Homeಮುಖಪುಟಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

- Advertisement -
- Advertisement -

ಗ್ರಾಹಕರೊಬ್ಬರ ಜೊತೆ ಆನ್‌ಲೈನ್‌ ಡೆಲಿವರಿ ಸಂಸ್ಥೆಯಾದ ಜೊಮೊಟೊದ ಗ್ರಾಹಕ ಸೇವಾ ಎಕ್ಸಿಕ್ಯೂಟಿವ್‌‌ ನಡೆಸಿದ ಸಂಭಾಷಣೆಯು ಟ್ವಿಟರ್‌ನಲ್ಲಿ ವೈರಲ್‌ ಆದ ಬಳಿಕ, ಜೊಮೊಟೊ ಕಂಪನಿಯು ಮಂಗಳವಾರ ಕ್ಷಮೆಯಾಚಿಸಿದೆ.

ಮರುಪಾವತಿಗಾಗಿ ಯತ್ನಿಸಿದ ವಿಕಾಸ್‌ ಅವರು ಜೊಮೊಟೊ ಗ್ರಾಹಕ ಸೇವಾ ಎಕ್ಸಿಕ್ಯೂಟಿವ್‌‌ ಜೊತೆ ನಡೆಸಿದ ಸಂವಹನದ ಸ್ಕ್ರೀನ್‌ ಶಾಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.

ಸ್ಕ್ರೀನ್‌ಶಾಟ್‌ಗಳ ಪ್ರಕಾರ ಗ್ರಾಹಕ ವಿಕಾಶ್ ಅವರು, ತಮಗೆ ತಲುಪದ ಆರ್ಡರ್‌ಗೆ ಸಂಬಂಧಿಸಿದಂತೆ ರೆಸ್ಟೋರೆಂಟ್‌ನಿಂದ ಮರುಪಾವತಿ ಪಡೆಯಲು ಪ್ರಯತ್ನಿಸುತ್ತಿದ್ದರು. ಜೊಮೊಟೊ ಗ್ರಾಹಕ ಸೇವೆಯನ್ನು ಸಂಪರ್ಕಿಸಿ ಅವರಿಂದ ಮರುಪಾವತಿಗಾಗಿ ಕೋರಿದರು.

ಜೊಮೊಟೊ ಎಕ್ಸಿಕ್ಯೂಟಿವ್‌‌, “ಕರೆ ಮಾಡಿ ಸಂಪರ್ಕಿಸಲು ಐದು ಬಾರಿ ಯತ್ನಿಸಲಾಯಿತು. ಭಾಷೆ ಸಮಸ್ಯೆಯಿಂದಾಗಿ ಸಂವಹನ ಸಾಧ್ಯವಾಗಿಲ್ಲ” ಎಂದಿದ್ದಾರೆ. ಕಂಪನಿಯು ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದೆ.  ತಮಿಳು ಮಾತನಾಡುವ ವ್ಯಕ್ತಿಯನ್ನು ನೇಮಕ ಮಾಡಿಕೊಳ್ಳಬೇಕು ಎಂದು ವಿಕಾಸ್ ಹೇಳಿದ್ದಾರೆ. ಹೀಗೆ ಹೇಳಿದಾಗ, “ಹಿಂದಿ ನಮ್ಮ ರಾಷ್ಟ್ರೀಯ ಭಾಷೆ” ಮತ್ತು “ಪ್ರತಿಯೊಬ್ಬರೂ ಹಿಂದಿ ತಿಳಿದಿರುವುದು ಬಹಳ ಸಾಮಾನ್ಯವಾಗಿದೆ. ಇದು ನಿಮ್ಮ ಮಾಹಿತಿಗೆ” ಎಂದು ಎಕ್ಸಿಕ್ಯೂಟಿವ್ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

ಅಂತಿಮವಾಗಿ ಎಕ್ಸಿಕ್ಯೂಟಿವ್‌ ಚಾಟ್‌ನಲ್ಲಿ, “ಉಂಟಾದ ತೊಂದರೆಗೆ ನಾವು ನಿಜವಾಗಿಯೂ ವಿಷಾದಿಸುತ್ತೇವೆ. ಆದರೆ ಈ ದುರದೃಷ್ಟಕರ ತಪ್ಪಿಗೆ ಕ್ಷಮೆಯಾಚಿಸುವುದನ್ನು ಹೊರತುಪಡಿಸಿ ನಾವು ನಿಮಗೆ ಯಾವುದೇ ಪರಿಹಾರವನ್ನು ನೀಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿಕಾಸ್‌‌ಗೆ ಹಿಂದಿ ಗೊತ್ತಿಲ್ಲದ ಕಾರಣ ಮರುಪಾವತಿಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಆರೋಪಿಸಿದೆ. ಕಂಪನಿಯನ್ನು ಉದ್ದೇಶಿಸಿ, “ನೀವು ಗ್ರಾಹಕರೊಂದಿಗೆ ಮಾತನಾಡುವ ರೀತಿಯಲ್ಲ” ಎಂದು ವಿಕಾಸ್‌ ತಿಳಿಸಿದ್ದಾರೆ.

