Homeದಲಿತ್ ಫೈಲ್ಸ್ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

- Advertisement -
- Advertisement -

ಆನ್‌ಲೈನ್‌ ಮೂಲಕ ಆಹಾರ ಡೆಲಿವರಿ ಮಾಡುವ ಜೊಮಾಟೊ ಸಂಸ್ಥೆ ನೀಡಿದ ಜಾಹೀರಾತು ‘ಅಸ್ಪೃಶ್ಯತೆ’ ಆಚರಣೆ ಮಾಡಿದೆ ಎಂಬ ಗುರುತರವಾದ ಆರೋಪ ಬಂದಿದ್ದು, ಟೀಕೆಗಳು ವ್ಯಕ್ತವಾದ ಬಳಿಕ ಜಾಹೀರಾತನ್ನು ಜೊಮೊಟೊ ತೆರವು ಮಾಡಿದೆ.

ಅಮೀರ್‌ ಖಾನ್ ಅಭಿನಯದ ಲಗಾನ್ ಚಿತ್ರದಲ್ಲಿನ ದಲಿತ ಪಾತ್ರವಾದ “ಕಚ್ರಾ”ನನ್ನು ತ್ಯಾಜ್ಯದಿಂದ ತಯಾರಿಸಿದ ಮರು ಬಳಕೆಯ ವಸ್ತು ಎಂಬಂತೆ ಚಿತ್ರಿಸಿರುವುದು ಭಾರೀ ವಿರೋಧಕ್ಕೆ ಒಳಗಾಗಿದೆ. ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾದ ಬಳಿಕ ಜಾಹೀರಾತನ್ನು ಹಿಂಪಡೆಯಲಾಗಿದೆ.

ಲಗಾನ್‌ನಲ್ಲಿ ‘ಕಾಚ್ರಾ’ ಪಾತ್ರವನ್ನು ಮಾಡಿರುವ ವ್ಯಕ್ತಿಯೇ ಈ ಜಾಹೀರಾತಿನಲ್ಲೂ ಅಭಿನಯಿಸಿದ್ದಾರೆ. ‘ಕಚ್ರಾ’ (ಕಸ) ಎಂಬ ಹಿಂದಿ ಪದವನ್ನು ಜಾಹೀರಾತಿನಲ್ಲೂ ಬಳಸಲಾಗಿದೆ. ಕಾಚ್ರಾ ಪಾತ್ರ ಮಾಡಿರುವ ವ್ಯಕ್ತಿ ಮತ್ತು ಕಸ ಎಂಬ ಪದವು ಒಂದಕ್ಕೊಂದು ತಾಳೆಯಾಗಿದ್ದು, ಟೀಕೆಗೆ ಗುರಿಯಾಗಿದೆ.

ಲಗಾನ್‌ ಚಿತ್ರದಲ್ಲಿ ‘ಕಚ್ರಾ’ ಪಾತ್ರವನ್ನು ನಿರ್ವಹಿಸಿದ ನಟ ಆದಿತ್ಯ ಲಖಿಯಾ ಅವರನ್ನು ಮರುಬಳಕೆಯ ವಸ್ತುವಿನಿಂದ ಮಾಡಿದ ‘ಟೇಬಲ್‌, ಹ್ಯಾಂಡ್ ಟವಲ್‌, ಲ್ಯಾಂಪ್‌, ಫ್ಲವರ್‌ ಫಾಟ್‌’ ರೀತಿ ಚಿತ್ರಿಸಲಾಗಿದೆ. ಈ ವಸ್ತುಗಳನ್ನು ತಯಾರಿಸಲು ಮರುಬಳಕೆ ಮಾಡಬಹುದಾದ ಕಸವನ್ನು ಬಳಸಲಾಗಿದೆ ಎಂಬಂತೆ ಬಿಂಬಿಸಲಾಗಿದೆ. ಜೂನ್ 5 ರಂದು ವಿಶ್ವ ಪರಿಸರ ದಿನದಂದು ಜಾಹೀರಾತನ್ನು ಅಪ್ಲೋಡ್ ಮಾಡಲಾಗಿತ್ತು.

