Homeದಲಿತ್ ಫೈಲ್ಸ್ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

- Advertisement -
- Advertisement -

ಆನ್‌ಲೈನ್‌ ಮೂಲಕ ಆಹಾರ ಡೆಲಿವರಿ ಮಾಡುವ ಜೊಮಾಟೊ ಸಂಸ್ಥೆ ನೀಡಿದ ಜಾಹೀರಾತು ‘ಅಸ್ಪೃಶ್ಯತೆ’ ಆಚರಣೆ ಮಾಡಿದೆ ಎಂಬ ಗುರುತರವಾದ ಆರೋಪ ಬಂದಿದ್ದು, ಟೀಕೆಗಳು ವ್ಯಕ್ತವಾದ ಬಳಿಕ ಜಾಹೀರಾತನ್ನು ಜೊಮೊಟೊ ತೆರವು ಮಾಡಿದೆ.

ಅಮೀರ್‌ ಖಾನ್ ಅಭಿನಯದ ಲಗಾನ್ ಚಿತ್ರದಲ್ಲಿನ ದಲಿತ ಪಾತ್ರವಾದ “ಕಚ್ರಾ”ನನ್ನು ತ್ಯಾಜ್ಯದಿಂದ ತಯಾರಿಸಿದ ಮರು ಬಳಕೆಯ ವಸ್ತು ಎಂಬಂತೆ ಚಿತ್ರಿಸಿರುವುದು ಭಾರೀ ವಿರೋಧಕ್ಕೆ ಒಳಗಾಗಿದೆ. ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾದ ಬಳಿಕ ಜಾಹೀರಾತನ್ನು ಹಿಂಪಡೆಯಲಾಗಿದೆ.

ಲಗಾನ್‌ನಲ್ಲಿ ‘ಕಾಚ್ರಾ’ ಪಾತ್ರವನ್ನು ಮಾಡಿರುವ ವ್ಯಕ್ತಿಯೇ ಈ ಜಾಹೀರಾತಿನಲ್ಲೂ ಅಭಿನಯಿಸಿದ್ದಾರೆ. ‘ಕಚ್ರಾ’ (ಕಸ) ಎಂಬ ಹಿಂದಿ ಪದವನ್ನು ಜಾಹೀರಾತಿನಲ್ಲೂ ಬಳಸಲಾಗಿದೆ. ಕಾಚ್ರಾ ಪಾತ್ರ ಮಾಡಿರುವ ವ್ಯಕ್ತಿ ಮತ್ತು ಕಸ ಎಂಬ ಪದವು ಒಂದಕ್ಕೊಂದು ತಾಳೆಯಾಗಿದ್ದು, ಟೀಕೆಗೆ ಗುರಿಯಾಗಿದೆ.

ಲಗಾನ್‌ ಚಿತ್ರದಲ್ಲಿ ‘ಕಚ್ರಾ’ ಪಾತ್ರವನ್ನು ನಿರ್ವಹಿಸಿದ ನಟ ಆದಿತ್ಯ ಲಖಿಯಾ ಅವರನ್ನು ಮರುಬಳಕೆಯ ವಸ್ತುವಿನಿಂದ ಮಾಡಿದ ‘ಟೇಬಲ್‌, ಹ್ಯಾಂಡ್ ಟವಲ್‌, ಲ್ಯಾಂಪ್‌, ಫ್ಲವರ್‌ ಫಾಟ್‌’ ರೀತಿ ಚಿತ್ರಿಸಲಾಗಿದೆ. ಈ ವಸ್ತುಗಳನ್ನು ತಯಾರಿಸಲು ಮರುಬಳಕೆ ಮಾಡಬಹುದಾದ ಕಸವನ್ನು ಬಳಸಲಾಗಿದೆ ಎಂಬಂತೆ ಬಿಂಬಿಸಲಾಗಿದೆ. ಜೂನ್ 5 ರಂದು ವಿಶ್ವ ಪರಿಸರ ದಿನದಂದು ಜಾಹೀರಾತನ್ನು ಅಪ್ಲೋಡ್ ಮಾಡಲಾಗಿತ್ತು.