ಟ್ವೀಟ್ ಮಾಡಿದ ತಕ್ಷಣ ವೈರಲ್ ಆಗಿದ್ದು, ಸಾವಿರಾರು ಮಂದಿ ಲೈಕ್‌ ಹಾಗೂ ರೀಟ್ವೀಟ್‌ ಮಾಡಿದ್ದಾರೆ. ಇದಲ್ಲದೆ, #Reject_Zomato ಮತ್ತು #StopHindiImposition ಎಂಬ ಹ್ಯಾಶ್‌ಟ್ಯಾಗ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್‌ ಆಗಿವೆ.

ಧರಮ್‌ಪುರಿ ಸಂಸದ ಸೆಂಥಿಲ್‌ಕುಮಾರ್ ಕೂಡ ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ಹಿಂದಿ ಯಾವಾಗ ರಾಷ್ಟ್ರೀಯ ಭಾಷೆಯಾಯಿತು ಎಂದು ಕೇಳಿದ್ದಾರೆ. ಕಂಪನಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಭಾರತೀಯ ಸಂವಿಧಾನದ 343ನೇ ವಿಧಿಯಲ್ಲಿ ವಿವರಿಸಿರುವ ಅಧಿಕೃತ ಭಾಷೆಗಳಲ್ಲಿ ಹಿಂದಿ ಒಂದು ಭಾಷೆಯಾಗಿದೆ. ಆದರೆ ಯಾವುದೇ ಭಾಷೆಯನ್ನು “ರಾಷ್ಟ್ರೀಯ ಭಾಷೆ” ಎಂದು ಘೋಷಿಸಲಾಗಿಲ್ಲ. ಇತರ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಜನರ ಮೇಲೆ ಹಿಂದಿ ಹೇರಿಕೆಯನ್ನು ದಕ್ಷಿಣ ಭಾರತದ ರಾಜ್ಯಗಳು ಮೊದಲಿನಿಂದಲೂ ವಿರೋಧಿಸಿವೆ.

ಜೊಮೊಟೊ ಕಂಪನಿಯು, ತಮ್ಮ ಏಜೆಂಟ್‌ನ ವರ್ತನೆಗೆ ಕ್ಷಮೆಯಾಚಿಸಿದೆ. ತಮಿಳುನಾಡು ಜನತೆಯಲ್ಲಿ ಕ್ಷಮೆ ಕೋರಿ ಜೊಮೊಟೊ ಸಂಸ್ಥೆಯ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದೆ. ಇಂಗ್ಲಿಷ್‌ ಹಾಗೂ ತಮಿಳು ಭಾಷೆಯಲ್ಲಿ ಕ್ಷಮೆ ಕೋರಲಾಗಿದೆ.

“ನಮ್ಮ ವೈವಿಧ್ಯಮಯ ಸಂಸ್ಕೃತಿಯ ಕಡೆಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಏಜೆಂಟರನ್ನು ಕೆಲಸದಿಂದ ತೆಗೆಯಲಾಗಿದೆ. ಆ ಏಜೆಂಟರ ನಡವಳಿಕೆಯು ಜೊಮೊಟೊ ಕಂಪನಿಯ “ಸೂಕ್ಷ್ಮತೆಯ ತತ್ವಗಳಿಗೆ” ವಿರುದ್ಧವಾಗಿದೆ ಎಂದು ಹೇಳಿಕೆ ತಿಳಿಸಿದೆ.

ಈ ಗ್ರಾಹಕ ಏಜೆಂಟ್‌ನ ಹೇಳಿಕೆಗಳು ಸಂಸ್ಥೆಯನ್ನು ಪ್ರತಿನಿಧಿಸುವುದಿಲ್ಲ. ನಮ್ಮ ಸಂಸ್ಥೆಯು ಭಾಷೆ ಮತ್ತು ವೈವಿಧ್ಯತೆ ಕಡೆಗಿದೆ ಎಂದಿದೆ.

“ತಮಿಳು ವರ್ಷನ್‌ ಆಪ್‌‌ಅನ್ನು ಜೊಮೊಟೊ ಸಂಸ್ಥೆ ಅಭಿವೃದ್ಧಿಪಡಿಸುತ್ತಿದೆ. ತಮಿಳಿನಲ್ಲಿಯೇ ನಾವು ಈಗಾಗಲೇ ವ್ಯವಹಿಸುತ್ತಿದ್ದೇವೆ. ತಮಿಳು ಕಾಲ್‌ ಸೆಂಟರ್‌‌ಅನ್ನು ಕೊಯಮತ್ತೂರಿನಲ್ಲಿ ತೆರೆಯಲು ಸಿದ್ಧತೆ ನಡೆದಿದೆ” ಎಂದು ಹೇಳಿದೆ.


ಇದನ್ನೂ ಓದಿರಿ: ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...