Homeದಲಿತ್ ಫೈಲ್ಸ್ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

- Advertisement -
- Advertisement -

ಆನ್‌ಲೈನ್‌ ಮೂಲಕ ಆಹಾರ ಡೆಲಿವರಿ ಮಾಡುವ ಜೊಮಾಟೊ ಸಂಸ್ಥೆ ನೀಡಿದ ಜಾಹೀರಾತು ‘ಅಸ್ಪೃಶ್ಯತೆ’ ಆಚರಣೆ ಮಾಡಿದೆ ಎಂಬ ಗುರುತರವಾದ ಆರೋಪ ಬಂದಿದ್ದು, ಟೀಕೆಗಳು ವ್ಯಕ್ತವಾದ ಬಳಿಕ ಜಾಹೀರಾತನ್ನು ಜೊಮೊಟೊ ತೆರವು ಮಾಡಿದೆ.

ಅಮೀರ್‌ ಖಾನ್ ಅಭಿನಯದ ಲಗಾನ್ ಚಿತ್ರದಲ್ಲಿನ ದಲಿತ ಪಾತ್ರವಾದ “ಕಚ್ರಾ”ನನ್ನು ತ್ಯಾಜ್ಯದಿಂದ ತಯಾರಿಸಿದ ಮರು ಬಳಕೆಯ ವಸ್ತು ಎಂಬಂತೆ ಚಿತ್ರಿಸಿರುವುದು ಭಾರೀ ವಿರೋಧಕ್ಕೆ ಒಳಗಾಗಿದೆ. ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾದ ಬಳಿಕ ಜಾಹೀರಾತನ್ನು ಹಿಂಪಡೆಯಲಾಗಿದೆ.

ಲಗಾನ್‌ನಲ್ಲಿ ‘ಕಾಚ್ರಾ’ ಪಾತ್ರವನ್ನು ಮಾಡಿರುವ ವ್ಯಕ್ತಿಯೇ ಈ ಜಾಹೀರಾತಿನಲ್ಲೂ ಅಭಿನಯಿಸಿದ್ದಾರೆ. ‘ಕಚ್ರಾ’ (ಕಸ) ಎಂಬ ಹಿಂದಿ ಪದವನ್ನು ಜಾಹೀರಾತಿನಲ್ಲೂ ಬಳಸಲಾಗಿದೆ. ಕಾಚ್ರಾ ಪಾತ್ರ ಮಾಡಿರುವ ವ್ಯಕ್ತಿ ಮತ್ತು ಕಸ ಎಂಬ ಪದವು ಒಂದಕ್ಕೊಂದು ತಾಳೆಯಾಗಿದ್ದು, ಟೀಕೆಗೆ ಗುರಿಯಾಗಿದೆ.

ಲಗಾನ್‌ ಚಿತ್ರದಲ್ಲಿ ‘ಕಚ್ರಾ’ ಪಾತ್ರವನ್ನು ನಿರ್ವಹಿಸಿದ ನಟ ಆದಿತ್ಯ ಲಖಿಯಾ ಅವರನ್ನು ಮರುಬಳಕೆಯ ವಸ್ತುವಿನಿಂದ ಮಾಡಿದ ‘ಟೇಬಲ್‌, ಹ್ಯಾಂಡ್ ಟವಲ್‌, ಲ್ಯಾಂಪ್‌, ಫ್ಲವರ್‌ ಫಾಟ್‌’ ರೀತಿ ಚಿತ್ರಿಸಲಾಗಿದೆ. ಈ ವಸ್ತುಗಳನ್ನು ತಯಾರಿಸಲು ಮರುಬಳಕೆ ಮಾಡಬಹುದಾದ ಕಸವನ್ನು ಬಳಸಲಾಗಿದೆ ಎಂಬಂತೆ ಬಿಂಬಿಸಲಾಗಿದೆ. ಜೂನ್ 5 ರಂದು ವಿಶ್ವ ಪರಿಸರ ದಿನದಂದು ಜಾಹೀರಾತನ್ನು ಅಪ್ಲೋಡ್ ಮಾಡಲಾಗಿತ್ತು.

