Homeದಲಿತ್ ಫೈಲ್ಸ್ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

- Advertisement -
- Advertisement -

ಆನ್‌ಲೈನ್‌ ಮೂಲಕ ಆಹಾರ ಡೆಲಿವರಿ ಮಾಡುವ ಜೊಮಾಟೊ ಸಂಸ್ಥೆ ನೀಡಿದ ಜಾಹೀರಾತು ‘ಅಸ್ಪೃಶ್ಯತೆ’ ಆಚರಣೆ ಮಾಡಿದೆ ಎಂಬ ಗುರುತರವಾದ ಆರೋಪ ಬಂದಿದ್ದು, ಟೀಕೆಗಳು ವ್ಯಕ್ತವಾದ ಬಳಿಕ ಜಾಹೀರಾತನ್ನು ಜೊಮೊಟೊ ತೆರವು ಮಾಡಿದೆ.

ಅಮೀರ್‌ ಖಾನ್ ಅಭಿನಯದ ಲಗಾನ್ ಚಿತ್ರದಲ್ಲಿನ ದಲಿತ ಪಾತ್ರವಾದ “ಕಚ್ರಾ”ನನ್ನು ತ್ಯಾಜ್ಯದಿಂದ ತಯಾರಿಸಿದ ಮರು ಬಳಕೆಯ ವಸ್ತು ಎಂಬಂತೆ ಚಿತ್ರಿಸಿರುವುದು ಭಾರೀ ವಿರೋಧಕ್ಕೆ ಒಳಗಾಗಿದೆ. ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾದ ಬಳಿಕ ಜಾಹೀರಾತನ್ನು ಹಿಂಪಡೆಯಲಾಗಿದೆ.

ಲಗಾನ್‌ನಲ್ಲಿ ‘ಕಾಚ್ರಾ’ ಪಾತ್ರವನ್ನು ಮಾಡಿರುವ ವ್ಯಕ್ತಿಯೇ ಈ ಜಾಹೀರಾತಿನಲ್ಲೂ ಅಭಿನಯಿಸಿದ್ದಾರೆ. ‘ಕಚ್ರಾ’ (ಕಸ) ಎಂಬ ಹಿಂದಿ ಪದವನ್ನು ಜಾಹೀರಾತಿನಲ್ಲೂ ಬಳಸಲಾಗಿದೆ. ಕಾಚ್ರಾ ಪಾತ್ರ ಮಾಡಿರುವ ವ್ಯಕ್ತಿ ಮತ್ತು ಕಸ ಎಂಬ ಪದವು ಒಂದಕ್ಕೊಂದು ತಾಳೆಯಾಗಿದ್ದು, ಟೀಕೆಗೆ ಗುರಿಯಾಗಿದೆ.

ಲಗಾನ್‌ ಚಿತ್ರದಲ್ಲಿ ‘ಕಚ್ರಾ’ ಪಾತ್ರವನ್ನು ನಿರ್ವಹಿಸಿದ ನಟ ಆದಿತ್ಯ ಲಖಿಯಾ ಅವರನ್ನು ಮರುಬಳಕೆಯ ವಸ್ತುವಿನಿಂದ ಮಾಡಿದ ‘ಟೇಬಲ್‌, ಹ್ಯಾಂಡ್ ಟವಲ್‌, ಲ್ಯಾಂಪ್‌, ಫ್ಲವರ್‌ ಫಾಟ್‌’ ರೀತಿ ಚಿತ್ರಿಸಲಾಗಿದೆ. ಈ ವಸ್ತುಗಳನ್ನು ತಯಾರಿಸಲು ಮರುಬಳಕೆ ಮಾಡಬಹುದಾದ ಕಸವನ್ನು ಬಳಸಲಾಗಿದೆ ಎಂಬಂತೆ ಬಿಂಬಿಸಲಾಗಿದೆ. ಜೂನ್ 5 ರಂದು ವಿಶ್ವ ಪರಿಸರ ದಿನದಂದು ಜಾಹೀರಾತನ್ನು ಅಪ್ಲೋಡ್ ಮಾಡಲಾಗಿತ್ತು.