ಕಸವನ್ನು ಮರುಬಳಕೆ ಮಾಡುವಂತೆ ಸಂದೇಶ ನೀಡುವ ಜಾಹೀರಾತು ನೀಡಲು ಹೋಗಿ ಈ ರೀತಿಯ ಅಸ್ಪೃಶ್ಯತೆಯನ್ನು ಜೊಮೊಟೊ ಆಚರಿಸಿದೆ. ವಿರೋಧ ವ್ಯಕ್ತವಾದ ಬಳಿಕ, “ನಾವು ಕೆಲವು ಸಮುದಾಯಗಳು ಮತ್ತು ವ್ಯಕ್ತಿಗಳ ಭಾವನೆಗಳನ್ನು ಘಾಸಿಗೊಳಿಸಿರಬಹುದು” ಎಂದಿರುವ ಜೊಮೊಟೊ, “ನಾವು ವೀಡಿಯೊವನ್ನು ತೆಗೆದುಹಾಕಿದ್ದೇವೆ” ಎಂದು ತಿಳಿಸಿದೆ.

ಚಲನಚಿತ್ರ ನಿರ್ದೇಶಕ ನೀರಜ್ ಘಯ್ವಾನ್ ಸೇರಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಹಲವರು ಜಾಹೀರಾತನ್ನು ಖಂಡಿಸಿದ್ದಾರೆ. “ಇದು ಜಾತಿವಾದಿ ಮತ್ತು ಅಮಾನವೀಯ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

“ಲಗಾನ್‌ ಸಿನಿಮಾದಲ್ಲಿನ ಕಚ್ರಾ ಪಾತ್ರವು ದಲಿತರ ಅಮಾನವೀಯ (ಸ್ಥಿತಿ), ಧ್ವನಿರಹಿತ ಚಿತ್ರಣಗಳಲ್ಲಿ ಒಂದಾಗಿದೆ” ಎಂದು ಘಯ್ವಾನ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಝೊಮಾಟೊ ಅದೇ ಪಾತ್ರವನ್ನು ಬಳಸಿದೆ. ಜಾತಿವಾದಿ ವಾಣಿಜ್ಯ ಉದ್ದೇಶವನ್ನು ಹೊಂದಿದೆ. ಮನುಷ್ಯ ಎಂಬುವವನು ಮಲವೇ? ನೀವು ಗಂಭೀರವಾಗಿದ್ದೀರಾ? ಇದು ಅಸೂಕ್ಷ್ಮ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಚಿತ್ರ ನಿರ್ಮಾಪಕಿ ಮಧುರಿತಾ ಆನಂದ್ ಪ್ರತಿಕ್ರಿಯಿಸಿ, “ಈ ಜಾಹೀರಾತು ಆಕ್ಷೇಪಾರ್ಹವಾಗಿದೆ. ಇದನ್ನು ರೂಪಿಸಿದ, ಅನುಮೋದಿಸಿದ ಮತ್ತು ಇದರ ಬಗ್ಗೆ ಒಮ್ಮೆ ಯೋಚಿಸದೆ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿದ ಈ ಜನರು ಯಾರು ಎಂದು ಆಶ್ಚರ್ಯಪಡಬೇಕು” ಎಂದು ವಿಷಾದಿಸಿದ್ದಾರೆ.

ಸಂವಹನ ತಂತ್ರಗಾರಿಕೆ ಸಲಹೆಗಾರ ಕಾರ್ತಿಕ್ ಶ್ರೀನಿವಾಸನ್ ಪಿಟಿಐಗೆ ಪ್ರತಿಕ್ರಿಯಿಸಿ, “ಈ ಪಾತ್ರವು ಅಮಾನವೀಯ, ಕೀಳು ಕೆಲಸಗಳನ್ನು ಮಾಡುತ್ತದೆ ಎಂಬ ಬಗ್ಗೆ ಜೊಮಾಟೊ ಸಮರ್ಪಕವಾಗಿ ಯೋಚಿಸಲಿಲ್ಲ” ಎಂದಿದ್ದಾರೆ.

“ಲಗಾನ್‌ನಲ್ಲಿ ಕಚ್ರಾ ಪಾತ್ರಕ್ಕೆ ಒಂದು ಚಿತ್ರಣವಿದೆ. ವಾಣಿಜ್ಯ ಮನರಂಜನೆ ಕ್ಷೇತ್ರದಲ್ಲಿ ಜಾತಿಗಳನ್ನು ಹೇಗೆ ಚಿತ್ರಿಸಲಾಗಿದೆ, ನಿರ್ದಿಷ್ಟವಾಗಿ ದಲಿತರನ್ನು ಹೇಗೆ ನೋಡಲಾಗಿದೆ ಅಥವಾ ಸ್ಟೀರಿಯೊಟೈಪ್ ಮಾಡಲಾಗಿದೆ ಎಂದು ತಿಳಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...