Homeದಲಿತ್ ಫೈಲ್ಸ್ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

ಲಗಾನ್‌ ಚಿತ್ರದ ದಲಿತ ಪಾತ್ರ ‘ಕಚ್ರಾ’ ಬಳಸಿ ಜಾತಿಯತೆ ಮೆರೆದ ಜೊಮೊಟೊ; ಆಕ್ರೋಶ

- Advertisement -
- Advertisement -

ಆನ್‌ಲೈನ್‌ ಮೂಲಕ ಆಹಾರ ಡೆಲಿವರಿ ಮಾಡುವ ಜೊಮಾಟೊ ಸಂಸ್ಥೆ ನೀಡಿದ ಜಾಹೀರಾತು ‘ಅಸ್ಪೃಶ್ಯತೆ’ ಆಚರಣೆ ಮಾಡಿದೆ ಎಂಬ ಗುರುತರವಾದ ಆರೋಪ ಬಂದಿದ್ದು, ಟೀಕೆಗಳು ವ್ಯಕ್ತವಾದ ಬಳಿಕ ಜಾಹೀರಾತನ್ನು ಜೊಮೊಟೊ ತೆರವು ಮಾಡಿದೆ.

ಅಮೀರ್‌ ಖಾನ್ ಅಭಿನಯದ ಲಗಾನ್ ಚಿತ್ರದಲ್ಲಿನ ದಲಿತ ಪಾತ್ರವಾದ “ಕಚ್ರಾ”ನನ್ನು ತ್ಯಾಜ್ಯದಿಂದ ತಯಾರಿಸಿದ ಮರು ಬಳಕೆಯ ವಸ್ತು ಎಂಬಂತೆ ಚಿತ್ರಿಸಿರುವುದು ಭಾರೀ ವಿರೋಧಕ್ಕೆ ಒಳಗಾಗಿದೆ. ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾದ ಬಳಿಕ ಜಾಹೀರಾತನ್ನು ಹಿಂಪಡೆಯಲಾಗಿದೆ.

ಲಗಾನ್‌ನಲ್ಲಿ ‘ಕಾಚ್ರಾ’ ಪಾತ್ರವನ್ನು ಮಾಡಿರುವ ವ್ಯಕ್ತಿಯೇ ಈ ಜಾಹೀರಾತಿನಲ್ಲೂ ಅಭಿನಯಿಸಿದ್ದಾರೆ. ‘ಕಚ್ರಾ’ (ಕಸ) ಎಂಬ ಹಿಂದಿ ಪದವನ್ನು ಜಾಹೀರಾತಿನಲ್ಲೂ ಬಳಸಲಾಗಿದೆ. ಕಾಚ್ರಾ ಪಾತ್ರ ಮಾಡಿರುವ ವ್ಯಕ್ತಿ ಮತ್ತು ಕಸ ಎಂಬ ಪದವು ಒಂದಕ್ಕೊಂದು ತಾಳೆಯಾಗಿದ್ದು, ಟೀಕೆಗೆ ಗುರಿಯಾಗಿದೆ.

ಲಗಾನ್‌ ಚಿತ್ರದಲ್ಲಿ ‘ಕಚ್ರಾ’ ಪಾತ್ರವನ್ನು ನಿರ್ವಹಿಸಿದ ನಟ ಆದಿತ್ಯ ಲಖಿಯಾ ಅವರನ್ನು ಮರುಬಳಕೆಯ ವಸ್ತುವಿನಿಂದ ಮಾಡಿದ ‘ಟೇಬಲ್‌, ಹ್ಯಾಂಡ್ ಟವಲ್‌, ಲ್ಯಾಂಪ್‌, ಫ್ಲವರ್‌ ಫಾಟ್‌’ ರೀತಿ ಚಿತ್ರಿಸಲಾಗಿದೆ. ಈ ವಸ್ತುಗಳನ್ನು ತಯಾರಿಸಲು ಮರುಬಳಕೆ ಮಾಡಬಹುದಾದ ಕಸವನ್ನು ಬಳಸಲಾಗಿದೆ ಎಂಬಂತೆ ಬಿಂಬಿಸಲಾಗಿದೆ. ಜೂನ್ 5 ರಂದು ವಿಶ್ವ ಪರಿಸರ ದಿನದಂದು ಜಾಹೀರಾತನ್ನು ಅಪ್ಲೋಡ್ ಮಾಡಲಾಗಿತ್ತು.