ಕಸವನ್ನು ಮರುಬಳಕೆ ಮಾಡುವಂತೆ ಸಂದೇಶ ನೀಡುವ ಜಾಹೀರಾತು ನೀಡಲು ಹೋಗಿ ಈ ರೀತಿಯ ಅಸ್ಪೃಶ್ಯತೆಯನ್ನು ಜೊಮೊಟೊ ಆಚರಿಸಿದೆ. ವಿರೋಧ ವ್ಯಕ್ತವಾದ ಬಳಿಕ, “ನಾವು ಕೆಲವು ಸಮುದಾಯಗಳು ಮತ್ತು ವ್ಯಕ್ತಿಗಳ ಭಾವನೆಗಳನ್ನು ಘಾಸಿಗೊಳಿಸಿರಬಹುದು” ಎಂದಿರುವ ಜೊಮೊಟೊ, “ನಾವು ವೀಡಿಯೊವನ್ನು ತೆಗೆದುಹಾಕಿದ್ದೇವೆ” ಎಂದು ತಿಳಿಸಿದೆ.

ಚಲನಚಿತ್ರ ನಿರ್ದೇಶಕ ನೀರಜ್ ಘಯ್ವಾನ್ ಸೇರಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಹಲವರು ಜಾಹೀರಾತನ್ನು ಖಂಡಿಸಿದ್ದಾರೆ. “ಇದು ಜಾತಿವಾದಿ ಮತ್ತು ಅಮಾನವೀಯ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

“ಲಗಾನ್‌ ಸಿನಿಮಾದಲ್ಲಿನ ಕಚ್ರಾ ಪಾತ್ರವು ದಲಿತರ ಅಮಾನವೀಯ (ಸ್ಥಿತಿ), ಧ್ವನಿರಹಿತ ಚಿತ್ರಣಗಳಲ್ಲಿ ಒಂದಾಗಿದೆ” ಎಂದು ಘಯ್ವಾನ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಝೊಮಾಟೊ ಅದೇ ಪಾತ್ರವನ್ನು ಬಳಸಿದೆ. ಜಾತಿವಾದಿ ವಾಣಿಜ್ಯ ಉದ್ದೇಶವನ್ನು ಹೊಂದಿದೆ. ಮನುಷ್ಯ ಎಂಬುವವನು ಮಲವೇ? ನೀವು ಗಂಭೀರವಾಗಿದ್ದೀರಾ? ಇದು ಅಸೂಕ್ಷ್ಮ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಚಿತ್ರ ನಿರ್ಮಾಪಕಿ ಮಧುರಿತಾ ಆನಂದ್ ಪ್ರತಿಕ್ರಿಯಿಸಿ, “ಈ ಜಾಹೀರಾತು ಆಕ್ಷೇಪಾರ್ಹವಾಗಿದೆ. ಇದನ್ನು ರೂಪಿಸಿದ, ಅನುಮೋದಿಸಿದ ಮತ್ತು ಇದರ ಬಗ್ಗೆ ಒಮ್ಮೆ ಯೋಚಿಸದೆ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿದ ಈ ಜನರು ಯಾರು ಎಂದು ಆಶ್ಚರ್ಯಪಡಬೇಕು” ಎಂದು ವಿಷಾದಿಸಿದ್ದಾರೆ.

ಸಂವಹನ ತಂತ್ರಗಾರಿಕೆ ಸಲಹೆಗಾರ ಕಾರ್ತಿಕ್ ಶ್ರೀನಿವಾಸನ್ ಪಿಟಿಐಗೆ ಪ್ರತಿಕ್ರಿಯಿಸಿ, “ಈ ಪಾತ್ರವು ಅಮಾನವೀಯ, ಕೀಳು ಕೆಲಸಗಳನ್ನು ಮಾಡುತ್ತದೆ ಎಂಬ ಬಗ್ಗೆ ಜೊಮಾಟೊ ಸಮರ್ಪಕವಾಗಿ ಯೋಚಿಸಲಿಲ್ಲ” ಎಂದಿದ್ದಾರೆ.

“ಲಗಾನ್‌ನಲ್ಲಿ ಕಚ್ರಾ ಪಾತ್ರಕ್ಕೆ ಒಂದು ಚಿತ್ರಣವಿದೆ. ವಾಣಿಜ್ಯ ಮನರಂಜನೆ ಕ್ಷೇತ್ರದಲ್ಲಿ ಜಾತಿಗಳನ್ನು ಹೇಗೆ ಚಿತ್ರಿಸಲಾಗಿದೆ, ನಿರ್ದಿಷ್ಟವಾಗಿ ದಲಿತರನ್ನು ಹೇಗೆ ನೋಡಲಾಗಿದೆ ಅಥವಾ ಸ್ಟೀರಿಯೊಟೈಪ್ ಮಾಡಲಾಗಿದೆ ಎಂದು ತಿಳಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...