ್ 5 ರಂದು ವಿಶ್ವ ಪರಿಸರ ದಿನದಂದು ಜಾಹೀರಾತನ್ನು ಅಪ್ಲೋಡ್ ಮಾಡಲಾಗಿತ್ತು.

ಕಸವನ್ನು ಮರುಬಳಕೆ ಮಾಡುವಂತೆ ಸಂದೇಶ ನೀಡುವ ಜಾಹೀರಾತು ನೀಡಲು ಹೋಗಿ ಈ ರೀತಿಯ ಅಸ್ಪೃಶ್ಯತೆಯನ್ನು ಜೊಮೊಟೊ ಆಚರಿಸಿದೆ. ವಿರೋಧ ವ್ಯಕ್ತವಾದ ಬಳಿಕ, “ನಾವು ಕೆಲವು ಸಮುದಾಯಗಳು ಮತ್ತು ವ್ಯಕ್ತಿಗಳ ಭಾವನೆಗಳನ್ನು ಘಾಸಿಗೊಳಿಸಿರಬಹುದು” ಎಂದಿರುವ ಜೊಮೊಟೊ, “ನಾವು ವೀಡಿಯೊವನ್ನು ತೆಗೆದುಹಾಕಿದ್ದೇವೆ” ಎಂದು ತಿಳಿಸಿದೆ.

ಚಲನಚಿತ್ರ ನಿರ್ದೇಶಕ ನೀರಜ್ ಘಯ್ವಾನ್ ಸೇರಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಹಲವರು ಜಾಹೀರಾತನ್ನು ಖಂಡಿಸಿದ್ದಾರೆ. “ಇದು ಜಾತಿವಾದಿ ಮತ್ತು ಅಮಾನವೀಯ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

“ಲಗಾನ್‌ ಸಿನಿಮಾದಲ್ಲಿನ ಕಚ್ರಾ ಪಾತ್ರವು ದಲಿತರ ಅಮಾನವೀಯ (ಸ್ಥಿತಿ), ಧ್ವನಿರಹಿತ ಚಿತ್ರಣಗಳಲ್ಲಿ ಒಂದಾಗಿದೆ” ಎಂದು ಘಯ್ವಾನ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಝೊಮಾಟೊ ಅದೇ ಪಾತ್ರವನ್ನು ಬಳಸಿದೆ. ಜಾತಿವಾದಿ ವಾಣಿಜ್ಯ ಉದ್ದೇಶವನ್ನು ಹೊಂದಿದೆ. ಮನುಷ್ಯ ಎಂಬುವವನು ಮಲವೇ? ನೀವು ಗಂಭೀರವಾಗಿದ್ದೀರಾ? ಇದು ಅಸೂಕ್ಷ್ಮ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಚಿತ್ರ ನಿರ್ಮಾಪಕಿ ಮಧುರಿತಾ ಆನಂದ್ ಪ್ರತಿಕ್ರಿಯಿಸಿ, “ಈ ಜಾಹೀರಾತು ಆಕ್ಷೇಪಾರ್ಹವಾಗಿದೆ. ಇದನ್ನು ರೂಪಿಸಿದ, ಅನುಮೋದಿಸಿದ ಮತ್ತು ಇದರ ಬಗ್ಗೆ ಒಮ್ಮೆ ಯೋಚಿಸದೆ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿದ ಈ ಜನರು ಯಾರು ಎಂದು ಆಶ್ಚರ್ಯಪಡಬೇಕು” ಎಂದು ವಿಷಾದಿಸಿದ್ದಾರೆ.

ಸಂವಹನ ತಂತ್ರಗಾರಿಕೆ ಸಲಹೆಗಾರ ಕಾರ್ತಿಕ್ ಶ್ರೀನಿವಾಸನ್ ಪಿಟಿಐಗೆ ಪ್ರತಿಕ್ರಿಯಿಸಿ, “ಈ ಪಾತ್ರವು ಅಮಾನವೀಯ, ಕೀಳು ಕೆಲಸಗಳನ್ನು ಮಾಡುತ್ತದೆ ಎಂಬ ಬಗ್ಗೆ ಜೊಮಾಟೊ ಸಮರ್ಪಕವಾಗಿ ಯೋಚಿಸಲಿಲ್ಲ” ಎಂದಿದ್ದಾರೆ.

“ಲಗಾನ್‌ನಲ್ಲಿ ಕಚ್ರಾ ಪಾತ್ರಕ್ಕೆ ಒಂದು ಚಿತ್ರಣವಿದೆ. ವಾಣಿಜ್ಯ ಮನರಂಜನೆ ಕ್ಷೇತ್ರದಲ್ಲಿ ಜಾತಿಗಳನ್ನು ಹೇಗೆ ಚಿತ್ರಿಸಲಾಗಿದೆ, ನಿರ್ದಿಷ್ಟವಾಗಿ ದಲಿತರನ್ನು ಹೇಗೆ ನೋಡಲಾಗಿದೆ ಅಥವಾ ಸ್ಟೀರಿಯೊಟೈಪ್ ಮಾಡಲಾಗಿದೆ ಎಂದು ತಿಳಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...