ಕಸವನ್ನು ಮರುಬಳಕೆ ಮಾಡುವಂತೆ ಸಂದೇಶ ನೀಡುವ ಜಾಹೀರಾತು ನೀಡಲು ಹೋಗಿ ಈ ರೀತಿಯ ಅಸ್ಪೃಶ್ಯತೆಯನ್ನು ಜೊಮೊಟೊ ಆಚರಿಸಿದೆ. ವಿರೋಧ ವ್ಯಕ್ತವಾದ ಬಳಿಕ, “ನಾವು ಕೆಲವು ಸಮುದಾಯಗಳು ಮತ್ತು ವ್ಯಕ್ತಿಗಳ ಭಾವನೆಗಳನ್ನು ಘಾಸಿಗೊಳಿಸಿರಬಹುದು” ಎಂದಿರುವ ಜೊಮೊಟೊ, “ನಾವು ವೀಡಿಯೊವನ್ನು ತೆಗೆದುಹಾಕಿದ್ದೇವೆ” ಎಂದು ತಿಳಿಸಿದೆ.

ಚಲನಚಿತ್ರ ನಿರ್ದೇಶಕ ನೀರಜ್ ಘಯ್ವಾನ್ ಸೇರಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಹಲವರು ಜಾಹೀರಾತನ್ನು ಖಂಡಿಸಿದ್ದಾರೆ. “ಇದು ಜಾತಿವಾದಿ ಮತ್ತು ಅಮಾನವೀಯ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

“ಲಗಾನ್‌ ಸಿನಿಮಾದಲ್ಲಿನ ಕಚ್ರಾ ಪಾತ್ರವು ದಲಿತರ ಅಮಾನವೀಯ (ಸ್ಥಿತಿ), ಧ್ವನಿರಹಿತ ಚಿತ್ರಣಗಳಲ್ಲಿ ಒಂದಾಗಿದೆ” ಎಂದು ಘಯ್ವಾನ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಝೊಮಾಟೊ ಅದೇ ಪಾತ್ರವನ್ನು ಬಳಸಿದೆ. ಜಾತಿವಾದಿ ವಾಣಿಜ್ಯ ಉದ್ದೇಶವನ್ನು ಹೊಂದಿದೆ. ಮನುಷ್ಯ ಎಂಬುವವನು ಮಲವೇ? ನೀವು ಗಂಭೀರವಾಗಿದ್ದೀರಾ? ಇದು ಅಸೂಕ್ಷ್ಮ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಚಿತ್ರ ನಿರ್ಮಾಪಕಿ ಮಧುರಿತಾ ಆನಂದ್ ಪ್ರತಿಕ್ರಿಯಿಸಿ, “ಈ ಜಾಹೀರಾತು ಆಕ್ಷೇಪಾರ್ಹವಾಗಿದೆ. ಇದನ್ನು ರೂಪಿಸಿದ, ಅನುಮೋದಿಸಿದ ಮತ್ತು ಇದರ ಬಗ್ಗೆ ಒಮ್ಮೆ ಯೋಚಿಸದೆ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿದ ಈ ಜನರು ಯಾರು ಎಂದು ಆಶ್ಚರ್ಯಪಡಬೇಕು” ಎಂದು ವಿಷಾದಿಸಿದ್ದಾರೆ.

ಸಂವಹನ ತಂತ್ರಗಾರಿಕೆ ಸಲಹೆಗಾರ ಕಾರ್ತಿಕ್ ಶ್ರೀನಿವಾಸನ್ ಪಿಟಿಐಗೆ ಪ್ರತಿಕ್ರಿಯಿಸಿ, “ಈ ಪಾತ್ರವು ಅಮಾನವೀಯ, ಕೀಳು ಕೆಲಸಗಳನ್ನು ಮಾಡುತ್ತದೆ ಎಂಬ ಬಗ್ಗೆ ಜೊಮಾಟೊ ಸಮರ್ಪಕವಾಗಿ ಯೋಚಿಸಲಿಲ್ಲ” ಎಂದಿದ್ದಾರೆ.

“ಲಗಾನ್‌ನಲ್ಲಿ ಕಚ್ರಾ ಪಾತ್ರಕ್ಕೆ ಒಂದು ಚಿತ್ರಣವಿದೆ. ವಾಣಿಜ್ಯ ಮನರಂಜನೆ ಕ್ಷೇತ್ರದಲ್ಲಿ ಜಾತಿಗಳನ್ನು ಹೇಗೆ ಚಿತ್ರಿಸಲಾಗಿದೆ, ನಿರ್ದಿಷ್ಟವಾಗಿ ದಲಿತರನ್ನು ಹೇಗೆ ನೋಡಲಾಗಿದೆ ಅಥವಾ ಸ್ಟೀರಿಯೊಟೈಪ್ ಮಾಡಲಾಗಿದೆ ಎಂದು ತಿಳಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...