ಕಸವನ್ನು ಮರುಬಳಕೆ ಮಾಡುವಂತೆ ಸಂದೇಶ ನೀಡುವ ಜಾಹೀರಾತು ನೀಡಲು ಹೋಗಿ ಈ ರೀತಿಯ ಅಸ್ಪೃಶ್ಯತೆಯನ್ನು ಜೊಮೊಟೊ ಆಚರಿಸಿದೆ. ವಿರೋಧ ವ್ಯಕ್ತವಾದ ಬಳಿಕ, “ನಾವು ಕೆಲವು ಸಮುದಾಯಗಳು ಮತ್ತು ವ್ಯಕ್ತಿಗಳ ಭಾವನೆಗಳನ್ನು ಘಾಸಿಗೊಳಿಸಿರಬಹುದು” ಎಂದಿರುವ ಜೊಮೊಟೊ, “ನಾವು ವೀಡಿಯೊವನ್ನು ತೆಗೆದುಹಾಕಿದ್ದೇವೆ” ಎಂದು ತಿಳಿಸಿದೆ.

ಚಲನಚಿತ್ರ ನಿರ್ದೇಶಕ ನೀರಜ್ ಘಯ್ವಾನ್ ಸೇರಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಹಲವರು ಜಾಹೀರಾತನ್ನು ಖಂಡಿಸಿದ್ದಾರೆ. “ಇದು ಜಾತಿವಾದಿ ಮತ್ತು ಅಮಾನವೀಯ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

“ಲಗಾನ್‌ ಸಿನಿಮಾದಲ್ಲಿನ ಕಚ್ರಾ ಪಾತ್ರವು ದಲಿತರ ಅಮಾನವೀಯ (ಸ್ಥಿತಿ), ಧ್ವನಿರಹಿತ ಚಿತ್ರಣಗಳಲ್ಲಿ ಒಂದಾಗಿದೆ” ಎಂದು ಘಯ್ವಾನ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಝೊಮಾಟೊ ಅದೇ ಪಾತ್ರವನ್ನು ಬಳಸಿದೆ. ಜಾತಿವಾದಿ ವಾಣಿಜ್ಯ ಉದ್ದೇಶವನ್ನು ಹೊಂದಿದೆ. ಮನುಷ್ಯ ಎಂಬುವವನು ಮಲವೇ? ನೀವು ಗಂಭೀರವಾಗಿದ್ದೀರಾ? ಇದು ಅಸೂಕ್ಷ್ಮ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಚಿತ್ರ ನಿರ್ಮಾಪಕಿ ಮಧುರಿತಾ ಆನಂದ್ ಪ್ರತಿಕ್ರಿಯಿಸಿ, “ಈ ಜಾಹೀರಾತು ಆಕ್ಷೇಪಾರ್ಹವಾಗಿದೆ. ಇದನ್ನು ರೂಪಿಸಿದ, ಅನುಮೋದಿಸಿದ ಮತ್ತು ಇದರ ಬಗ್ಗೆ ಒಮ್ಮೆ ಯೋಚಿಸದೆ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿದ ಈ ಜನರು ಯಾರು ಎಂದು ಆಶ್ಚರ್ಯಪಡಬೇಕು” ಎಂದು ವಿಷಾದಿಸಿದ್ದಾರೆ.

ಸಂವಹನ ತಂತ್ರಗಾರಿಕೆ ಸಲಹೆಗಾರ ಕಾರ್ತಿಕ್ ಶ್ರೀನಿವಾಸನ್ ಪಿಟಿಐಗೆ ಪ್ರತಿಕ್ರಿಯಿಸಿ, “ಈ ಪಾತ್ರವು ಅಮಾನವೀಯ, ಕೀಳು ಕೆಲಸಗಳನ್ನು ಮಾಡುತ್ತದೆ ಎಂಬ ಬಗ್ಗೆ ಜೊಮಾಟೊ ಸಮರ್ಪಕವಾಗಿ ಯೋಚಿಸಲಿಲ್ಲ” ಎಂದಿದ್ದಾರೆ.

“ಲಗಾನ್‌ನಲ್ಲಿ ಕಚ್ರಾ ಪಾತ್ರಕ್ಕೆ ಒಂದು ಚಿತ್ರಣವಿದೆ. ವಾಣಿಜ್ಯ ಮನರಂಜನೆ ಕ್ಷೇತ್ರದಲ್ಲಿ ಜಾತಿಗಳನ್ನು ಹೇಗೆ ಚಿತ್ರಿಸಲಾಗಿದೆ, ನಿರ್ದಿಷ್ಟವಾಗಿ ದಲಿತರನ್ನು ಹೇಗೆ ನೋಡಲಾಗಿದೆ ಅಥವಾ ಸ್ಟೀರಿಯೊಟೈಪ್ ಮಾಡಲಾಗಿದೆ ಎಂದು ತಿಳಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...