ಕಸವನ್ನು ಮರುಬಳಕೆ ಮಾಡುವಂತೆ ಸಂದೇಶ ನೀಡುವ ಜಾಹೀರಾತು ನೀಡಲು ಹೋಗಿ ಈ ರೀತಿಯ ಅಸ್ಪೃಶ್ಯತೆಯನ್ನು ಜೊಮೊಟೊ ಆಚರಿಸಿದೆ. ವಿರೋಧ ವ್ಯಕ್ತವಾದ ಬಳಿಕ, “ನಾವು ಕೆಲವು ಸಮುದಾಯಗಳು ಮತ್ತು ವ್ಯಕ್ತಿಗಳ ಭಾವನೆಗಳನ್ನು ಘಾಸಿಗೊಳಿಸಿರಬಹುದು” ಎಂದಿರುವ ಜೊಮೊಟೊ, “ನಾವು ವೀಡಿಯೊವನ್ನು ತೆಗೆದುಹಾಕಿದ್ದೇವೆ” ಎಂದು ತಿಳಿಸಿದೆ.

ಚಲನಚಿತ್ರ ನಿರ್ದೇಶಕ ನೀರಜ್ ಘಯ್ವಾನ್ ಸೇರಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಹಲವರು ಜಾಹೀರಾತನ್ನು ಖಂಡಿಸಿದ್ದಾರೆ. “ಇದು ಜಾತಿವಾದಿ ಮತ್ತು ಅಮಾನವೀಯ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

“ಲಗಾನ್‌ ಸಿನಿಮಾದಲ್ಲಿನ ಕಚ್ರಾ ಪಾತ್ರವು ದಲಿತರ ಅಮಾನವೀಯ (ಸ್ಥಿತಿ), ಧ್ವನಿರಹಿತ ಚಿತ್ರಣಗಳಲ್ಲಿ ಒಂದಾಗಿದೆ” ಎಂದು ಘಯ್ವಾನ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಝೊಮಾಟೊ ಅದೇ ಪಾತ್ರವನ್ನು ಬಳಸಿದೆ. ಜಾತಿವಾದಿ ವಾಣಿಜ್ಯ ಉದ್ದೇಶವನ್ನು ಹೊಂದಿದೆ. ಮನುಷ್ಯ ಎಂಬುವವನು ಮಲವೇ? ನೀವು ಗಂಭೀರವಾಗಿದ್ದೀರಾ? ಇದು ಅಸೂಕ್ಷ್ಮ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಚಿತ್ರ ನಿರ್ಮಾಪಕಿ ಮಧುರಿತಾ ಆನಂದ್ ಪ್ರತಿಕ್ರಿಯಿಸಿ, “ಈ ಜಾಹೀರಾತು ಆಕ್ಷೇಪಾರ್ಹವಾಗಿದೆ. ಇದನ್ನು ರೂಪಿಸಿದ, ಅನುಮೋದಿಸಿದ ಮತ್ತು ಇದರ ಬಗ್ಗೆ ಒಮ್ಮೆ ಯೋಚಿಸದೆ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿದ ಈ ಜನರು ಯಾರು ಎಂದು ಆಶ್ಚರ್ಯಪಡಬೇಕು” ಎಂದು ವಿಷಾದಿಸಿದ್ದಾರೆ.

ಸಂವಹನ ತಂತ್ರಗಾರಿಕೆ ಸಲಹೆಗಾರ ಕಾರ್ತಿಕ್ ಶ್ರೀನಿವಾಸನ್ ಪಿಟಿಐಗೆ ಪ್ರತಿಕ್ರಿಯಿಸಿ, “ಈ ಪಾತ್ರವು ಅಮಾನವೀಯ, ಕೀಳು ಕೆಲಸಗಳನ್ನು ಮಾಡುತ್ತದೆ ಎಂಬ ಬಗ್ಗೆ ಜೊಮಾಟೊ ಸಮರ್ಪಕವಾಗಿ ಯೋಚಿಸಲಿಲ್ಲ” ಎಂದಿದ್ದಾರೆ.

“ಲಗಾನ್‌ನಲ್ಲಿ ಕಚ್ರಾ ಪಾತ್ರಕ್ಕೆ ಒಂದು ಚಿತ್ರಣವಿದೆ. ವಾಣಿಜ್ಯ ಮನರಂಜನೆ ಕ್ಷೇತ್ರದಲ್ಲಿ ಜಾತಿಗಳನ್ನು ಹೇಗೆ ಚಿತ್ರಿಸಲಾಗಿದೆ, ನಿರ್ದಿಷ್ಟವಾಗಿ ದಲಿತರನ್ನು ಹೇಗೆ ನೋಡಲಾಗಿದೆ ಅಥವಾ ಸ್ಟೀರಿಯೊಟೈಪ್ ಮಾಡಲಾಗಿದೆ ಎಂದು ತಿಳಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...